Homeಮುಖಪುಟವಿಶ್ವ ಸಂತೋಷ ಸೂಚ್ಯಂಕದಲ್ಲಿ ಪಾಕ್‌, ಶ್ರೀಲಂಕಾಕ್ಕಿಂತ ಕೆಳಗೆ ಕುಸಿದ ಭಾರತ

ವಿಶ್ವ ಸಂತೋಷ ಸೂಚ್ಯಂಕದಲ್ಲಿ ಪಾಕ್‌, ಶ್ರೀಲಂಕಾಕ್ಕಿಂತ ಕೆಳಗೆ ಕುಸಿದ ಭಾರತ

- Advertisement -
- Advertisement -

ವಿಶ್ವಸಂಸ್ಥೆಯು ಆರಂಭಿಸಿದ ಲಾಭೋದ್ದೇಶವಿಲ್ಲದ ಸಂಸ್ಥೆಯು ಪ್ರಕಟಿಸಿರುವ ಇತ್ತೀಚಿನ ‘ವಿಶ್ವ ಸಂತೋಷ ಸೂಚ್ಯಂಕ’ ವರದಿಯಲ್ಲಿ ಭಾರತವು 146 ದೇಶಗಳ ಪೈಕಿ 126ನೇ ಸ್ಥಾನದಲ್ಲಿದೆ.

ಅಂತಾರಾಷ್ಟ್ರೀಯ ಸಂತೋಷ ದಿನದ ಸಂದರ್ಭದಲ್ಲಿ ಸೋಮವಾರ ಈ ವರದಿಯನ್ನು ಬಿಡುಗಡೆ ಮಾಡಲಾಗಿದೆ. ವಿಶ್ವಸಂಸ್ಥೆಯ ‘ಸುಸ್ಥಿರ ಅಭಿವೃದ್ಧಿ ಪರಿಹಾರಗಳ ಜಾಲ’ವು ವಾರ್ಷಿಕವಾಗಿ ವರದಿಯನ್ನು ಪ್ರಕಟಿಸುತ್ತದೆ.

2020 ರಿಂದ 2022ರವರೆಗಿನ ಗ್ಯಾಲಪ್ ವರ್ಲ್ಡ್ ಪೋಲ್‌ಗಳ ಡೇಟಾವನ್ನು ಈ ಸೂಚ್ಯಂಕ ಆಧರಿಸಿದೆ. (2005ರಲ್ಲಿ ಗ್ಯಾಲಪ್ ತನ್ನ ವಿಶ್ವ ಸಮೀಕ್ಷೆಯನ್ನು ಪ್ರಾರಂಭಿಸಿತು. ಇದು ನಿರಂತರವಾಗಿ 160 ದೇಶಗಳಲ್ಲಿ ನಾಗರಿಕರನ್ನು ಸಮೀಕ್ಷೆ ಮಾಡುತ್ತದೆ. ಗ್ಯಾಲಪ್ ವರ್ಲ್ಡ್ ಪೋಲ್ 100 ಕ್ಕೂ ಹೆಚ್ಚು ಜಾಗತಿಕ ಪ್ರಶ್ನೆಗಳನ್ನು ಮತ್ತು ನಿರ್ದಿಷ್ಟ ಸಂಗತಿಗಳನ್ನು ಒಳಗೊಂಡಿದೆ.)

ಒಟ್ಟು ದೇಶೀಯ ಉತ್ಪನ್ನ, ಜೀವಿತಾವಧಿ, ಉದಾರತೆ, ಸಾಮಾಜಿಕ ಬೆಂಬಲ, ಸ್ವಾತಂತ್ರ್ಯ ಮತ್ತು ಭ್ರಷ್ಟಾಚಾರ- ಈ ಆರು ಅಂಶಗಳನ್ನು ಮೌಲ್ಯಮಾಪನದಲ್ಲಿ ಪರಿಗಣಿಸಲಾಗಿದೆ.

2022ರಲ್ಲಿ 136ನೇ ಸ್ಥಾನದಲ್ಲಿದ್ದ ಭಾರತ ಪ್ರಸ್ತುತ 126ನೇ ಸ್ಥಾನಕ್ಕೆ ಬಂದಿದೆ. ಈ ವರ್ಷ, ಭಾರತವು 0-10ರ ಪ್ರಮಾಣದಲ್ಲಿ 4.036 ಅಂಕಗಳನ್ನು ಹೊಂದಿತ್ತು.

ಪಾಕಿಸ್ತಾನ 108ನೇ ಸ್ಥಾನದಲ್ಲಿದ್ದರೆ, ಬಾಂಗ್ಲಾದೇಶ 118ನೇ ಸ್ಥಾನದಲ್ಲಿದೆ ಎಂದು ಸೂಚ್ಯಂಕ ತೋರಿಸಿದೆ. ಶ್ರೀಲಂಕಾ 112 ನೇ ಸ್ಥಾನದಲ್ಲಿದ್ದರೆ ನೇಪಾಳ 78ನೇ ಸ್ಥಾನದಲ್ಲಿದೆ.

