Homeಮುಖಪುಟಮತ್ತೆ 54 ಚೀನಿ ಅಪ್ಲಿಕೇಶನ್‌ಗಳನ್ನು ನಿಷೇಧಿಸಿದ ಭಾರತ

ಮತ್ತೆ 54 ಚೀನಿ ಅಪ್ಲಿಕೇಶನ್‌ಗಳನ್ನು ನಿಷೇಧಿಸಿದ ಭಾರತ

- Advertisement -
- Advertisement -

ದೇಶದ ಭದ್ರತೆಯ ಕಾರಣ ನೀಡಿ 54 ಚೀನಿ ಅಪ್ಲಿಕೇಶನ್‌ಗಳನ್ನು ನಿಷೇಧಿಸಿರುವುದಾಗಿ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಇಂದು ತಿಳಿಸಿದೆ.

ಕಳೆದ ವರ್ಷ ಜೂನ್‌ನಲ್ಲಿ, ರಾಷ್ಟ್ರದ ಸಾರ್ವಭೌಮತ್ವ ಮತ್ತು ಭದ್ರತೆಗೆ ಬೆದರಿಕೆಯನ್ನು ಉಲ್ಲೇಖಿಸಿ ಭಾರತವು ಟಿಕ್‌ಟಾಕ್‌, ವಿಚಾಟ್ ಮತ್ತು ಹೆಲೋನಂತಹ ವ್ಯಾಪಕವಾಗಿ ಬಳಸಲಾಗುವ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳು, ಪಬ್ಜಿಯಂತಹ ಜನಪ್ರಿಯ ಗೇಮಿಂಗ್ ಅಪ್ಲಿಕೇಶನ್‌ಗಳು ಸೇರಿದಂತೆ 59 ಚೀನೀ ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿಷೇಧಿಸಿತ್ತು. ಪ್ರಸ್ತುತ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69ಎ ಅಡಿಯಲ್ಲಿ ಅಪ್ಲಿಕೇಶನ್‌ಗಳನ್ನು ನಿಷೇಧಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಬ್ಯೂಟಿ ಕ್ಯಾಮೆರಾ, ಸ್ವೀಟ್ ಸೆಲ್ಫಿ ಎಚ್ಡಿ, ಬ್ಯೂಟಿ ಕ್ಯಾಮೆರಾ – ಸೆಲ್ಫಿ ಕ್ಯಾಮೆರಾ, ಈಕ್ವಲೈಜರ್ ಮತ್ತು ಬಾಸ್ ಬೂಸ್ಟರ್, ಕ್ಯಾಮ್ಕಾರ್ಡ್ ಫಾರ್ ಸೇಲ್ಸ್ಫೋರ್ಸ್ ಎಂಟ್, ಐಸೊಲ್ಯಾಂಡ್ 2: ಆಶಸ್ ಆಫ್ ಟೈಮ್ ಲೈಟ್, ವಿವಸೆಂಟ್ ವಿಡಿಯೋ ಎಡಿಟರ್, ಟೆನ್ವಾ ಎಕ್ಸ್ರಿವರ್, ಟೆನ್ವಾ ಎಕ್ಸ್ರಿವರ್, ಒನ್ಮೆಯಾಜಿ ಚೆಸ್, ಒನ್ಮೆಯಾಜಿ ಅರೆನಾ, ಆಪ್ ಲಾಕ್ ಮತ್ತು ಡ್ಯುಯಲ್ ಸ್ಪೇಸ್ ಲೈಟ್ ಸೇರಿದಂತೆ 54 ಚೀನಿ ಆಪ್‌ಗಳನ್ನು ನಿಷೇಧಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ತಿಳಿಸಿದೆ.

ಚೀನಾದೊಂದಿಗೆ ಗಡಿ ವಿವಾದ ಉದ್ವಿಗ್ನಗೊಂಡ ನಂತರ ಭಾರತವು ಕಳೆದ ಒಂದು ವರ್ಷದಿಂದ ಸುಮಾರು 300 ಅಪ್ಲಿಕೇಶನ್‌ಗಳನ್ನು ನಿರ್ಬಂಧಿಸಿದೆ. ಪೂರ್ವ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಚೀನಾದ ಸೈನಿಕರೊಂದಿಗಿನ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ ನಂತರ ಜೂನ್ 2020ರಲ್ಲಿ ಮೊದಲ ಸುತ್ತಿನ ನಿಷೇಧವನ್ನು ಘೋಷಿಸಲಾಯಿತು.

ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ವಕ್ತಾರರು ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿಲ್ಲ ಎಂದು ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಇದನ್ನೂ ