Homeಮುಖಪುಟವಿಶ್ವ ಸಂತೋಷ ಸೂಚ್ಯಂಕದಲ್ಲಿ ಪಾಕ್‌, ಶ್ರೀಲಂಕಾಕ್ಕಿಂತ ಕೆಳಗೆ ಕುಸಿದ ಭಾರತ

ವಿಶ್ವ ಸಂತೋಷ ಸೂಚ್ಯಂಕದಲ್ಲಿ ಪಾಕ್‌, ಶ್ರೀಲಂಕಾಕ್ಕಿಂತ ಕೆಳಗೆ ಕುಸಿದ ಭಾರತ

- Advertisement -
- Advertisement -

ವಿಶ್ವಸಂಸ್ಥೆಯು ಆರಂಭಿಸಿದ ಲಾಭೋದ್ದೇಶವಿಲ್ಲದ ಸಂಸ್ಥೆಯು ಪ್ರಕಟಿಸಿರುವ ಇತ್ತೀಚಿನ ‘ವಿಶ್ವ ಸಂತೋಷ ಸೂಚ್ಯಂಕ’ ವರದಿಯಲ್ಲಿ ಭಾರತವು 146 ದೇಶಗಳ ಪೈಕಿ 126ನೇ ಸ್ಥಾನದಲ್ಲಿದೆ.

ಅಂತಾರಾಷ್ಟ್ರೀಯ ಸಂತೋಷ ದಿನದ ಸಂದರ್ಭದಲ್ಲಿ ಸೋಮವಾರ ಈ ವರದಿಯನ್ನು ಬಿಡುಗಡೆ ಮಾಡಲಾಗಿದೆ. ವಿಶ್ವಸಂಸ್ಥೆಯ ‘ಸುಸ್ಥಿರ ಅಭಿವೃದ್ಧಿ ಪರಿಹಾರಗಳ ಜಾಲ’ವು ವಾರ್ಷಿಕವಾಗಿ ವರದಿಯನ್ನು ಪ್ರಕಟಿಸುತ್ತದೆ.

2020 ರಿಂದ 2022ರವರೆಗಿನ ಗ್ಯಾಲಪ್ ವರ್ಲ್ಡ್ ಪೋಲ್‌ಗಳ ಡೇಟಾವನ್ನು ಈ ಸೂಚ್ಯಂಕ ಆಧರಿಸಿದೆ. (2005ರಲ್ಲಿ ಗ್ಯಾಲಪ್ ತನ್ನ ವಿಶ್ವ ಸಮೀಕ್ಷೆಯನ್ನು ಪ್ರಾರಂಭಿಸಿತು. ಇದು ನಿರಂತರವಾಗಿ 160 ದೇಶಗಳಲ್ಲಿ ನಾಗರಿಕರನ್ನು ಸಮೀಕ್ಷೆ ಮಾಡುತ್ತದೆ. ಗ್ಯಾಲಪ್ ವರ್ಲ್ಡ್ ಪೋಲ್ 100 ಕ್ಕೂ ಹೆಚ್ಚು ಜಾಗತಿಕ ಪ್ರಶ್ನೆಗಳನ್ನು ಮತ್ತು ನಿರ್ದಿಷ್ಟ ಸಂಗತಿಗಳನ್ನು ಒಳಗೊಂಡಿದೆ.)

ಒಟ್ಟು ದೇಶೀಯ ಉತ್ಪನ್ನ, ಜೀವಿತಾವಧಿ, ಉದಾರತೆ, ಸಾಮಾಜಿಕ ಬೆಂಬಲ, ಸ್ವಾತಂತ್ರ್ಯ ಮತ್ತು ಭ್ರಷ್ಟಾಚಾರ- ಈ ಆರು ಅಂಶಗಳನ್ನು ಮೌಲ್ಯಮಾಪನದಲ್ಲಿ ಪರಿಗಣಿಸಲಾಗಿದೆ.

2022ರಲ್ಲಿ 136ನೇ ಸ್ಥಾನದಲ್ಲಿದ್ದ ಭಾರತ ಪ್ರಸ್ತುತ 126ನೇ ಸ್ಥಾನಕ್ಕೆ ಬಂದಿದೆ. ಈ ವರ್ಷ, ಭಾರತವು 0-10ರ ಪ್ರಮಾಣದಲ್ಲಿ 4.036 ಅಂಕಗಳನ್ನು ಹೊಂದಿತ್ತು.

ಪಾಕಿಸ್ತಾನ 108ನೇ ಸ್ಥಾನದಲ್ಲಿದ್ದರೆ, ಬಾಂಗ್ಲಾದೇಶ 118ನೇ ಸ್ಥಾನದಲ್ಲಿದೆ ಎಂದು ಸೂಚ್ಯಂಕ ತೋರಿಸಿದೆ. ಶ್ರೀಲಂಕಾ 112 ನೇ ಸ್ಥಾನದಲ್ಲಿದ್ದರೆ ನೇಪಾಳ 78ನೇ ಸ್ಥಾನದಲ್ಲಿದೆ.

