Homeಮುಖಪುಟಇಂಡಿಯಾ ಬಣ ಬಿಕ್ಕಟ್ಟು: ಟಿಎಂಸಿ ಸಂಸದರ ವಿರುದ್ಧ ಅಧೀರ್ ರಂಜನ್ ಚೌಧರಿ ವಾಗ್ದಾಳಿ

ಇಂಡಿಯಾ ಬಣ ಬಿಕ್ಕಟ್ಟು: ಟಿಎಂಸಿ ಸಂಸದರ ವಿರುದ್ಧ ಅಧೀರ್ ರಂಜನ್ ಚೌಧರಿ ವಾಗ್ದಾಳಿ

- Advertisement -
- Advertisement -

ಇಂಡಿಯಾ ಮೈತ್ರಿಕೂಟದಿಂದ ಟಿಎಂಸಿ ಹೊರಬರಲು ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಕಾರಣ ಎಂಬ ಸಂಸದ ಡೆರೆಕ್ ಓಬ್ರಿಯಾನ್ ಹೇಳಿಕೆಗೆ ಕೈ ನಾಯಕ ತಿರುಗೇಟು ನೀಡಿದ್ದಾರೆ. ‘ಪಶ್ಚಿಮ ಬಂಗಾಳದಲ್ಲಿ ಇಂಡಿಯಾ ಬಣವು ಕೆಲಸ ಮಾಡುತ್ತಿಲ್ಲ; ಡೆರಿಕ್ ಫಬ್ರಿಯಾನ್ ವಿದೇಶಿ’ ಎಂದು ಕಿಡಿಕಾರಿದ್ದಾರೆ.

‘2024ರ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ’ ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಣೆ ಮಾಡಿದ ನಂತರ, ಸಂಸದ ಡೆರೆಕ್ ಓಬ್ರಿಯಾನ್ ಅವರು ಅಧೀರ್ ರಂಜನ್ ಚೌಧರಿ ವಿರುದ್ಧ ಆರೋಪ ಮಾಡಿದ್ದರು.

‘ಚೌಧರಿ ಅವರು ಭಾರತೀಯ ಜನತಾ ಪಕ್ಷದ ಇಚ್ಛೆಯಂತೆ ಕೆಲಸ ಮಾಡುತ್ತಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿ ಕಾರ್ಯರೂಪಕ್ಕೆ ಬರದಿರಲು ಅವರೆ ಕಾರಣ’ ಎಂದು ಹೇಳಿದ್ದರು. ಓಬ್ರಿಯಾನ್ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ, ‘ಅವರು ವಿದೇಶಿ, ಅವರು ಹೆಚ್ಚು ತಿಳಿದುಕೊಂಡಿದ್ದಾರೆ, ನೀವು ಅವರನ್ನೆ ಕೇಳಬಹುದು’ ಎಂದು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

‘ಪಶ್ಚಿಮ ಬಂಗಾಳದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಭಾಗವಾಗಿ ಕೆಲವು ಸಾರ್ವಜನಿಕ ಸಭೆಗಳನ್ನು ಆಯೋಜಿಸಲು ಅನುಮತಿ ಪಡೆಯುವಲ್ಲಿ ಕಾಂಗ್ರೆಸ್ ಪಕ್ಷವು ಸಮಸ್ಯೆಗಳನ್ನು ಎದುರಿಸುತ್ತಿದೆ’ ಎಂದು ಅಧೀರ್ ರಂಜನ್ ಚೌಧರಿ ಹೇಳಿಕೊಂಡಿದ್ದಾರೆ.

