Homeಮುಖಪುಟಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಪ್ರಪಾತಕ್ಕೆ ಬಿದ್ದ ಭಾರತ: ಮೋದಿ ಸರ್ಕಾರವೇ ಕಾರಣವೆಂದ ಸಮೀಕ್ಷಾ ಸಂಸ್ಥೆ!

ಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಪ್ರಪಾತಕ್ಕೆ ಬಿದ್ದ ಭಾರತ: ಮೋದಿ ಸರ್ಕಾರವೇ ಕಾರಣವೆಂದ ಸಮೀಕ್ಷಾ ಸಂಸ್ಥೆ!

ಪತ್ರಕರ್ತರಿಗೆ ವಿಶ್ವದ ಅತ್ಯಂತ ಅಪಾಯಕಾರಿ ದೇಶಗಳಲ್ಲಿ ಭಾರತವೂ ಒಂದಾಗಿದೆ..

- Advertisement -
- Advertisement -

ಕ್ಲಾಸ್‌ಮೇಟ್ ಮೊಂಡಿಯಲ್ ಎಂ ಸಂಸ್ಥೆ ಮಾಧ್ಯಮಗಳ ಸ್ವಾತಂತ್ರ್ಯ ಸೂಚ್ಯಂಕ ಕುರಿತು ವರದಿಯೊಂದನ್ನು ಪ್ರಕಟಿಸಿದ್ದು, 180 ದೇಶಗಳ ಪಟ್ಟಿಯಲ್ಲಿ ಭಾರತ 142 ನೇ ಸ್ಥಾನದಲ್ಲಿದೆ. ಇದು ಭಾರತದ ಮಾಧ್ಯಮಗಳ ದುರಾವಸ್ಥೆ, ಬೇಜವಾಬ್ದಾರಿತನ ಮತ್ತು ಜನದ್ರೋಹಕ್ಕೆ ಸಾಕ್ಷಿಯಾಗಿದೆ.

ಭಾರತದ ಮಾಧ್ಯಮ ಹೀಗೆ ಪ್ರಪಾತಕ್ಕೆ ಬೀಳಲು ಕಾರಣವೇನೆಂದು ಟಿಪ್ಪಣಿಯನ್ನೂ ಅದು ನೀಡಿದೆ. ಇದಕ್ಕೆಲ್ಲ ಮೋದಿ ಸರ್ಕಾರವೇ ಕಾರಣ ಎಂಬುದನ್ನು ಅದು ಬಲವಾಗಿ ಪ್ರತಿಪಾದಿಸಿದೆ. ಆ ಟಿಪ್ಪಣಿಯ ಯಥಾವತ್ ಅನುವಾದ ಇಲ್ಲಿದೆ:

ಮೋದಿಯವರು ಮಾಧ್ಯಮಗಳ ಮೇಲಿನ ಹಿಡಿತವನ್ನು ಬಿಗಿಗೊಳಿಸಿದ್ದಾರೆ. 2020 ರಲ್ಲಿ ಅವರ ಕೆಲಸಕ್ಕೆ ಸಂಬಂಧಿಸಿದಂತೆ ನಾಲ್ವರು ಪತ್ರಕರ್ತರು ಕೊಲ್ಲಲ್ಪಟ್ಟರು. ತಮ್ಮ ಜವಾನ್ದಾರಿ ಕೆಲಸಗಳನ್ನು ಪ್ರಮಾಣಿಕವಾಗಿ ಮಾಡುವ ಪತ್ರಕರ್ತರು ಇವತ್ತು ಜೀವಭಯ ಎದುರಿಸುತ್ತಿದ್ದಾರೆ. ಪ್ರಮಾಣಿಕ ಪತ್ರಕರ್ತರ ಪಾಲಿಗೆ ಭಾರತವು ವಿಶ್ವದ ಅತ್ಯಂತ ಅಪಾಯಕಾರಿ ದೇಶಗಳಲ್ಲಿ ಒಂದಾಗಿದೆ. ವರದಿಗಾರರ ವಿರುದ್ಧದ ಪೊಲೀಸ್ ಹಿಂಸಾಚಾರ, ರಾಜಕೀಯ ಕಾರ್ಯಕರ್ತರ ಹೊಂಚುದಾಳಿ ಮತ್ತು ಕ್ರಿಮಿನಲ್ ಗುಂಪುಗಳು ಅಥವಾ ಭ್ರಷ್ಟ ಸ್ಥಳೀಯ ಅಧಿಕಾರಿಗಳಿಂದ ಪ್ರಚೋದಿಸಲ್ಪಟ್ಟ ಪ್ರತೀಕಾರಗಳು ಸೇರಿದಂತೆ ಎಲ್ಲ ರೀತಿಯ ದಾಳಿಗೆ ಅವರು ಒಡ್ಡಿಕೊಳ್ಳಬೇಕಾಗಿದೆ.

