Homeಮುಖಪುಟವಿಶ್ವ ಸಂತೋಷ ಸೂಚ್ಯಂಕದಲ್ಲಿ ಪಾಕ್‌, ಶ್ರೀಲಂಕಾಕ್ಕಿಂತ ಕೆಳಗೆ ಕುಸಿದ ಭಾರತ

ವಿಶ್ವ ಸಂತೋಷ ಸೂಚ್ಯಂಕದಲ್ಲಿ ಪಾಕ್‌, ಶ್ರೀಲಂಕಾಕ್ಕಿಂತ ಕೆಳಗೆ ಕುಸಿದ ಭಾರತ

- Advertisement -
- Advertisement -

ವಿಶ್ವಸಂಸ್ಥೆಯು ಆರಂಭಿಸಿದ ಲಾಭೋದ್ದೇಶವಿಲ್ಲದ ಸಂಸ್ಥೆಯು ಪ್ರಕಟಿಸಿರುವ ಇತ್ತೀಚಿನ ‘ವಿಶ್ವ ಸಂತೋಷ ಸೂಚ್ಯಂಕ’ ವರದಿಯಲ್ಲಿ ಭಾರತವು 146 ದೇಶಗಳ ಪೈಕಿ 126ನೇ ಸ್ಥಾನದಲ್ಲಿದೆ.

ಅಂತಾರಾಷ್ಟ್ರೀಯ ಸಂತೋಷ ದಿನದ ಸಂದರ್ಭದಲ್ಲಿ ಸೋಮವಾರ ಈ ವರದಿಯನ್ನು ಬಿಡುಗಡೆ ಮಾಡಲಾಗಿದೆ. ವಿಶ್ವಸಂಸ್ಥೆಯ ‘ಸುಸ್ಥಿರ ಅಭಿವೃದ್ಧಿ ಪರಿಹಾರಗಳ ಜಾಲ’ವು ವಾರ್ಷಿಕವಾಗಿ ವರದಿಯನ್ನು ಪ್ರಕಟಿಸುತ್ತದೆ.

2020 ರಿಂದ 2022ರವರೆಗಿನ ಗ್ಯಾಲಪ್ ವರ್ಲ್ಡ್ ಪೋಲ್‌ಗಳ ಡೇಟಾವನ್ನು ಈ ಸೂಚ್ಯಂಕ ಆಧರಿಸಿದೆ. (2005ರಲ್ಲಿ ಗ್ಯಾಲಪ್ ತನ್ನ ವಿಶ್ವ ಸಮೀಕ್ಷೆಯನ್ನು ಪ್ರಾರಂಭಿಸಿತು. ಇದು ನಿರಂತರವಾಗಿ 160 ದೇಶಗಳಲ್ಲಿ ನಾಗರಿಕರನ್ನು ಸಮೀಕ್ಷೆ ಮಾಡುತ್ತದೆ. ಗ್ಯಾಲಪ್ ವರ್ಲ್ಡ್ ಪೋಲ್ 100 ಕ್ಕೂ ಹೆಚ್ಚು ಜಾಗತಿಕ ಪ್ರಶ್ನೆಗಳನ್ನು ಮತ್ತು ನಿರ್ದಿಷ್ಟ ಸಂಗತಿಗಳನ್ನು ಒಳಗೊಂಡಿದೆ.)

ಒಟ್ಟು ದೇಶೀಯ ಉತ್ಪನ್ನ, ಜೀವಿತಾವಧಿ, ಉದಾರತೆ, ಸಾಮಾಜಿಕ ಬೆಂಬಲ, ಸ್ವಾತಂತ್ರ್ಯ ಮತ್ತು ಭ್ರಷ್ಟಾಚಾರ- ಈ ಆರು ಅಂಶಗಳನ್ನು ಮೌಲ್ಯಮಾಪನದಲ್ಲಿ ಪರಿಗಣಿಸಲಾಗಿದೆ.

2022ರಲ್ಲಿ 136ನೇ ಸ್ಥಾನದಲ್ಲಿದ್ದ ಭಾರತ ಪ್ರಸ್ತುತ 126ನೇ ಸ್ಥಾನಕ್ಕೆ ಬಂದಿದೆ. ಈ ವರ್ಷ, ಭಾರತವು 0-10ರ ಪ್ರಮಾಣದಲ್ಲಿ 4.036 ಅಂಕಗಳನ್ನು ಹೊಂದಿತ್ತು.

ಪಾಕಿಸ್ತಾನ 108ನೇ ಸ್ಥಾನದಲ್ಲಿದ್ದರೆ, ಬಾಂಗ್ಲಾದೇಶ 118ನೇ ಸ್ಥಾನದಲ್ಲಿದೆ ಎಂದು ಸೂಚ್ಯಂಕ ತೋರಿಸಿದೆ. ಶ್ರೀಲಂಕಾ 112 ನೇ ಸ್ಥಾನದಲ್ಲಿದ್ದರೆ ನೇಪಾಳ 78ನೇ ಸ್ಥಾನದಲ್ಲಿದೆ.

