Homeಮುಖಪುಟವಿಶ್ವ ಸಂತೋಷ ಸೂಚ್ಯಂಕದಲ್ಲಿ ಪಾಕ್‌, ಶ್ರೀಲಂಕಾಕ್ಕಿಂತ ಕೆಳಗೆ ಕುಸಿದ ಭಾರತ

ವಿಶ್ವ ಸಂತೋಷ ಸೂಚ್ಯಂಕದಲ್ಲಿ ಪಾಕ್‌, ಶ್ರೀಲಂಕಾಕ್ಕಿಂತ ಕೆಳಗೆ ಕುಸಿದ ಭಾರತ

- Advertisement -
- Advertisement -

ವಿಶ್ವಸಂಸ್ಥೆಯು ಆರಂಭಿಸಿದ ಲಾಭೋದ್ದೇಶವಿಲ್ಲದ ಸಂಸ್ಥೆಯು ಪ್ರಕಟಿಸಿರುವ ಇತ್ತೀಚಿನ ‘ವಿಶ್ವ ಸಂತೋಷ ಸೂಚ್ಯಂಕ’ ವರದಿಯಲ್ಲಿ ಭಾರತವು 146 ದೇಶಗಳ ಪೈಕಿ 126ನೇ ಸ್ಥಾನದಲ್ಲಿದೆ.

ಅಂತಾರಾಷ್ಟ್ರೀಯ ಸಂತೋಷ ದಿನದ ಸಂದರ್ಭದಲ್ಲಿ ಸೋಮವಾರ ಈ ವರದಿಯನ್ನು ಬಿಡುಗಡೆ ಮಾಡಲಾಗಿದೆ. ವಿಶ್ವಸಂಸ್ಥೆಯ ‘ಸುಸ್ಥಿರ ಅಭಿವೃದ್ಧಿ ಪರಿಹಾರಗಳ ಜಾಲ’ವು ವಾರ್ಷಿಕವಾಗಿ ವರದಿಯನ್ನು ಪ್ರಕಟಿಸುತ್ತದೆ.

2020 ರಿಂದ 2022ರವರೆಗಿನ ಗ್ಯಾಲಪ್ ವರ್ಲ್ಡ್ ಪೋಲ್‌ಗಳ ಡೇಟಾವನ್ನು ಈ ಸೂಚ್ಯಂಕ ಆಧರಿಸಿದೆ. (2005ರಲ್ಲಿ ಗ್ಯಾಲಪ್ ತನ್ನ ವಿಶ್ವ ಸಮೀಕ್ಷೆಯನ್ನು ಪ್ರಾರಂಭಿಸಿತು. ಇದು ನಿರಂತರವಾಗಿ 160 ದೇಶಗಳಲ್ಲಿ ನಾಗರಿಕರನ್ನು ಸಮೀಕ್ಷೆ ಮಾಡುತ್ತದೆ. ಗ್ಯಾಲಪ್ ವರ್ಲ್ಡ್ ಪೋಲ್ 100 ಕ್ಕೂ ಹೆಚ್ಚು ಜಾಗತಿಕ ಪ್ರಶ್ನೆಗಳನ್ನು ಮತ್ತು ನಿರ್ದಿಷ್ಟ ಸಂಗತಿಗಳನ್ನು ಒಳಗೊಂಡಿದೆ.)

ಒಟ್ಟು ದೇಶೀಯ ಉತ್ಪನ್ನ, ಜೀವಿತಾವಧಿ, ಉದಾರತೆ, ಸಾಮಾಜಿಕ ಬೆಂಬಲ, ಸ್ವಾತಂತ್ರ್ಯ ಮತ್ತು ಭ್ರಷ್ಟಾಚಾರ- ಈ ಆರು ಅಂಶಗಳನ್ನು ಮೌಲ್ಯಮಾಪನದಲ್ಲಿ ಪರಿಗಣಿಸಲಾಗಿದೆ.

2022ರಲ್ಲಿ 136ನೇ ಸ್ಥಾನದಲ್ಲಿದ್ದ ಭಾರತ ಪ್ರಸ್ತುತ 126ನೇ ಸ್ಥಾನಕ್ಕೆ ಬಂದಿದೆ. ಈ ವರ್ಷ, ಭಾರತವು 0-10ರ ಪ್ರಮಾಣದಲ್ಲಿ 4.036 ಅಂಕಗಳನ್ನು ಹೊಂದಿತ್ತು.

ಪಾಕಿಸ್ತಾನ 108ನೇ ಸ್ಥಾನದಲ್ಲಿದ್ದರೆ, ಬಾಂಗ್ಲಾದೇಶ 118ನೇ ಸ್ಥಾನದಲ್ಲಿದೆ ಎಂದು ಸೂಚ್ಯಂಕ ತೋರಿಸಿದೆ. ಶ್ರೀಲಂಕಾ 112 ನೇ ಸ್ಥಾನದಲ್ಲಿದ್ದರೆ ನೇಪಾಳ 78ನೇ ಸ್ಥಾನದಲ್ಲಿದೆ.

