Homeಮುಖಪುಟಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಪ್ರಪಾತಕ್ಕೆ ಬಿದ್ದ ಭಾರತ: ಮೋದಿ ಸರ್ಕಾರವೇ ಕಾರಣವೆಂದ ಸಮೀಕ್ಷಾ ಸಂಸ್ಥೆ!

ಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಪ್ರಪಾತಕ್ಕೆ ಬಿದ್ದ ಭಾರತ: ಮೋದಿ ಸರ್ಕಾರವೇ ಕಾರಣವೆಂದ ಸಮೀಕ್ಷಾ ಸಂಸ್ಥೆ!

ಪತ್ರಕರ್ತರಿಗೆ ವಿಶ್ವದ ಅತ್ಯಂತ ಅಪಾಯಕಾರಿ ದೇಶಗಳಲ್ಲಿ ಭಾರತವೂ ಒಂದಾಗಿದೆ..

- Advertisement -
- Advertisement -

ಕ್ಲಾಸ್‌ಮೇಟ್ ಮೊಂಡಿಯಲ್ ಎಂ ಸಂಸ್ಥೆ ಮಾಧ್ಯಮಗಳ ಸ್ವಾತಂತ್ರ್ಯ ಸೂಚ್ಯಂಕ ಕುರಿತು ವರದಿಯೊಂದನ್ನು ಪ್ರಕಟಿಸಿದ್ದು, 180 ದೇಶಗಳ ಪಟ್ಟಿಯಲ್ಲಿ ಭಾರತ 142 ನೇ ಸ್ಥಾನದಲ್ಲಿದೆ. ಇದು ಭಾರತದ ಮಾಧ್ಯಮಗಳ ದುರಾವಸ್ಥೆ, ಬೇಜವಾಬ್ದಾರಿತನ ಮತ್ತು ಜನದ್ರೋಹಕ್ಕೆ ಸಾಕ್ಷಿಯಾಗಿದೆ.

ಭಾರತದ ಮಾಧ್ಯಮ ಹೀಗೆ ಪ್ರಪಾತಕ್ಕೆ ಬೀಳಲು ಕಾರಣವೇನೆಂದು ಟಿಪ್ಪಣಿಯನ್ನೂ ಅದು ನೀಡಿದೆ. ಇದಕ್ಕೆಲ್ಲ ಮೋದಿ ಸರ್ಕಾರವೇ ಕಾರಣ ಎಂಬುದನ್ನು ಅದು ಬಲವಾಗಿ ಪ್ರತಿಪಾದಿಸಿದೆ. ಆ ಟಿಪ್ಪಣಿಯ ಯಥಾವತ್ ಅನುವಾದ ಇಲ್ಲಿದೆ:

ಮೋದಿಯವರು ಮಾಧ್ಯಮಗಳ ಮೇಲಿನ ಹಿಡಿತವನ್ನು ಬಿಗಿಗೊಳಿಸಿದ್ದಾರೆ. 2020 ರಲ್ಲಿ ಅವರ ಕೆಲಸಕ್ಕೆ ಸಂಬಂಧಿಸಿದಂತೆ ನಾಲ್ವರು ಪತ್ರಕರ್ತರು ಕೊಲ್ಲಲ್ಪಟ್ಟರು. ತಮ್ಮ ಜವಾನ್ದಾರಿ ಕೆಲಸಗಳನ್ನು ಪ್ರಮಾಣಿಕವಾಗಿ ಮಾಡುವ ಪತ್ರಕರ್ತರು ಇವತ್ತು ಜೀವಭಯ ಎದುರಿಸುತ್ತಿದ್ದಾರೆ. ಪ್ರಮಾಣಿಕ ಪತ್ರಕರ್ತರ ಪಾಲಿಗೆ ಭಾರತವು ವಿಶ್ವದ ಅತ್ಯಂತ ಅಪಾಯಕಾರಿ ದೇಶಗಳಲ್ಲಿ ಒಂದಾಗಿದೆ. ವರದಿಗಾರರ ವಿರುದ್ಧದ ಪೊಲೀಸ್ ಹಿಂಸಾಚಾರ, ರಾಜಕೀಯ ಕಾರ್ಯಕರ್ತರ ಹೊಂಚುದಾಳಿ ಮತ್ತು ಕ್ರಿಮಿನಲ್ ಗುಂಪುಗಳು ಅಥವಾ ಭ್ರಷ್ಟ ಸ್ಥಳೀಯ ಅಧಿಕಾರಿಗಳಿಂದ ಪ್ರಚೋದಿಸಲ್ಪಟ್ಟ ಪ್ರತೀಕಾರಗಳು ಸೇರಿದಂತೆ ಎಲ್ಲ ರೀತಿಯ ದಾಳಿಗೆ ಅವರು ಒಡ್ಡಿಕೊಳ್ಳಬೇಕಾಗಿದೆ.

