Homeಮುಖಪುಟಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಪ್ರಪಾತಕ್ಕೆ ಬಿದ್ದ ಭಾರತ: ಮೋದಿ ಸರ್ಕಾರವೇ ಕಾರಣವೆಂದ ಸಮೀಕ್ಷಾ ಸಂಸ್ಥೆ!

ಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಪ್ರಪಾತಕ್ಕೆ ಬಿದ್ದ ಭಾರತ: ಮೋದಿ ಸರ್ಕಾರವೇ ಕಾರಣವೆಂದ ಸಮೀಕ್ಷಾ ಸಂಸ್ಥೆ!

ಪತ್ರಕರ್ತರಿಗೆ ವಿಶ್ವದ ಅತ್ಯಂತ ಅಪಾಯಕಾರಿ ದೇಶಗಳಲ್ಲಿ ಭಾರತವೂ ಒಂದಾಗಿದೆ..

- Advertisement -
- Advertisement -

ಕ್ಲಾಸ್‌ಮೇಟ್ ಮೊಂಡಿಯಲ್ ಎಂ ಸಂಸ್ಥೆ ಮಾಧ್ಯಮಗಳ ಸ್ವಾತಂತ್ರ್ಯ ಸೂಚ್ಯಂಕ ಕುರಿತು ವರದಿಯೊಂದನ್ನು ಪ್ರಕಟಿಸಿದ್ದು, 180 ದೇಶಗಳ ಪಟ್ಟಿಯಲ್ಲಿ ಭಾರತ 142 ನೇ ಸ್ಥಾನದಲ್ಲಿದೆ. ಇದು ಭಾರತದ ಮಾಧ್ಯಮಗಳ ದುರಾವಸ್ಥೆ, ಬೇಜವಾಬ್ದಾರಿತನ ಮತ್ತು ಜನದ್ರೋಹಕ್ಕೆ ಸಾಕ್ಷಿಯಾಗಿದೆ.

ಭಾರತದ ಮಾಧ್ಯಮ ಹೀಗೆ ಪ್ರಪಾತಕ್ಕೆ ಬೀಳಲು ಕಾರಣವೇನೆಂದು ಟಿಪ್ಪಣಿಯನ್ನೂ ಅದು ನೀಡಿದೆ. ಇದಕ್ಕೆಲ್ಲ ಮೋದಿ ಸರ್ಕಾರವೇ ಕಾರಣ ಎಂಬುದನ್ನು ಅದು ಬಲವಾಗಿ ಪ್ರತಿಪಾದಿಸಿದೆ. ಆ ಟಿಪ್ಪಣಿಯ ಯಥಾವತ್ ಅನುವಾದ ಇಲ್ಲಿದೆ:

ಮೋದಿಯವರು ಮಾಧ್ಯಮಗಳ ಮೇಲಿನ ಹಿಡಿತವನ್ನು ಬಿಗಿಗೊಳಿಸಿದ್ದಾರೆ. 2020 ರಲ್ಲಿ ಅವರ ಕೆಲಸಕ್ಕೆ ಸಂಬಂಧಿಸಿದಂತೆ ನಾಲ್ವರು ಪತ್ರಕರ್ತರು ಕೊಲ್ಲಲ್ಪಟ್ಟರು. ತಮ್ಮ ಜವಾನ್ದಾರಿ ಕೆಲಸಗಳನ್ನು ಪ್ರಮಾಣಿಕವಾಗಿ ಮಾಡುವ ಪತ್ರಕರ್ತರು ಇವತ್ತು ಜೀವಭಯ ಎದುರಿಸುತ್ತಿದ್ದಾರೆ. ಪ್ರಮಾಣಿಕ ಪತ್ರಕರ್ತರ ಪಾಲಿಗೆ ಭಾರತವು ವಿಶ್ವದ ಅತ್ಯಂತ ಅಪಾಯಕಾರಿ ದೇಶಗಳಲ್ಲಿ ಒಂದಾಗಿದೆ. ವರದಿಗಾರರ ವಿರುದ್ಧದ ಪೊಲೀಸ್ ಹಿಂಸಾಚಾರ, ರಾಜಕೀಯ ಕಾರ್ಯಕರ್ತರ ಹೊಂಚುದಾಳಿ ಮತ್ತು ಕ್ರಿಮಿನಲ್ ಗುಂಪುಗಳು ಅಥವಾ ಭ್ರಷ್ಟ ಸ್ಥಳೀಯ ಅಧಿಕಾರಿಗಳಿಂದ ಪ್ರಚೋದಿಸಲ್ಪಟ್ಟ ಪ್ರತೀಕಾರಗಳು ಸೇರಿದಂತೆ ಎಲ್ಲ ರೀತಿಯ ದಾಳಿಗೆ ಅವರು ಒಡ್ಡಿಕೊಳ್ಳಬೇಕಾಗಿದೆ.