ವರದಿಯ ಪ್ರಕಾರ, ಫಿನ್ಲೆಂಡ್ 7.804 ಅಂಕಗಳೊಂದಿಗೆ ವಿಶ್ವದ ಅತ್ಯಂತ ಸಂತೋಷದಾಯಕ ದೇಶವಾಗಿದೆ. ನಾರ್ಡಿಕ್ ದೇಶಗಳಾದ ಡೆನ್ಮಾರ್ಕ್ ಮತ್ತು ಐಸ್ಲ್ಯಾಂಡ್  ಪಟ್ಟಿಯಲ್ಲಿ ಎರಡನೇ ಮತ್ತು ಮೂರನೇ ಸ್ಥಾನದಲ್ಲಿವೆ.

ಪಟ್ಟಿಯಲ್ಲಿರುವ ಮೊದಲ ಹತ್ತು ದೇಶಗಳ ಪೈಕಿ ಎಂಟು ಯುರೋಪ್‌ ಖಂಡದಲ್ಲಿವೆ. ಇಸ್ರೇಲ್ ಮತ್ತು ನ್ಯೂಜಿಲೆಂಡ್ ಮೊದಲ ಹತ್ತರಲ್ಲಿ ಕಾಣಿಸಿಕೊಂಡ ಯುರೋಪಿನ ಹೊರಗಿನ ಎರಡು ದೇಶಗಳಾಗಿವೆ.

ಫೆಬ್ರವರಿ 2022ರಲ್ಲಿ ಆರಂಭವಾದ ಉಭಯ ದೇಶಗಳ ನಡುವಿನ ಸಂಘರ್ಷದ ಹೊರತಾಗಿಯೂ ರಷ್ಯಾ ಮತ್ತು ಉಕ್ರೇನ್ ದೇಶಗಳು ಉನ್ನತ ಮಟ್ಟದ ಸಂತೋಷವನ್ನು ಹೊಂದಿರುವುದಾಗಿ ವರದಿ ಹೇಳಿದೆ.

ಇದನ್ನೂ ಓದಿರಿ: ನಿಲ್ಲದ ‘ಟಿಪ್ಪು ನಿಜ ಕನಸುಗಳು’ ನಾಟಕ ಪ್ರದರ್ಶನ; ಸ್ವಾಮೀಜಿ ಮಾತಿಗೆ ಕವಡೆ ಕಿಮ್ಮತ್ತೂ ನೀಡದ ರಂಗಾಯಣ

ಸೂಚ್ಯಂಕದ ಪ್ರಕಾರ, ರಷ್ಯಾದ ಶ್ರೇಯಾಂಕವು 2022ರಲ್ಲಿ 80ನೇ ಸ್ಥಾನದಲ್ಲಿತ್ತು. ಈ ವರ್ಷ 70ದಲ್ಲಿ ಇದೆ. ಆದರೆ ಉಕ್ರೇನ್ ಶ್ರೇಯಾಂಕವು 98 ರಿಂದ 92ಕ್ಕೆ ಏರಿಕೆ ಕಂಡಿದೆ. 2022ರ ವರದಿಯು 2019 ರಿಂದ 2021 ರವರೆಗಿನ ಡೇಟಾವನ್ನು ಆಧರಿಸಿದೆ.

ವರ್ಲ್ಡ್ ಹ್ಯಾಪಿನೆಸ್ ರಿಪೋರ್ಟ್‌ನ ಲೇಖಕರಲ್ಲಿ ಒಬ್ಬರಾದ ಜಾನ್ ಹೆಲ್ಲಿವೆಲ್ ಪ್ರತಿಕ್ರಿಯಿಸಿದ್ದು, “ಉಪಕಾರ ಮನೋಭಾವ, ವಿಶೇಷವಾಗಿ ಅಪರಿಚಿತರ ಕಡೆಗೆ ದಯೆ ತೋರುವುದು 2021 ರಲ್ಲಿ ನಾಟಕೀಯವಾಗಿ ಹೆಚ್ಚಾಯಿತು. 2022ರಲ್ಲಿ ಈ ಗುಣವು ಉನ್ನತ ಮಟ್ಟದಲ್ಲಿದೆ” ಎಂದು ಹೇಳಿರುವುದಾಗಿ ಸಿಎನ್‌ಎನ್ ವರದಿ ಮಾಡಿದೆ.

“ಈ ಕಷ್ಟದ ವರ್ಷಗಳಲ್ಲಿಯೂ, ಧನಾತ್ಮಕ ಭಾವನೆಗಳು ಋಣಾತ್ಮಕತೆಗಿಂತ ದ್ವಿಗುಣವಾಗಿವೆ. ಧನಾತ್ಮಕ ಸಾಮಾಜಿಕ ಬೆಂಬಲದ ಭಾವನೆಗಳು ಒಂಟಿತನಕ್ಕಿಂತ ಎರಡು ಪಟ್ಟು ಪ್ರಬಲವಾಗಿವೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...