Homeಮುಖಪುಟಭಾರತದಲ್ಲಿ ಆಕ್ಸಿಜನ್‌ಗೆ ಹಾಹಾಕಾರ; ನೇಪಾಳಕ್ಕೆ ವೆಂಟಿಲೇಟರ್‌‌‌ ಹೊಂದಿರುವ 39 ಆಂಬುಲೆನ್ಸ್‌ ಗಿಫ್ಟ್‌‌‌!

ಭಾರತದಲ್ಲಿ ಆಕ್ಸಿಜನ್‌ಗೆ ಹಾಹಾಕಾರ; ನೇಪಾಳಕ್ಕೆ ವೆಂಟಿಲೇಟರ್‌‌‌ ಹೊಂದಿರುವ 39 ಆಂಬುಲೆನ್ಸ್‌ ಗಿಫ್ಟ್‌‌‌!

- Advertisement -
- Advertisement -

ಭಾರತದಲ್ಲಿ ಕೊರೊನಾ ಪ್ರಕರಣದಲ್ಲಿ ತೀವ್ರ ಮಟ್ಟದಲ್ಲಿ ಏರುತ್ತಿದ್ದು ಆಮ್ಲಜನಕ, ಆಸ್ಪತ್ರೆ ಸೇರಿದಂತೆ ಅಗತ್ಯ ಔಷಧಗಳ ಕೊರತೆ ಬಗ್ಗೆ ಸಾಕಷ್ಟು ವರದಿಯಾಗುತ್ತಿದೆ. ಈ ಮಧ್ಯೆ ಭಾರತವು ಗುರುವಾರ ವೆಂಟಿಲೇಟರ್‌ಗಳು ಹೊಂದಿದ 39 ಆಂಬುಲೆನ್ಸ್‌ಗಳು ಮತ್ತು ಆರು ಶಾಲಾ ಬಸ್‌ಗಳನ್ನು ನೇಪಾಳಕ್ಕೆ ಉಡುಗೊರೆಯಾಗಿ ನೀಡಿದೆ.

ಆಂಬುಲೆನ್ಸ್‌ಗಳನ್ನು ಭಾರತ ಸರ್ಕಾರದ ನಿರಂತರ ಬೆಂಬಲದ ಭಾಗವಾಗಿ ಮತ್ತು ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ನೇಪಾಳದ ಹೋರಾಟಕ್ಕೆ ಪೂರಕವಾಗಿ ನೀಡಲಾಯಿತು ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ಇದನ್ನೂ ಓದಿ: ಕೊರೊನಾದಿಂದ ಸಿಪಿಎಂ ನಾಯಕನ ಪುತ್ರ ನಿಧನ; ವಿಕೃತಿ ಮೆರೆದ ಬಿಜೆಪಿ ಉಪಾಧ್ಯಕ್ಷ

“ಭಾರತ ಸರ್ಕಾರದ ನಿರಂತರ ಬೆಂಬಲ ಮತ್ತು ಕೊರೊನಾ ಸಾಂಕ್ರಾಮಿಕ ವಿರುದ್ಧದ ನೇಪಾಳದ ಹೋರಾಟಕ್ಕೆ ಪೂರಕವಾಗಿ, ರಾಯಭಾರ ಕಚೇರಿಯು ಇಂದು ವೆಂಟಿಲೇಟರ್‌ಗಳು, ಇಸಿಜಿ, ಆಕ್ಸಿಜನ್ ಮಾನಿಟರ್ ಮತ್ತು ಇತರ ತುರ್ತು ವೈದ್ಯಕೀಯ ಉಪಕರಣಗಳನ್ನು ಹೊಂದಿದ 39 ಆಂಬ್ಯುಲೆನ್ಸ್‌ಗಳನ್ನು ನೇಪಾಳದ ಸರ್ಕಾರಿ ಮತ್ತು ಎನ್‌ಜಿಒಗಳಿಗೆ ಉಡುಗೊರೆಯಾಗಿ ನೀಡಿತು. ಇಂಡಿಯಾ ನೇಪಾಲ್ ಫ್ರೆಂಡ್ಶಿಪ್” ಎಂದು ಭಾರತೀಯ ರಾಯಭಾರ ಕಚೇರಿ ಸಾಮಾಜಿಕ ಜಾಲತಾಣದಲ್ಲಿ ಬರೆದು ಕೊಂಡಿದೆ.

ಇದನ್ನೂ ಓದಿ: ಓಟುಗಳ ನಡುವೆ ನುಸುಳಿದ ಎರಡನೇ ಅಲೆಯ ದುರಂತಕ್ಕೆ ಮೋದಿ ಆಡಳಿತವೇ ಕಾರಣ!

“ರಾಯಭಾರ ಕಚೇರಿಯು 6 ಶಾಲಾ ಬಸ್ಸುಗಳನ್ನು ಉಡುಗೊರೆಯಾಗಿ ನೀಡಿತು. ಇವುಗಳನ್ನು ರಾಯಭಾರ ಕಚೇರಿಯ ದೀರ್ಘಕಾಲದ ಸಂಪ್ರದಾಯ ಮತ್ತು ಭಾರತ ಸ್ವಾತಂತ್ಯ್ರಗೊಂಡ 75 ವರ್ಷಾಚರಣೆಯ ಭಾಗವಾಗಿ ಉಡುಗೊರೆಯಾಗಿ ನೀಡಲಾಗಿದೆ” ಎಂದು ರಾಯಭಾರ ಕಚೇರಿಯು ಹೇಳಿದೆ.

ಕಳೆದ ವರ್ಷ ಕೂಡಾ ಭಾರತವು ಮಹಾತ್ಮ ಗಾಂಧಿಯವರ 151 ನೇ ಜನ್ಮದಿನದಂದು ನೇಪಾಳಕ್ಕೆ ಒಟ್ಟು 41 ಆಂಬ್ಯುಲೆನ್ಸ್‌ಗಳು ಮತ್ತು ಆರು ಶಾಲಾ ಬಸ್‌ಗಳನ್ನು ಉಡುಗೊರೆಯಾಗಿ ನೀಡಿತು.

ಇಷ್ಟೇ ಅಲ್ಲದೆ ಭಾರತವು ನೇಪಾಳದ ವಿವಿಧ ಯೋಜನೆಗಳಿಗೆ ಧನ ಸಹಾಯವನ್ನು ನೀಡುತ್ತಿದೆ. ಮನೆಗಳು, ಪಾರಂಪರಿಕ ತಾಣಗಳು ಮತ್ತು ಇತರ ಮೂಲಸೌಕರ್ಯಗಳ ಪುನರ್ನಿರ್ಮಾಣಕ್ಕೆ ಕೂಡಾ ಭಾರತ ನೇಪಾಳಕ್ಕೆ ಸಹಾಯ ನೀಡುತ್ತಿದೆ.

ಇದನ್ನೂ ಓದಿ: ಅಗತ್ಯ ಸೇವೆ ಬಿಟ್ಟು ಎಲ್ಲಾ ಬಂದ್: ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...