Homeಮುಖಪುಟಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಪ್ರಪಾತಕ್ಕೆ ಬಿದ್ದ ಭಾರತ: ಮೋದಿ ಸರ್ಕಾರವೇ ಕಾರಣವೆಂದ ಸಮೀಕ್ಷಾ ಸಂಸ್ಥೆ!

ಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಪ್ರಪಾತಕ್ಕೆ ಬಿದ್ದ ಭಾರತ: ಮೋದಿ ಸರ್ಕಾರವೇ ಕಾರಣವೆಂದ ಸಮೀಕ್ಷಾ ಸಂಸ್ಥೆ!

ಪತ್ರಕರ್ತರಿಗೆ ವಿಶ್ವದ ಅತ್ಯಂತ ಅಪಾಯಕಾರಿ ದೇಶಗಳಲ್ಲಿ ಭಾರತವೂ ಒಂದಾಗಿದೆ..

- Advertisement -
- Advertisement -

ಕ್ಲಾಸ್‌ಮೇಟ್ ಮೊಂಡಿಯಲ್ ಎಂ ಸಂಸ್ಥೆ ಮಾಧ್ಯಮಗಳ ಸ್ವಾತಂತ್ರ್ಯ ಸೂಚ್ಯಂಕ ಕುರಿತು ವರದಿಯೊಂದನ್ನು ಪ್ರಕಟಿಸಿದ್ದು, 180 ದೇಶಗಳ ಪಟ್ಟಿಯಲ್ಲಿ ಭಾರತ 142 ನೇ ಸ್ಥಾನದಲ್ಲಿದೆ. ಇದು ಭಾರತದ ಮಾಧ್ಯಮಗಳ ದುರಾವಸ್ಥೆ, ಬೇಜವಾಬ್ದಾರಿತನ ಮತ್ತು ಜನದ್ರೋಹಕ್ಕೆ ಸಾಕ್ಷಿಯಾಗಿದೆ.

ಭಾರತದ ಮಾಧ್ಯಮ ಹೀಗೆ ಪ್ರಪಾತಕ್ಕೆ ಬೀಳಲು ಕಾರಣವೇನೆಂದು ಟಿಪ್ಪಣಿಯನ್ನೂ ಅದು ನೀಡಿದೆ. ಇದಕ್ಕೆಲ್ಲ ಮೋದಿ ಸರ್ಕಾರವೇ ಕಾರಣ ಎಂಬುದನ್ನು ಅದು ಬಲವಾಗಿ ಪ್ರತಿಪಾದಿಸಿದೆ. ಆ ಟಿಪ್ಪಣಿಯ ಯಥಾವತ್ ಅನುವಾದ ಇಲ್ಲಿದೆ:

ಮೋದಿಯವರು ಮಾಧ್ಯಮಗಳ ಮೇಲಿನ ಹಿಡಿತವನ್ನು ಬಿಗಿಗೊಳಿಸಿದ್ದಾರೆ. 2020 ರಲ್ಲಿ ಅವರ ಕೆಲಸಕ್ಕೆ ಸಂಬಂಧಿಸಿದಂತೆ ನಾಲ್ವರು ಪತ್ರಕರ್ತರು ಕೊಲ್ಲಲ್ಪಟ್ಟರು. ತಮ್ಮ ಜವಾನ್ದಾರಿ ಕೆಲಸಗಳನ್ನು ಪ್ರಮಾಣಿಕವಾಗಿ ಮಾಡುವ ಪತ್ರಕರ್ತರು ಇವತ್ತು ಜೀವಭಯ ಎದುರಿಸುತ್ತಿದ್ದಾರೆ. ಪ್ರಮಾಣಿಕ ಪತ್ರಕರ್ತರ ಪಾಲಿಗೆ ಭಾರತವು ವಿಶ್ವದ ಅತ್ಯಂತ ಅಪಾಯಕಾರಿ ದೇಶಗಳಲ್ಲಿ ಒಂದಾಗಿದೆ. ವರದಿಗಾರರ ವಿರುದ್ಧದ ಪೊಲೀಸ್ ಹಿಂಸಾಚಾರ, ರಾಜಕೀಯ ಕಾರ್ಯಕರ್ತರ ಹೊಂಚುದಾಳಿ ಮತ್ತು ಕ್ರಿಮಿನಲ್ ಗುಂಪುಗಳು ಅಥವಾ ಭ್ರಷ್ಟ ಸ್ಥಳೀಯ ಅಧಿಕಾರಿಗಳಿಂದ ಪ್ರಚೋದಿಸಲ್ಪಟ್ಟ ಪ್ರತೀಕಾರಗಳು ಸೇರಿದಂತೆ ಎಲ್ಲ ರೀತಿಯ ದಾಳಿಗೆ ಅವರು ಒಡ್ಡಿಕೊಳ್ಳಬೇಕಾಗಿದೆ.