ವರದಿಯ ಪ್ರಕಾರ, ಫಿನ್ಲೆಂಡ್ 7.804 ಅಂಕಗಳೊಂದಿಗೆ ವಿಶ್ವದ ಅತ್ಯಂತ ಸಂತೋಷದಾಯಕ ದೇಶವಾಗಿದೆ. ನಾರ್ಡಿಕ್ ದೇಶಗಳಾದ ಡೆನ್ಮಾರ್ಕ್ ಮತ್ತು ಐಸ್ಲ್ಯಾಂಡ್  ಪಟ್ಟಿಯಲ್ಲಿ ಎರಡನೇ ಮತ್ತು ಮೂರನೇ ಸ್ಥಾನದಲ್ಲಿವೆ.

ಪಟ್ಟಿಯಲ್ಲಿರುವ ಮೊದಲ ಹತ್ತು ದೇಶಗಳ ಪೈಕಿ ಎಂಟು ಯುರೋಪ್‌ ಖಂಡದಲ್ಲಿವೆ. ಇಸ್ರೇಲ್ ಮತ್ತು ನ್ಯೂಜಿಲೆಂಡ್ ಮೊದಲ ಹತ್ತರಲ್ಲಿ ಕಾಣಿಸಿಕೊಂಡ ಯುರೋಪಿನ ಹೊರಗಿನ ಎರಡು ದೇಶಗಳಾಗಿವೆ.

ಫೆಬ್ರವರಿ 2022ರಲ್ಲಿ ಆರಂಭವಾದ ಉಭಯ ದೇಶಗಳ ನಡುವಿನ ಸಂಘರ್ಷದ ಹೊರತಾಗಿಯೂ ರಷ್ಯಾ ಮತ್ತು ಉಕ್ರೇನ್ ದೇಶಗಳು ಉನ್ನತ ಮಟ್ಟದ ಸಂತೋಷವನ್ನು ಹೊಂದಿರುವುದಾಗಿ ವರದಿ ಹೇಳಿದೆ.

ಇದನ್ನೂ ಓದಿರಿ: ನಿಲ್ಲದ ‘ಟಿಪ್ಪು ನಿಜ ಕನಸುಗಳು’ ನಾಟಕ ಪ್ರದರ್ಶನ; ಸ್ವಾಮೀಜಿ ಮಾತಿಗೆ ಕವಡೆ ಕಿಮ್ಮತ್ತೂ ನೀಡದ ರಂಗಾಯಣ

ಸೂಚ್ಯಂಕದ ಪ್ರಕಾರ, ರಷ್ಯಾದ ಶ್ರೇಯಾಂಕವು 2022ರಲ್ಲಿ 80ನೇ ಸ್ಥಾನದಲ್ಲಿತ್ತು. ಈ ವರ್ಷ 70ದಲ್ಲಿ ಇದೆ. ಆದರೆ ಉಕ್ರೇನ್ ಶ್ರೇಯಾಂಕವು 98 ರಿಂದ 92ಕ್ಕೆ ಏರಿಕೆ ಕಂಡಿದೆ. 2022ರ ವರದಿಯು 2019 ರಿಂದ 2021 ರವರೆಗಿನ ಡೇಟಾವನ್ನು ಆಧರಿಸಿದೆ.

ವರ್ಲ್ಡ್ ಹ್ಯಾಪಿನೆಸ್ ರಿಪೋರ್ಟ್‌ನ ಲೇಖಕರಲ್ಲಿ ಒಬ್ಬರಾದ ಜಾನ್ ಹೆಲ್ಲಿವೆಲ್ ಪ್ರತಿಕ್ರಿಯಿಸಿದ್ದು, “ಉಪಕಾರ ಮನೋಭಾವ, ವಿಶೇಷವಾಗಿ ಅಪರಿಚಿತರ ಕಡೆಗೆ ದಯೆ ತೋರುವುದು 2021 ರಲ್ಲಿ ನಾಟಕೀಯವಾಗಿ ಹೆಚ್ಚಾಯಿತು. 2022ರಲ್ಲಿ ಈ ಗುಣವು ಉನ್ನತ ಮಟ್ಟದಲ್ಲಿದೆ” ಎಂದು ಹೇಳಿರುವುದಾಗಿ ಸಿಎನ್‌ಎನ್ ವರದಿ ಮಾಡಿದೆ.

“ಈ ಕಷ್ಟದ ವರ್ಷಗಳಲ್ಲಿಯೂ, ಧನಾತ್ಮಕ ಭಾವನೆಗಳು ಋಣಾತ್ಮಕತೆಗಿಂತ ದ್ವಿಗುಣವಾಗಿವೆ. ಧನಾತ್ಮಕ ಸಾಮಾಜಿಕ ಬೆಂಬಲದ ಭಾವನೆಗಳು ಒಂಟಿತನಕ್ಕಿಂತ ಎರಡು ಪಟ್ಟು ಪ್ರಬಲವಾಗಿವೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...