‘ಪಶ್ಚಿಮ ಬಂಗಾಳದಲ್ಲಿ ಭಾರತ್ ಜೋಡೋ ಯಾತ್ರೆಯು ನಿಗದಿತಂತೆ ಮುಂದುವರಿಯುತ್ತದೆ. ಆದರೆ ಕೆಲವು ಸ್ಥಳಗಳಲ್ಲಿ ನಾವು ರಸ್ತೆ ತಡೆಗಳನ್ನು ಎದುರಿಸುತ್ತಿದ್ದೇವೆ. ನಾವು ಕೆಲವು ಸ್ಥಳಗಳಲ್ಲಿ ಸಾರ್ವಜನಿಕ ಸಭೆಗಳನ್ನು ಆಯೋಜಿಸಲು ಬಯಸಿದ್ದೇವೆ. ಆದರೆ, ವಿವಿಧ ರೀತಿಯ ಪರೀಕ್ಷೆಗಳಿಂದಾಗಿ, ಸುಪ್ರೀಂ ಕೋರ್ಟ್ ನಿರ್ದೇಶನಗಳಿಗೆ ಅನುಗುಣವಾಗಿ ನಮಗೆ ಅನುಮತಿ ಸಿಗುತ್ತಿಲ್ಲ. ಕೆಲವೆಡೆ ಸಡಿಲಿಕೆ ಸಿಗುತ್ತದೆ ಎಂದುಕೊಂಡಿದ್ದೆವು. ಆದರೆ, ಆಡಳಿತದಿಂದ ಬೆಂಬಲ ಸಿಗುತ್ತಿಲ್ಲ, ಅವರೂ ಕೂಡ ಬೆಂಬಲ ಕೊಡಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದಾರೆ. ಆದರೂ ಯಾತ್ರೆ ಮುಂದುವರಿಯುತ್ತದೆ, ಅದರಲ್ಲಿ ಯಾವುದೇ ಬದಲಾವಣೆ ಇಲ್ಲ’ ಎಂದು ಚೌಧರಿ ಹೇಳಿದರು.

ರಾಹುಲ್ ಗಾಂಧಿ ನೇತೃತ್ವದ ಯಾತ್ರೆಯು ಅಸ್ಸಾಂನಿಂದ ಪಶ್ಚಿಮ ಬಂಗಾಳಕ್ಕೆ ಪ್ರವೇಶಿಸಿದ ನಂತರ ಎರಡು ದಿನಗಳ ವಿರಾಮವನ್ನು ತೆಗೆದುಕೊಂಡಿತು. ಇದು ಜನವರಿ 28ರಂದು ಪುನರಾರಂಭವಾಗಲಿದೆ. ಇಂಡಿಯಾ ಬಣ ಒಟ್ಟಾಗಿ ‘ಅನ್ಯಾಯ’ದ ವಿರುದ್ಧ ಹೋರಾಡಲಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದರು.

‘ಪಶ್ಚಿಮ ಬಂಗಾಳಕ್ಕೆ ಬಂದಿದ್ದಕ್ಕೆ ನನಗೆ ಸಂತೋಷವಾಗಿದೆ. ನಿಮ್ಮ ಮಾತು ಕೇಳಲು ಮತ್ತು ನಿಮ್ಮೊಂದಿಗೆ ನಿಲ್ಲಲು ನಾವು ಇಲ್ಲಿಗೆ ಬಂದಿದ್ದೇವೆ. ಬಿಜೆಪಿ-ಆರ್‌ಎಸ್‌ಎಸ್ ದ್ವೇಷ, ಹಿಂಸಾಚಾರ ಮತ್ತು ಅನ್ಯಾಯವನ್ನು ಹರಡುತ್ತಿದೆ. ಆದ್ದರಿಂದ, ಇಂಡಿಯಾ ಒಕ್ಕೂಟವು ಒಟ್ಟಾಗಿ ‘ಅನ್ಯಾಯ’ದ ವಿರುದ್ಧ ಹೋರಾಡಲಿದೆ’ ರಾಹುಲ್ ಹೇಳಿದರು.

ಇದನ್ನೂ ಓದಿ; ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ನಟ ಚಿರಂಜೀವಿ ಸೇರಿದಂತೆ 132 ಜನರಿಗೆ ಪದ್ಮ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...