Homeಮುಖಪುಟವಿಶ್ವ ಸಂತೋಷ ಸೂಚ್ಯಂಕದಲ್ಲಿ ಪಾಕ್‌, ಶ್ರೀಲಂಕಾಕ್ಕಿಂತ ಕೆಳಗೆ ಕುಸಿದ ಭಾರತ

ವಿಶ್ವ ಸಂತೋಷ ಸೂಚ್ಯಂಕದಲ್ಲಿ ಪಾಕ್‌, ಶ್ರೀಲಂಕಾಕ್ಕಿಂತ ಕೆಳಗೆ ಕುಸಿದ ಭಾರತ

- Advertisement -
- Advertisement -

ವಿಶ್ವಸಂಸ್ಥೆಯು ಆರಂಭಿಸಿದ ಲಾಭೋದ್ದೇಶವಿಲ್ಲದ ಸಂಸ್ಥೆಯು ಪ್ರಕಟಿಸಿರುವ ಇತ್ತೀಚಿನ ‘ವಿಶ್ವ ಸಂತೋಷ ಸೂಚ್ಯಂಕ’ ವರದಿಯಲ್ಲಿ ಭಾರತವು 146 ದೇಶಗಳ ಪೈಕಿ 126ನೇ ಸ್ಥಾನದಲ್ಲಿದೆ.

ಅಂತಾರಾಷ್ಟ್ರೀಯ ಸಂತೋಷ ದಿನದ ಸಂದರ್ಭದಲ್ಲಿ ಸೋಮವಾರ ಈ ವರದಿಯನ್ನು ಬಿಡುಗಡೆ ಮಾಡಲಾಗಿದೆ. ವಿಶ್ವಸಂಸ್ಥೆಯ ‘ಸುಸ್ಥಿರ ಅಭಿವೃದ್ಧಿ ಪರಿಹಾರಗಳ ಜಾಲ’ವು ವಾರ್ಷಿಕವಾಗಿ ವರದಿಯನ್ನು ಪ್ರಕಟಿಸುತ್ತದೆ.

2020 ರಿಂದ 2022ರವರೆಗಿನ ಗ್ಯಾಲಪ್ ವರ್ಲ್ಡ್ ಪೋಲ್‌ಗಳ ಡೇಟಾವನ್ನು ಈ ಸೂಚ್ಯಂಕ ಆಧರಿಸಿದೆ. (2005ರಲ್ಲಿ ಗ್ಯಾಲಪ್ ತನ್ನ ವಿಶ್ವ ಸಮೀಕ್ಷೆಯನ್ನು ಪ್ರಾರಂಭಿಸಿತು. ಇದು ನಿರಂತರವಾಗಿ 160 ದೇಶಗಳಲ್ಲಿ ನಾಗರಿಕರನ್ನು ಸಮೀಕ್ಷೆ ಮಾಡುತ್ತದೆ. ಗ್ಯಾಲಪ್ ವರ್ಲ್ಡ್ ಪೋಲ್ 100 ಕ್ಕೂ ಹೆಚ್ಚು ಜಾಗತಿಕ ಪ್ರಶ್ನೆಗಳನ್ನು ಮತ್ತು ನಿರ್ದಿಷ್ಟ ಸಂಗತಿಗಳನ್ನು ಒಳಗೊಂಡಿದೆ.)

ಒಟ್ಟು ದೇಶೀಯ ಉತ್ಪನ್ನ, ಜೀವಿತಾವಧಿ, ಉದಾರತೆ, ಸಾಮಾಜಿಕ ಬೆಂಬಲ, ಸ್ವಾತಂತ್ರ್ಯ ಮತ್ತು ಭ್ರಷ್ಟಾಚಾರ- ಈ ಆರು ಅಂಶಗಳನ್ನು ಮೌಲ್ಯಮಾಪನದಲ್ಲಿ ಪರಿಗಣಿಸಲಾಗಿದೆ.

2022ರಲ್ಲಿ 136ನೇ ಸ್ಥಾನದಲ್ಲಿದ್ದ ಭಾರತ ಪ್ರಸ್ತುತ 126ನೇ ಸ್ಥಾನಕ್ಕೆ ಬಂದಿದೆ. ಈ ವರ್ಷ, ಭಾರತವು 0-10ರ ಪ್ರಮಾಣದಲ್ಲಿ 4.036 ಅಂಕಗಳನ್ನು ಹೊಂದಿತ್ತು.

ಪಾಕಿಸ್ತಾನ 108ನೇ ಸ್ಥಾನದಲ್ಲಿದ್ದರೆ, ಬಾಂಗ್ಲಾದೇಶ 118ನೇ ಸ್ಥಾನದಲ್ಲಿದೆ ಎಂದು ಸೂಚ್ಯಂಕ ತೋರಿಸಿದೆ. ಶ್ರೀಲಂಕಾ 112 ನೇ ಸ್ಥಾನದಲ್ಲಿದ್ದರೆ ನೇಪಾಳ 78ನೇ ಸ್ಥಾನದಲ್ಲಿದೆ.

