Homeಮುಖಪುಟಭಾರತದಲ್ಲಿ ಆಕ್ಸಿಜನ್‌ಗೆ ಹಾಹಾಕಾರ; ನೇಪಾಳಕ್ಕೆ ವೆಂಟಿಲೇಟರ್‌‌‌ ಹೊಂದಿರುವ 39 ಆಂಬುಲೆನ್ಸ್‌ ಗಿಫ್ಟ್‌‌‌!

ಭಾರತದಲ್ಲಿ ಆಕ್ಸಿಜನ್‌ಗೆ ಹಾಹಾಕಾರ; ನೇಪಾಳಕ್ಕೆ ವೆಂಟಿಲೇಟರ್‌‌‌ ಹೊಂದಿರುವ 39 ಆಂಬುಲೆನ್ಸ್‌ ಗಿಫ್ಟ್‌‌‌!

- Advertisement -
- Advertisement -

ಭಾರತದಲ್ಲಿ ಕೊರೊನಾ ಪ್ರಕರಣದಲ್ಲಿ ತೀವ್ರ ಮಟ್ಟದಲ್ಲಿ ಏರುತ್ತಿದ್ದು ಆಮ್ಲಜನಕ, ಆಸ್ಪತ್ರೆ ಸೇರಿದಂತೆ ಅಗತ್ಯ ಔಷಧಗಳ ಕೊರತೆ ಬಗ್ಗೆ ಸಾಕಷ್ಟು ವರದಿಯಾಗುತ್ತಿದೆ. ಈ ಮಧ್ಯೆ ಭಾರತವು ಗುರುವಾರ ವೆಂಟಿಲೇಟರ್‌ಗಳು ಹೊಂದಿದ 39 ಆಂಬುಲೆನ್ಸ್‌ಗಳು ಮತ್ತು ಆರು ಶಾಲಾ ಬಸ್‌ಗಳನ್ನು ನೇಪಾಳಕ್ಕೆ ಉಡುಗೊರೆಯಾಗಿ ನೀಡಿದೆ.

ಆಂಬುಲೆನ್ಸ್‌ಗಳನ್ನು ಭಾರತ ಸರ್ಕಾರದ ನಿರಂತರ ಬೆಂಬಲದ ಭಾಗವಾಗಿ ಮತ್ತು ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ನೇಪಾಳದ ಹೋರಾಟಕ್ಕೆ ಪೂರಕವಾಗಿ ನೀಡಲಾಯಿತು ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ಇದನ್ನೂ ಓದಿ: ಕೊರೊನಾದಿಂದ ಸಿಪಿಎಂ ನಾಯಕನ ಪುತ್ರ ನಿಧನ; ವಿಕೃತಿ ಮೆರೆದ ಬಿಜೆಪಿ ಉಪಾಧ್ಯಕ್ಷ

“ಭಾರತ ಸರ್ಕಾರದ ನಿರಂತರ ಬೆಂಬಲ ಮತ್ತು ಕೊರೊನಾ ಸಾಂಕ್ರಾಮಿಕ ವಿರುದ್ಧದ ನೇಪಾಳದ ಹೋರಾಟಕ್ಕೆ ಪೂರಕವಾಗಿ, ರಾಯಭಾರ ಕಚೇರಿಯು ಇಂದು ವೆಂಟಿಲೇಟರ್‌ಗಳು, ಇಸಿಜಿ, ಆಕ್ಸಿಜನ್ ಮಾನಿಟರ್ ಮತ್ತು ಇತರ ತುರ್ತು ವೈದ್ಯಕೀಯ ಉಪಕರಣಗಳನ್ನು ಹೊಂದಿದ 39 ಆಂಬ್ಯುಲೆನ್ಸ್‌ಗಳನ್ನು ನೇಪಾಳದ ಸರ್ಕಾರಿ ಮತ್ತು ಎನ್‌ಜಿಒಗಳಿಗೆ ಉಡುಗೊರೆಯಾಗಿ ನೀಡಿತು. ಇಂಡಿಯಾ ನೇಪಾಲ್ ಫ್ರೆಂಡ್ಶಿಪ್” ಎಂದು ಭಾರತೀಯ ರಾಯಭಾರ ಕಚೇರಿ ಸಾಮಾಜಿಕ ಜಾಲತಾಣದಲ್ಲಿ ಬರೆದು ಕೊಂಡಿದೆ.