2019 ರ ವಸಂತ ಋತುವಿನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಗಳಿಂದಾಗಿ, ಪ್ರಧಾನಿ ನರೇಂದ್ರ ಮೋದಿಯವರ ಭಾರತೀಯ ಜನತಾ ಪಕ್ಷವು ಅಗಾಧ ಬಹುಮತದಿಂದ ಜಯ ಗಳಿಸಿದಾಗಿನಿಂದಲೂ, ಹಿಂದೂ ರಾಷ್ಟ್ರೀಯತಾವಾದಿ ಸರ್ಕಾರದ ಅಣತಿಯಂತೆ ಕೆಲಸ ಮಾಡಲು ಮಾಧ್ಯಮಗಳ ಮೇಲೆ ಒತ್ತಡ ಹೆಚ್ಚಾಗಿದೆ. ಆಮೂಲಾಗ್ರ ಬಲಪಂಥೀಯ ಹಿಂದೂ ರಾಷ್ಟ್ರೀಯತೆಗೆ ನಾಂದಿ ಹಾಡಿದ ಹಿಂದುತ್ವವನ್ನು ಸಮರ್ಥಿಸುವ ಬಹುಪಾಲು ಭಾರತೀಯರು, ಸಾರ್ವಜನಿಕ ಚರ್ಚೆಯಿಂದ “ರಾಷ್ಟ್ರವಿರೋಧಿ” ಚಿಂತನೆಯ ಎಲ್ಲಾ ಅಭಿವ್ಯಕ್ತಿಗಳನ್ನು ಶುದ್ಧೀಕರಿಸಲು ಪ್ರಯತ್ನಿಸುತ್ತಿದ್ದಾರೆ.

ಹಿಂದುತ್ವ ಅನುಯಾಯಿಗಳನ್ನು ಕಿರಿಕಿರಿಗೊಳಿಸುವ ವಿಷಯಗಳ ಬಗ್ಗೆ ಮಾತನಾಡಲು ಅಥವಾ ಬರೆಯಲು ಧೈರ್ಯವಿರುವ ಪ್ರಾಮಾಣಿಕ ಪತ್ರಕರ್ತರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಸಂಘಟಿತ ದ್ವೇಷ ಅಭಿಯಾನಗಳು ಭಯ ಹುಟ್ಟಿಸುತ್ತವೆ. ಇನ್ನೂ ಅಪಾಯಕಾರಿ ಆಗಿರುವ ವಿಷಯವೆಂದರೆ, ಈ ಅಭಿಯಾನಗಳು ಅಂತಹ ಪ್ರಾಮಾಣಿಕ ಪತ್ರಕರ್ತರ ಹತ್ಯೆಗೆ ಕರೆಗಳನ್ನು ನೀಡುತ್ತವೆ!.

ಈ ಸಂಘಟಿತ ಹಿಂದೂತ್ವ ಜಾಲದ ಗುರಿಗಳು ಮಹಿಳೆಯರಾಗಿದ್ದಾಗ ಪ್ರಚಾರಗಳು ವಿಶೇಷವಾಗಿ ಹಿಂಸಾತ್ಮಕವಾಗಿರುತ್ತದೆ ಮತ್ತು ಅಸಹ್ಯಕರವಾಗಿರುತ್ತದೆ. ಅಧಿಕಾರಸ್ಥರ ವಿರುದ್ಧ ಬರೆದಾಗ ಅಥವಾ ಪ್ರಸಾರ ಮಾಡಿದಾಗ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆಗಳನ್ನು ಜಡಿದು ಬೆದರಿಸಲಾಗುತ್ತಿದೆ. ಕೆಲವು ಪ್ರಾಸಿಕ್ಯೂಟರ್‌ಗಳು ದಂಡ ಸಂಹಿತೆಯ ಸೆಕ್ಷನ್ 124 ಎ ಅನ್ನು ಪ್ರಯೋಸಿದುತ್ತಾರೆ! ಇದರ ಅಡಿಯಲ್ಲಿ “ದೇಶದ್ರೋಹ”ದ ಹೆಸರಿನಲ್ಲಿ ಜೀವಾವಧಿ ಶಿಕ್ಷೆಗೆ ಪತ್ರಕರ್ತರನ್ನು ದೂಡುವ ಹುನ್ನಾರವಿದೆ.

