Homeಮುಖಪುಟ'ಟ್ವಿಟರ್‌ ಬ್ಯಾನ್, ಉದ್ಯೋಗಿಗಳ ಮನೆಗಳ ಮೇಲೆ ದಾಳಿ' ಮಾಡುವುದಾಗಿ ಭಾರತ ಸರ್ಕಾರ ಬೆದರಿಕೆ ಹಾಕಿತ್ತು- ಇದು...

‘ಟ್ವಿಟರ್‌ ಬ್ಯಾನ್, ಉದ್ಯೋಗಿಗಳ ಮನೆಗಳ ಮೇಲೆ ದಾಳಿ’ ಮಾಡುವುದಾಗಿ ಭಾರತ ಸರ್ಕಾರ ಬೆದರಿಕೆ ಹಾಕಿತ್ತು- ಇದು ಪ್ರಜಾಪ್ರಭುತ್ವ ರಾಷ್ಟ್ರ: ಮಾಜಿ CEO ಡಾರ್ಸೆ

- Advertisement -
- Advertisement -

ರೈತರ ಪ್ರತಿಭಟನೆಗಳ ಪರವಾಗಿರುವ, ಕೆಲವು ಪತ್ರಕರ್ತರ ಮತ್ತು ಸರ್ಕಾರದ ವಿರುದ್ಧ ಟೀಕೆಗಳನ್ನು ವ್ಯಕ್ತಪಡಿಸುವವರಿಗೆ ಸಂಬಂಧಿಸಿದ ಖಾತೆಗಳನ್ನು ನಿರ್ಬಂಧಿಸುವಂತೆ ಭಾರತ ಸರ್ಕಾರದಿಂದ ಹಲವು ವಿನಂತಿಗಳು ಬಂದಿವೆ ಎಂದು ಟ್ವಿಟರ್ ಮಾಜಿ ಸಿಇಒ ಜಾಕ್ ಡಾರ್ಸೆ ಹೇಳಿದ್ದಾರೆ.

”ಭಾರತ ಸರ್ಕಾರದ ಮನವಿಯನ್ನು ಅನುಸರಿಸಲು ನಾವು ನಿರಾಕರಿಸಿದ್ದರಿಂದ ದೇಶದಲ್ಲಿ ಟ್ವಿಟರ್ ಪ್ಲಾಟ್‌ಫಾರ್ಮ್ ಅನ್ನು ಮುಚ್ಚುವ ಬೆದರಿಕೆಗಳು, ಉದ್ಯೋಗಿಗಳ ಮನೆಗಳ ಮೇಲೆ ದಾಳಿ ನಡೆಸುವುದು ಮತ್ತು ಟ್ವಿಟರ್ ಕಚೇರಿಗಳನ್ನು ಮುಚ್ಚುವ ಬೆದರಿಕೆಗಳು ಸೇರಿದಂತೆ ಟ್ವಿಟರ್‌ ಮೇಲೆ ಭಾರತ ಸರ್ಕಾರ ಒತ್ತಡ ಹೇರಿದೆ. ಭಾರತದಂತಹ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಇಂತಹ ಸರ್ವಾಧಿಕಾರಿ ಕ್ರಮಗಳು ನಡೆಯುತ್ತಿವೆ” ಎಂದು ಡಾರ್ಸೆ ಒತ್ತಿ ಹೇಳಿದರು.

ಸಂದರ್ಶನವೊಂದರಲ್ಲಿ ವಿದೇಶಿ ಸರ್ಕಾರಗಳ ಒತ್ತಡದ ಕೆಲವು ಉದಾಹರಣೆಗಳನ್ನು ನೀಡುವ ಸಂದರ್ಭದಲ್ಲಿ ಡಾರ್ಸೆ ಅವರು ಭಾರತ ಸರ್ಕಾರದ ಸರ್ವಾಧಿಕಾರಿ ಧೋರಣೆಗಳ ಬಗ್ಗೆ ವಿವರಿಸಿದರು.