ಇದನ್ನೂ ಓದಿ: ಓಟುಗಳ ನಡುವೆ ನುಸುಳಿದ ಎರಡನೇ ಅಲೆಯ ದುರಂತಕ್ಕೆ ಮೋದಿ ಆಡಳಿತವೇ ಕಾರಣ!

“ರಾಯಭಾರ ಕಚೇರಿಯು 6 ಶಾಲಾ ಬಸ್ಸುಗಳನ್ನು ಉಡುಗೊರೆಯಾಗಿ ನೀಡಿತು. ಇವುಗಳನ್ನು ರಾಯಭಾರ ಕಚೇರಿಯ ದೀರ್ಘಕಾಲದ ಸಂಪ್ರದಾಯ ಮತ್ತು ಭಾರತ ಸ್ವಾತಂತ್ಯ್ರಗೊಂಡ 75 ವರ್ಷಾಚರಣೆಯ ಭಾಗವಾಗಿ ಉಡುಗೊರೆಯಾಗಿ ನೀಡಲಾಗಿದೆ” ಎಂದು ರಾಯಭಾರ ಕಚೇರಿಯು ಹೇಳಿದೆ.

ಕಳೆದ ವರ್ಷ ಕೂಡಾ ಭಾರತವು ಮಹಾತ್ಮ ಗಾಂಧಿಯವರ 151 ನೇ ಜನ್ಮದಿನದಂದು ನೇಪಾಳಕ್ಕೆ ಒಟ್ಟು 41 ಆಂಬ್ಯುಲೆನ್ಸ್‌ಗಳು ಮತ್ತು ಆರು ಶಾಲಾ ಬಸ್‌ಗಳನ್ನು ಉಡುಗೊರೆಯಾಗಿ ನೀಡಿತು.

ಇಷ್ಟೇ ಅಲ್ಲದೆ ಭಾರತವು ನೇಪಾಳದ ವಿವಿಧ ಯೋಜನೆಗಳಿಗೆ ಧನ ಸಹಾಯವನ್ನು ನೀಡುತ್ತಿದೆ. ಮನೆಗಳು, ಪಾರಂಪರಿಕ ತಾಣಗಳು ಮತ್ತು ಇತರ ಮೂಲಸೌಕರ್ಯಗಳ ಪುನರ್ನಿರ್ಮಾಣಕ್ಕೆ ಕೂಡಾ ಭಾರತ ನೇಪಾಳಕ್ಕೆ ಸಹಾಯ ನೀಡುತ್ತಿದೆ.

ಇದನ್ನೂ ಓದಿ: ಅಗತ್ಯ ಸೇವೆ ಬಿಟ್ಟು ಎಲ್ಲಾ ಬಂದ್: ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: 8 ವರ್ಷದ ಬಾಲಕಿ ಶಾರ್ಟ್ಸ್ ಧರಿಸಿದ್ದಕ್ಕೆ ಕುಟುಂಬದ ಮೇಲೆ ಭೀಕರ ಹಲ್ಲೆ: ನೈತಿಕ ಪೊಲೀಸ್‌ಗಿರಿಗೆ ಸಾಕ್ಷಿಯಾದ ಸಿಂಹಗಢ ಕೋಟೆ

ಮಹಾರಾಷ್ಟ್ರದ ಪುಣೆ ಸಮೀಪದ ಐತಿಹಾಸಿಕ ಸಿಂಹಗಢ ಕೋಟೆಯಲ್ಲಿ ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಪ್ರವಾಸಿಗರ ಮೇಲೆ ನೈತಿಕ ಪೊಲೀಸ್‌ಗಿರಿ (ಮೊರಾಲ್ ಪೋಲಿಸಿಂಗ್) ನಡೆಸಿ ಭೀಕರ ಹಲ್ಲೆ ನಡೆಸಲಾಗಿದೆ. ಎಂಟು ವರ್ಷದ ಚಿಕ್ಕ ಬಾಲಕಿಯೊಬ್ಬಳು...

