Homeಮುಖಪುಟ'ಟ್ವಿಟರ್‌ ಬ್ಯಾನ್, ಉದ್ಯೋಗಿಗಳ ಮನೆಗಳ ಮೇಲೆ ದಾಳಿ' ಮಾಡುವುದಾಗಿ ಭಾರತ ಸರ್ಕಾರ ಬೆದರಿಕೆ ಹಾಕಿತ್ತು- ಇದು...

‘ಟ್ವಿಟರ್‌ ಬ್ಯಾನ್, ಉದ್ಯೋಗಿಗಳ ಮನೆಗಳ ಮೇಲೆ ದಾಳಿ’ ಮಾಡುವುದಾಗಿ ಭಾರತ ಸರ್ಕಾರ ಬೆದರಿಕೆ ಹಾಕಿತ್ತು- ಇದು ಪ್ರಜಾಪ್ರಭುತ್ವ ರಾಷ್ಟ್ರ: ಮಾಜಿ CEO ಡಾರ್ಸೆ

- Advertisement -
- Advertisement -

ರೈತರ ಪ್ರತಿಭಟನೆಗಳ ಪರವಾಗಿರುವ, ಕೆಲವು ಪತ್ರಕರ್ತರ ಮತ್ತು ಸರ್ಕಾರದ ವಿರುದ್ಧ ಟೀಕೆಗಳನ್ನು ವ್ಯಕ್ತಪಡಿಸುವವರಿಗೆ ಸಂಬಂಧಿಸಿದ ಖಾತೆಗಳನ್ನು ನಿರ್ಬಂಧಿಸುವಂತೆ ಭಾರತ ಸರ್ಕಾರದಿಂದ ಹಲವು ವಿನಂತಿಗಳು ಬಂದಿವೆ ಎಂದು ಟ್ವಿಟರ್ ಮಾಜಿ ಸಿಇಒ ಜಾಕ್ ಡಾರ್ಸೆ ಹೇಳಿದ್ದಾರೆ.

”ಭಾರತ ಸರ್ಕಾರದ ಮನವಿಯನ್ನು ಅನುಸರಿಸಲು ನಾವು ನಿರಾಕರಿಸಿದ್ದರಿಂದ ದೇಶದಲ್ಲಿ ಟ್ವಿಟರ್ ಪ್ಲಾಟ್‌ಫಾರ್ಮ್ ಅನ್ನು ಮುಚ್ಚುವ ಬೆದರಿಕೆಗಳು, ಉದ್ಯೋಗಿಗಳ ಮನೆಗಳ ಮೇಲೆ ದಾಳಿ ನಡೆಸುವುದು ಮತ್ತು ಟ್ವಿಟರ್ ಕಚೇರಿಗಳನ್ನು ಮುಚ್ಚುವ ಬೆದರಿಕೆಗಳು ಸೇರಿದಂತೆ ಟ್ವಿಟರ್‌ ಮೇಲೆ ಭಾರತ ಸರ್ಕಾರ ಒತ್ತಡ ಹೇರಿದೆ. ಭಾರತದಂತಹ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಇಂತಹ ಸರ್ವಾಧಿಕಾರಿ ಕ್ರಮಗಳು ನಡೆಯುತ್ತಿವೆ” ಎಂದು ಡಾರ್ಸೆ ಒತ್ತಿ ಹೇಳಿದರು.

ಸಂದರ್ಶನವೊಂದರಲ್ಲಿ ವಿದೇಶಿ ಸರ್ಕಾರಗಳ ಒತ್ತಡದ ಕೆಲವು ಉದಾಹರಣೆಗಳನ್ನು ನೀಡುವ ಸಂದರ್ಭದಲ್ಲಿ ಡಾರ್ಸೆ ಅವರು ಭಾರತ ಸರ್ಕಾರದ ಸರ್ವಾಧಿಕಾರಿ ಧೋರಣೆಗಳ ಬಗ್ಗೆ ವಿವರಿಸಿದರು.

