Homeನಿಜವೋ ಸುಳ್ಳೋಭಾರತ ಸರ್ಕಾರವು ಆನ್‌ಲೈನ್‌ ಕಾನ್ಫರೆನ್ಸ್‌ಗಾಗಿ ZOOM ಬದಲು NAMASTE ಆಪ್‌ ಬಿಡುಗಡೆ ಮಾಡಿದೆಯೇ?

ಭಾರತ ಸರ್ಕಾರವು ಆನ್‌ಲೈನ್‌ ಕಾನ್ಫರೆನ್ಸ್‌ಗಾಗಿ ZOOM ಬದಲು NAMASTE ಆಪ್‌ ಬಿಡುಗಡೆ ಮಾಡಿದೆಯೇ?

- Advertisement -
- Advertisement -

ಕೊರೋನಾ ಭೀತಿಯಿಂದಾಗಿ ದೇಶದಾದ್ಯಂತ ಲಾಕ್ಡೌನ್ ಘೋಷಿಸುತ್ತಿದ್ದಂತೆ ಆನ್‌ಲೈನ್‌ನಲ್ಲಿ ಮೀಟಿಂಗ್‌ ಮಾಡುವುದಕ್ಕಾಗಿ ಪ್ರಸಿದ್ದವಾದ APP ಎಂದರೇ ’ZOOM’. ಗೆಳೆಯ ಗೆಳತಿಯರ ವಿಡಿಯೋ ಚಾಟಿಂಗ್, ಫ್ಯಾಮಿಲಿ ಚಾಟಿಂಗ್ ಯಿಂದ Work From Home ಕೆಲಸ ಮಾಡುತ್ತಿರುವ ಕಚೇರಿ ಸಿಬ್ಬಂದಿಗಳ ವರೆಗೆ ಎಲ್ಲರೂ ತಮ್ಮ ಸಂವಹನಕ್ಕಾಗಿ ಈ ZOOM APP ಅನ್ನೇ ಬಳಸುತ್ತಿದ್ದರು.

ಆದರೆ, ಈ ZOOM APP ವಿಡಿಯೋ ಕಾನ್ಫರೆನ್ಸಿಂಗ್ ಅಪ್ಲಿಕೇಶನ್ ಮೂಲಕ ವ್ಯಯಕ್ತಿಕ ಮಾಹಿತಿಯನ್ನು ಕದಿಯಲಾಗುತ್ತಿದೆ ಎಂಬ ಸುದ್ದಿ ಕಳೆದ ವಾರ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಇದರ ಬಳಕೆ ಕ್ರಮೇಣ ಕಡಿಮೆಯಾಗಿದೆ. ಭಾರತದ ಗೃಹ ಸಚಿವಾಲಯ ಸಹ ಈ APP ಅನ್ನು ಬಳಸದಂತೆ ಸೂಚನೆ ನೀಡಿದೆ.

ವಿಚಾರ ಇಷ್ಟೇ ಆಗಿದ್ದರೆ ಸಮಸ್ಯೆ ಇರಲಿಲ್ಲವೇನೋ? ಆದರೆ, ಇದರ ಬೆನ್ನಿಗೆ ಕೇಂದ್ರ ಸರ್ಕಾರ Make in India ಯೋಜನೆಯ ಅಡಿಯಲ್ಲಿ ’NAMASTE’ ಎಂಬ ಹೆಸರಿನ ವಿಡಿಯೋ ಕಾನ್ಪರೆನ್ಸ್ ಅಪ್ಲಕೇಷನ್ ಒಂದನ್ನು ಅಭಿವೃದ್ಧಿಗೊಳಿಸಿ ಬಿಡುಗಡೆ ಮಾಡಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಹರಿದಾಡಲು ಆರಂಭಿಸಿದೆ.

ಸತ್ಯವೇನು?

ನಮಸ್ತೆ ವಿಡಿಯೋ APP ಸುದ್ದಿ ಸದ್ದು ಮಾಡುತ್ತಿದ್ದಂತೆ ಇದರ ಸತ್ಯಾಸತ್ಯತೆ ಅರಿಯಲು ಮುಂದಾದರೆ ಲಭ್ಯವಾದ ಮಾಹಿತಿ ಬೇರೊಂದು ಕಥೆಯನ್ನು ಹೇಳುತ್ತಿದೆ. Namaste ಎಂಬುದು ಅದೊಂದು ಖಾಸಗಿ ಕಂಪೆನಿ. ಕೇಂದ್ರ ಕಚೇರಿ ಮುಂಬೈನಲ್ಲಿದೆ. ಇದು ಗ್ರಾಹಕರಿಗೆ ಉತ್ಪನ್ನಗಳನ್ನು ತಲುಪಿಸುವ ಆನ್‌ಲೈನ್ ಕಂಪೆನಿಯಾಗಿದ್ದು, ಸರ್ಕಾರ ಈ ಕಂಪೆನಿಯನ್ನೋ ಅಥವಾ ಆಪ್‌ ಅನ್ನೊ ಪ್ರಾರಂಭಿಸುವ ಬಗ್ಗೆ ಯಾವುದೇ ಉಲ್ಲೇಖವಿಲ್ಲ.

ಈ ಸುದ್ದಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತಿರುವ ಸರ್ಕಾರಿ ಪೋರ್ಟಲ್‌ಗಳಾದ MyGovIndia ಮತ್ತು PIB ಈ ಸುದ್ದಿಯನ್ನು ನಿರಾಕರಿಸಿದೆ. ಅಷ್ಟೇ ಅಲ್ಲ “ಇದೊಂದು ನಕಲಿ ಸುದ್ದಿ ಎಂದು ಟ್ವೀಟ್ ಮಾಡುವ ಮೂಲಕ ಸ್ಪಷ್ಟೀಕರಣ ನೀಡಿದೆ. ಅಲ್ಲದೆ, ಇಂತಹ ಸುಳ್ಳು ಸುದ್ದಿಗಳಿಂದ ಜನ ಆದಷ್ಟು ದೂರ ಇರಿ ಸುರಕ್ಷಿತವಾಗಿರಿ” ಎಂದು ತಿಳಿಸಿದೆ.


ಇದನ್ನೂ ಓದಿ: Fact Check: ಆಸ್ಟ್ರೇಲಿಯಾದ ಸೂಪರ್‌ ಮಾರ್ಕೆಟ್‌ಗಳಲ್ಲಿ ಚೀನಿಯರಿಗೆ ಪ್ರವೇಶವಿಲ್ಲವೇ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....