Homeಮುಖಪುಟ'ಟ್ವಿಟರ್‌ ಬ್ಯಾನ್, ಉದ್ಯೋಗಿಗಳ ಮನೆಗಳ ಮೇಲೆ ದಾಳಿ' ಮಾಡುವುದಾಗಿ ಭಾರತ ಸರ್ಕಾರ ಬೆದರಿಕೆ ಹಾಕಿತ್ತು- ಇದು...

‘ಟ್ವಿಟರ್‌ ಬ್ಯಾನ್, ಉದ್ಯೋಗಿಗಳ ಮನೆಗಳ ಮೇಲೆ ದಾಳಿ’ ಮಾಡುವುದಾಗಿ ಭಾರತ ಸರ್ಕಾರ ಬೆದರಿಕೆ ಹಾಕಿತ್ತು- ಇದು ಪ್ರಜಾಪ್ರಭುತ್ವ ರಾಷ್ಟ್ರ: ಮಾಜಿ CEO ಡಾರ್ಸೆ

- Advertisement -
- Advertisement -

ರೈತರ ಪ್ರತಿಭಟನೆಗಳ ಪರವಾಗಿರುವ, ಕೆಲವು ಪತ್ರಕರ್ತರ ಮತ್ತು ಸರ್ಕಾರದ ವಿರುದ್ಧ ಟೀಕೆಗಳನ್ನು ವ್ಯಕ್ತಪಡಿಸುವವರಿಗೆ ಸಂಬಂಧಿಸಿದ ಖಾತೆಗಳನ್ನು ನಿರ್ಬಂಧಿಸುವಂತೆ ಭಾರತ ಸರ್ಕಾರದಿಂದ ಹಲವು ವಿನಂತಿಗಳು ಬಂದಿವೆ ಎಂದು ಟ್ವಿಟರ್ ಮಾಜಿ ಸಿಇಒ ಜಾಕ್ ಡಾರ್ಸೆ ಹೇಳಿದ್ದಾರೆ.

”ಭಾರತ ಸರ್ಕಾರದ ಮನವಿಯನ್ನು ಅನುಸರಿಸಲು ನಾವು ನಿರಾಕರಿಸಿದ್ದರಿಂದ ದೇಶದಲ್ಲಿ ಟ್ವಿಟರ್ ಪ್ಲಾಟ್‌ಫಾರ್ಮ್ ಅನ್ನು ಮುಚ್ಚುವ ಬೆದರಿಕೆಗಳು, ಉದ್ಯೋಗಿಗಳ ಮನೆಗಳ ಮೇಲೆ ದಾಳಿ ನಡೆಸುವುದು ಮತ್ತು ಟ್ವಿಟರ್ ಕಚೇರಿಗಳನ್ನು ಮುಚ್ಚುವ ಬೆದರಿಕೆಗಳು ಸೇರಿದಂತೆ ಟ್ವಿಟರ್‌ ಮೇಲೆ ಭಾರತ ಸರ್ಕಾರ ಒತ್ತಡ ಹೇರಿದೆ. ಭಾರತದಂತಹ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಇಂತಹ ಸರ್ವಾಧಿಕಾರಿ ಕ್ರಮಗಳು ನಡೆಯುತ್ತಿವೆ” ಎಂದು ಡಾರ್ಸೆ ಒತ್ತಿ ಹೇಳಿದರು.

ಸಂದರ್ಶನವೊಂದರಲ್ಲಿ ವಿದೇಶಿ ಸರ್ಕಾರಗಳ ಒತ್ತಡದ ಕೆಲವು ಉದಾಹರಣೆಗಳನ್ನು ನೀಡುವ ಸಂದರ್ಭದಲ್ಲಿ ಡಾರ್ಸೆ ಅವರು ಭಾರತ ಸರ್ಕಾರದ ಸರ್ವಾಧಿಕಾರಿ ಧೋರಣೆಗಳ ಬಗ್ಗೆ ವಿವರಿಸಿದರು.