”ಟರ್ಕಿ ದೇಶ ಕೂಡ ಭಾರತದಂತೆಯೇ ವರ್ತಿಸಿತು. ಟರ್ಕಿ ಸರ್ಕಾರ ಕೂಡ ಟ್ವಿಟರ್ ಅನ್ನು ಮುಚ್ಚುವುದಾಗಿ ಬೆದರಿಕೆ ಹಾಕಿತು, ಆಗಾಗ್ಗೆ ಸರ್ಕಾರದೊಂದಿಗೆ ನ್ಯಾಯಾಲಯದಲ್ಲಿ ಟ್ವಿಟರ್ ಸಂಸ್ಥೆ ವಾದವನ್ನು ಮಾಡಿದೆ ಮತ್ತು ಗೆದ್ದಿದ್ದೇವೆ’ ಎಂದು ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಮೂರು ವಿವಾದಿತ ಕೃಷಿ ಕಾನೂನು ತಂದಿತ್ತು. ಇದರ ವಿರುದ್ಧ 2020ರ ನವೆಂಬರ್‌ನಿಂದ ದೆಹಲಿ ಗಡಿ ಬಿಂದುಗಳಲ್ಲಿ ಕ್ಯಾಂಪ್ ಮಾಡುತ್ತಿದ್ದ ಸಾವಿರಾರು ರೈತರ ಒಂದು ವರ್ಷದ ಪ್ರತಿಭಟನೆ ನಡೆಸಿದರು. ಅವರ ಪ್ರತಿಭಟನೆ ತೀವ್ರವಾಗಿದ್ದರಿಂದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ನವೆಂಬರ್ 2021ರಲ್ಲಿ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮೂಲಕ ಮಹತ್ವದ ಘೋಷಣೆ ಮಾಡಲಾಯಿತು.

ಇದನ್ನೂ ಓದಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಹೆಸರು ಹಿಮಾಲಯದೆತ್ತರಕ್ಕೆ?

ರೈತರ ಮನವೊಲಿಸುವಲ್ಲಿ ವಿಫಲವಾಗಿರುವುದನ್ನು ಒಪ್ಪಿಕೊಂಡ ಮೋದಿ, ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ಮನವಿ ಮಾಡಿದರು. ತರುವಾಯ, ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ, ಮೂರು ಕಾನೂನುಗಳನ್ನು ಹಿಂತೆಗೆದುಕೊಳ್ಳಲಾಯಿತು.

ಸಂದರ್ಶನದಲ್ಲಿ ಡಾರ್ಸೆ ಅವರ ಹೇಳಿಕೆಗಳು ಗಮನ ಸೆಳೆದಿವೆ. ಡೋರ್ಸೆ ಅವರ ಆರೋಪಕ್ಕೆ ಸರ್ಕಾರ ಇನ್ನೂ ಪ್ರತಿಕ್ರಿಯಿಸದಿದ್ದರೂ, ಹಲವಾರು ಟ್ವಿಟರ್ ಖಾತೆಗಳು ಅವರ ಹೇಳಿಕೆಯ ಕ್ಲಿಪ್ ಅನ್ನು ಟ್ವಿಟರ್‌ನಲ್ಲಿ ಹಂಚಿಕೊಂಡು ಮೋದಿ ಸರ್ಕಾರವನ್ನು ಟೀಕಿಸಿವೆ.

ಪತ್ರಕರ್ತ ಮತ್ತು ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್ ಅವರು ಡಾರ್ಸೆ ಅವರೆ ಹೇಳಿಕೆಯ ಕ್ಲಿಪ್ ಹಂಚಿಕೊಂಡಿದ್ದು, ”ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಬಗ್ಗೆ ಬ್ರೇಕಿಂಗ್ ಪಾಯಿಂಟ್ಸ್ ಮಾತುಕತೆಗಳು,
ಉದಾಹರಣೆಗೆ, ರೈತರ ಪ್ರತಿಭಟನೆಗಳ ಸುತ್ತ, ಸರ್ಕಾರವನ್ನು ಟೀಕಿಸುವ ನಿರ್ದಿಷ್ಟ ಪತ್ರಕರ್ತರ ಸುತ್ತ ಅನೇಕ ವಿನಂತಿಗಳನ್ನು ಹೊಂದಿರುವ ದೇಶಗಳಲ್ಲಿ ಭಾರತವೂ ಒಂದಾಗಿದೆ. ನಾವು ಹೇಳಿದ್ದನ್ನು ಕೇಳದಿದ್ದರೆ, ನಿಮ್ಮ ಕಚೇರಿಗಳನ್ನು ಮುಚ್ಚುತ್ತೇವೆ, ನಾವು ನಿಮ್ಮ ಉದ್ಯೋಗಿಗಳ ಮನೆಗಳ ಮೇಲೆ ದಾಳಿ ಮಾಡುತ್ತೇವೆ’ ಎಂಬಂತಹ ರೀತಿಯಲ್ಲಿ ಬೆದರಿಕೆ ಹಾಕಲಾಯಿತು. ಇದು ಭಾರತ, ಪ್ರಜಾಪ್ರಭುತ್ವ ರಾಷ್ಟ್ರ” ಎಂದು ಬರೆದು ಟ್ವೀಟ್ ಮಾಡಿದ್ದಾರೆ.

