Homeಮುಖಪುಟವಿಶ್ವ ಸಂತೋಷ ಸೂಚ್ಯಂಕದಲ್ಲಿ ಪಾಕ್‌, ಶ್ರೀಲಂಕಾಕ್ಕಿಂತ ಕೆಳಗೆ ಕುಸಿದ ಭಾರತ

ವಿಶ್ವ ಸಂತೋಷ ಸೂಚ್ಯಂಕದಲ್ಲಿ ಪಾಕ್‌, ಶ್ರೀಲಂಕಾಕ್ಕಿಂತ ಕೆಳಗೆ ಕುಸಿದ ಭಾರತ

- Advertisement -
- Advertisement -

ವಿಶ್ವಸಂಸ್ಥೆಯು ಆರಂಭಿಸಿದ ಲಾಭೋದ್ದೇಶವಿಲ್ಲದ ಸಂಸ್ಥೆಯು ಪ್ರಕಟಿಸಿರುವ ಇತ್ತೀಚಿನ ‘ವಿಶ್ವ ಸಂತೋಷ ಸೂಚ್ಯಂಕ’ ವರದಿಯಲ್ಲಿ ಭಾರತವು 146 ದೇಶಗಳ ಪೈಕಿ 126ನೇ ಸ್ಥಾನದಲ್ಲಿದೆ.

ಅಂತಾರಾಷ್ಟ್ರೀಯ ಸಂತೋಷ ದಿನದ ಸಂದರ್ಭದಲ್ಲಿ ಸೋಮವಾರ ಈ ವರದಿಯನ್ನು ಬಿಡುಗಡೆ ಮಾಡಲಾಗಿದೆ. ವಿಶ್ವಸಂಸ್ಥೆಯ ‘ಸುಸ್ಥಿರ ಅಭಿವೃದ್ಧಿ ಪರಿಹಾರಗಳ ಜಾಲ’ವು ವಾರ್ಷಿಕವಾಗಿ ವರದಿಯನ್ನು ಪ್ರಕಟಿಸುತ್ತದೆ.

2020 ರಿಂದ 2022ರವರೆಗಿನ ಗ್ಯಾಲಪ್ ವರ್ಲ್ಡ್ ಪೋಲ್‌ಗಳ ಡೇಟಾವನ್ನು ಈ ಸೂಚ್ಯಂಕ ಆಧರಿಸಿದೆ. (2005ರಲ್ಲಿ ಗ್ಯಾಲಪ್ ತನ್ನ ವಿಶ್ವ ಸಮೀಕ್ಷೆಯನ್ನು ಪ್ರಾರಂಭಿಸಿತು. ಇದು ನಿರಂತರವಾಗಿ 160 ದೇಶಗಳಲ್ಲಿ ನಾಗರಿಕರನ್ನು ಸಮೀಕ್ಷೆ ಮಾಡುತ್ತದೆ. ಗ್ಯಾಲಪ್ ವರ್ಲ್ಡ್ ಪೋಲ್ 100 ಕ್ಕೂ ಹೆಚ್ಚು ಜಾಗತಿಕ ಪ್ರಶ್ನೆಗಳನ್ನು ಮತ್ತು ನಿರ್ದಿಷ್ಟ ಸಂಗತಿಗಳನ್ನು ಒಳಗೊಂಡಿದೆ.)

ಒಟ್ಟು ದೇಶೀಯ ಉತ್ಪನ್ನ, ಜೀವಿತಾವಧಿ, ಉದಾರತೆ, ಸಾಮಾಜಿಕ ಬೆಂಬಲ, ಸ್ವಾತಂತ್ರ್ಯ ಮತ್ತು ಭ್ರಷ್ಟಾಚಾರ- ಈ ಆರು ಅಂಶಗಳನ್ನು ಮೌಲ್ಯಮಾಪನದಲ್ಲಿ ಪರಿಗಣಿಸಲಾಗಿದೆ.

2022ರಲ್ಲಿ 136ನೇ ಸ್ಥಾನದಲ್ಲಿದ್ದ ಭಾರತ ಪ್ರಸ್ತುತ 126ನೇ ಸ್ಥಾನಕ್ಕೆ ಬಂದಿದೆ. ಈ ವರ್ಷ, ಭಾರತವು 0-10ರ ಪ್ರಮಾಣದಲ್ಲಿ 4.036 ಅಂಕಗಳನ್ನು ಹೊಂದಿತ್ತು.

ಪಾಕಿಸ್ತಾನ 108ನೇ ಸ್ಥಾನದಲ್ಲಿದ್ದರೆ, ಬಾಂಗ್ಲಾದೇಶ 118ನೇ ಸ್ಥಾನದಲ್ಲಿದೆ ಎಂದು ಸೂಚ್ಯಂಕ ತೋರಿಸಿದೆ. ಶ್ರೀಲಂಕಾ 112 ನೇ ಸ್ಥಾನದಲ್ಲಿದ್ದರೆ ನೇಪಾಳ 78ನೇ ಸ್ಥಾನದಲ್ಲಿದೆ.