ವರದಿಯ ಪ್ರಕಾರ, ಫಿನ್ಲೆಂಡ್ 7.804 ಅಂಕಗಳೊಂದಿಗೆ ವಿಶ್ವದ ಅತ್ಯಂತ ಸಂತೋಷದಾಯಕ ದೇಶವಾಗಿದೆ. ನಾರ್ಡಿಕ್ ದೇಶಗಳಾದ ಡೆನ್ಮಾರ್ಕ್ ಮತ್ತು ಐಸ್ಲ್ಯಾಂಡ್  ಪಟ್ಟಿಯಲ್ಲಿ ಎರಡನೇ ಮತ್ತು ಮೂರನೇ ಸ್ಥಾನದಲ್ಲಿವೆ.

ಪಟ್ಟಿಯಲ್ಲಿರುವ ಮೊದಲ ಹತ್ತು ದೇಶಗಳ ಪೈಕಿ ಎಂಟು ಯುರೋಪ್‌ ಖಂಡದಲ್ಲಿವೆ. ಇಸ್ರೇಲ್ ಮತ್ತು ನ್ಯೂಜಿಲೆಂಡ್ ಮೊದಲ ಹತ್ತರಲ್ಲಿ ಕಾಣಿಸಿಕೊಂಡ ಯುರೋಪಿನ ಹೊರಗಿನ ಎರಡು ದೇಶಗಳಾಗಿವೆ.

ಫೆಬ್ರವರಿ 2022ರಲ್ಲಿ ಆರಂಭವಾದ ಉಭಯ ದೇಶಗಳ ನಡುವಿನ ಸಂಘರ್ಷದ ಹೊರತಾಗಿಯೂ ರಷ್ಯಾ ಮತ್ತು ಉಕ್ರೇನ್ ದೇಶಗಳು ಉನ್ನತ ಮಟ್ಟದ ಸಂತೋಷವನ್ನು ಹೊಂದಿರುವುದಾಗಿ ವರದಿ ಹೇಳಿದೆ.

ಇದನ್ನೂ ಓದಿರಿ: ನಿಲ್ಲದ ‘ಟಿಪ್ಪು ನಿಜ ಕನಸುಗಳು’ ನಾಟಕ ಪ್ರದರ್ಶನ; ಸ್ವಾಮೀಜಿ ಮಾತಿಗೆ ಕವಡೆ ಕಿಮ್ಮತ್ತೂ ನೀಡದ ರಂಗಾಯಣ

ಸೂಚ್ಯಂಕದ ಪ್ರಕಾರ, ರಷ್ಯಾದ ಶ್ರೇಯಾಂಕವು 2022ರಲ್ಲಿ 80ನೇ ಸ್ಥಾನದಲ್ಲಿತ್ತು. ಈ ವರ್ಷ 70ದಲ್ಲಿ ಇದೆ. ಆದರೆ ಉಕ್ರೇನ್ ಶ್ರೇಯಾಂಕವು 98 ರಿಂದ 92ಕ್ಕೆ ಏರಿಕೆ ಕಂಡಿದೆ. 2022ರ ವರದಿಯು 2019 ರಿಂದ 2021 ರವರೆಗಿನ ಡೇಟಾವನ್ನು ಆಧರಿಸಿದೆ.

ವರ್ಲ್ಡ್ ಹ್ಯಾಪಿನೆಸ್ ರಿಪೋರ್ಟ್‌ನ ಲೇಖಕರಲ್ಲಿ ಒಬ್ಬರಾದ ಜಾನ್ ಹೆಲ್ಲಿವೆಲ್ ಪ್ರತಿಕ್ರಿಯಿಸಿದ್ದು, “ಉಪಕಾರ ಮನೋಭಾವ, ವಿಶೇಷವಾಗಿ ಅಪರಿಚಿತರ ಕಡೆಗೆ ದಯೆ ತೋರುವುದು 2021 ರಲ್ಲಿ ನಾಟಕೀಯವಾಗಿ ಹೆಚ್ಚಾಯಿತು. 2022ರಲ್ಲಿ ಈ ಗುಣವು ಉನ್ನತ ಮಟ್ಟದಲ್ಲಿದೆ” ಎಂದು ಹೇಳಿರುವುದಾಗಿ ಸಿಎನ್‌ಎನ್ ವರದಿ ಮಾಡಿದೆ.

“ಈ ಕಷ್ಟದ ವರ್ಷಗಳಲ್ಲಿಯೂ, ಧನಾತ್ಮಕ ಭಾವನೆಗಳು ಋಣಾತ್ಮಕತೆಗಿಂತ ದ್ವಿಗುಣವಾಗಿವೆ. ಧನಾತ್ಮಕ ಸಾಮಾಜಿಕ ಬೆಂಬಲದ ಭಾವನೆಗಳು ಒಂಟಿತನಕ್ಕಿಂತ ಎರಡು ಪಟ್ಟು ಪ್ರಬಲವಾಗಿವೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...