”ಟರ್ಕಿ ದೇಶ ಕೂಡ ಭಾರತದಂತೆಯೇ ವರ್ತಿಸಿತು. ಟರ್ಕಿ ಸರ್ಕಾರ ಕೂಡ ಟ್ವಿಟರ್ ಅನ್ನು ಮುಚ್ಚುವುದಾಗಿ ಬೆದರಿಕೆ ಹಾಕಿತು, ಆಗಾಗ್ಗೆ ಸರ್ಕಾರದೊಂದಿಗೆ ನ್ಯಾಯಾಲಯದಲ್ಲಿ ಟ್ವಿಟರ್ ಸಂಸ್ಥೆ ವಾದವನ್ನು ಮಾಡಿದೆ ಮತ್ತು ಗೆದ್ದಿದ್ದೇವೆ’ ಎಂದು ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಮೂರು ವಿವಾದಿತ ಕೃಷಿ ಕಾನೂನು ತಂದಿತ್ತು. ಇದರ ವಿರುದ್ಧ 2020ರ ನವೆಂಬರ್‌ನಿಂದ ದೆಹಲಿ ಗಡಿ ಬಿಂದುಗಳಲ್ಲಿ ಕ್ಯಾಂಪ್ ಮಾಡುತ್ತಿದ್ದ ಸಾವಿರಾರು ರೈತರ ಒಂದು ವರ್ಷದ ಪ್ರತಿಭಟನೆ ನಡೆಸಿದರು. ಅವರ ಪ್ರತಿಭಟನೆ ತೀವ್ರವಾಗಿದ್ದರಿಂದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ನವೆಂಬರ್ 2021ರಲ್ಲಿ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮೂಲಕ ಮಹತ್ವದ ಘೋಷಣೆ ಮಾಡಲಾಯಿತು.

ಇದನ್ನೂ ಓದಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಹೆಸರು ಹಿಮಾಲಯದೆತ್ತರಕ್ಕೆ?

ರೈತರ ಮನವೊಲಿಸುವಲ್ಲಿ ವಿಫಲವಾಗಿರುವುದನ್ನು ಒಪ್ಪಿಕೊಂಡ ಮೋದಿ, ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ಮನವಿ ಮಾಡಿದರು. ತರುವಾಯ, ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ, ಮೂರು ಕಾನೂನುಗಳನ್ನು ಹಿಂತೆಗೆದುಕೊಳ್ಳಲಾಯಿತು.

ಸಂದರ್ಶನದಲ್ಲಿ ಡಾರ್ಸೆ ಅವರ ಹೇಳಿಕೆಗಳು ಗಮನ ಸೆಳೆದಿವೆ. ಡೋರ್ಸೆ ಅವರ ಆರೋಪಕ್ಕೆ ಸರ್ಕಾರ ಇನ್ನೂ ಪ್ರತಿಕ್ರಿಯಿಸದಿದ್ದರೂ, ಹಲವಾರು ಟ್ವಿಟರ್ ಖಾತೆಗಳು ಅವರ ಹೇಳಿಕೆಯ ಕ್ಲಿಪ್ ಅನ್ನು ಟ್ವಿಟರ್‌ನಲ್ಲಿ ಹಂಚಿಕೊಂಡು ಮೋದಿ ಸರ್ಕಾರವನ್ನು ಟೀಕಿಸಿವೆ.

ಪತ್ರಕರ್ತ ಮತ್ತು ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್ ಅವರು ಡಾರ್ಸೆ ಅವರೆ ಹೇಳಿಕೆಯ ಕ್ಲಿಪ್ ಹಂಚಿಕೊಂಡಿದ್ದು, ”ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಬಗ್ಗೆ ಬ್ರೇಕಿಂಗ್ ಪಾಯಿಂಟ್ಸ್ ಮಾತುಕತೆಗಳು,
ಉದಾಹರಣೆಗೆ, ರೈತರ ಪ್ರತಿಭಟನೆಗಳ ಸುತ್ತ, ಸರ್ಕಾರವನ್ನು ಟೀಕಿಸುವ ನಿರ್ದಿಷ್ಟ ಪತ್ರಕರ್ತರ ಸುತ್ತ ಅನೇಕ ವಿನಂತಿಗಳನ್ನು ಹೊಂದಿರುವ ದೇಶಗಳಲ್ಲಿ ಭಾರತವೂ ಒಂದಾಗಿದೆ. ನಾವು ಹೇಳಿದ್ದನ್ನು ಕೇಳದಿದ್ದರೆ, ನಿಮ್ಮ ಕಚೇರಿಗಳನ್ನು ಮುಚ್ಚುತ್ತೇವೆ, ನಾವು ನಿಮ್ಮ ಉದ್ಯೋಗಿಗಳ ಮನೆಗಳ ಮೇಲೆ ದಾಳಿ ಮಾಡುತ್ತೇವೆ’ ಎಂಬಂತಹ ರೀತಿಯಲ್ಲಿ ಬೆದರಿಕೆ ಹಾಕಲಾಯಿತು. ಇದು ಭಾರತ, ಪ್ರಜಾಪ್ರಭುತ್ವ ರಾಷ್ಟ್ರ” ಎಂದು ಬರೆದು ಟ್ವೀಟ್ ಮಾಡಿದ್ದಾರೆ.

