Homeಮುಖಪುಟಇಂಡಿಯಾ ಬಣ ಬಿಕ್ಕಟ್ಟು: ಟಿಎಂಸಿ ಸಂಸದರ ವಿರುದ್ಧ ಅಧೀರ್ ರಂಜನ್ ಚೌಧರಿ ವಾಗ್ದಾಳಿ

ಇಂಡಿಯಾ ಬಣ ಬಿಕ್ಕಟ್ಟು: ಟಿಎಂಸಿ ಸಂಸದರ ವಿರುದ್ಧ ಅಧೀರ್ ರಂಜನ್ ಚೌಧರಿ ವಾಗ್ದಾಳಿ

- Advertisement -
- Advertisement -

ಇಂಡಿಯಾ ಮೈತ್ರಿಕೂಟದಿಂದ ಟಿಎಂಸಿ ಹೊರಬರಲು ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಕಾರಣ ಎಂಬ ಸಂಸದ ಡೆರೆಕ್ ಓಬ್ರಿಯಾನ್ ಹೇಳಿಕೆಗೆ ಕೈ ನಾಯಕ ತಿರುಗೇಟು ನೀಡಿದ್ದಾರೆ. ‘ಪಶ್ಚಿಮ ಬಂಗಾಳದಲ್ಲಿ ಇಂಡಿಯಾ ಬಣವು ಕೆಲಸ ಮಾಡುತ್ತಿಲ್ಲ; ಡೆರಿಕ್ ಫಬ್ರಿಯಾನ್ ವಿದೇಶಿ’ ಎಂದು ಕಿಡಿಕಾರಿದ್ದಾರೆ.

‘2024ರ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ’ ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಣೆ ಮಾಡಿದ ನಂತರ, ಸಂಸದ ಡೆರೆಕ್ ಓಬ್ರಿಯಾನ್ ಅವರು ಅಧೀರ್ ರಂಜನ್ ಚೌಧರಿ ವಿರುದ್ಧ ಆರೋಪ ಮಾಡಿದ್ದರು.

‘ಚೌಧರಿ ಅವರು ಭಾರತೀಯ ಜನತಾ ಪಕ್ಷದ ಇಚ್ಛೆಯಂತೆ ಕೆಲಸ ಮಾಡುತ್ತಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿ ಕಾರ್ಯರೂಪಕ್ಕೆ ಬರದಿರಲು ಅವರೆ ಕಾರಣ’ ಎಂದು ಹೇಳಿದ್ದರು. ಓಬ್ರಿಯಾನ್ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ, ‘ಅವರು ವಿದೇಶಿ, ಅವರು ಹೆಚ್ಚು ತಿಳಿದುಕೊಂಡಿದ್ದಾರೆ, ನೀವು ಅವರನ್ನೆ ಕೇಳಬಹುದು’ ಎಂದು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

‘ಪಶ್ಚಿಮ ಬಂಗಾಳದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಭಾಗವಾಗಿ ಕೆಲವು ಸಾರ್ವಜನಿಕ ಸಭೆಗಳನ್ನು ಆಯೋಜಿಸಲು ಅನುಮತಿ ಪಡೆಯುವಲ್ಲಿ ಕಾಂಗ್ರೆಸ್ ಪಕ್ಷವು ಸಮಸ್ಯೆಗಳನ್ನು ಎದುರಿಸುತ್ತಿದೆ’ ಎಂದು ಅಧೀರ್ ರಂಜನ್ ಚೌಧರಿ ಹೇಳಿಕೊಂಡಿದ್ದಾರೆ.

