Homeಮುಖಪುಟಭಾರತದಲ್ಲಿ ಆಕ್ಸಿಜನ್‌ಗೆ ಹಾಹಾಕಾರ; ನೇಪಾಳಕ್ಕೆ ವೆಂಟಿಲೇಟರ್‌‌‌ ಹೊಂದಿರುವ 39 ಆಂಬುಲೆನ್ಸ್‌ ಗಿಫ್ಟ್‌‌‌!

ಭಾರತದಲ್ಲಿ ಆಕ್ಸಿಜನ್‌ಗೆ ಹಾಹಾಕಾರ; ನೇಪಾಳಕ್ಕೆ ವೆಂಟಿಲೇಟರ್‌‌‌ ಹೊಂದಿರುವ 39 ಆಂಬುಲೆನ್ಸ್‌ ಗಿಫ್ಟ್‌‌‌!

- Advertisement -
- Advertisement -

ಭಾರತದಲ್ಲಿ ಕೊರೊನಾ ಪ್ರಕರಣದಲ್ಲಿ ತೀವ್ರ ಮಟ್ಟದಲ್ಲಿ ಏರುತ್ತಿದ್ದು ಆಮ್ಲಜನಕ, ಆಸ್ಪತ್ರೆ ಸೇರಿದಂತೆ ಅಗತ್ಯ ಔಷಧಗಳ ಕೊರತೆ ಬಗ್ಗೆ ಸಾಕಷ್ಟು ವರದಿಯಾಗುತ್ತಿದೆ. ಈ ಮಧ್ಯೆ ಭಾರತವು ಗುರುವಾರ ವೆಂಟಿಲೇಟರ್‌ಗಳು ಹೊಂದಿದ 39 ಆಂಬುಲೆನ್ಸ್‌ಗಳು ಮತ್ತು ಆರು ಶಾಲಾ ಬಸ್‌ಗಳನ್ನು ನೇಪಾಳಕ್ಕೆ ಉಡುಗೊರೆಯಾಗಿ ನೀಡಿದೆ.

ಆಂಬುಲೆನ್ಸ್‌ಗಳನ್ನು ಭಾರತ ಸರ್ಕಾರದ ನಿರಂತರ ಬೆಂಬಲದ ಭಾಗವಾಗಿ ಮತ್ತು ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ನೇಪಾಳದ ಹೋರಾಟಕ್ಕೆ ಪೂರಕವಾಗಿ ನೀಡಲಾಯಿತು ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ಇದನ್ನೂ ಓದಿ: ಕೊರೊನಾದಿಂದ ಸಿಪಿಎಂ ನಾಯಕನ ಪುತ್ರ ನಿಧನ; ವಿಕೃತಿ ಮೆರೆದ ಬಿಜೆಪಿ ಉಪಾಧ್ಯಕ್ಷ

“ಭಾರತ ಸರ್ಕಾರದ ನಿರಂತರ ಬೆಂಬಲ ಮತ್ತು ಕೊರೊನಾ ಸಾಂಕ್ರಾಮಿಕ ವಿರುದ್ಧದ ನೇಪಾಳದ ಹೋರಾಟಕ್ಕೆ ಪೂರಕವಾಗಿ, ರಾಯಭಾರ ಕಚೇರಿಯು ಇಂದು ವೆಂಟಿಲೇಟರ್‌ಗಳು, ಇಸಿಜಿ, ಆಕ್ಸಿಜನ್ ಮಾನಿಟರ್ ಮತ್ತು ಇತರ ತುರ್ತು ವೈದ್ಯಕೀಯ ಉಪಕರಣಗಳನ್ನು ಹೊಂದಿದ 39 ಆಂಬ್ಯುಲೆನ್ಸ್‌ಗಳನ್ನು ನೇಪಾಳದ ಸರ್ಕಾರಿ ಮತ್ತು ಎನ್‌ಜಿಒಗಳಿಗೆ ಉಡುಗೊರೆಯಾಗಿ ನೀಡಿತು. ಇಂಡಿಯಾ ನೇಪಾಲ್ ಫ್ರೆಂಡ್ಶಿಪ್” ಎಂದು ಭಾರತೀಯ ರಾಯಭಾರ ಕಚೇರಿ ಸಾಮಾಜಿಕ ಜಾಲತಾಣದಲ್ಲಿ ಬರೆದು ಕೊಂಡಿದೆ.