2019 ರ ವಸಂತ ಋತುವಿನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಗಳಿಂದಾಗಿ, ಪ್ರಧಾನಿ ನರೇಂದ್ರ ಮೋದಿಯವರ ಭಾರತೀಯ ಜನತಾ ಪಕ್ಷವು ಅಗಾಧ ಬಹುಮತದಿಂದ ಜಯ ಗಳಿಸಿದಾಗಿನಿಂದಲೂ, ಹಿಂದೂ ರಾಷ್ಟ್ರೀಯತಾವಾದಿ ಸರ್ಕಾರದ ಅಣತಿಯಂತೆ ಕೆಲಸ ಮಾಡಲು ಮಾಧ್ಯಮಗಳ ಮೇಲೆ ಒತ್ತಡ ಹೆಚ್ಚಾಗಿದೆ. ಆಮೂಲಾಗ್ರ ಬಲಪಂಥೀಯ ಹಿಂದೂ ರಾಷ್ಟ್ರೀಯತೆಗೆ ನಾಂದಿ ಹಾಡಿದ ಹಿಂದುತ್ವವನ್ನು ಸಮರ್ಥಿಸುವ ಬಹುಪಾಲು ಭಾರತೀಯರು, ಸಾರ್ವಜನಿಕ ಚರ್ಚೆಯಿಂದ “ರಾಷ್ಟ್ರವಿರೋಧಿ” ಚಿಂತನೆಯ ಎಲ್ಲಾ ಅಭಿವ್ಯಕ್ತಿಗಳನ್ನು ಶುದ್ಧೀಕರಿಸಲು ಪ್ರಯತ್ನಿಸುತ್ತಿದ್ದಾರೆ.

ಹಿಂದುತ್ವ ಅನುಯಾಯಿಗಳನ್ನು ಕಿರಿಕಿರಿಗೊಳಿಸುವ ವಿಷಯಗಳ ಬಗ್ಗೆ ಮಾತನಾಡಲು ಅಥವಾ ಬರೆಯಲು ಧೈರ್ಯವಿರುವ ಪ್ರಾಮಾಣಿಕ ಪತ್ರಕರ್ತರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಸಂಘಟಿತ ದ್ವೇಷ ಅಭಿಯಾನಗಳು ಭಯ ಹುಟ್ಟಿಸುತ್ತವೆ. ಇನ್ನೂ ಅಪಾಯಕಾರಿ ಆಗಿರುವ ವಿಷಯವೆಂದರೆ, ಈ ಅಭಿಯಾನಗಳು ಅಂತಹ ಪ್ರಾಮಾಣಿಕ ಪತ್ರಕರ್ತರ ಹತ್ಯೆಗೆ ಕರೆಗಳನ್ನು ನೀಡುತ್ತವೆ!.

ಈ ಸಂಘಟಿತ ಹಿಂದೂತ್ವ ಜಾಲದ ಗುರಿಗಳು ಮಹಿಳೆಯರಾಗಿದ್ದಾಗ ಪ್ರಚಾರಗಳು ವಿಶೇಷವಾಗಿ ಹಿಂಸಾತ್ಮಕವಾಗಿರುತ್ತದೆ ಮತ್ತು ಅಸಹ್ಯಕರವಾಗಿರುತ್ತದೆ. ಅಧಿಕಾರಸ್ಥರ ವಿರುದ್ಧ ಬರೆದಾಗ ಅಥವಾ ಪ್ರಸಾರ ಮಾಡಿದಾಗ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆಗಳನ್ನು ಜಡಿದು ಬೆದರಿಸಲಾಗುತ್ತಿದೆ. ಕೆಲವು ಪ್ರಾಸಿಕ್ಯೂಟರ್‌ಗಳು ದಂಡ ಸಂಹಿತೆಯ ಸೆಕ್ಷನ್ 124 ಎ ಅನ್ನು ಪ್ರಯೋಸಿದುತ್ತಾರೆ! ಇದರ ಅಡಿಯಲ್ಲಿ “ದೇಶದ್ರೋಹ”ದ ಹೆಸರಿನಲ್ಲಿ ಜೀವಾವಧಿ ಶಿಕ್ಷೆಗೆ ಪತ್ರಕರ್ತರನ್ನು ದೂಡುವ ಹುನ್ನಾರವಿದೆ.