ವರದಿಯ ಪ್ರಕಾರ, ಫಿನ್ಲೆಂಡ್ 7.804 ಅಂಕಗಳೊಂದಿಗೆ ವಿಶ್ವದ ಅತ್ಯಂತ ಸಂತೋಷದಾಯಕ ದೇಶವಾಗಿದೆ. ನಾರ್ಡಿಕ್ ದೇಶಗಳಾದ ಡೆನ್ಮಾರ್ಕ್ ಮತ್ತು ಐಸ್ಲ್ಯಾಂಡ್  ಪಟ್ಟಿಯಲ್ಲಿ ಎರಡನೇ ಮತ್ತು ಮೂರನೇ ಸ್ಥಾನದಲ್ಲಿವೆ.

ಪಟ್ಟಿಯಲ್ಲಿರುವ ಮೊದಲ ಹತ್ತು ದೇಶಗಳ ಪೈಕಿ ಎಂಟು ಯುರೋಪ್‌ ಖಂಡದಲ್ಲಿವೆ. ಇಸ್ರೇಲ್ ಮತ್ತು ನ್ಯೂಜಿಲೆಂಡ್ ಮೊದಲ ಹತ್ತರಲ್ಲಿ ಕಾಣಿಸಿಕೊಂಡ ಯುರೋಪಿನ ಹೊರಗಿನ ಎರಡು ದೇಶಗಳಾಗಿವೆ.

ಫೆಬ್ರವರಿ 2022ರಲ್ಲಿ ಆರಂಭವಾದ ಉಭಯ ದೇಶಗಳ ನಡುವಿನ ಸಂಘರ್ಷದ ಹೊರತಾಗಿಯೂ ರಷ್ಯಾ ಮತ್ತು ಉಕ್ರೇನ್ ದೇಶಗಳು ಉನ್ನತ ಮಟ್ಟದ ಸಂತೋಷವನ್ನು ಹೊಂದಿರುವುದಾಗಿ ವರದಿ ಹೇಳಿದೆ.

ಇದನ್ನೂ ಓದಿರಿ: ನಿಲ್ಲದ ‘ಟಿಪ್ಪು ನಿಜ ಕನಸುಗಳು’ ನಾಟಕ ಪ್ರದರ್ಶನ; ಸ್ವಾಮೀಜಿ ಮಾತಿಗೆ ಕವಡೆ ಕಿಮ್ಮತ್ತೂ ನೀಡದ ರಂಗಾಯಣ

ಸೂಚ್ಯಂಕದ ಪ್ರಕಾರ, ರಷ್ಯಾದ ಶ್ರೇಯಾಂಕವು 2022ರಲ್ಲಿ 80ನೇ ಸ್ಥಾನದಲ್ಲಿತ್ತು. ಈ ವರ್ಷ 70ದಲ್ಲಿ ಇದೆ. ಆದರೆ ಉಕ್ರೇನ್ ಶ್ರೇಯಾಂಕವು 98 ರಿಂದ 92ಕ್ಕೆ ಏರಿಕೆ ಕಂಡಿದೆ. 2022ರ ವರದಿಯು 2019 ರಿಂದ 2021 ರವರೆಗಿನ ಡೇಟಾವನ್ನು ಆಧರಿಸಿದೆ.

ವರ್ಲ್ಡ್ ಹ್ಯಾಪಿನೆಸ್ ರಿಪೋರ್ಟ್‌ನ ಲೇಖಕರಲ್ಲಿ ಒಬ್ಬರಾದ ಜಾನ್ ಹೆಲ್ಲಿವೆಲ್ ಪ್ರತಿಕ್ರಿಯಿಸಿದ್ದು, “ಉಪಕಾರ ಮನೋಭಾವ, ವಿಶೇಷವಾಗಿ ಅಪರಿಚಿತರ ಕಡೆಗೆ ದಯೆ ತೋರುವುದು 2021 ರಲ್ಲಿ ನಾಟಕೀಯವಾಗಿ ಹೆಚ್ಚಾಯಿತು. 2022ರಲ್ಲಿ ಈ ಗುಣವು ಉನ್ನತ ಮಟ್ಟದಲ್ಲಿದೆ” ಎಂದು ಹೇಳಿರುವುದಾಗಿ ಸಿಎನ್‌ಎನ್ ವರದಿ ಮಾಡಿದೆ.

“ಈ ಕಷ್ಟದ ವರ್ಷಗಳಲ್ಲಿಯೂ, ಧನಾತ್ಮಕ ಭಾವನೆಗಳು ಋಣಾತ್ಮಕತೆಗಿಂತ ದ್ವಿಗುಣವಾಗಿವೆ. ಧನಾತ್ಮಕ ಸಾಮಾಜಿಕ ಬೆಂಬಲದ ಭಾವನೆಗಳು ಒಂಟಿತನಕ್ಕಿಂತ ಎರಡು ಪಟ್ಟು ಪ್ರಬಲವಾಗಿವೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...