ಹಿರಿಯ ವಕೀಲ ಪ್ರಶಾಂತ್ ಭೂಷಣ್ ಡಾರ್ಸೆ ಅವರೆ ಹೇಳಿಕೆಯ ಕ್ಲಿಪ್ ಹಂಚಿಕೊಂಡಿದ್ದು, ”ಸರ್ಕಾರವನ್ನು ಟೀಕಿಸುವ ಪತ್ರಕರ್ತರ, ರೈತರ ಪ್ರತಿಭಟನೆಗಳು ಮತ್ತು ಟ್ವೀಟ್‌ಗಳನ್ನು ನಿರ್ಬಂಧಿಸುವಂತೆ ಭಾರತ ಸರ್ಕಾರ ಟ್ವಿಟರ್‌ಗೆ ತಿಳಿಸಿದೆ. ಭಾರತದಲ್ಲಿ ಟ್ವಿಟರ್ ಅನ್ನು ಮುಚ್ಚುವುದಾಗಿ ಬೆದರಿಕೆ ಹಾಕಿದರು ಮತ್ತು ಟ್ವಿಟರ್ ಉದ್ಯೋಗಿಗಳ ಮನೆಗಳ ಮೇಲೆ ದಾಳಿ ಮಾಡಿದರು. ಆದರೂ ಭಾರತವು ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ! ಎಂದು Twitter ನ ಮಾಜಿ CEO ಜಾಕ್ ಡಾರ್ಸೆ” ಹೇಳಿದ್ದಾರೆಂದು ಟ್ವಿಟ್ ಮಾಡಿದ್ದಾರೆ.

ಈ ಬಗ್ಗೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಟ್ವೀಟ್ ಮಾಡಿದ್ದು, ”ಇದು ಸಂಪೂರ್ಣ ಸುಳ್ಳು, ಜಾಕ್
– ಬಹುಶಃ ಟ್ವಿಟರ್ ಇತಿಹಾಸದ ಅತ್ಯಂತ ಸಂಶಯಾಸ್ಪದ ಅವಧಿಯನ್ನು ಹೊರಹಾಕುವ ಪ್ರಯತ್ನ” ಎಂದಿದ್ದಾರೆ.

ಅಂಡರ್ ಡಾರ್ಸೆ ಮತ್ತು ಅವರ ತಂಡವು ಭಾರತದ ಕಾನೂನನ್ನು ನಿರಂತರ ಉಲ್ಲಂಘನೆ ಮಾಡಿತ್ತು. ವಾಸ್ತವವಾಗಿ, ಅವರು 2020 ರಿಂದ 2022ರವರೆಗೆ ಪದೇ ಪದೇ ಕಾನೂನನ್ನು ಅನುಸರಿಸಲಿಲ್ಲ ಮತ್ತು ಅಂತಿಮವಾಗಿ ಅವರು ಜೂನ್ 2022 ಮಾತ್ರ ಭಾರತದ ಕಾನೂನನ್ನು ಅನುಸರಿಸಿದರು.

”ಯಾರೂ ಜೈಲಿಗೆ ಹೋಗಲಿಲ್ಲ ಅಥವಾ ಟ್ವಿಟ್ಟರ್ ಅನ್ನು “ಸ್ಥಗಿತಗೊಳಿಸಲಿಲ್ಲ” ಡಾರ್ಸೆ ಅವರ ಟ್ವಿಟರ್ ಆಡಳಿತವು ಭಾರತೀಯ ಕಾನೂನಿನ ಸಾರ್ವಭೌಮತ್ವವನ್ನು ಒಪ್ಪಿಕೊಳ್ಳಲಿಲ್ಲ. ಭಾರತದ ಕಾನೂನುಗಳು ತನಗೆ ಅನ್ವಯಿಸುವುದಿಲ್ಲ ಎಂಬಂತೆ ವರ್ತಿಸಿತು” ಎಂದು ಪ್ರತಿದಾಳಿ ಮಾಡಿ ರಾಜೀವ್ ಚಂದ್ರಶೇಖರ್ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...