ಇದನ್ನೂ ಓದಿ: ಓಟುಗಳ ನಡುವೆ ನುಸುಳಿದ ಎರಡನೇ ಅಲೆಯ ದುರಂತಕ್ಕೆ ಮೋದಿ ಆಡಳಿತವೇ ಕಾರಣ!

“ರಾಯಭಾರ ಕಚೇರಿಯು 6 ಶಾಲಾ ಬಸ್ಸುಗಳನ್ನು ಉಡುಗೊರೆಯಾಗಿ ನೀಡಿತು. ಇವುಗಳನ್ನು ರಾಯಭಾರ ಕಚೇರಿಯ ದೀರ್ಘಕಾಲದ ಸಂಪ್ರದಾಯ ಮತ್ತು ಭಾರತ ಸ್ವಾತಂತ್ಯ್ರಗೊಂಡ 75 ವರ್ಷಾಚರಣೆಯ ಭಾಗವಾಗಿ ಉಡುಗೊರೆಯಾಗಿ ನೀಡಲಾಗಿದೆ” ಎಂದು ರಾಯಭಾರ ಕಚೇರಿಯು ಹೇಳಿದೆ.

ಕಳೆದ ವರ್ಷ ಕೂಡಾ ಭಾರತವು ಮಹಾತ್ಮ ಗಾಂಧಿಯವರ 151 ನೇ ಜನ್ಮದಿನದಂದು ನೇಪಾಳಕ್ಕೆ ಒಟ್ಟು 41 ಆಂಬ್ಯುಲೆನ್ಸ್‌ಗಳು ಮತ್ತು ಆರು ಶಾಲಾ ಬಸ್‌ಗಳನ್ನು ಉಡುಗೊರೆಯಾಗಿ ನೀಡಿತು.

ಇಷ್ಟೇ ಅಲ್ಲದೆ ಭಾರತವು ನೇಪಾಳದ ವಿವಿಧ ಯೋಜನೆಗಳಿಗೆ ಧನ ಸಹಾಯವನ್ನು ನೀಡುತ್ತಿದೆ. ಮನೆಗಳು, ಪಾರಂಪರಿಕ ತಾಣಗಳು ಮತ್ತು ಇತರ ಮೂಲಸೌಕರ್ಯಗಳ ಪುನರ್ನಿರ್ಮಾಣಕ್ಕೆ ಕೂಡಾ ಭಾರತ ನೇಪಾಳಕ್ಕೆ ಸಹಾಯ ನೀಡುತ್ತಿದೆ.

ಇದನ್ನೂ ಓದಿ: ಅಗತ್ಯ ಸೇವೆ ಬಿಟ್ಟು ಎಲ್ಲಾ ಬಂದ್: ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...

ಬಾಬಾ ಸಿದ್ದಿಕ್ ಕೊಲೆ ಆರೋಪಿಯಿಂದ ಶಾಸಕ ಜೀಶನ್ ಸಿದ್ದಿಕ್‌ಗೆ ಜೀವ ಬೆದರಿಕೆ: “ನಿನ್ನ ತಂದೆಯನ್ನು ಕೊಂದೆ, ಈಗ ನಿನ್ನ ಸರದಿ!” ಎಂಬ ಆಡಿಯೋ ವೈರಲ್ 

ಮುಂಬೈ: ಮಾಜಿ ಸಚಿವ ಬಾಬಾ ಸಿದ್ದಿಕ್ ಅವರ ಪುತ್ರ ಹಾಗೂ ಎನ್‌ಸಿಪಿ (ಅಜಿತ್ ಪವಾರ್ ಬಣ) ಶಾಸಕ ಜೀಶನ್ ಸಿದ್ದಿಕ್ ಅವರಿಗೆ ವಿದೇಶದಿಂದ ಭೀಕರ ಜೀವ ಬೆದರಿಕೆ ಕರೆ ಮತ್ತು ಧ್ವನಿ ಸಂದೇಶ...

ಜಾರ್ಖಂಡ್| ಜೆಪಿಎಸ್‌ಸಿ ಸುಧಾರಣೆಗೆ ಆಗ್ರಹಿಸಿ 13ನೇ ದಿನಕ್ಕೆ ಕಾಲಿಟ್ಟ ವಿದ್ಯಾರ್ಥಿಗಳ ಪ್ರತಿಭಟನೆ

ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್‌ಎಸ್‌ಸಿ) ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಮತ್ತು ಆಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆ ಗುರುವಾರ 13...