ಜೈಪುರದಲ್ಲಿ ಸರ್ಕಾರಿ ಶಾಲೆ ತಪಾಸಣೆ ವೇಳೆ ಭೀಕರ ಹಿಂಸಾಚಾರ: ‘ಸಿಜೆಪಿ’ನಾಯಕ ಅಶುತೋಷ್ ರಂಕಾ ತಂಡದ ಮೇಲೆ ದಾಳಿ, ಕಲ್ಲು ತೂರಾಟ, ಕಾರು ಧ್ವಂಸ

ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರ ಸಮೀಪದ ಬಾಗ್ರು ವಿಧಾನಸಭಾ ಕ್ಷೇತ್ರದ ರಾಂಪುರ ಕನ್ವರ್‌ಪುರ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಸ್ಥಿತಿಗತಿಗಳನ್ನು ಪರಿಶೀಲಿಸಲು ತೆರಳಿದ್ದ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ಕಾರ್ಯಕರ್ತರ ಮೇಲೆ ಉಗ್ರ...

BJP 40 ಕ್ಷೇತ್ರಗಳಲ್ಲಿ ಸೋಲಲು ಕಾಂಗ್ರೆಸ್ ಜಾಹೀರಾತೇ ಕಾರಣ: ಹೈಕೋರ್ಟ್‌ಗೆ ಬಿಜೆಪಿ ದೂರು

2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳ ಮೊದಲು ಕಾಂಗ್ರೆಸ್ ಪತ್ರಿಕೆಗಳಲ್ಲಿ ಪ್ರಕಟಿಸಿದ್ದ ‘ಭ್ರಷ್ಟಾಚಾರದ ರೇಟ್ ಕಾರ್ಡ್’ (Corruption Rate Card) ಜಾಹೀರಾತಿನಿಂದಾಗಿ ತಾನು 40 ಕ್ಷೇತ್ರಗಳಲ್ಲಿ ಸೋಲು ಅನುಭವಿಸಬೇಕಾಯಿತು ಎಂದು ಭಾರತೀಯ...

“ಎಫ್‌ಐಆರ್ ದಾಖಲಾಗದೆ ಇಲ್ಲಿಂದ ಕದಲಲ್ಲ” : ಡಿಸಿಪಿ ಕಚೇರಿ ಮುಂದೆ ಧರಣಿ ಕುಳಿತ ರಾಹುಲ್ ಗಾಂಧಿ

ಜುಲೈ 20ರಂದು ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪೆಲೆಟ್ ಗನ್‌ ಬಳಕೆ, ಲಾಠಿ ಚಾರ್ಜ್ ಸೇರಿದಂತೆ ಪೊಲೀಸರಿಂದ ವಿವಿಧ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ...

ಪೆಲೆಟ್ ಗನ್ ಫೈರಿಂಗ್ ವಿರುದ್ಧ FIR ದಾಖಲಿಸಲು ದೆಹಲಿ ಪೊಲೀಸರ ನಿರಾಕರಣೆ, ರಾಹುಲ್ ಗಾಂಧಿ ಧರಣಿ

ಜುಲೈ 20ರ ಸಂಸತ್ ಚಲೋ ಪ್ರತಿಭಟನೆ ವೇಳೆ ಭದ್ರತಾ ಸಿಬ್ಬಂದಿ ಪೆಲೆಟ್ ಗನ್ ಬಳಸಿ ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ (ಅಗಸ್ಟ್ 20)...

ಎಸ್ಐಆರ್ ಹಗರಣದಂತೆ ಕಾಣುತ್ತಿದೆ: ಚುನಾವಣಾ ಆಯೋಗದ ಪಾರದರ್ಶಕತೆಯನ್ನು ಪ್ರಶ್ನಿಸಿದ ನಟ ಕಿಶೋರ್ ಕುಮಾರ್: ಸಾರ್ವಜನಿಕ ಪ್ರತಿರೋಧಕ್ಕೆ ಕರೆ

ಬೆಂಗಳೂರು: ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಪವಿತ್ರವೆನಿಸಿದ ಮತದಾನದ ಹಕ್ಕನ್ನು ಕಸಿಯುವ ಹುನ್ನಾರಗಳು ತೀವ್ರಗೊಳ್ಳುತ್ತಿದ್ದು, ಸಾಮಾನ್ಯ ಆಡಳಿತಾತ್ಮಕ ಪ್ರಕ್ರಿಯೆಯಾಗಬೇಕಿದ್ದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಇಂದು ಬಹುದೊಡ್ಡ ಹಗರಣದಂತೆ ಕಾಣಿಸುತ್ತಿದೆ ಎಂದು...