2019 ರ ವಸಂತ ಋತುವಿನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಗಳಿಂದಾಗಿ, ಪ್ರಧಾನಿ ನರೇಂದ್ರ ಮೋದಿಯವರ ಭಾರತೀಯ ಜನತಾ ಪಕ್ಷವು ಅಗಾಧ ಬಹುಮತದಿಂದ ಜಯ ಗಳಿಸಿದಾಗಿನಿಂದಲೂ, ಹಿಂದೂ ರಾಷ್ಟ್ರೀಯತಾವಾದಿ ಸರ್ಕಾರದ ಅಣತಿಯಂತೆ ಕೆಲಸ ಮಾಡಲು ಮಾಧ್ಯಮಗಳ ಮೇಲೆ ಒತ್ತಡ ಹೆಚ್ಚಾಗಿದೆ. ಆಮೂಲಾಗ್ರ ಬಲಪಂಥೀಯ ಹಿಂದೂ ರಾಷ್ಟ್ರೀಯತೆಗೆ ನಾಂದಿ ಹಾಡಿದ ಹಿಂದುತ್ವವನ್ನು ಸಮರ್ಥಿಸುವ ಬಹುಪಾಲು ಭಾರತೀಯರು, ಸಾರ್ವಜನಿಕ ಚರ್ಚೆಯಿಂದ “ರಾಷ್ಟ್ರವಿರೋಧಿ” ಚಿಂತನೆಯ ಎಲ್ಲಾ ಅಭಿವ್ಯಕ್ತಿಗಳನ್ನು ಶುದ್ಧೀಕರಿಸಲು ಪ್ರಯತ್ನಿಸುತ್ತಿದ್ದಾರೆ.

ಹಿಂದುತ್ವ ಅನುಯಾಯಿಗಳನ್ನು ಕಿರಿಕಿರಿಗೊಳಿಸುವ ವಿಷಯಗಳ ಬಗ್ಗೆ ಮಾತನಾಡಲು ಅಥವಾ ಬರೆಯಲು ಧೈರ್ಯವಿರುವ ಪ್ರಾಮಾಣಿಕ ಪತ್ರಕರ್ತರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಸಂಘಟಿತ ದ್ವೇಷ ಅಭಿಯಾನಗಳು ಭಯ ಹುಟ್ಟಿಸುತ್ತವೆ. ಇನ್ನೂ ಅಪಾಯಕಾರಿ ಆಗಿರುವ ವಿಷಯವೆಂದರೆ, ಈ ಅಭಿಯಾನಗಳು ಅಂತಹ ಪ್ರಾಮಾಣಿಕ ಪತ್ರಕರ್ತರ ಹತ್ಯೆಗೆ ಕರೆಗಳನ್ನು ನೀಡುತ್ತವೆ!.

ಈ ಸಂಘಟಿತ ಹಿಂದೂತ್ವ ಜಾಲದ ಗುರಿಗಳು ಮಹಿಳೆಯರಾಗಿದ್ದಾಗ ಪ್ರಚಾರಗಳು ವಿಶೇಷವಾಗಿ ಹಿಂಸಾತ್ಮಕವಾಗಿರುತ್ತದೆ ಮತ್ತು ಅಸಹ್ಯಕರವಾಗಿರುತ್ತದೆ. ಅಧಿಕಾರಸ್ಥರ ವಿರುದ್ಧ ಬರೆದಾಗ ಅಥವಾ ಪ್ರಸಾರ ಮಾಡಿದಾಗ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆಗಳನ್ನು ಜಡಿದು ಬೆದರಿಸಲಾಗುತ್ತಿದೆ. ಕೆಲವು ಪ್ರಾಸಿಕ್ಯೂಟರ್‌ಗಳು ದಂಡ ಸಂಹಿತೆಯ ಸೆಕ್ಷನ್ 124 ಎ ಅನ್ನು ಪ್ರಯೋಸಿದುತ್ತಾರೆ! ಇದರ ಅಡಿಯಲ್ಲಿ “ದೇಶದ್ರೋಹ”ದ ಹೆಸರಿನಲ್ಲಿ ಜೀವಾವಧಿ ಶಿಕ್ಷೆಗೆ ಪತ್ರಕರ್ತರನ್ನು ದೂಡುವ ಹುನ್ನಾರವಿದೆ.