‘ಪಶ್ಚಿಮ ಬಂಗಾಳದಲ್ಲಿ ಭಾರತ್ ಜೋಡೋ ಯಾತ್ರೆಯು ನಿಗದಿತಂತೆ ಮುಂದುವರಿಯುತ್ತದೆ. ಆದರೆ ಕೆಲವು ಸ್ಥಳಗಳಲ್ಲಿ ನಾವು ರಸ್ತೆ ತಡೆಗಳನ್ನು ಎದುರಿಸುತ್ತಿದ್ದೇವೆ. ನಾವು ಕೆಲವು ಸ್ಥಳಗಳಲ್ಲಿ ಸಾರ್ವಜನಿಕ ಸಭೆಗಳನ್ನು ಆಯೋಜಿಸಲು ಬಯಸಿದ್ದೇವೆ. ಆದರೆ, ವಿವಿಧ ರೀತಿಯ ಪರೀಕ್ಷೆಗಳಿಂದಾಗಿ, ಸುಪ್ರೀಂ ಕೋರ್ಟ್ ನಿರ್ದೇಶನಗಳಿಗೆ ಅನುಗುಣವಾಗಿ ನಮಗೆ ಅನುಮತಿ ಸಿಗುತ್ತಿಲ್ಲ. ಕೆಲವೆಡೆ ಸಡಿಲಿಕೆ ಸಿಗುತ್ತದೆ ಎಂದುಕೊಂಡಿದ್ದೆವು. ಆದರೆ, ಆಡಳಿತದಿಂದ ಬೆಂಬಲ ಸಿಗುತ್ತಿಲ್ಲ, ಅವರೂ ಕೂಡ ಬೆಂಬಲ ಕೊಡಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದಾರೆ. ಆದರೂ ಯಾತ್ರೆ ಮುಂದುವರಿಯುತ್ತದೆ, ಅದರಲ್ಲಿ ಯಾವುದೇ ಬದಲಾವಣೆ ಇಲ್ಲ’ ಎಂದು ಚೌಧರಿ ಹೇಳಿದರು.

ರಾಹುಲ್ ಗಾಂಧಿ ನೇತೃತ್ವದ ಯಾತ್ರೆಯು ಅಸ್ಸಾಂನಿಂದ ಪಶ್ಚಿಮ ಬಂಗಾಳಕ್ಕೆ ಪ್ರವೇಶಿಸಿದ ನಂತರ ಎರಡು ದಿನಗಳ ವಿರಾಮವನ್ನು ತೆಗೆದುಕೊಂಡಿತು. ಇದು ಜನವರಿ 28ರಂದು ಪುನರಾರಂಭವಾಗಲಿದೆ. ಇಂಡಿಯಾ ಬಣ ಒಟ್ಟಾಗಿ ‘ಅನ್ಯಾಯ’ದ ವಿರುದ್ಧ ಹೋರಾಡಲಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದರು.

‘ಪಶ್ಚಿಮ ಬಂಗಾಳಕ್ಕೆ ಬಂದಿದ್ದಕ್ಕೆ ನನಗೆ ಸಂತೋಷವಾಗಿದೆ. ನಿಮ್ಮ ಮಾತು ಕೇಳಲು ಮತ್ತು ನಿಮ್ಮೊಂದಿಗೆ ನಿಲ್ಲಲು ನಾವು ಇಲ್ಲಿಗೆ ಬಂದಿದ್ದೇವೆ. ಬಿಜೆಪಿ-ಆರ್‌ಎಸ್‌ಎಸ್ ದ್ವೇಷ, ಹಿಂಸಾಚಾರ ಮತ್ತು ಅನ್ಯಾಯವನ್ನು ಹರಡುತ್ತಿದೆ. ಆದ್ದರಿಂದ, ಇಂಡಿಯಾ ಒಕ್ಕೂಟವು ಒಟ್ಟಾಗಿ ‘ಅನ್ಯಾಯ’ದ ವಿರುದ್ಧ ಹೋರಾಡಲಿದೆ’ ರಾಹುಲ್ ಹೇಳಿದರು.

ಇದನ್ನೂ ಓದಿ; ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ನಟ ಚಿರಂಜೀವಿ ಸೇರಿದಂತೆ 132 ಜನರಿಗೆ ಪದ್ಮ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...