Homeಮುಖಪುಟಮತ್ತೆ 54 ಚೀನಿ ಅಪ್ಲಿಕೇಶನ್‌ಗಳನ್ನು ನಿಷೇಧಿಸಿದ ಭಾರತ

ಮತ್ತೆ 54 ಚೀನಿ ಅಪ್ಲಿಕೇಶನ್‌ಗಳನ್ನು ನಿಷೇಧಿಸಿದ ಭಾರತ

- Advertisement -
- Advertisement -

ದೇಶದ ಭದ್ರತೆಯ ಕಾರಣ ನೀಡಿ 54 ಚೀನಿ ಅಪ್ಲಿಕೇಶನ್‌ಗಳನ್ನು ನಿಷೇಧಿಸಿರುವುದಾಗಿ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಇಂದು ತಿಳಿಸಿದೆ.

ಕಳೆದ ವರ್ಷ ಜೂನ್‌ನಲ್ಲಿ, ರಾಷ್ಟ್ರದ ಸಾರ್ವಭೌಮತ್ವ ಮತ್ತು ಭದ್ರತೆಗೆ ಬೆದರಿಕೆಯನ್ನು ಉಲ್ಲೇಖಿಸಿ ಭಾರತವು ಟಿಕ್‌ಟಾಕ್‌, ವಿಚಾಟ್ ಮತ್ತು ಹೆಲೋನಂತಹ ವ್ಯಾಪಕವಾಗಿ ಬಳಸಲಾಗುವ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳು, ಪಬ್ಜಿಯಂತಹ ಜನಪ್ರಿಯ ಗೇಮಿಂಗ್ ಅಪ್ಲಿಕೇಶನ್‌ಗಳು ಸೇರಿದಂತೆ 59 ಚೀನೀ ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿಷೇಧಿಸಿತ್ತು. ಪ್ರಸ್ತುತ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69ಎ ಅಡಿಯಲ್ಲಿ ಅಪ್ಲಿಕೇಶನ್‌ಗಳನ್ನು ನಿಷೇಧಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಬ್ಯೂಟಿ ಕ್ಯಾಮೆರಾ, ಸ್ವೀಟ್ ಸೆಲ್ಫಿ ಎಚ್ಡಿ, ಬ್ಯೂಟಿ ಕ್ಯಾಮೆರಾ – ಸೆಲ್ಫಿ ಕ್ಯಾಮೆರಾ, ಈಕ್ವಲೈಜರ್ ಮತ್ತು ಬಾಸ್ ಬೂಸ್ಟರ್, ಕ್ಯಾಮ್ಕಾರ್ಡ್ ಫಾರ್ ಸೇಲ್ಸ್ಫೋರ್ಸ್ ಎಂಟ್, ಐಸೊಲ್ಯಾಂಡ್ 2: ಆಶಸ್ ಆಫ್ ಟೈಮ್ ಲೈಟ್, ವಿವಸೆಂಟ್ ವಿಡಿಯೋ ಎಡಿಟರ್, ಟೆನ್ವಾ ಎಕ್ಸ್ರಿವರ್, ಟೆನ್ವಾ ಎಕ್ಸ್ರಿವರ್, ಒನ್ಮೆಯಾಜಿ ಚೆಸ್, ಒನ್ಮೆಯಾಜಿ ಅರೆನಾ, ಆಪ್ ಲಾಕ್ ಮತ್ತು ಡ್ಯುಯಲ್ ಸ್ಪೇಸ್ ಲೈಟ್ ಸೇರಿದಂತೆ 54 ಚೀನಿ ಆಪ್‌ಗಳನ್ನು ನಿಷೇಧಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ತಿಳಿಸಿದೆ.

ಚೀನಾದೊಂದಿಗೆ ಗಡಿ ವಿವಾದ ಉದ್ವಿಗ್ನಗೊಂಡ ನಂತರ ಭಾರತವು ಕಳೆದ ಒಂದು ವರ್ಷದಿಂದ ಸುಮಾರು 300 ಅಪ್ಲಿಕೇಶನ್‌ಗಳನ್ನು ನಿರ್ಬಂಧಿಸಿದೆ. ಪೂರ್ವ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಚೀನಾದ ಸೈನಿಕರೊಂದಿಗಿನ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ ನಂತರ ಜೂನ್ 2020ರಲ್ಲಿ ಮೊದಲ ಸುತ್ತಿನ ನಿಷೇಧವನ್ನು ಘೋಷಿಸಲಾಯಿತು.

ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ವಕ್ತಾರರು ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿಲ್ಲ ಎಂದು ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಇದನ್ನೂ ಓದಿರಿ: ಭಾರತದ 15 ಸ್ಥಳಗಳಿಗೆ ಚೀನಾ ಮರುನಾಮಕರಣ; ಮೋದಿ ಮೌನ: ಖರ್ಗೆ

ಸಂಸತ್ತಿನಲ್ಲಿ ವಾಗ್ದಾಳಿ ನಡೆಸಿದ್ದ ರಾಹುಲ್ ಗಾಂಧಿ

ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಮಾತನಾಡಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಒಕ್ಕೂಟ ಸರ್ಕಾರದ ವಿದೇಶಾಂಗ ನೀತಿಯನ್ನು ಕಟುವಾಗಿ ಟೀಕಿಸಿದ್ದರು. “ಚೀನಾ ಮತ್ತು ಪಾಕಿಸ್ತಾನದ ನಡುವೆ ಆಪ್ತ ಸ್ನೇಹ ಬೆಳೆಯಲು ಕೇಂದ್ರ ಸರ್ಕಾರದ ನೀತಿಗಳು ಕಾರಣ” ಎಂದು ಆರೋಪಿಸಿದ್ದರು.

“ದೇಶವು ಎಲ್ಲಾ ಕಡೆಗಳಲ್ಲಿ ಶತ್ರುಗಳಿಂದ ಸುತ್ತುವರಿದಿದೆ. ರಾಷ್ಟ್ರವು ಹೊರಗಿನಿಂದ ಮತ್ತು ಒಳಗಿನಿಂದ ಅಪಾಯದಲ್ಲಿದೆ. ಇಂತಹ ಪರಿಸ್ಥಿತಿ ಕಂಡು ಚಿಂತೆಯಾಗುತ್ತಿದೆ. ಚೀನಾ ಮತ್ತು ಪಾಕಿಸ್ತಾನವನ್ನು ಪ್ರತ್ಯೇಕವಾಗಿ ಇಡುವುದು ಭಾರತದ ಕಾರ್ಯತಂತ್ರದ ಗುರಿಯಾಗಬೇಕಿತ್ತು. ಆದರೆ ನೀವು ಆ ಎರಡೂ ರಾಷ್ಟ್ರಗಳನ್ನು ಜೊತೆಗೂಡಿಸಿದ್ದೀರಿ. ನಾವು ಎದುರಿಸುತ್ತಿರುವ ಈ ಸಮಸ್ಯೆಯನ್ನು ಕೀಳಂದಾಜು ಮಾಡಬೇಡಿ. ಇದು ಭಾರತಕ್ಕೆ ಗಂಭೀರ ಬೆದರಿಕೆ” ಎಂದು ಅವರು ಹೇಳಿದ್ದರು.

ಪಾಕಿಸ್ತಾನ ಮತ್ತು ಚೀನಾ ನಡುವಿನ ದ್ವಿಪಕ್ಷೀಯ ಸಂಬಂಧಗಳು, ವಿಶೇಷವಾಗಿ 2015ರಲ್ಲಿ ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ಪ್ರಾರಂಭಿಸಿದ ನಂತರ ಬಲಗೊಂಡಿವೆ. ಈ ಸಂಬಂಧವು ಆರ್ಥಿಕ ಪಾಲುದಾರಿಕೆಯನ್ನು ಮೀರಿ, ಶಸ್ತ್ರಾಸ್ತ್ರ ಒಪ್ಪಂದಗಳು, ಜಂಟಿ ಕಾರ್ಯನಿರ್ವಹಣೆ ಮತ್ತು ರಕ್ಷಣಾ ಒಪ್ಪಂದಗಳನ್ನು ಒಳಗೊಂಡಿರುವ ಮಿಲಿಟರಿ ಸಹಕಾರವನ್ನು ಹೆಚ್ಚಿಸುತ್ತದೆ. ಕಳೆದ ವರ್ಷ ಚೀನಾದ ನೆರವಿನೊಂದಿಗೆ ಪಾಕಿಸ್ತಾನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರವನ್ನು ಕರಾಚಿಯಲ್ಲಿ ನಿರ್ಮಿಸಿದೆ. ಉಭಯ ದೇಶಗಳು ಮುಕ್ತ ವ್ಯಾಪಾರ ಒಪ್ಪಂದವನ್ನು ಹೊಂದಿವೆ. ಇವು ಭಾರತಕ್ಕೆ ದೊಡ್ಡ ಸವಾಲನ್ನು ಒಡ್ಡಿವೆ ಎಂದು ರಾಹುಲ್ ಗಾಂಧಿ ಆತಂಕ ವ್ಯಕ್ತಪಡಿಸಿದ್ದರು.


ಇದನ್ನೂ ಓದಿರಿ: ಚೀನಾ ಅತಿಕ್ರಮಣ ಪ್ರಶ್ನಿಸಲು ಬೀಜಿಂಗ್‌ ಜನತಾ ಪಾರ್ಟಿಗೆ ಹಿಂಜರಿಕೆ: ಬಿಜೆಪಿ ವಿರುದ್ಧ ಖರ್ಗೆ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...