Homeಮುಖಪುಟಮತ್ತೆ 54 ಚೀನಿ ಅಪ್ಲಿಕೇಶನ್‌ಗಳನ್ನು ನಿಷೇಧಿಸಿದ ಭಾರತ

ಮತ್ತೆ 54 ಚೀನಿ ಅಪ್ಲಿಕೇಶನ್‌ಗಳನ್ನು ನಿಷೇಧಿಸಿದ ಭಾರತ

- Advertisement -
- Advertisement -

ದೇಶದ ಭದ್ರತೆಯ ಕಾರಣ ನೀಡಿ 54 ಚೀನಿ ಅಪ್ಲಿಕೇಶನ್‌ಗಳನ್ನು ನಿಷೇಧಿಸಿರುವುದಾಗಿ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಇಂದು ತಿಳಿಸಿದೆ.

ಕಳೆದ ವರ್ಷ ಜೂನ್‌ನಲ್ಲಿ, ರಾಷ್ಟ್ರದ ಸಾರ್ವಭೌಮತ್ವ ಮತ್ತು ಭದ್ರತೆಗೆ ಬೆದರಿಕೆಯನ್ನು ಉಲ್ಲೇಖಿಸಿ ಭಾರತವು ಟಿಕ್‌ಟಾಕ್‌, ವಿಚಾಟ್ ಮತ್ತು ಹೆಲೋನಂತಹ ವ್ಯಾಪಕವಾಗಿ ಬಳಸಲಾಗುವ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳು, ಪಬ್ಜಿಯಂತಹ ಜನಪ್ರಿಯ ಗೇಮಿಂಗ್ ಅಪ್ಲಿಕೇಶನ್‌ಗಳು ಸೇರಿದಂತೆ 59 ಚೀನೀ ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿಷೇಧಿಸಿತ್ತು. ಪ್ರಸ್ತುತ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69ಎ ಅಡಿಯಲ್ಲಿ ಅಪ್ಲಿಕೇಶನ್‌ಗಳನ್ನು ನಿಷೇಧಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಬ್ಯೂಟಿ ಕ್ಯಾಮೆರಾ, ಸ್ವೀಟ್ ಸೆಲ್ಫಿ ಎಚ್ಡಿ, ಬ್ಯೂಟಿ ಕ್ಯಾಮೆರಾ – ಸೆಲ್ಫಿ ಕ್ಯಾಮೆರಾ, ಈಕ್ವಲೈಜರ್ ಮತ್ತು ಬಾಸ್ ಬೂಸ್ಟರ್, ಕ್ಯಾಮ್ಕಾರ್ಡ್ ಫಾರ್ ಸೇಲ್ಸ್ಫೋರ್ಸ್ ಎಂಟ್, ಐಸೊಲ್ಯಾಂಡ್ 2: ಆಶಸ್ ಆಫ್ ಟೈಮ್ ಲೈಟ್, ವಿವಸೆಂಟ್ ವಿಡಿಯೋ ಎಡಿಟರ್, ಟೆನ್ವಾ ಎಕ್ಸ್ರಿವರ್, ಟೆನ್ವಾ ಎಕ್ಸ್ರಿವರ್, ಒನ್ಮೆಯಾಜಿ ಚೆಸ್, ಒನ್ಮೆಯಾಜಿ ಅರೆನಾ, ಆಪ್ ಲಾಕ್ ಮತ್ತು ಡ್ಯುಯಲ್ ಸ್ಪೇಸ್ ಲೈಟ್ ಸೇರಿದಂತೆ 54 ಚೀನಿ ಆಪ್‌ಗಳನ್ನು ನಿಷೇಧಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ತಿಳಿಸಿದೆ.

ಚೀನಾದೊಂದಿಗೆ ಗಡಿ ವಿವಾದ ಉದ್ವಿಗ್ನಗೊಂಡ ನಂತರ ಭಾರತವು ಕಳೆದ ಒಂದು ವರ್ಷದಿಂದ ಸುಮಾರು 300 ಅಪ್ಲಿಕೇಶನ್‌ಗಳನ್ನು ನಿರ್ಬಂಧಿಸಿದೆ. ಪೂರ್ವ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಚೀನಾದ ಸೈನಿಕರೊಂದಿಗಿನ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ ನಂತರ ಜೂನ್ 2020ರಲ್ಲಿ ಮೊದಲ ಸುತ್ತಿನ ನಿಷೇಧವನ್ನು ಘೋಷಿಸಲಾಯಿತು.

ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ವಕ್ತಾರರು ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿಲ್ಲ ಎಂದು ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಇದನ್ನೂ ಓದಿರಿ: ಭಾರತದ 15 ಸ್ಥಳಗಳಿಗೆ ಚೀನಾ ಮರುನಾಮಕರಣ; ಮೋದಿ ಮೌನ: ಖರ್ಗೆ

ಸಂಸತ್ತಿನಲ್ಲಿ ವಾಗ್ದಾಳಿ ನಡೆಸಿದ್ದ ರಾಹುಲ್ ಗಾಂಧಿ

ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಮಾತನಾಡಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಒಕ್ಕೂಟ ಸರ್ಕಾರದ ವಿದೇಶಾಂಗ ನೀತಿಯನ್ನು ಕಟುವಾಗಿ ಟೀಕಿಸಿದ್ದರು. “ಚೀನಾ ಮತ್ತು ಪಾಕಿಸ್ತಾನದ ನಡುವೆ ಆಪ್ತ ಸ್ನೇಹ ಬೆಳೆಯಲು ಕೇಂದ್ರ ಸರ್ಕಾರದ ನೀತಿಗಳು ಕಾರಣ” ಎಂದು ಆರೋಪಿಸಿದ್ದರು.

“ದೇಶವು ಎಲ್ಲಾ ಕಡೆಗಳಲ್ಲಿ ಶತ್ರುಗಳಿಂದ ಸುತ್ತುವರಿದಿದೆ. ರಾಷ್ಟ್ರವು ಹೊರಗಿನಿಂದ ಮತ್ತು ಒಳಗಿನಿಂದ ಅಪಾಯದಲ್ಲಿದೆ. ಇಂತಹ ಪರಿಸ್ಥಿತಿ ಕಂಡು ಚಿಂತೆಯಾಗುತ್ತಿದೆ. ಚೀನಾ ಮತ್ತು ಪಾಕಿಸ್ತಾನವನ್ನು ಪ್ರತ್ಯೇಕವಾಗಿ ಇಡುವುದು ಭಾರತದ ಕಾರ್ಯತಂತ್ರದ ಗುರಿಯಾಗಬೇಕಿತ್ತು. ಆದರೆ ನೀವು ಆ ಎರಡೂ ರಾಷ್ಟ್ರಗಳನ್ನು ಜೊತೆಗೂಡಿಸಿದ್ದೀರಿ. ನಾವು ಎದುರಿಸುತ್ತಿರುವ ಈ ಸಮಸ್ಯೆಯನ್ನು ಕೀಳಂದಾಜು ಮಾಡಬೇಡಿ. ಇದು ಭಾರತಕ್ಕೆ ಗಂಭೀರ ಬೆದರಿಕೆ” ಎಂದು ಅವರು ಹೇಳಿದ್ದರು.

ಪಾಕಿಸ್ತಾನ ಮತ್ತು ಚೀನಾ ನಡುವಿನ ದ್ವಿಪಕ್ಷೀಯ ಸಂಬಂಧಗಳು, ವಿಶೇಷವಾಗಿ 2015ರಲ್ಲಿ ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ಪ್ರಾರಂಭಿಸಿದ ನಂತರ ಬಲಗೊಂಡಿವೆ. ಈ ಸಂಬಂಧವು ಆರ್ಥಿಕ ಪಾಲುದಾರಿಕೆಯನ್ನು ಮೀರಿ, ಶಸ್ತ್ರಾಸ್ತ್ರ ಒಪ್ಪಂದಗಳು, ಜಂಟಿ ಕಾರ್ಯನಿರ್ವಹಣೆ ಮತ್ತು ರಕ್ಷಣಾ ಒಪ್ಪಂದಗಳನ್ನು ಒಳಗೊಂಡಿರುವ ಮಿಲಿಟರಿ ಸಹಕಾರವನ್ನು ಹೆಚ್ಚಿಸುತ್ತದೆ. ಕಳೆದ ವರ್ಷ ಚೀನಾದ ನೆರವಿನೊಂದಿಗೆ ಪಾಕಿಸ್ತಾನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರವನ್ನು ಕರಾಚಿಯಲ್ಲಿ ನಿರ್ಮಿಸಿದೆ. ಉಭಯ ದೇಶಗಳು ಮುಕ್ತ ವ್ಯಾಪಾರ ಒಪ್ಪಂದವನ್ನು ಹೊಂದಿವೆ. ಇವು ಭಾರತಕ್ಕೆ ದೊಡ್ಡ ಸವಾಲನ್ನು ಒಡ್ಡಿವೆ ಎಂದು ರಾಹುಲ್ ಗಾಂಧಿ ಆತಂಕ ವ್ಯಕ್ತಪಡಿಸಿದ್ದರು.


ಇದನ್ನೂ ಓದಿರಿ: ಚೀನಾ ಅತಿಕ್ರಮಣ ಪ್ರಶ್ನಿಸಲು ಬೀಜಿಂಗ್‌ ಜನತಾ ಪಾರ್ಟಿಗೆ ಹಿಂಜರಿಕೆ: ಬಿಜೆಪಿ ವಿರುದ್ಧ ಖರ್ಗೆ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...