2019 ರ ವಸಂತ ಋತುವಿನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಗಳಿಂದಾಗಿ, ಪ್ರಧಾನಿ ನರೇಂದ್ರ ಮೋದಿಯವರ ಭಾರತೀಯ ಜನತಾ ಪಕ್ಷವು ಅಗಾಧ ಬಹುಮತದಿಂದ ಜಯ ಗಳಿಸಿದಾಗಿನಿಂದಲೂ, ಹಿಂದೂ ರಾಷ್ಟ್ರೀಯತಾವಾದಿ ಸರ್ಕಾರದ ಅಣತಿಯಂತೆ ಕೆಲಸ ಮಾಡಲು ಮಾಧ್ಯಮಗಳ ಮೇಲೆ ಒತ್ತಡ ಹೆಚ್ಚಾಗಿದೆ. ಆಮೂಲಾಗ್ರ ಬಲಪಂಥೀಯ ಹಿಂದೂ ರಾಷ್ಟ್ರೀಯತೆಗೆ ನಾಂದಿ ಹಾಡಿದ ಹಿಂದುತ್ವವನ್ನು ಸಮರ್ಥಿಸುವ ಬಹುಪಾಲು ಭಾರತೀಯರು, ಸಾರ್ವಜನಿಕ ಚರ್ಚೆಯಿಂದ “ರಾಷ್ಟ್ರವಿರೋಧಿ” ಚಿಂತನೆಯ ಎಲ್ಲಾ ಅಭಿವ್ಯಕ್ತಿಗಳನ್ನು ಶುದ್ಧೀಕರಿಸಲು ಪ್ರಯತ್ನಿಸುತ್ತಿದ್ದಾರೆ.

ಹಿಂದುತ್ವ ಅನುಯಾಯಿಗಳನ್ನು ಕಿರಿಕಿರಿಗೊಳಿಸುವ ವಿಷಯಗಳ ಬಗ್ಗೆ ಮಾತನಾಡಲು ಅಥವಾ ಬರೆಯಲು ಧೈರ್ಯವಿರುವ ಪ್ರಾಮಾಣಿಕ ಪತ್ರಕರ್ತರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಸಂಘಟಿತ ದ್ವೇಷ ಅಭಿಯಾನಗಳು ಭಯ ಹುಟ್ಟಿಸುತ್ತವೆ. ಇನ್ನೂ ಅಪಾಯಕಾರಿ ಆಗಿರುವ ವಿಷಯವೆಂದರೆ, ಈ ಅಭಿಯಾನಗಳು ಅಂತಹ ಪ್ರಾಮಾಣಿಕ ಪತ್ರಕರ್ತರ ಹತ್ಯೆಗೆ ಕರೆಗಳನ್ನು ನೀಡುತ್ತವೆ!.

ಈ ಸಂಘಟಿತ ಹಿಂದೂತ್ವ ಜಾಲದ ಗುರಿಗಳು ಮಹಿಳೆಯರಾಗಿದ್ದಾಗ ಪ್ರಚಾರಗಳು ವಿಶೇಷವಾಗಿ ಹಿಂಸಾತ್ಮಕವಾಗಿರುತ್ತದೆ ಮತ್ತು ಅಸಹ್ಯಕರವಾಗಿರುತ್ತದೆ. ಅಧಿಕಾರಸ್ಥರ ವಿರುದ್ಧ ಬರೆದಾಗ ಅಥವಾ ಪ್ರಸಾರ ಮಾಡಿದಾಗ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆಗಳನ್ನು ಜಡಿದು ಬೆದರಿಸಲಾಗುತ್ತಿದೆ. ಕೆಲವು ಪ್ರಾಸಿಕ್ಯೂಟರ್‌ಗಳು ದಂಡ ಸಂಹಿತೆಯ ಸೆಕ್ಷನ್ 124 ಎ ಅನ್ನು ಪ್ರಯೋಸಿದುತ್ತಾರೆ! ಇದರ ಅಡಿಯಲ್ಲಿ “ದೇಶದ್ರೋಹ”ದ ಹೆಸರಿನಲ್ಲಿ ಜೀವಾವಧಿ ಶಿಕ್ಷೆಗೆ ಪತ್ರಕರ್ತರನ್ನು ದೂಡುವ ಹುನ್ನಾರವಿದೆ.