”ಟರ್ಕಿ ದೇಶ ಕೂಡ ಭಾರತದಂತೆಯೇ ವರ್ತಿಸಿತು. ಟರ್ಕಿ ಸರ್ಕಾರ ಕೂಡ ಟ್ವಿಟರ್ ಅನ್ನು ಮುಚ್ಚುವುದಾಗಿ ಬೆದರಿಕೆ ಹಾಕಿತು, ಆಗಾಗ್ಗೆ ಸರ್ಕಾರದೊಂದಿಗೆ ನ್ಯಾಯಾಲಯದಲ್ಲಿ ಟ್ವಿಟರ್ ಸಂಸ್ಥೆ ವಾದವನ್ನು ಮಾಡಿದೆ ಮತ್ತು ಗೆದ್ದಿದ್ದೇವೆ’ ಎಂದು ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಮೂರು ವಿವಾದಿತ ಕೃಷಿ ಕಾನೂನು ತಂದಿತ್ತು. ಇದರ ವಿರುದ್ಧ 2020ರ ನವೆಂಬರ್‌ನಿಂದ ದೆಹಲಿ ಗಡಿ ಬಿಂದುಗಳಲ್ಲಿ ಕ್ಯಾಂಪ್ ಮಾಡುತ್ತಿದ್ದ ಸಾವಿರಾರು ರೈತರ ಒಂದು ವರ್ಷದ ಪ್ರತಿಭಟನೆ ನಡೆಸಿದರು. ಅವರ ಪ್ರತಿಭಟನೆ ತೀವ್ರವಾಗಿದ್ದರಿಂದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ನವೆಂಬರ್ 2021ರಲ್ಲಿ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮೂಲಕ ಮಹತ್ವದ ಘೋಷಣೆ ಮಾಡಲಾಯಿತು.

ಇದನ್ನೂ ಓದಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಹೆಸರು ಹಿಮಾಲಯದೆತ್ತರಕ್ಕೆ?

ರೈತರ ಮನವೊಲಿಸುವಲ್ಲಿ ವಿಫಲವಾಗಿರುವುದನ್ನು ಒಪ್ಪಿಕೊಂಡ ಮೋದಿ, ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ಮನವಿ ಮಾಡಿದರು. ತರುವಾಯ, ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ, ಮೂರು ಕಾನೂನುಗಳನ್ನು ಹಿಂತೆಗೆದುಕೊಳ್ಳಲಾಯಿತು.

ಸಂದರ್ಶನದಲ್ಲಿ ಡಾರ್ಸೆ ಅವರ ಹೇಳಿಕೆಗಳು ಗಮನ ಸೆಳೆದಿವೆ. ಡೋರ್ಸೆ ಅವರ ಆರೋಪಕ್ಕೆ ಸರ್ಕಾರ ಇನ್ನೂ ಪ್ರತಿಕ್ರಿಯಿಸದಿದ್ದರೂ, ಹಲವಾರು ಟ್ವಿಟರ್ ಖಾತೆಗಳು ಅವರ ಹೇಳಿಕೆಯ ಕ್ಲಿಪ್ ಅನ್ನು ಟ್ವಿಟರ್‌ನಲ್ಲಿ ಹಂಚಿಕೊಂಡು ಮೋದಿ ಸರ್ಕಾರವನ್ನು ಟೀಕಿಸಿವೆ.

ಪತ್ರಕರ್ತ ಮತ್ತು ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್ ಅವರು ಡಾರ್ಸೆ ಅವರೆ ಹೇಳಿಕೆಯ ಕ್ಲಿಪ್ ಹಂಚಿಕೊಂಡಿದ್ದು, ”ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಬಗ್ಗೆ ಬ್ರೇಕಿಂಗ್ ಪಾಯಿಂಟ್ಸ್ ಮಾತುಕತೆಗಳು,
ಉದಾಹರಣೆಗೆ, ರೈತರ ಪ್ರತಿಭಟನೆಗಳ ಸುತ್ತ, ಸರ್ಕಾರವನ್ನು ಟೀಕಿಸುವ ನಿರ್ದಿಷ್ಟ ಪತ್ರಕರ್ತರ ಸುತ್ತ ಅನೇಕ ವಿನಂತಿಗಳನ್ನು ಹೊಂದಿರುವ ದೇಶಗಳಲ್ಲಿ ಭಾರತವೂ ಒಂದಾಗಿದೆ. ನಾವು ಹೇಳಿದ್ದನ್ನು ಕೇಳದಿದ್ದರೆ, ನಿಮ್ಮ ಕಚೇರಿಗಳನ್ನು ಮುಚ್ಚುತ್ತೇವೆ, ನಾವು ನಿಮ್ಮ ಉದ್ಯೋಗಿಗಳ ಮನೆಗಳ ಮೇಲೆ ದಾಳಿ ಮಾಡುತ್ತೇವೆ’ ಎಂಬಂತಹ ರೀತಿಯಲ್ಲಿ ಬೆದರಿಕೆ ಹಾಕಲಾಯಿತು. ಇದು ಭಾರತ, ಪ್ರಜಾಪ್ರಭುತ್ವ ರಾಷ್ಟ್ರ” ಎಂದು ಬರೆದು ಟ್ವೀಟ್ ಮಾಡಿದ್ದಾರೆ.