2020 ರಲ್ಲಿ, ಕೊರೊನಾ ಬಿಕ್ಕಟ್ಟಿನ ಲಾಭವನ್ನು ಸರ್ಕಾರವು ಪಡೆದುಕೊಂಡಿತು. ಅಧಿಕೃತ ಸ್ಥಾನದೊಂದಿಗೆ ಭಿನ್ನಾಭಿಪ್ರಾಯದ ಮಾಹಿತಿಯನ್ನು ಒದಗಿಸುವ ಪತ್ರಕರ್ತರನ್ನು ವಿಚಾರಣೆಗೆ ಒಳಪಡಿಸುವ ಮೂಲಕ ಸುದ್ದಿ ಪ್ರಸಾರದ ನಿಯಂತ್ರಣವನ್ನು ಹೆಚ್ಚಿಸಿತು.

ಕಾಶ್ಮೀರದಲ್ಲಿ ಪರಿಸ್ಥಿತಿ ಇನ್ನೂ ಆತಂಕಕಾರಿಯಾಗಿದೆ. ಅಲ್ಲಿ ವರದಿಗಾರರು ಹೆಚ್ಚಾಗಿ ಪೊಲೀಸರು ಮತ್ತು ಅರೆಸೈನಿಕ ಪಡೆಗಳಿಂದ ಕಿರುಕುಳಕ್ಕೊಳಗಾಗುತ್ತಾರೆ . ಈ ಸರ್ವಾಧಿಕಾರದ ದೌರ್ಜನ್ಯ ಹೇಗಿದೆ ಎಂದರೆ ಕಾಶ್ಮೀರ್ ಟೈಮ್ಸ್‌ನಂತಹ ಪ್ರಮುಖ ಮಾಧ್ಯಮವನ್ನೂ ಮುಚ್ಚುವಂತೆ ಮಾಡುವ ಕುತಂತ್ರಗಳು ನಡೆದಿವೆ.

ಸಿಎಎ ವಿರೋಧಿ, ರೈತ ಪರ ಹೋರಾಟ: ಪತ್ರಕರ್ತರೇ ಟಾರ್ಗೆಟ್

ಸಿಎಎ-ಎನ್‌ಆರ್‌ಸಿ ವಿರುದ್ಧ ಕಳೆದ ವರ್ಷ ನಡೆದ ಚಳುವಳಿಯ ಪರವಿದ್ದ ಪತ್ರಕರ್ತರು, ಸ್ವತಂತ್ರ ಮಾಧ್ಯಮಗಳಿಗೆ ಮುಕ್ತವಾಗಿ ಬರೆಯುತ್ತಿದ್ದ ಸಾಮಾಜಿಕ ಕಾರ್ಯಕರ್ತರಿಗೆ ಪೊಲೀಸರು ಸಾಕಷ್ಟು ಕಿರಿಕುಳ ನೀಡುತ್ತ ಬಂದಿದ್ದಾರೆ.

ದೆಹಲಿ ಗಡಿಗಳಲ್ಲಿ ನಡೆದಿರುವ ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟದ ಅಗತ್ಯತೆಯನ್ನು ನಿರಂತರವಾಗಿ ವರದಿ ಮಾಡುತ್ತಿದ್ದ ಕ್ಯಾರವಾನ್ ವರದಿಗಾರ ಒಬ್ಬರ ಮೇಲೆ ಹಲ್ಲೆ ನಡೆಸಿದ್ದ ಪೊಲೀಸರು ಅವರನ್ನು ಜೈಲಿಗೆ ತಳ್ಳಿದ್ದರು.

