Homeನಿಜವೋ ಸುಳ್ಳೋಭಾರತ ಸರ್ಕಾರವು ಆನ್‌ಲೈನ್‌ ಕಾನ್ಫರೆನ್ಸ್‌ಗಾಗಿ ZOOM ಬದಲು NAMASTE ಆಪ್‌ ಬಿಡುಗಡೆ ಮಾಡಿದೆಯೇ?

ಭಾರತ ಸರ್ಕಾರವು ಆನ್‌ಲೈನ್‌ ಕಾನ್ಫರೆನ್ಸ್‌ಗಾಗಿ ZOOM ಬದಲು NAMASTE ಆಪ್‌ ಬಿಡುಗಡೆ ಮಾಡಿದೆಯೇ?

- Advertisement -
- Advertisement -

ಕೊರೋನಾ ಭೀತಿಯಿಂದಾಗಿ ದೇಶದಾದ್ಯಂತ ಲಾಕ್ಡೌನ್ ಘೋಷಿಸುತ್ತಿದ್ದಂತೆ ಆನ್‌ಲೈನ್‌ನಲ್ಲಿ ಮೀಟಿಂಗ್‌ ಮಾಡುವುದಕ್ಕಾಗಿ ಪ್ರಸಿದ್ದವಾದ APP ಎಂದರೇ ’ZOOM’. ಗೆಳೆಯ ಗೆಳತಿಯರ ವಿಡಿಯೋ ಚಾಟಿಂಗ್, ಫ್ಯಾಮಿಲಿ ಚಾಟಿಂಗ್ ಯಿಂದ Work From Home ಕೆಲಸ ಮಾಡುತ್ತಿರುವ ಕಚೇರಿ ಸಿಬ್ಬಂದಿಗಳ ವರೆಗೆ ಎಲ್ಲರೂ ತಮ್ಮ ಸಂವಹನಕ್ಕಾಗಿ ಈ ZOOM APP ಅನ್ನೇ ಬಳಸುತ್ತಿದ್ದರು.

ಆದರೆ, ಈ ZOOM APP ವಿಡಿಯೋ ಕಾನ್ಫರೆನ್ಸಿಂಗ್ ಅಪ್ಲಿಕೇಶನ್ ಮೂಲಕ ವ್ಯಯಕ್ತಿಕ ಮಾಹಿತಿಯನ್ನು ಕದಿಯಲಾಗುತ್ತಿದೆ ಎಂಬ ಸುದ್ದಿ ಕಳೆದ ವಾರ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಇದರ ಬಳಕೆ ಕ್ರಮೇಣ ಕಡಿಮೆಯಾಗಿದೆ. ಭಾರತದ ಗೃಹ ಸಚಿವಾಲಯ ಸಹ ಈ APP ಅನ್ನು ಬಳಸದಂತೆ ಸೂಚನೆ ನೀಡಿದೆ.

ವಿಚಾರ ಇಷ್ಟೇ ಆಗಿದ್ದರೆ ಸಮಸ್ಯೆ ಇರಲಿಲ್ಲವೇನೋ? ಆದರೆ, ಇದರ ಬೆನ್ನಿಗೆ ಕೇಂದ್ರ ಸರ್ಕಾರ Make in India ಯೋಜನೆಯ ಅಡಿಯಲ್ಲಿ ’NAMASTE’ ಎಂಬ ಹೆಸರಿನ ವಿಡಿಯೋ ಕಾನ್ಪರೆನ್ಸ್ ಅಪ್ಲಕೇಷನ್ ಒಂದನ್ನು ಅಭಿವೃದ್ಧಿಗೊಳಿಸಿ ಬಿಡುಗಡೆ ಮಾಡಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಹರಿದಾಡಲು ಆರಂಭಿಸಿದೆ.

ಸತ್ಯವೇನು?

ನಮಸ್ತೆ ವಿಡಿಯೋ APP ಸುದ್ದಿ ಸದ್ದು ಮಾಡುತ್ತಿದ್ದಂತೆ ಇದರ ಸತ್ಯಾಸತ್ಯತೆ ಅರಿಯಲು ಮುಂದಾದರೆ ಲಭ್ಯವಾದ ಮಾಹಿತಿ ಬೇರೊಂದು ಕಥೆಯನ್ನು ಹೇಳುತ್ತಿದೆ. Namaste ಎಂಬುದು ಅದೊಂದು ಖಾಸಗಿ ಕಂಪೆನಿ. ಕೇಂದ್ರ ಕಚೇರಿ ಮುಂಬೈನಲ್ಲಿದೆ. ಇದು ಗ್ರಾಹಕರಿಗೆ ಉತ್ಪನ್ನಗಳನ್ನು ತಲುಪಿಸುವ ಆನ್‌ಲೈನ್ ಕಂಪೆನಿಯಾಗಿದ್ದು, ಸರ್ಕಾರ ಈ ಕಂಪೆನಿಯನ್ನೋ ಅಥವಾ ಆಪ್‌ ಅನ್ನೊ ಪ್ರಾರಂಭಿಸುವ ಬಗ್ಗೆ ಯಾವುದೇ ಉಲ್ಲೇಖವಿಲ್ಲ.

ಈ ಸುದ್ದಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತಿರುವ ಸರ್ಕಾರಿ ಪೋರ್ಟಲ್‌ಗಳಾದ MyGovIndia ಮತ್ತು PIB ಈ ಸುದ್ದಿಯನ್ನು ನಿರಾಕರಿಸಿದೆ. ಅಷ್ಟೇ ಅಲ್ಲ “ಇದೊಂದು ನಕಲಿ ಸುದ್ದಿ ಎಂದು ಟ್ವೀಟ್ ಮಾಡುವ ಮೂಲಕ ಸ್ಪಷ್ಟೀಕರಣ ನೀಡಿದೆ. ಅಲ್ಲದೆ, ಇಂತಹ ಸುಳ್ಳು ಸುದ್ದಿಗಳಿಂದ ಜನ ಆದಷ್ಟು ದೂರ ಇರಿ ಸುರಕ್ಷಿತವಾಗಿರಿ” ಎಂದು ತಿಳಿಸಿದೆ.


ಇದನ್ನೂ ಓದಿ: Fact Check: ಆಸ್ಟ್ರೇಲಿಯಾದ ಸೂಪರ್‌ ಮಾರ್ಕೆಟ್‌ಗಳಲ್ಲಿ ಚೀನಿಯರಿಗೆ ಪ್ರವೇಶವಿಲ್ಲವೇ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...