ಹಿರಿಯ ವಕೀಲ ಪ್ರಶಾಂತ್ ಭೂಷಣ್ ಡಾರ್ಸೆ ಅವರೆ ಹೇಳಿಕೆಯ ಕ್ಲಿಪ್ ಹಂಚಿಕೊಂಡಿದ್ದು, ”ಸರ್ಕಾರವನ್ನು ಟೀಕಿಸುವ ಪತ್ರಕರ್ತರ, ರೈತರ ಪ್ರತಿಭಟನೆಗಳು ಮತ್ತು ಟ್ವೀಟ್‌ಗಳನ್ನು ನಿರ್ಬಂಧಿಸುವಂತೆ ಭಾರತ ಸರ್ಕಾರ ಟ್ವಿಟರ್‌ಗೆ ತಿಳಿಸಿದೆ. ಭಾರತದಲ್ಲಿ ಟ್ವಿಟರ್ ಅನ್ನು ಮುಚ್ಚುವುದಾಗಿ ಬೆದರಿಕೆ ಹಾಕಿದರು ಮತ್ತು ಟ್ವಿಟರ್ ಉದ್ಯೋಗಿಗಳ ಮನೆಗಳ ಮೇಲೆ ದಾಳಿ ಮಾಡಿದರು. ಆದರೂ ಭಾರತವು ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ! ಎಂದು Twitter ನ ಮಾಜಿ CEO ಜಾಕ್ ಡಾರ್ಸೆ” ಹೇಳಿದ್ದಾರೆಂದು ಟ್ವಿಟ್ ಮಾಡಿದ್ದಾರೆ.

ಈ ಬಗ್ಗೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಟ್ವೀಟ್ ಮಾಡಿದ್ದು, ”ಇದು ಸಂಪೂರ್ಣ ಸುಳ್ಳು, ಜಾಕ್
– ಬಹುಶಃ ಟ್ವಿಟರ್ ಇತಿಹಾಸದ ಅತ್ಯಂತ ಸಂಶಯಾಸ್ಪದ ಅವಧಿಯನ್ನು ಹೊರಹಾಕುವ ಪ್ರಯತ್ನ” ಎಂದಿದ್ದಾರೆ.

ಅಂಡರ್ ಡಾರ್ಸೆ ಮತ್ತು ಅವರ ತಂಡವು ಭಾರತದ ಕಾನೂನನ್ನು ನಿರಂತರ ಉಲ್ಲಂಘನೆ ಮಾಡಿತ್ತು. ವಾಸ್ತವವಾಗಿ, ಅವರು 2020 ರಿಂದ 2022ರವರೆಗೆ ಪದೇ ಪದೇ ಕಾನೂನನ್ನು ಅನುಸರಿಸಲಿಲ್ಲ ಮತ್ತು ಅಂತಿಮವಾಗಿ ಅವರು ಜೂನ್ 2022 ಮಾತ್ರ ಭಾರತದ ಕಾನೂನನ್ನು ಅನುಸರಿಸಿದರು.

”ಯಾರೂ ಜೈಲಿಗೆ ಹೋಗಲಿಲ್ಲ ಅಥವಾ ಟ್ವಿಟ್ಟರ್ ಅನ್ನು “ಸ್ಥಗಿತಗೊಳಿಸಲಿಲ್ಲ” ಡಾರ್ಸೆ ಅವರ ಟ್ವಿಟರ್ ಆಡಳಿತವು ಭಾರತೀಯ ಕಾನೂನಿನ ಸಾರ್ವಭೌಮತ್ವವನ್ನು ಒಪ್ಪಿಕೊಳ್ಳಲಿಲ್ಲ. ಭಾರತದ ಕಾನೂನುಗಳು ತನಗೆ ಅನ್ವಯಿಸುವುದಿಲ್ಲ ಎಂಬಂತೆ ವರ್ತಿಸಿತು” ಎಂದು ಪ್ರತಿದಾಳಿ ಮಾಡಿ ರಾಜೀವ್ ಚಂದ್ರಶೇಖರ್ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...