Homeಮುಖಪುಟವಿಶ್ವ ಸಂತೋಷ ಸೂಚ್ಯಂಕದಲ್ಲಿ ಪಾಕ್‌, ಶ್ರೀಲಂಕಾಕ್ಕಿಂತ ಕೆಳಗೆ ಕುಸಿದ ಭಾರತ

ವಿಶ್ವ ಸಂತೋಷ ಸೂಚ್ಯಂಕದಲ್ಲಿ ಪಾಕ್‌, ಶ್ರೀಲಂಕಾಕ್ಕಿಂತ ಕೆಳಗೆ ಕುಸಿದ ಭಾರತ

- Advertisement -
- Advertisement -

ವಿಶ್ವಸಂಸ್ಥೆಯು ಆರಂಭಿಸಿದ ಲಾಭೋದ್ದೇಶವಿಲ್ಲದ ಸಂಸ್ಥೆಯು ಪ್ರಕಟಿಸಿರುವ ಇತ್ತೀಚಿನ ‘ವಿಶ್ವ ಸಂತೋಷ ಸೂಚ್ಯಂಕ’ ವರದಿಯಲ್ಲಿ ಭಾರತವು 146 ದೇಶಗಳ ಪೈಕಿ 126ನೇ ಸ್ಥಾನದಲ್ಲಿದೆ.

ಅಂತಾರಾಷ್ಟ್ರೀಯ ಸಂತೋಷ ದಿನದ ಸಂದರ್ಭದಲ್ಲಿ ಸೋಮವಾರ ಈ ವರದಿಯನ್ನು ಬಿಡುಗಡೆ ಮಾಡಲಾಗಿದೆ. ವಿಶ್ವಸಂಸ್ಥೆಯ ‘ಸುಸ್ಥಿರ ಅಭಿವೃದ್ಧಿ ಪರಿಹಾರಗಳ ಜಾಲ’ವು ವಾರ್ಷಿಕವಾಗಿ ವರದಿಯನ್ನು ಪ್ರಕಟಿಸುತ್ತದೆ.

2020 ರಿಂದ 2022ರವರೆಗಿನ ಗ್ಯಾಲಪ್ ವರ್ಲ್ಡ್ ಪೋಲ್‌ಗಳ ಡೇಟಾವನ್ನು ಈ ಸೂಚ್ಯಂಕ ಆಧರಿಸಿದೆ. (2005ರಲ್ಲಿ ಗ್ಯಾಲಪ್ ತನ್ನ ವಿಶ್ವ ಸಮೀಕ್ಷೆಯನ್ನು ಪ್ರಾರಂಭಿಸಿತು. ಇದು ನಿರಂತರವಾಗಿ 160 ದೇಶಗಳಲ್ಲಿ ನಾಗರಿಕರನ್ನು ಸಮೀಕ್ಷೆ ಮಾಡುತ್ತದೆ. ಗ್ಯಾಲಪ್ ವರ್ಲ್ಡ್ ಪೋಲ್ 100 ಕ್ಕೂ ಹೆಚ್ಚು ಜಾಗತಿಕ ಪ್ರಶ್ನೆಗಳನ್ನು ಮತ್ತು ನಿರ್ದಿಷ್ಟ ಸಂಗತಿಗಳನ್ನು ಒಳಗೊಂಡಿದೆ.)

ಒಟ್ಟು ದೇಶೀಯ ಉತ್ಪನ್ನ, ಜೀವಿತಾವಧಿ, ಉದಾರತೆ, ಸಾಮಾಜಿಕ ಬೆಂಬಲ, ಸ್ವಾತಂತ್ರ್ಯ ಮತ್ತು ಭ್ರಷ್ಟಾಚಾರ- ಈ ಆರು ಅಂಶಗಳನ್ನು ಮೌಲ್ಯಮಾಪನದಲ್ಲಿ ಪರಿಗಣಿಸಲಾಗಿದೆ.

2022ರಲ್ಲಿ 136ನೇ ಸ್ಥಾನದಲ್ಲಿದ್ದ ಭಾರತ ಪ್ರಸ್ತುತ 126ನೇ ಸ್ಥಾನಕ್ಕೆ ಬಂದಿದೆ. ಈ ವರ್ಷ, ಭಾರತವು 0-10ರ ಪ್ರಮಾಣದಲ್ಲಿ 4.036 ಅಂಕಗಳನ್ನು ಹೊಂದಿತ್ತು.

ಪಾಕಿಸ್ತಾನ 108ನೇ ಸ್ಥಾನದಲ್ಲಿದ್ದರೆ, ಬಾಂಗ್ಲಾದೇಶ 118ನೇ ಸ್ಥಾನದಲ್ಲಿದೆ ಎಂದು ಸೂಚ್ಯಂಕ ತೋರಿಸಿದೆ. ಶ್ರೀಲಂಕಾ 112 ನೇ ಸ್ಥಾನದಲ್ಲಿದ್ದರೆ ನೇಪಾಳ 78ನೇ ಸ್ಥಾನದಲ್ಲಿದೆ.

