Homeಮುಖಪುಟಭಾರತದಲ್ಲಿ ಆಕ್ಸಿಜನ್‌ಗೆ ಹಾಹಾಕಾರ; ನೇಪಾಳಕ್ಕೆ ವೆಂಟಿಲೇಟರ್‌‌‌ ಹೊಂದಿರುವ 39 ಆಂಬುಲೆನ್ಸ್‌ ಗಿಫ್ಟ್‌‌‌!

ಭಾರತದಲ್ಲಿ ಆಕ್ಸಿಜನ್‌ಗೆ ಹಾಹಾಕಾರ; ನೇಪಾಳಕ್ಕೆ ವೆಂಟಿಲೇಟರ್‌‌‌ ಹೊಂದಿರುವ 39 ಆಂಬುಲೆನ್ಸ್‌ ಗಿಫ್ಟ್‌‌‌!

- Advertisement -
- Advertisement -

ಭಾರತದಲ್ಲಿ ಕೊರೊನಾ ಪ್ರಕರಣದಲ್ಲಿ ತೀವ್ರ ಮಟ್ಟದಲ್ಲಿ ಏರುತ್ತಿದ್ದು ಆಮ್ಲಜನಕ, ಆಸ್ಪತ್ರೆ ಸೇರಿದಂತೆ ಅಗತ್ಯ ಔಷಧಗಳ ಕೊರತೆ ಬಗ್ಗೆ ಸಾಕಷ್ಟು ವರದಿಯಾಗುತ್ತಿದೆ. ಈ ಮಧ್ಯೆ ಭಾರತವು ಗುರುವಾರ ವೆಂಟಿಲೇಟರ್‌ಗಳು ಹೊಂದಿದ 39 ಆಂಬುಲೆನ್ಸ್‌ಗಳು ಮತ್ತು ಆರು ಶಾಲಾ ಬಸ್‌ಗಳನ್ನು ನೇಪಾಳಕ್ಕೆ ಉಡುಗೊರೆಯಾಗಿ ನೀಡಿದೆ.

ಆಂಬುಲೆನ್ಸ್‌ಗಳನ್ನು ಭಾರತ ಸರ್ಕಾರದ ನಿರಂತರ ಬೆಂಬಲದ ಭಾಗವಾಗಿ ಮತ್ತು ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ನೇಪಾಳದ ಹೋರಾಟಕ್ಕೆ ಪೂರಕವಾಗಿ ನೀಡಲಾಯಿತು ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ಇದನ್ನೂ ಓದಿ: ಕೊರೊನಾದಿಂದ ಸಿಪಿಎಂ ನಾಯಕನ ಪುತ್ರ ನಿಧನ; ವಿಕೃತಿ ಮೆರೆದ ಬಿಜೆಪಿ ಉಪಾಧ್ಯಕ್ಷ

“ಭಾರತ ಸರ್ಕಾರದ ನಿರಂತರ ಬೆಂಬಲ ಮತ್ತು ಕೊರೊನಾ ಸಾಂಕ್ರಾಮಿಕ ವಿರುದ್ಧದ ನೇಪಾಳದ ಹೋರಾಟಕ್ಕೆ ಪೂರಕವಾಗಿ, ರಾಯಭಾರ ಕಚೇರಿಯು ಇಂದು ವೆಂಟಿಲೇಟರ್‌ಗಳು, ಇಸಿಜಿ, ಆಕ್ಸಿಜನ್ ಮಾನಿಟರ್ ಮತ್ತು ಇತರ ತುರ್ತು ವೈದ್ಯಕೀಯ ಉಪಕರಣಗಳನ್ನು ಹೊಂದಿದ 39 ಆಂಬ್ಯುಲೆನ್ಸ್‌ಗಳನ್ನು ನೇಪಾಳದ ಸರ್ಕಾರಿ ಮತ್ತು ಎನ್‌ಜಿಒಗಳಿಗೆ ಉಡುಗೊರೆಯಾಗಿ ನೀಡಿತು. ಇಂಡಿಯಾ ನೇಪಾಲ್ ಫ್ರೆಂಡ್ಶಿಪ್” ಎಂದು ಭಾರತೀಯ ರಾಯಭಾರ ಕಚೇರಿ ಸಾಮಾಜಿಕ ಜಾಲತಾಣದಲ್ಲಿ ಬರೆದು ಕೊಂಡಿದೆ.

ಇದನ್ನೂ ಓದಿ: ಓಟುಗಳ ನಡುವೆ ನುಸುಳಿದ ಎರಡನೇ ಅಲೆಯ ದುರಂತಕ್ಕೆ ಮೋದಿ ಆಡಳಿತವೇ ಕಾರಣ!

“ರಾಯಭಾರ ಕಚೇರಿಯು 6 ಶಾಲಾ ಬಸ್ಸುಗಳನ್ನು ಉಡುಗೊರೆಯಾಗಿ ನೀಡಿತು. ಇವುಗಳನ್ನು ರಾಯಭಾರ ಕಚೇರಿಯ ದೀರ್ಘಕಾಲದ ಸಂಪ್ರದಾಯ ಮತ್ತು ಭಾರತ ಸ್ವಾತಂತ್ಯ್ರಗೊಂಡ 75 ವರ್ಷಾಚರಣೆಯ ಭಾಗವಾಗಿ ಉಡುಗೊರೆಯಾಗಿ ನೀಡಲಾಗಿದೆ” ಎಂದು ರಾಯಭಾರ ಕಚೇರಿಯು ಹೇಳಿದೆ.

ಕಳೆದ ವರ್ಷ ಕೂಡಾ ಭಾರತವು ಮಹಾತ್ಮ ಗಾಂಧಿಯವರ 151 ನೇ ಜನ್ಮದಿನದಂದು ನೇಪಾಳಕ್ಕೆ ಒಟ್ಟು 41 ಆಂಬ್ಯುಲೆನ್ಸ್‌ಗಳು ಮತ್ತು ಆರು ಶಾಲಾ ಬಸ್‌ಗಳನ್ನು ಉಡುಗೊರೆಯಾಗಿ ನೀಡಿತು.

ಇಷ್ಟೇ ಅಲ್ಲದೆ ಭಾರತವು ನೇಪಾಳದ ವಿವಿಧ ಯೋಜನೆಗಳಿಗೆ ಧನ ಸಹಾಯವನ್ನು ನೀಡುತ್ತಿದೆ. ಮನೆಗಳು, ಪಾರಂಪರಿಕ ತಾಣಗಳು ಮತ್ತು ಇತರ ಮೂಲಸೌಕರ್ಯಗಳ ಪುನರ್ನಿರ್ಮಾಣಕ್ಕೆ ಕೂಡಾ ಭಾರತ ನೇಪಾಳಕ್ಕೆ ಸಹಾಯ ನೀಡುತ್ತಿದೆ.

ಇದನ್ನೂ ಓದಿ: ಅಗತ್ಯ ಸೇವೆ ಬಿಟ್ಟು ಎಲ್ಲಾ ಬಂದ್: ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...