ಹಿರಿಯ ವಕೀಲ ಪ್ರಶಾಂತ್ ಭೂಷಣ್ ಡಾರ್ಸೆ ಅವರೆ ಹೇಳಿಕೆಯ ಕ್ಲಿಪ್ ಹಂಚಿಕೊಂಡಿದ್ದು, ”ಸರ್ಕಾರವನ್ನು ಟೀಕಿಸುವ ಪತ್ರಕರ್ತರ, ರೈತರ ಪ್ರತಿಭಟನೆಗಳು ಮತ್ತು ಟ್ವೀಟ್‌ಗಳನ್ನು ನಿರ್ಬಂಧಿಸುವಂತೆ ಭಾರತ ಸರ್ಕಾರ ಟ್ವಿಟರ್‌ಗೆ ತಿಳಿಸಿದೆ. ಭಾರತದಲ್ಲಿ ಟ್ವಿಟರ್ ಅನ್ನು ಮುಚ್ಚುವುದಾಗಿ ಬೆದರಿಕೆ ಹಾಕಿದರು ಮತ್ತು ಟ್ವಿಟರ್ ಉದ್ಯೋಗಿಗಳ ಮನೆಗಳ ಮೇಲೆ ದಾಳಿ ಮಾಡಿದರು. ಆದರೂ ಭಾರತವು ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ! ಎಂದು Twitter ನ ಮಾಜಿ CEO ಜಾಕ್ ಡಾರ್ಸೆ” ಹೇಳಿದ್ದಾರೆಂದು ಟ್ವಿಟ್ ಮಾಡಿದ್ದಾರೆ.

ಈ ಬಗ್ಗೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಟ್ವೀಟ್ ಮಾಡಿದ್ದು, ”ಇದು ಸಂಪೂರ್ಣ ಸುಳ್ಳು, ಜಾಕ್
– ಬಹುಶಃ ಟ್ವಿಟರ್ ಇತಿಹಾಸದ ಅತ್ಯಂತ ಸಂಶಯಾಸ್ಪದ ಅವಧಿಯನ್ನು ಹೊರಹಾಕುವ ಪ್ರಯತ್ನ” ಎಂದಿದ್ದಾರೆ.

ಅಂಡರ್ ಡಾರ್ಸೆ ಮತ್ತು ಅವರ ತಂಡವು ಭಾರತದ ಕಾನೂನನ್ನು ನಿರಂತರ ಉಲ್ಲಂಘನೆ ಮಾಡಿತ್ತು. ವಾಸ್ತವವಾಗಿ, ಅವರು 2020 ರಿಂದ 2022ರವರೆಗೆ ಪದೇ ಪದೇ ಕಾನೂನನ್ನು ಅನುಸರಿಸಲಿಲ್ಲ ಮತ್ತು ಅಂತಿಮವಾಗಿ ಅವರು ಜೂನ್ 2022 ಮಾತ್ರ ಭಾರತದ ಕಾನೂನನ್ನು ಅನುಸರಿಸಿದರು.

”ಯಾರೂ ಜೈಲಿಗೆ ಹೋಗಲಿಲ್ಲ ಅಥವಾ ಟ್ವಿಟ್ಟರ್ ಅನ್ನು “ಸ್ಥಗಿತಗೊಳಿಸಲಿಲ್ಲ” ಡಾರ್ಸೆ ಅವರ ಟ್ವಿಟರ್ ಆಡಳಿತವು ಭಾರತೀಯ ಕಾನೂನಿನ ಸಾರ್ವಭೌಮತ್ವವನ್ನು ಒಪ್ಪಿಕೊಳ್ಳಲಿಲ್ಲ. ಭಾರತದ ಕಾನೂನುಗಳು ತನಗೆ ಅನ್ವಯಿಸುವುದಿಲ್ಲ ಎಂಬಂತೆ ವರ್ತಿಸಿತು” ಎಂದು ಪ್ರತಿದಾಳಿ ಮಾಡಿ ರಾಜೀವ್ ಚಂದ್ರಶೇಖರ್ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....