Homeನಿಜವೋ ಸುಳ್ಳೋಭಾರತ ಸರ್ಕಾರವು ಆನ್‌ಲೈನ್‌ ಕಾನ್ಫರೆನ್ಸ್‌ಗಾಗಿ ZOOM ಬದಲು NAMASTE ಆಪ್‌ ಬಿಡುಗಡೆ ಮಾಡಿದೆಯೇ?

ಭಾರತ ಸರ್ಕಾರವು ಆನ್‌ಲೈನ್‌ ಕಾನ್ಫರೆನ್ಸ್‌ಗಾಗಿ ZOOM ಬದಲು NAMASTE ಆಪ್‌ ಬಿಡುಗಡೆ ಮಾಡಿದೆಯೇ?

- Advertisement -
- Advertisement -

ಕೊರೋನಾ ಭೀತಿಯಿಂದಾಗಿ ದೇಶದಾದ್ಯಂತ ಲಾಕ್ಡೌನ್ ಘೋಷಿಸುತ್ತಿದ್ದಂತೆ ಆನ್‌ಲೈನ್‌ನಲ್ಲಿ ಮೀಟಿಂಗ್‌ ಮಾಡುವುದಕ್ಕಾಗಿ ಪ್ರಸಿದ್ದವಾದ APP ಎಂದರೇ ’ZOOM’. ಗೆಳೆಯ ಗೆಳತಿಯರ ವಿಡಿಯೋ ಚಾಟಿಂಗ್, ಫ್ಯಾಮಿಲಿ ಚಾಟಿಂಗ್ ಯಿಂದ Work From Home ಕೆಲಸ ಮಾಡುತ್ತಿರುವ ಕಚೇರಿ ಸಿಬ್ಬಂದಿಗಳ ವರೆಗೆ ಎಲ್ಲರೂ ತಮ್ಮ ಸಂವಹನಕ್ಕಾಗಿ ಈ ZOOM APP ಅನ್ನೇ ಬಳಸುತ್ತಿದ್ದರು.

ಆದರೆ, ಈ ZOOM APP ವಿಡಿಯೋ ಕಾನ್ಫರೆನ್ಸಿಂಗ್ ಅಪ್ಲಿಕೇಶನ್ ಮೂಲಕ ವ್ಯಯಕ್ತಿಕ ಮಾಹಿತಿಯನ್ನು ಕದಿಯಲಾಗುತ್ತಿದೆ ಎಂಬ ಸುದ್ದಿ ಕಳೆದ ವಾರ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಇದರ ಬಳಕೆ ಕ್ರಮೇಣ ಕಡಿಮೆಯಾಗಿದೆ. ಭಾರತದ ಗೃಹ ಸಚಿವಾಲಯ ಸಹ ಈ APP ಅನ್ನು ಬಳಸದಂತೆ ಸೂಚನೆ ನೀಡಿದೆ.

ವಿಚಾರ ಇಷ್ಟೇ ಆಗಿದ್ದರೆ ಸಮಸ್ಯೆ ಇರಲಿಲ್ಲವೇನೋ? ಆದರೆ, ಇದರ ಬೆನ್ನಿಗೆ ಕೇಂದ್ರ ಸರ್ಕಾರ Make in India ಯೋಜನೆಯ ಅಡಿಯಲ್ಲಿ ’NAMASTE’ ಎಂಬ ಹೆಸರಿನ ವಿಡಿಯೋ ಕಾನ್ಪರೆನ್ಸ್ ಅಪ್ಲಕೇಷನ್ ಒಂದನ್ನು ಅಭಿವೃದ್ಧಿಗೊಳಿಸಿ ಬಿಡುಗಡೆ ಮಾಡಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಹರಿದಾಡಲು ಆರಂಭಿಸಿದೆ.

ಸತ್ಯವೇನು?

ನಮಸ್ತೆ ವಿಡಿಯೋ APP ಸುದ್ದಿ ಸದ್ದು ಮಾಡುತ್ತಿದ್ದಂತೆ ಇದರ ಸತ್ಯಾಸತ್ಯತೆ ಅರಿಯಲು ಮುಂದಾದರೆ ಲಭ್ಯವಾದ ಮಾಹಿತಿ ಬೇರೊಂದು ಕಥೆಯನ್ನು ಹೇಳುತ್ತಿದೆ. Namaste ಎಂಬುದು ಅದೊಂದು ಖಾಸಗಿ ಕಂಪೆನಿ. ಕೇಂದ್ರ ಕಚೇರಿ ಮುಂಬೈನಲ್ಲಿದೆ. ಇದು ಗ್ರಾಹಕರಿಗೆ ಉತ್ಪನ್ನಗಳನ್ನು ತಲುಪಿಸುವ ಆನ್‌ಲೈನ್ ಕಂಪೆನಿಯಾಗಿದ್ದು, ಸರ್ಕಾರ ಈ ಕಂಪೆನಿಯನ್ನೋ ಅಥವಾ ಆಪ್‌ ಅನ್ನೊ ಪ್ರಾರಂಭಿಸುವ ಬಗ್ಗೆ ಯಾವುದೇ ಉಲ್ಲೇಖವಿಲ್ಲ.

ಈ ಸುದ್ದಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತಿರುವ ಸರ್ಕಾರಿ ಪೋರ್ಟಲ್‌ಗಳಾದ MyGovIndia ಮತ್ತು PIB ಈ ಸುದ್ದಿಯನ್ನು ನಿರಾಕರಿಸಿದೆ. ಅಷ್ಟೇ ಅಲ್ಲ “ಇದೊಂದು ನಕಲಿ ಸುದ್ದಿ ಎಂದು ಟ್ವೀಟ್ ಮಾಡುವ ಮೂಲಕ ಸ್ಪಷ್ಟೀಕರಣ ನೀಡಿದೆ. ಅಲ್ಲದೆ, ಇಂತಹ ಸುಳ್ಳು ಸುದ್ದಿಗಳಿಂದ ಜನ ಆದಷ್ಟು ದೂರ ಇರಿ ಸುರಕ್ಷಿತವಾಗಿರಿ” ಎಂದು ತಿಳಿಸಿದೆ.


ಇದನ್ನೂ ಓದಿ: Fact Check: ಆಸ್ಟ್ರೇಲಿಯಾದ ಸೂಪರ್‌ ಮಾರ್ಕೆಟ್‌ಗಳಲ್ಲಿ ಚೀನಿಯರಿಗೆ ಪ್ರವೇಶವಿಲ್ಲವೇ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...