ವರದಿಯ ಪ್ರಕಾರ, ಫಿನ್ಲೆಂಡ್ 7.804 ಅಂಕಗಳೊಂದಿಗೆ ವಿಶ್ವದ ಅತ್ಯಂತ ಸಂತೋಷದಾಯಕ ದೇಶವಾಗಿದೆ. ನಾರ್ಡಿಕ್ ದೇಶಗಳಾದ ಡೆನ್ಮಾರ್ಕ್ ಮತ್ತು ಐಸ್ಲ್ಯಾಂಡ್  ಪಟ್ಟಿಯಲ್ಲಿ ಎರಡನೇ ಮತ್ತು ಮೂರನೇ ಸ್ಥಾನದಲ್ಲಿವೆ.

ಪಟ್ಟಿಯಲ್ಲಿರುವ ಮೊದಲ ಹತ್ತು ದೇಶಗಳ ಪೈಕಿ ಎಂಟು ಯುರೋಪ್‌ ಖಂಡದಲ್ಲಿವೆ. ಇಸ್ರೇಲ್ ಮತ್ತು ನ್ಯೂಜಿಲೆಂಡ್ ಮೊದಲ ಹತ್ತರಲ್ಲಿ ಕಾಣಿಸಿಕೊಂಡ ಯುರೋಪಿನ ಹೊರಗಿನ ಎರಡು ದೇಶಗಳಾಗಿವೆ.

ಫೆಬ್ರವರಿ 2022ರಲ್ಲಿ ಆರಂಭವಾದ ಉಭಯ ದೇಶಗಳ ನಡುವಿನ ಸಂಘರ್ಷದ ಹೊರತಾಗಿಯೂ ರಷ್ಯಾ ಮತ್ತು ಉಕ್ರೇನ್ ದೇಶಗಳು ಉನ್ನತ ಮಟ್ಟದ ಸಂತೋಷವನ್ನು ಹೊಂದಿರುವುದಾಗಿ ವರದಿ ಹೇಳಿದೆ.

ಇದನ್ನೂ ಓದಿರಿ: ನಿಲ್ಲದ ‘ಟಿಪ್ಪು ನಿಜ ಕನಸುಗಳು’ ನಾಟಕ ಪ್ರದರ್ಶನ; ಸ್ವಾಮೀಜಿ ಮಾತಿಗೆ ಕವಡೆ ಕಿಮ್ಮತ್ತೂ ನೀಡದ ರಂಗಾಯಣ

ಸೂಚ್ಯಂಕದ ಪ್ರಕಾರ, ರಷ್ಯಾದ ಶ್ರೇಯಾಂಕವು 2022ರಲ್ಲಿ 80ನೇ ಸ್ಥಾನದಲ್ಲಿತ್ತು. ಈ ವರ್ಷ 70ದಲ್ಲಿ ಇದೆ. ಆದರೆ ಉಕ್ರೇನ್ ಶ್ರೇಯಾಂಕವು 98 ರಿಂದ 92ಕ್ಕೆ ಏರಿಕೆ ಕಂಡಿದೆ. 2022ರ ವರದಿಯು 2019 ರಿಂದ 2021 ರವರೆಗಿನ ಡೇಟಾವನ್ನು ಆಧರಿಸಿದೆ.

ವರ್ಲ್ಡ್ ಹ್ಯಾಪಿನೆಸ್ ರಿಪೋರ್ಟ್‌ನ ಲೇಖಕರಲ್ಲಿ ಒಬ್ಬರಾದ ಜಾನ್ ಹೆಲ್ಲಿವೆಲ್ ಪ್ರತಿಕ್ರಿಯಿಸಿದ್ದು, “ಉಪಕಾರ ಮನೋಭಾವ, ವಿಶೇಷವಾಗಿ ಅಪರಿಚಿತರ ಕಡೆಗೆ ದಯೆ ತೋರುವುದು 2021 ರಲ್ಲಿ ನಾಟಕೀಯವಾಗಿ ಹೆಚ್ಚಾಯಿತು. 2022ರಲ್ಲಿ ಈ ಗುಣವು ಉನ್ನತ ಮಟ್ಟದಲ್ಲಿದೆ” ಎಂದು ಹೇಳಿರುವುದಾಗಿ ಸಿಎನ್‌ಎನ್ ವರದಿ ಮಾಡಿದೆ.

“ಈ ಕಷ್ಟದ ವರ್ಷಗಳಲ್ಲಿಯೂ, ಧನಾತ್ಮಕ ಭಾವನೆಗಳು ಋಣಾತ್ಮಕತೆಗಿಂತ ದ್ವಿಗುಣವಾಗಿವೆ. ಧನಾತ್ಮಕ ಸಾಮಾಜಿಕ ಬೆಂಬಲದ ಭಾವನೆಗಳು ಒಂಟಿತನಕ್ಕಿಂತ ಎರಡು ಪಟ್ಟು ಪ್ರಬಲವಾಗಿವೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...