ವರದಿಯ ಪ್ರಕಾರ, ಫಿನ್ಲೆಂಡ್ 7.804 ಅಂಕಗಳೊಂದಿಗೆ ವಿಶ್ವದ ಅತ್ಯಂತ ಸಂತೋಷದಾಯಕ ದೇಶವಾಗಿದೆ. ನಾರ್ಡಿಕ್ ದೇಶಗಳಾದ ಡೆನ್ಮಾರ್ಕ್ ಮತ್ತು ಐಸ್ಲ್ಯಾಂಡ್  ಪಟ್ಟಿಯಲ್ಲಿ ಎರಡನೇ ಮತ್ತು ಮೂರನೇ ಸ್ಥಾನದಲ್ಲಿವೆ.

ಪಟ್ಟಿಯಲ್ಲಿರುವ ಮೊದಲ ಹತ್ತು ದೇಶಗಳ ಪೈಕಿ ಎಂಟು ಯುರೋಪ್‌ ಖಂಡದಲ್ಲಿವೆ. ಇಸ್ರೇಲ್ ಮತ್ತು ನ್ಯೂಜಿಲೆಂಡ್ ಮೊದಲ ಹತ್ತರಲ್ಲಿ ಕಾಣಿಸಿಕೊಂಡ ಯುರೋಪಿನ ಹೊರಗಿನ ಎರಡು ದೇಶಗಳಾಗಿವೆ.

ಫೆಬ್ರವರಿ 2022ರಲ್ಲಿ ಆರಂಭವಾದ ಉಭಯ ದೇಶಗಳ ನಡುವಿನ ಸಂಘರ್ಷದ ಹೊರತಾಗಿಯೂ ರಷ್ಯಾ ಮತ್ತು ಉಕ್ರೇನ್ ದೇಶಗಳು ಉನ್ನತ ಮಟ್ಟದ ಸಂತೋಷವನ್ನು ಹೊಂದಿರುವುದಾಗಿ ವರದಿ ಹೇಳಿದೆ.

ಇದನ್ನೂ ಓದಿರಿ: ನಿಲ್ಲದ ‘ಟಿಪ್ಪು ನಿಜ ಕನಸುಗಳು’ ನಾಟಕ ಪ್ರದರ್ಶನ; ಸ್ವಾಮೀಜಿ ಮಾತಿಗೆ ಕವಡೆ ಕಿಮ್ಮತ್ತೂ ನೀಡದ ರಂಗಾಯಣ

ಸೂಚ್ಯಂಕದ ಪ್ರಕಾರ, ರಷ್ಯಾದ ಶ್ರೇಯಾಂಕವು 2022ರಲ್ಲಿ 80ನೇ ಸ್ಥಾನದಲ್ಲಿತ್ತು. ಈ ವರ್ಷ 70ದಲ್ಲಿ ಇದೆ. ಆದರೆ ಉಕ್ರೇನ್ ಶ್ರೇಯಾಂಕವು 98 ರಿಂದ 92ಕ್ಕೆ ಏರಿಕೆ ಕಂಡಿದೆ. 2022ರ ವರದಿಯು 2019 ರಿಂದ 2021 ರವರೆಗಿನ ಡೇಟಾವನ್ನು ಆಧರಿಸಿದೆ.

ವರ್ಲ್ಡ್ ಹ್ಯಾಪಿನೆಸ್ ರಿಪೋರ್ಟ್‌ನ ಲೇಖಕರಲ್ಲಿ ಒಬ್ಬರಾದ ಜಾನ್ ಹೆಲ್ಲಿವೆಲ್ ಪ್ರತಿಕ್ರಿಯಿಸಿದ್ದು, “ಉಪಕಾರ ಮನೋಭಾವ, ವಿಶೇಷವಾಗಿ ಅಪರಿಚಿತರ ಕಡೆಗೆ ದಯೆ ತೋರುವುದು 2021 ರಲ್ಲಿ ನಾಟಕೀಯವಾಗಿ ಹೆಚ್ಚಾಯಿತು. 2022ರಲ್ಲಿ ಈ ಗುಣವು ಉನ್ನತ ಮಟ್ಟದಲ್ಲಿದೆ” ಎಂದು ಹೇಳಿರುವುದಾಗಿ ಸಿಎನ್‌ಎನ್ ವರದಿ ಮಾಡಿದೆ.

“ಈ ಕಷ್ಟದ ವರ್ಷಗಳಲ್ಲಿಯೂ, ಧನಾತ್ಮಕ ಭಾವನೆಗಳು ಋಣಾತ್ಮಕತೆಗಿಂತ ದ್ವಿಗುಣವಾಗಿವೆ. ಧನಾತ್ಮಕ ಸಾಮಾಜಿಕ ಬೆಂಬಲದ ಭಾವನೆಗಳು ಒಂಟಿತನಕ್ಕಿಂತ ಎರಡು ಪಟ್ಟು ಪ್ರಬಲವಾಗಿವೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...