Homeನಿಜವೋ ಸುಳ್ಳೋಭಾರತ ಸರ್ಕಾರವು ಆನ್‌ಲೈನ್‌ ಕಾನ್ಫರೆನ್ಸ್‌ಗಾಗಿ ZOOM ಬದಲು NAMASTE ಆಪ್‌ ಬಿಡುಗಡೆ ಮಾಡಿದೆಯೇ?

ಭಾರತ ಸರ್ಕಾರವು ಆನ್‌ಲೈನ್‌ ಕಾನ್ಫರೆನ್ಸ್‌ಗಾಗಿ ZOOM ಬದಲು NAMASTE ಆಪ್‌ ಬಿಡುಗಡೆ ಮಾಡಿದೆಯೇ?

- Advertisement -
- Advertisement -

ಕೊರೋನಾ ಭೀತಿಯಿಂದಾಗಿ ದೇಶದಾದ್ಯಂತ ಲಾಕ್ಡೌನ್ ಘೋಷಿಸುತ್ತಿದ್ದಂತೆ ಆನ್‌ಲೈನ್‌ನಲ್ಲಿ ಮೀಟಿಂಗ್‌ ಮಾಡುವುದಕ್ಕಾಗಿ ಪ್ರಸಿದ್ದವಾದ APP ಎಂದರೇ ’ZOOM’. ಗೆಳೆಯ ಗೆಳತಿಯರ ವಿಡಿಯೋ ಚಾಟಿಂಗ್, ಫ್ಯಾಮಿಲಿ ಚಾಟಿಂಗ್ ಯಿಂದ Work From Home ಕೆಲಸ ಮಾಡುತ್ತಿರುವ ಕಚೇರಿ ಸಿಬ್ಬಂದಿಗಳ ವರೆಗೆ ಎಲ್ಲರೂ ತಮ್ಮ ಸಂವಹನಕ್ಕಾಗಿ ಈ ZOOM APP ಅನ್ನೇ ಬಳಸುತ್ತಿದ್ದರು.

ಆದರೆ, ಈ ZOOM APP ವಿಡಿಯೋ ಕಾನ್ಫರೆನ್ಸಿಂಗ್ ಅಪ್ಲಿಕೇಶನ್ ಮೂಲಕ ವ್ಯಯಕ್ತಿಕ ಮಾಹಿತಿಯನ್ನು ಕದಿಯಲಾಗುತ್ತಿದೆ ಎಂಬ ಸುದ್ದಿ ಕಳೆದ ವಾರ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಇದರ ಬಳಕೆ ಕ್ರಮೇಣ ಕಡಿಮೆಯಾಗಿದೆ. ಭಾರತದ ಗೃಹ ಸಚಿವಾಲಯ ಸಹ ಈ APP ಅನ್ನು ಬಳಸದಂತೆ ಸೂಚನೆ ನೀಡಿದೆ.

ವಿಚಾರ ಇಷ್ಟೇ ಆಗಿದ್ದರೆ ಸಮಸ್ಯೆ ಇರಲಿಲ್ಲವೇನೋ? ಆದರೆ, ಇದರ ಬೆನ್ನಿಗೆ ಕೇಂದ್ರ ಸರ್ಕಾರ Make in India ಯೋಜನೆಯ ಅಡಿಯಲ್ಲಿ ’NAMASTE’ ಎಂಬ ಹೆಸರಿನ ವಿಡಿಯೋ ಕಾನ್ಪರೆನ್ಸ್ ಅಪ್ಲಕೇಷನ್ ಒಂದನ್ನು ಅಭಿವೃದ್ಧಿಗೊಳಿಸಿ ಬಿಡುಗಡೆ ಮಾಡಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಹರಿದಾಡಲು ಆರಂಭಿಸಿದೆ.

ಸತ್ಯವೇನು?

ನಮಸ್ತೆ ವಿಡಿಯೋ APP ಸುದ್ದಿ ಸದ್ದು ಮಾಡುತ್ತಿದ್ದಂತೆ ಇದರ ಸತ್ಯಾಸತ್ಯತೆ ಅರಿಯಲು ಮುಂದಾದರೆ ಲಭ್ಯವಾದ ಮಾಹಿತಿ ಬೇರೊಂದು ಕಥೆಯನ್ನು ಹೇಳುತ್ತಿದೆ. Namaste ಎಂಬುದು ಅದೊಂದು ಖಾಸಗಿ ಕಂಪೆನಿ. ಕೇಂದ್ರ ಕಚೇರಿ ಮುಂಬೈನಲ್ಲಿದೆ. ಇದು ಗ್ರಾಹಕರಿಗೆ ಉತ್ಪನ್ನಗಳನ್ನು ತಲುಪಿಸುವ ಆನ್‌ಲೈನ್ ಕಂಪೆನಿಯಾಗಿದ್ದು, ಸರ್ಕಾರ ಈ ಕಂಪೆನಿಯನ್ನೋ ಅಥವಾ ಆಪ್‌ ಅನ್ನೊ ಪ್ರಾರಂಭಿಸುವ ಬಗ್ಗೆ ಯಾವುದೇ ಉಲ್ಲೇಖವಿಲ್ಲ.

ಈ ಸುದ್ದಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತಿರುವ ಸರ್ಕಾರಿ ಪೋರ್ಟಲ್‌ಗಳಾದ MyGovIndia ಮತ್ತು PIB ಈ ಸುದ್ದಿಯನ್ನು ನಿರಾಕರಿಸಿದೆ. ಅಷ್ಟೇ ಅಲ್ಲ “ಇದೊಂದು ನಕಲಿ ಸುದ್ದಿ ಎಂದು ಟ್ವೀಟ್ ಮಾಡುವ ಮೂಲಕ ಸ್ಪಷ್ಟೀಕರಣ ನೀಡಿದೆ. ಅಲ್ಲದೆ, ಇಂತಹ ಸುಳ್ಳು ಸುದ್ದಿಗಳಿಂದ ಜನ ಆದಷ್ಟು ದೂರ ಇರಿ ಸುರಕ್ಷಿತವಾಗಿರಿ” ಎಂದು ತಿಳಿಸಿದೆ.


ಇದನ್ನೂ ಓದಿ: Fact Check: ಆಸ್ಟ್ರೇಲಿಯಾದ ಸೂಪರ್‌ ಮಾರ್ಕೆಟ್‌ಗಳಲ್ಲಿ ಚೀನಿಯರಿಗೆ ಪ್ರವೇಶವಿಲ್ಲವೇ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...