2020 ರಲ್ಲಿ, ಕೊರೊನಾ ಬಿಕ್ಕಟ್ಟಿನ ಲಾಭವನ್ನು ಸರ್ಕಾರವು ಪಡೆದುಕೊಂಡಿತು. ಅಧಿಕೃತ ಸ್ಥಾನದೊಂದಿಗೆ ಭಿನ್ನಾಭಿಪ್ರಾಯದ ಮಾಹಿತಿಯನ್ನು ಒದಗಿಸುವ ಪತ್ರಕರ್ತರನ್ನು ವಿಚಾರಣೆಗೆ ಒಳಪಡಿಸುವ ಮೂಲಕ ಸುದ್ದಿ ಪ್ರಸಾರದ ನಿಯಂತ್ರಣವನ್ನು ಹೆಚ್ಚಿಸಿತು.

ಕಾಶ್ಮೀರದಲ್ಲಿ ಪರಿಸ್ಥಿತಿ ಇನ್ನೂ ಆತಂಕಕಾರಿಯಾಗಿದೆ. ಅಲ್ಲಿ ವರದಿಗಾರರು ಹೆಚ್ಚಾಗಿ ಪೊಲೀಸರು ಮತ್ತು ಅರೆಸೈನಿಕ ಪಡೆಗಳಿಂದ ಕಿರುಕುಳಕ್ಕೊಳಗಾಗುತ್ತಾರೆ . ಈ ಸರ್ವಾಧಿಕಾರದ ದೌರ್ಜನ್ಯ ಹೇಗಿದೆ ಎಂದರೆ ಕಾಶ್ಮೀರ್ ಟೈಮ್ಸ್‌ನಂತಹ ಪ್ರಮುಖ ಮಾಧ್ಯಮವನ್ನೂ ಮುಚ್ಚುವಂತೆ ಮಾಡುವ ಕುತಂತ್ರಗಳು ನಡೆದಿವೆ.

ಸಿಎಎ ವಿರೋಧಿ, ರೈತ ಪರ ಹೋರಾಟ: ಪತ್ರಕರ್ತರೇ ಟಾರ್ಗೆಟ್

ಸಿಎಎ-ಎನ್‌ಆರ್‌ಸಿ ವಿರುದ್ಧ ಕಳೆದ ವರ್ಷ ನಡೆದ ಚಳುವಳಿಯ ಪರವಿದ್ದ ಪತ್ರಕರ್ತರು, ಸ್ವತಂತ್ರ ಮಾಧ್ಯಮಗಳಿಗೆ ಮುಕ್ತವಾಗಿ ಬರೆಯುತ್ತಿದ್ದ ಸಾಮಾಜಿಕ ಕಾರ್ಯಕರ್ತರಿಗೆ ಪೊಲೀಸರು ಸಾಕಷ್ಟು ಕಿರಿಕುಳ ನೀಡುತ್ತ ಬಂದಿದ್ದಾರೆ.

ದೆಹಲಿ ಗಡಿಗಳಲ್ಲಿ ನಡೆದಿರುವ ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟದ ಅಗತ್ಯತೆಯನ್ನು ನಿರಂತರವಾಗಿ ವರದಿ ಮಾಡುತ್ತಿದ್ದ ಕ್ಯಾರವಾನ್ ವರದಿಗಾರ ಒಬ್ಬರ ಮೇಲೆ ಹಲ್ಲೆ ನಡೆಸಿದ್ದ ಪೊಲೀಸರು ಅವರನ್ನು ಜೈಲಿಗೆ ತಳ್ಳಿದ್ದರು.