ಕರ್ನಾಟಕ SIR : 43.80 ಲಕ್ಷ ಜನರಿಗೆ ಬರಲಿದೆ ಚುನಾವಣಾ ಆಯೋಗದ ನೋಟಿಸ್!

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಭಾಗವಾಗಿ ಮತದಾರರು ತುಂಬಿ ಕೊಟ್ಟಿರುವ 4,46,35,899 ಎನ್ಯುಮರೇಷನ್ ಫಾರಂಗಳು (ಗಣತಿ ನಮೂನೆ) ಡಿಜಿಟಲೀಕರಣಗೊಂಡಿವೆ. ಈ ಪೈಕಿ 43,80,740 ಮತದಾರರಿಗೆ ದಾಖಲೆ ಕೇಳಿ...

ರಾಜಸ್ಥಾನ: ವರದಿಗಾರಿಕೆಯಲ್ಲಿ ನಿರತರಾಗಿದ್ದ ದಲಿತ ಪತ್ರಕರ್ತನ ಮೇಲೆ ಜಾತಿ ಆಧಾರಿತ ದಾಳಿ, ಭೀಕರ ಹಲ್ಲೆ, ಜಾತಿ ನಿಂದನೆ 

ಉದಯಪುರ: ರಾಜಸ್ಥಾನದ ಉದಯಪುರ ಜಿಲ್ಲೆಯ ಗೋಗುಂಡದಲ್ಲಿ ಕರ್ತವ್ಯನಿರತ ದಲಿತ ಪತ್ರಕರ್ತರೊಬ್ಬರ ಮೇಲೆ ಭೀಕರವಾಗಿ ಹಲ್ಲೆ ನಡೆಸಿ, ಜಾತ್ಯಾತೀತ ಸಮಾಜ ತಲೆತಗ್ಗಿಸುವಂತೆ ಜಾತಿ ಆಧಾರಿತವಾಗಿ ನಿಂದಿಸಿರುವ ಘಟನೆ ವರದಿಯಾಗಿದೆ. ಸಾರ್ವಜನಿಕ ಕುಂದುಕೊರತೆ ಆಲಿಕೆ ಕಾರ್ಯಕ್ರಮದ...

ನಕಲಿ ಔಷಧ ಮಾಫಿಯಾ: 5 ರಾಜ್ಯಗಳಿಗೆ ಹರಡಿದ ಜಾಲ, ತೀವ್ರ ಶೋಧ

ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ನಕಲಿ ಔಷಧ ತಯಾರಿಕೆ ಹಾಗೂ ವಿತರಣೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಸುಳಿವುಗಳು ಲಭ್ಯವಾಗಿದ್ದು, ಈ ಅಕ್ರಮ ಜಾಲವು ಕರ್ನಾಟಕ ಮಾತ್ರವಲ್ಲದೆ ದೇಶದ ಇತರ ಐದು ರಾಜ್ಯಗಳಿಗೂ ಹರಡಿರುವುದು ಬೆಳಕಿಗೆ...

ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದುಪಡಿಸಿ, ನೇರ ವೇತನ ಪಾವತಿ ಜಾರಿಗೊಳಿಸಿ, ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಲು ಆಗ್ರಹಿಸಿ ಎಐಸಿಸಿಟಿಯು ಪ್ರತಿಭಟನೆ

ಬೆಂಗಳೂರು: ರಾಜ್ಯಾದ್ಯಂತ ವಿವಿಧ ವಲಯಗಳಲ್ಲಿ ದುಡಿಯುತ್ತಿರುವ ಗುತ್ತಿಗೆ, ಹೊರಗುತ್ತಿಗೆ, ದಿನಗೂಲಿ ಹಾಗೂ ತಾತ್ಕಾಲಿಕ ಕಾರ್ಮಿಕರ ಶೋಷಣೆ ತಡೆಗಟ್ಟಿ, ಅವರಿಗೆ ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ...