Homeಮುಖಪುಟಭಾರತದಲ್ಲಿ ಆಕ್ಸಿಜನ್‌ಗೆ ಹಾಹಾಕಾರ; ನೇಪಾಳಕ್ಕೆ ವೆಂಟಿಲೇಟರ್‌‌‌ ಹೊಂದಿರುವ 39 ಆಂಬುಲೆನ್ಸ್‌ ಗಿಫ್ಟ್‌‌‌!

ಭಾರತದಲ್ಲಿ ಆಕ್ಸಿಜನ್‌ಗೆ ಹಾಹಾಕಾರ; ನೇಪಾಳಕ್ಕೆ ವೆಂಟಿಲೇಟರ್‌‌‌ ಹೊಂದಿರುವ 39 ಆಂಬುಲೆನ್ಸ್‌ ಗಿಫ್ಟ್‌‌‌!

- Advertisement -
- Advertisement -

ಭಾರತದಲ್ಲಿ ಕೊರೊನಾ ಪ್ರಕರಣದಲ್ಲಿ ತೀವ್ರ ಮಟ್ಟದಲ್ಲಿ ಏರುತ್ತಿದ್ದು ಆಮ್ಲಜನಕ, ಆಸ್ಪತ್ರೆ ಸೇರಿದಂತೆ ಅಗತ್ಯ ಔಷಧಗಳ ಕೊರತೆ ಬಗ್ಗೆ ಸಾಕಷ್ಟು ವರದಿಯಾಗುತ್ತಿದೆ. ಈ ಮಧ್ಯೆ ಭಾರತವು ಗುರುವಾರ ವೆಂಟಿಲೇಟರ್‌ಗಳು ಹೊಂದಿದ 39 ಆಂಬುಲೆನ್ಸ್‌ಗಳು ಮತ್ತು ಆರು ಶಾಲಾ ಬಸ್‌ಗಳನ್ನು ನೇಪಾಳಕ್ಕೆ ಉಡುಗೊರೆಯಾಗಿ ನೀಡಿದೆ.

ಆಂಬುಲೆನ್ಸ್‌ಗಳನ್ನು ಭಾರತ ಸರ್ಕಾರದ ನಿರಂತರ ಬೆಂಬಲದ ಭಾಗವಾಗಿ ಮತ್ತು ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ನೇಪಾಳದ ಹೋರಾಟಕ್ಕೆ ಪೂರಕವಾಗಿ ನೀಡಲಾಯಿತು ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ಇದನ್ನೂ ಓದಿ: ಕೊರೊನಾದಿಂದ ಸಿಪಿಎಂ ನಾಯಕನ ಪುತ್ರ ನಿಧನ; ವಿಕೃತಿ ಮೆರೆದ ಬಿಜೆಪಿ ಉಪಾಧ್ಯಕ್ಷ

“ಭಾರತ ಸರ್ಕಾರದ ನಿರಂತರ ಬೆಂಬಲ ಮತ್ತು ಕೊರೊನಾ ಸಾಂಕ್ರಾಮಿಕ ವಿರುದ್ಧದ ನೇಪಾಳದ ಹೋರಾಟಕ್ಕೆ ಪೂರಕವಾಗಿ, ರಾಯಭಾರ ಕಚೇರಿಯು ಇಂದು ವೆಂಟಿಲೇಟರ್‌ಗಳು, ಇಸಿಜಿ, ಆಕ್ಸಿಜನ್ ಮಾನಿಟರ್ ಮತ್ತು ಇತರ ತುರ್ತು ವೈದ್ಯಕೀಯ ಉಪಕರಣಗಳನ್ನು ಹೊಂದಿದ 39 ಆಂಬ್ಯುಲೆನ್ಸ್‌ಗಳನ್ನು ನೇಪಾಳದ ಸರ್ಕಾರಿ ಮತ್ತು ಎನ್‌ಜಿಒಗಳಿಗೆ ಉಡುಗೊರೆಯಾಗಿ ನೀಡಿತು. ಇಂಡಿಯಾ ನೇಪಾಲ್ ಫ್ರೆಂಡ್ಶಿಪ್” ಎಂದು ಭಾರತೀಯ ರಾಯಭಾರ ಕಚೇರಿ ಸಾಮಾಜಿಕ ಜಾಲತಾಣದಲ್ಲಿ ಬರೆದು ಕೊಂಡಿದೆ.

ಇದನ್ನೂ ಓದಿ: ಓಟುಗಳ ನಡುವೆ ನುಸುಳಿದ ಎರಡನೇ ಅಲೆಯ ದುರಂತಕ್ಕೆ ಮೋದಿ ಆಡಳಿತವೇ ಕಾರಣ!

“ರಾಯಭಾರ ಕಚೇರಿಯು 6 ಶಾಲಾ ಬಸ್ಸುಗಳನ್ನು ಉಡುಗೊರೆಯಾಗಿ ನೀಡಿತು. ಇವುಗಳನ್ನು ರಾಯಭಾರ ಕಚೇರಿಯ ದೀರ್ಘಕಾಲದ ಸಂಪ್ರದಾಯ ಮತ್ತು ಭಾರತ ಸ್ವಾತಂತ್ಯ್ರಗೊಂಡ 75 ವರ್ಷಾಚರಣೆಯ ಭಾಗವಾಗಿ ಉಡುಗೊರೆಯಾಗಿ ನೀಡಲಾಗಿದೆ” ಎಂದು ರಾಯಭಾರ ಕಚೇರಿಯು ಹೇಳಿದೆ.

ಕಳೆದ ವರ್ಷ ಕೂಡಾ ಭಾರತವು ಮಹಾತ್ಮ ಗಾಂಧಿಯವರ 151 ನೇ ಜನ್ಮದಿನದಂದು ನೇಪಾಳಕ್ಕೆ ಒಟ್ಟು 41 ಆಂಬ್ಯುಲೆನ್ಸ್‌ಗಳು ಮತ್ತು ಆರು ಶಾಲಾ ಬಸ್‌ಗಳನ್ನು ಉಡುಗೊರೆಯಾಗಿ ನೀಡಿತು.

ಇಷ್ಟೇ ಅಲ್ಲದೆ ಭಾರತವು ನೇಪಾಳದ ವಿವಿಧ ಯೋಜನೆಗಳಿಗೆ ಧನ ಸಹಾಯವನ್ನು ನೀಡುತ್ತಿದೆ. ಮನೆಗಳು, ಪಾರಂಪರಿಕ ತಾಣಗಳು ಮತ್ತು ಇತರ ಮೂಲಸೌಕರ್ಯಗಳ ಪುನರ್ನಿರ್ಮಾಣಕ್ಕೆ ಕೂಡಾ ಭಾರತ ನೇಪಾಳಕ್ಕೆ ಸಹಾಯ ನೀಡುತ್ತಿದೆ.

ಇದನ್ನೂ ಓದಿ: ಅಗತ್ಯ ಸೇವೆ ಬಿಟ್ಟು ಎಲ್ಲಾ ಬಂದ್: ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...