2020 ರಲ್ಲಿ, ಕೊರೊನಾ ಬಿಕ್ಕಟ್ಟಿನ ಲಾಭವನ್ನು ಸರ್ಕಾರವು ಪಡೆದುಕೊಂಡಿತು. ಅಧಿಕೃತ ಸ್ಥಾನದೊಂದಿಗೆ ಭಿನ್ನಾಭಿಪ್ರಾಯದ ಮಾಹಿತಿಯನ್ನು ಒದಗಿಸುವ ಪತ್ರಕರ್ತರನ್ನು ವಿಚಾರಣೆಗೆ ಒಳಪಡಿಸುವ ಮೂಲಕ ಸುದ್ದಿ ಪ್ರಸಾರದ ನಿಯಂತ್ರಣವನ್ನು ಹೆಚ್ಚಿಸಿತು.

ಕಾಶ್ಮೀರದಲ್ಲಿ ಪರಿಸ್ಥಿತಿ ಇನ್ನೂ ಆತಂಕಕಾರಿಯಾಗಿದೆ. ಅಲ್ಲಿ ವರದಿಗಾರರು ಹೆಚ್ಚಾಗಿ ಪೊಲೀಸರು ಮತ್ತು ಅರೆಸೈನಿಕ ಪಡೆಗಳಿಂದ ಕಿರುಕುಳಕ್ಕೊಳಗಾಗುತ್ತಾರೆ . ಈ ಸರ್ವಾಧಿಕಾರದ ದೌರ್ಜನ್ಯ ಹೇಗಿದೆ ಎಂದರೆ ಕಾಶ್ಮೀರ್ ಟೈಮ್ಸ್‌ನಂತಹ ಪ್ರಮುಖ ಮಾಧ್ಯಮವನ್ನೂ ಮುಚ್ಚುವಂತೆ ಮಾಡುವ ಕುತಂತ್ರಗಳು ನಡೆದಿವೆ.

ಸಿಎಎ ವಿರೋಧಿ, ರೈತ ಪರ ಹೋರಾಟ: ಪತ್ರಕರ್ತರೇ ಟಾರ್ಗೆಟ್

ಸಿಎಎ-ಎನ್‌ಆರ್‌ಸಿ ವಿರುದ್ಧ ಕಳೆದ ವರ್ಷ ನಡೆದ ಚಳುವಳಿಯ ಪರವಿದ್ದ ಪತ್ರಕರ್ತರು, ಸ್ವತಂತ್ರ ಮಾಧ್ಯಮಗಳಿಗೆ ಮುಕ್ತವಾಗಿ ಬರೆಯುತ್ತಿದ್ದ ಸಾಮಾಜಿಕ ಕಾರ್ಯಕರ್ತರಿಗೆ ಪೊಲೀಸರು ಸಾಕಷ್ಟು ಕಿರಿಕುಳ ನೀಡುತ್ತ ಬಂದಿದ್ದಾರೆ.

ದೆಹಲಿ ಗಡಿಗಳಲ್ಲಿ ನಡೆದಿರುವ ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟದ ಅಗತ್ಯತೆಯನ್ನು ನಿರಂತರವಾಗಿ ವರದಿ ಮಾಡುತ್ತಿದ್ದ ಕ್ಯಾರವಾನ್ ವರದಿಗಾರ ಒಬ್ಬರ ಮೇಲೆ ಹಲ್ಲೆ ನಡೆಸಿದ್ದ ಪೊಲೀಸರು ಅವರನ್ನು ಜೈಲಿಗೆ ತಳ್ಳಿದ್ದರು.

ಕೇಂದ್ರ ಗೃಹ ಇಲಾಖೆ ಅಧಿನದಲ್ಲಿರುವ ದೆಹಲಿ ಪೊಲೀಸ್ ಇಂತಹ ಕುಕೃತ್ಯಗಳಿಗೆ ಹೆಸರುವಾಸಿ ಆಗಿದ್ದಾರೆ. ಟ್ವೀಟ್ ಒಂದರ ನೆಪದಲ್ಲಿ ಹಿರಿಯ ಪತ್ರಕರ್ತ ರಾಜನಾಥ್ ಸರ್ದೇಸಾಯಿ ಸೇರಿದಂತೆ ಹಲವು ಪತ್ರಕರ್ತರ ಮೇಲೆ ದೇಶದ್ರೋಹದ ಅಪಾದನೆ ಅಡಿ ಕೇಸು ದಾಖಲಿಸಲಾಗಿತ್ತು.

ಗೌರಿ ಲಂಕೇಶ್ ಹತ್ಯೆ ಹಿಂದೆಯೂ!

ಸೂಚ್ಯಂಕ ಬಿಡುಗಡೆ ಮಾಡಿದ ಸಂಸ್ಥೆ 2019ರ ನಂತರ ಇದು ವಿಪರೀತಕ್ಕೆ ಹೋಗಿದೆ ಎಂಬುದನ್ನು ಗಣನೆಗೆ ತೆಗೆದುಕೊಂಡಿದೆ. ಆದರೆ, 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೇ ಇಂತಹ ಒಂದು ವ್ಯಸ್ಥಿತ ಸಂಚು ಶುರುವಾಗಿತ್ತು. ಪತ್ರಕರ್ತರಲ್ಲದಿದ್ದರೂ ಸಾಹಿತ್ಯಿಕ, ವೈಚಾರಿಕ ನಿಲುವುಗಳ ಕುರಿತು ಬರೆಯುತ್ತಿದ್ದ ದಾಬೋಲ್ಕರ್, ಪನ್ಸಾರೆ, ಕಲಬುರ್ಗಿಯವರ ಹತ್ಯೆ ಹಿಂದೆ ಈ ಒಂದು ‘ವ್ಯವಸ್ಥಿತ’ ಹಿಂದೂತ್ವವಾದಿ ಸಂಘಟನೆಗಳೇ ಎಂದು ಚಾರ್ಜ್‌ಶೀಟ್‌ಗಳಲ್ಲಿ ದಾಖಲೆ ಸಮೇತ ಆರೋಪಿಸಲಾಗಿದೆ.

ಸದಾ ಹಿಂದೂತ್ವವಾದಿಗಳ ದುಷ್ಕೃತ್ಯಗಳನ್ನು ಖಡಾಖಂಡಿತವಾಗಿ ಮುಲಾಜಿಲ್ಲದೆ ಟೀಕಿಸುವ ಛಾತಿ ಹೊಂದಿದ್ದ, ಅಪ್ಪಟ ಸೆಕ್ಯುಲರ್ ಮನಸ್ಸಿನ ಕರ್ನಾಟಕದ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ಹಿಂದೆ ಇದೇ ಅಜೆಂಡಾಗಳು ಕೆಲಸ ಮಾಡಿವೆ.

ಹೀಗಾಗಿ ಇಲ್ಲಿ ಮಾಧ್ಯಮ ಸ್ವಾತಂತ್ರ್ಯ ಎಂಬುದು ಪ್ರಪಾತಕ್ಕೆ ಬಿದ್ದಿದೆ. ಕೊರೋನಾ ವೈರಸ್ ಎರಡನೇ ಅಲೆ ಸೃಷ್ಟಿಸಿರುವ ಅನಾಹುತಕ್ಕೆ ಪ್ರಭುತ್ವದ ವಿರುದ್ಧ ನಿಲ್ಲಬೇಕಿದ್ದ ಬಹುಪಾಲು ಮಾಧ್ಯಮಗಳು ಮೌನವಾಗಿವೆ.


ಇದನ್ನೂ ಓದಿ: ಕೋವಿಡ್ ಸಾವಿನ ಸಂಖ್ಯೆಗಳನ್ನು ಮುಚ್ಚಿಡುತ್ತಿರುವ ಯೋಗಿ ಸರ್ಕಾರ: ಒಂದು ಗ್ರೌಂಡ್ ರಿಪೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...