ವರದಿಯ ಪ್ರಕಾರ, ಫಿನ್ಲೆಂಡ್ 7.804 ಅಂಕಗಳೊಂದಿಗೆ ವಿಶ್ವದ ಅತ್ಯಂತ ಸಂತೋಷದಾಯಕ ದೇಶವಾಗಿದೆ. ನಾರ್ಡಿಕ್ ದೇಶಗಳಾದ ಡೆನ್ಮಾರ್ಕ್ ಮತ್ತು ಐಸ್ಲ್ಯಾಂಡ್  ಪಟ್ಟಿಯಲ್ಲಿ ಎರಡನೇ ಮತ್ತು ಮೂರನೇ ಸ್ಥಾನದಲ್ಲಿವೆ.

ಪಟ್ಟಿಯಲ್ಲಿರುವ ಮೊದಲ ಹತ್ತು ದೇಶಗಳ ಪೈಕಿ ಎಂಟು ಯುರೋಪ್‌ ಖಂಡದಲ್ಲಿವೆ. ಇಸ್ರೇಲ್ ಮತ್ತು ನ್ಯೂಜಿಲೆಂಡ್ ಮೊದಲ ಹತ್ತರಲ್ಲಿ ಕಾಣಿಸಿಕೊಂಡ ಯುರೋಪಿನ ಹೊರಗಿನ ಎರಡು ದೇಶಗಳಾಗಿವೆ.

ಫೆಬ್ರವರಿ 2022ರಲ್ಲಿ ಆರಂಭವಾದ ಉಭಯ ದೇಶಗಳ ನಡುವಿನ ಸಂಘರ್ಷದ ಹೊರತಾಗಿಯೂ ರಷ್ಯಾ ಮತ್ತು ಉಕ್ರೇನ್ ದೇಶಗಳು ಉನ್ನತ ಮಟ್ಟದ ಸಂತೋಷವನ್ನು ಹೊಂದಿರುವುದಾಗಿ ವರದಿ ಹೇಳಿದೆ.

ಇದನ್ನೂ ಓದಿರಿ: ನಿಲ್ಲದ ‘ಟಿಪ್ಪು ನಿಜ ಕನಸುಗಳು’ ನಾಟಕ ಪ್ರದರ್ಶನ; ಸ್ವಾಮೀಜಿ ಮಾತಿಗೆ ಕವಡೆ ಕಿಮ್ಮತ್ತೂ ನೀಡದ ರಂಗಾಯಣ

ಸೂಚ್ಯಂಕದ ಪ್ರಕಾರ, ರಷ್ಯಾದ ಶ್ರೇಯಾಂಕವು 2022ರಲ್ಲಿ 80ನೇ ಸ್ಥಾನದಲ್ಲಿತ್ತು. ಈ ವರ್ಷ 70ದಲ್ಲಿ ಇದೆ. ಆದರೆ ಉಕ್ರೇನ್ ಶ್ರೇಯಾಂಕವು 98 ರಿಂದ 92ಕ್ಕೆ ಏರಿಕೆ ಕಂಡಿದೆ. 2022ರ ವರದಿಯು 2019 ರಿಂದ 2021 ರವರೆಗಿನ ಡೇಟಾವನ್ನು ಆಧರಿಸಿದೆ.

ವರ್ಲ್ಡ್ ಹ್ಯಾಪಿನೆಸ್ ರಿಪೋರ್ಟ್‌ನ ಲೇಖಕರಲ್ಲಿ ಒಬ್ಬರಾದ ಜಾನ್ ಹೆಲ್ಲಿವೆಲ್ ಪ್ರತಿಕ್ರಿಯಿಸಿದ್ದು, “ಉಪಕಾರ ಮನೋಭಾವ, ವಿಶೇಷವಾಗಿ ಅಪರಿಚಿತರ ಕಡೆಗೆ ದಯೆ ತೋರುವುದು 2021 ರಲ್ಲಿ ನಾಟಕೀಯವಾಗಿ ಹೆಚ್ಚಾಯಿತು. 2022ರಲ್ಲಿ ಈ ಗುಣವು ಉನ್ನತ ಮಟ್ಟದಲ್ಲಿದೆ” ಎಂದು ಹೇಳಿರುವುದಾಗಿ ಸಿಎನ್‌ಎನ್ ವರದಿ ಮಾಡಿದೆ.

“ಈ ಕಷ್ಟದ ವರ್ಷಗಳಲ್ಲಿಯೂ, ಧನಾತ್ಮಕ ಭಾವನೆಗಳು ಋಣಾತ್ಮಕತೆಗಿಂತ ದ್ವಿಗುಣವಾಗಿವೆ. ಧನಾತ್ಮಕ ಸಾಮಾಜಿಕ ಬೆಂಬಲದ ಭಾವನೆಗಳು ಒಂಟಿತನಕ್ಕಿಂತ ಎರಡು ಪಟ್ಟು ಪ್ರಬಲವಾಗಿವೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...