ಕೇಂದ್ರ ಗೃಹ ಇಲಾಖೆ ಅಧಿನದಲ್ಲಿರುವ ದೆಹಲಿ ಪೊಲೀಸ್ ಇಂತಹ ಕುಕೃತ್ಯಗಳಿಗೆ ಹೆಸರುವಾಸಿ ಆಗಿದ್ದಾರೆ. ಟ್ವೀಟ್ ಒಂದರ ನೆಪದಲ್ಲಿ ಹಿರಿಯ ಪತ್ರಕರ್ತ ರಾಜನಾಥ್ ಸರ್ದೇಸಾಯಿ ಸೇರಿದಂತೆ ಹಲವು ಪತ್ರಕರ್ತರ ಮೇಲೆ ದೇಶದ್ರೋಹದ ಅಪಾದನೆ ಅಡಿ ಕೇಸು ದಾಖಲಿಸಲಾಗಿತ್ತು.

ಗೌರಿ ಲಂಕೇಶ್ ಹತ್ಯೆ ಹಿಂದೆಯೂ!

ಸೂಚ್ಯಂಕ ಬಿಡುಗಡೆ ಮಾಡಿದ ಸಂಸ್ಥೆ 2019ರ ನಂತರ ಇದು ವಿಪರೀತಕ್ಕೆ ಹೋಗಿದೆ ಎಂಬುದನ್ನು ಗಣನೆಗೆ ತೆಗೆದುಕೊಂಡಿದೆ. ಆದರೆ, 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೇ ಇಂತಹ ಒಂದು ವ್ಯಸ್ಥಿತ ಸಂಚು ಶುರುವಾಗಿತ್ತು. ಪತ್ರಕರ್ತರಲ್ಲದಿದ್ದರೂ ಸಾಹಿತ್ಯಿಕ, ವೈಚಾರಿಕ ನಿಲುವುಗಳ ಕುರಿತು ಬರೆಯುತ್ತಿದ್ದ ದಾಬೋಲ್ಕರ್, ಪನ್ಸಾರೆ, ಕಲಬುರ್ಗಿಯವರ ಹತ್ಯೆ ಹಿಂದೆ ಈ ಒಂದು ‘ವ್ಯವಸ್ಥಿತ’ ಹಿಂದೂತ್ವವಾದಿ ಸಂಘಟನೆಗಳೇ ಎಂದು ಚಾರ್ಜ್‌ಶೀಟ್‌ಗಳಲ್ಲಿ ದಾಖಲೆ ಸಮೇತ ಆರೋಪಿಸಲಾಗಿದೆ.

ಸದಾ ಹಿಂದೂತ್ವವಾದಿಗಳ ದುಷ್ಕೃತ್ಯಗಳನ್ನು ಖಡಾಖಂಡಿತವಾಗಿ ಮುಲಾಜಿಲ್ಲದೆ ಟೀಕಿಸುವ ಛಾತಿ ಹೊಂದಿದ್ದ, ಅಪ್ಪಟ ಸೆಕ್ಯುಲರ್ ಮನಸ್ಸಿನ ಕರ್ನಾಟಕದ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ಹಿಂದೆ ಇದೇ ಅಜೆಂಡಾಗಳು ಕೆಲಸ ಮಾಡಿವೆ.

ಹೀಗಾಗಿ ಇಲ್ಲಿ ಮಾಧ್ಯಮ ಸ್ವಾತಂತ್ರ್ಯ ಎಂಬುದು ಪ್ರಪಾತಕ್ಕೆ ಬಿದ್ದಿದೆ. ಕೊರೋನಾ ವೈರಸ್ ಎರಡನೇ ಅಲೆ ಸೃಷ್ಟಿಸಿರುವ ಅನಾಹುತಕ್ಕೆ ಪ್ರಭುತ್ವದ ವಿರುದ್ಧ ನಿಲ್ಲಬೇಕಿದ್ದ ಬಹುಪಾಲು ಮಾಧ್ಯಮಗಳು ಮೌನವಾಗಿವೆ.


ಇದನ್ನೂ ಓದಿ: ಕೋವಿಡ್ ಸಾವಿನ ಸಂಖ್ಯೆಗಳನ್ನು ಮುಚ್ಚಿಡುತ್ತಿರುವ ಯೋಗಿ ಸರ್ಕಾರ: ಒಂದು ಗ್ರೌಂಡ್ ರಿಪೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...