2020 ರಲ್ಲಿ, ಕೊರೊನಾ ಬಿಕ್ಕಟ್ಟಿನ ಲಾಭವನ್ನು ಸರ್ಕಾರವು ಪಡೆದುಕೊಂಡಿತು. ಅಧಿಕೃತ ಸ್ಥಾನದೊಂದಿಗೆ ಭಿನ್ನಾಭಿಪ್ರಾಯದ ಮಾಹಿತಿಯನ್ನು ಒದಗಿಸುವ ಪತ್ರಕರ್ತರನ್ನು ವಿಚಾರಣೆಗೆ ಒಳಪಡಿಸುವ ಮೂಲಕ ಸುದ್ದಿ ಪ್ರಸಾರದ ನಿಯಂತ್ರಣವನ್ನು ಹೆಚ್ಚಿಸಿತು.

ಕಾಶ್ಮೀರದಲ್ಲಿ ಪರಿಸ್ಥಿತಿ ಇನ್ನೂ ಆತಂಕಕಾರಿಯಾಗಿದೆ. ಅಲ್ಲಿ ವರದಿಗಾರರು ಹೆಚ್ಚಾಗಿ ಪೊಲೀಸರು ಮತ್ತು ಅರೆಸೈನಿಕ ಪಡೆಗಳಿಂದ ಕಿರುಕುಳಕ್ಕೊಳಗಾಗುತ್ತಾರೆ . ಈ ಸರ್ವಾಧಿಕಾರದ ದೌರ್ಜನ್ಯ ಹೇಗಿದೆ ಎಂದರೆ ಕಾಶ್ಮೀರ್ ಟೈಮ್ಸ್‌ನಂತಹ ಪ್ರಮುಖ ಮಾಧ್ಯಮವನ್ನೂ ಮುಚ್ಚುವಂತೆ ಮಾಡುವ ಕುತಂತ್ರಗಳು ನಡೆದಿವೆ.

ಸಿಎಎ ವಿರೋಧಿ, ರೈತ ಪರ ಹೋರಾಟ: ಪತ್ರಕರ್ತರೇ ಟಾರ್ಗೆಟ್

ಸಿಎಎ-ಎನ್‌ಆರ್‌ಸಿ ವಿರುದ್ಧ ಕಳೆದ ವರ್ಷ ನಡೆದ ಚಳುವಳಿಯ ಪರವಿದ್ದ ಪತ್ರಕರ್ತರು, ಸ್ವತಂತ್ರ ಮಾಧ್ಯಮಗಳಿಗೆ ಮುಕ್ತವಾಗಿ ಬರೆಯುತ್ತಿದ್ದ ಸಾಮಾಜಿಕ ಕಾರ್ಯಕರ್ತರಿಗೆ ಪೊಲೀಸರು ಸಾಕಷ್ಟು ಕಿರಿಕುಳ ನೀಡುತ್ತ ಬಂದಿದ್ದಾರೆ.

ದೆಹಲಿ ಗಡಿಗಳಲ್ಲಿ ನಡೆದಿರುವ ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟದ ಅಗತ್ಯತೆಯನ್ನು ನಿರಂತರವಾಗಿ ವರದಿ ಮಾಡುತ್ತಿದ್ದ ಕ್ಯಾರವಾನ್ ವರದಿಗಾರ ಒಬ್ಬರ ಮೇಲೆ ಹಲ್ಲೆ ನಡೆಸಿದ್ದ ಪೊಲೀಸರು ಅವರನ್ನು ಜೈಲಿಗೆ ತಳ್ಳಿದ್ದರು.