ಎಜುಕೇಶನ್ ಸ್ಟಾರ್ಟ್‌ಅಪ್‌ಗೆ ಭಯೋತ್ಪಾದನೆಯ ಲಿಂಕ್ : ಸ್ವಘೋಷಿತ ಝಿಯೋನಿಸ್ಟ್ ಆರಿಫ್ ಹುಸೇನ್ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್ ಆದೇಶ

'ಎಕ್ಸ್ ಅಂಡ್ ವೈ ಲರ್ನಿಂಗ್' ಎಂಬ ಶಿಕ್ಷಣ ಸ್ಟಾರ್ಟ್‌ಅಪ್ ಅನ್ನು ಭಯೋತ್ಪಾದನೆಗೆ ಲಿಂಕ್ ಮಾಡಿದ, ಸಾಮಾಜಿಕ ಜಾಲತಾಣಗಳ ಮೂಲಕ ಸಂಸ್ಥೆಯ ವಿರುದ್ಧ ದ್ವೇಷ ಅಭಿಯಾನ ನಡೆಸಿದ ಆರೋಪ ಹೊತ್ತಿರುವ ಸ್ವಘೋಷಿತ ಎಕ್ಸ್ ಮುಸ್ಲಿಂ...

ಅಪ್ರಾಪ್ತ ಮಗುವಿನ ವಿಡಿಯೋಗೆ ವಿಕೃತವಾಗಿ ಕಮೆಂಟಿಸಿದ ನಟಿ ರೂಪಾಲಿ ಗಂಗೂಲಿ: ‘ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು’ ಎಂದ ನಟಿ ವಿರುದ್ಧ ಜನಾಕ್ರೋಶ

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಹಾಗೂ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸದಸ್ಯೆ ರೂಪಾಲಿ ಗಂಗೂಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ...

‘ಅಂಬೇಡ್ಕರ್ ಅವರನ್ನು ಆಚರಿಸುವ ಬಿಜೆಪಿ, ‘ಹಿಂದೂ ರಾಷ್ಟ್ರ’ದ ಕುರಿತ ಅವರ ಎಚ್ಚರಿಕೆಯನ್ನೂ ಓದಲಿ’: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ದೇಶದಲ್ಲಿ ‘ಹಿಂದೂ ರಾಷ್ಟ್ರ’ ನಿರ್ಮಾಣದ ಬೇಡಿಕೆಯನ್ನು ತೀವ್ರವಾಗಿ ಟೀಕಿಸಿರುವ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ನಾಯಕರು ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ್ದ ಎಚ್ಚರಿಕೆಗಳನ್ನು ಓದಬೇಕೆಂದು ಒತ್ತಾಯಿಸಿದ್ದಾರೆ. ಬಿಜೆಪಿ ನಾಯಕರು ಭಾರತ...

‘ಪರಿಶೀಲನೆ ಮಾನವ ಘನತೆಯನ್ನು ಬಲಿಪಡೆಯಬಾರದು’: ನಾಗಪುರ ಜೈಲಿನ ಅಮಾನವೀಯ ವಿವಸ್ತ್ರ ಪರಿಶೀಲನೆ ವಿರುದ್ಧ ಜೈಲಿನಲ್ಲಿರುವ ಕೇರಳ ಕಾರ್ಯಕರ್ತ ಆರೋಪ

ಬಂಧನದಲ್ಲಿರುವ ವ್ಯಕ್ತಿಗಳು ಅಥವಾ ಕೈದಿಗಳು ಜೈಲಿನ ಬಾಗಿಲು ಪ್ರವೇಶಿಸಿದ ತಕ್ಷಣ ತಮ್ಮ ಸಾಂವಿಧಾನಿಕ ಹಕ್ಕುಗಳನ್ನು ಹಾಗೂ ಮಾನವ ಘನತೆಯನ್ನು ಕಳೆದುಕೊಳ್ಳುವುದಿಲ್ಲ. ಆದರೆ, ಮಹಾರಾಷ್ಟ್ರದ ನಾಗಪುರ ಕೇಂದ್ರ ಕಾರಾಗೃಹದ 'ಅಂಡಾ ಸೆಲ್'ನಲ್ಲಿ ಕಾನೂನುಬಾಹಿರ ಚಟುವಟಿಕೆಗಳ...