ಕೇಂದ್ರ ಗೃಹ ಇಲಾಖೆ ಅಧಿನದಲ್ಲಿರುವ ದೆಹಲಿ ಪೊಲೀಸ್ ಇಂತಹ ಕುಕೃತ್ಯಗಳಿಗೆ ಹೆಸರುವಾಸಿ ಆಗಿದ್ದಾರೆ. ಟ್ವೀಟ್ ಒಂದರ ನೆಪದಲ್ಲಿ ಹಿರಿಯ ಪತ್ರಕರ್ತ ರಾಜನಾಥ್ ಸರ್ದೇಸಾಯಿ ಸೇರಿದಂತೆ ಹಲವು ಪತ್ರಕರ್ತರ ಮೇಲೆ ದೇಶದ್ರೋಹದ ಅಪಾದನೆ ಅಡಿ ಕೇಸು ದಾಖಲಿಸಲಾಗಿತ್ತು.

ಗೌರಿ ಲಂಕೇಶ್ ಹತ್ಯೆ ಹಿಂದೆಯೂ!

ಸೂಚ್ಯಂಕ ಬಿಡುಗಡೆ ಮಾಡಿದ ಸಂಸ್ಥೆ 2019ರ ನಂತರ ಇದು ವಿಪರೀತಕ್ಕೆ ಹೋಗಿದೆ ಎಂಬುದನ್ನು ಗಣನೆಗೆ ತೆಗೆದುಕೊಂಡಿದೆ. ಆದರೆ, 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೇ ಇಂತಹ ಒಂದು ವ್ಯಸ್ಥಿತ ಸಂಚು ಶುರುವಾಗಿತ್ತು. ಪತ್ರಕರ್ತರಲ್ಲದಿದ್ದರೂ ಸಾಹಿತ್ಯಿಕ, ವೈಚಾರಿಕ ನಿಲುವುಗಳ ಕುರಿತು ಬರೆಯುತ್ತಿದ್ದ ದಾಬೋಲ್ಕರ್, ಪನ್ಸಾರೆ, ಕಲಬುರ್ಗಿಯವರ ಹತ್ಯೆ ಹಿಂದೆ ಈ ಒಂದು ‘ವ್ಯವಸ್ಥಿತ’ ಹಿಂದೂತ್ವವಾದಿ ಸಂಘಟನೆಗಳೇ ಎಂದು ಚಾರ್ಜ್‌ಶೀಟ್‌ಗಳಲ್ಲಿ ದಾಖಲೆ ಸಮೇತ ಆರೋಪಿಸಲಾಗಿದೆ.

ಸದಾ ಹಿಂದೂತ್ವವಾದಿಗಳ ದುಷ್ಕೃತ್ಯಗಳನ್ನು ಖಡಾಖಂಡಿತವಾಗಿ ಮುಲಾಜಿಲ್ಲದೆ ಟೀಕಿಸುವ ಛಾತಿ ಹೊಂದಿದ್ದ, ಅಪ್ಪಟ ಸೆಕ್ಯುಲರ್ ಮನಸ್ಸಿನ ಕರ್ನಾಟಕದ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ಹಿಂದೆ ಇದೇ ಅಜೆಂಡಾಗಳು ಕೆಲಸ ಮಾಡಿವೆ.

ಹೀಗಾಗಿ ಇಲ್ಲಿ ಮಾಧ್ಯಮ ಸ್ವಾತಂತ್ರ್ಯ ಎಂಬುದು ಪ್ರಪಾತಕ್ಕೆ ಬಿದ್ದಿದೆ. ಕೊರೋನಾ ವೈರಸ್ ಎರಡನೇ ಅಲೆ ಸೃಷ್ಟಿಸಿರುವ ಅನಾಹುತಕ್ಕೆ ಪ್ರಭುತ್ವದ ವಿರುದ್ಧ ನಿಲ್ಲಬೇಕಿದ್ದ ಬಹುಪಾಲು ಮಾಧ್ಯಮಗಳು ಮೌನವಾಗಿವೆ.


ಇದನ್ನೂ ಓದಿ: ಕೋವಿಡ್ ಸಾವಿನ ಸಂಖ್ಯೆಗಳನ್ನು ಮುಚ್ಚಿಡುತ್ತಿರುವ ಯೋಗಿ ಸರ್ಕಾರ: ಒಂದು ಗ್ರೌಂಡ್ ರಿಪೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...