ಕೇಂದ್ರ ಗೃಹ ಇಲಾಖೆ ಅಧಿನದಲ್ಲಿರುವ ದೆಹಲಿ ಪೊಲೀಸ್ ಇಂತಹ ಕುಕೃತ್ಯಗಳಿಗೆ ಹೆಸರುವಾಸಿ ಆಗಿದ್ದಾರೆ. ಟ್ವೀಟ್ ಒಂದರ ನೆಪದಲ್ಲಿ ಹಿರಿಯ ಪತ್ರಕರ್ತ ರಾಜನಾಥ್ ಸರ್ದೇಸಾಯಿ ಸೇರಿದಂತೆ ಹಲವು ಪತ್ರಕರ್ತರ ಮೇಲೆ ದೇಶದ್ರೋಹದ ಅಪಾದನೆ ಅಡಿ ಕೇಸು ದಾಖಲಿಸಲಾಗಿತ್ತು.

ಗೌರಿ ಲಂಕೇಶ್ ಹತ್ಯೆ ಹಿಂದೆಯೂ!

ಸೂಚ್ಯಂಕ ಬಿಡುಗಡೆ ಮಾಡಿದ ಸಂಸ್ಥೆ 2019ರ ನಂತರ ಇದು ವಿಪರೀತಕ್ಕೆ ಹೋಗಿದೆ ಎಂಬುದನ್ನು ಗಣನೆಗೆ ತೆಗೆದುಕೊಂಡಿದೆ. ಆದರೆ, 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೇ ಇಂತಹ ಒಂದು ವ್ಯಸ್ಥಿತ ಸಂಚು ಶುರುವಾಗಿತ್ತು. ಪತ್ರಕರ್ತರಲ್ಲದಿದ್ದರೂ ಸಾಹಿತ್ಯಿಕ, ವೈಚಾರಿಕ ನಿಲುವುಗಳ ಕುರಿತು ಬರೆಯುತ್ತಿದ್ದ ದಾಬೋಲ್ಕರ್, ಪನ್ಸಾರೆ, ಕಲಬುರ್ಗಿಯವರ ಹತ್ಯೆ ಹಿಂದೆ ಈ ಒಂದು ‘ವ್ಯವಸ್ಥಿತ’ ಹಿಂದೂತ್ವವಾದಿ ಸಂಘಟನೆಗಳೇ ಎಂದು ಚಾರ್ಜ್‌ಶೀಟ್‌ಗಳಲ್ಲಿ ದಾಖಲೆ ಸಮೇತ ಆರೋಪಿಸಲಾಗಿದೆ.

ಸದಾ ಹಿಂದೂತ್ವವಾದಿಗಳ ದುಷ್ಕೃತ್ಯಗಳನ್ನು ಖಡಾಖಂಡಿತವಾಗಿ ಮುಲಾಜಿಲ್ಲದೆ ಟೀಕಿಸುವ ಛಾತಿ ಹೊಂದಿದ್ದ, ಅಪ್ಪಟ ಸೆಕ್ಯುಲರ್ ಮನಸ್ಸಿನ ಕರ್ನಾಟಕದ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ಹಿಂದೆ ಇದೇ ಅಜೆಂಡಾಗಳು ಕೆಲಸ ಮಾಡಿವೆ.

ಹೀಗಾಗಿ ಇಲ್ಲಿ ಮಾಧ್ಯಮ ಸ್ವಾತಂತ್ರ್ಯ ಎಂಬುದು ಪ್ರಪಾತಕ್ಕೆ ಬಿದ್ದಿದೆ. ಕೊರೋನಾ ವೈರಸ್ ಎರಡನೇ ಅಲೆ ಸೃಷ್ಟಿಸಿರುವ ಅನಾಹುತಕ್ಕೆ ಪ್ರಭುತ್ವದ ವಿರುದ್ಧ ನಿಲ್ಲಬೇಕಿದ್ದ ಬಹುಪಾಲು ಮಾಧ್ಯಮಗಳು ಮೌನವಾಗಿವೆ.


ಇದನ್ನೂ ಓದಿ: ಕೋವಿಡ್ ಸಾವಿನ ಸಂಖ್ಯೆಗಳನ್ನು ಮುಚ್ಚಿಡುತ್ತಿರುವ ಯೋಗಿ ಸರ್ಕಾರ: ಒಂದು ಗ್ರೌಂಡ್ ರಿಪೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...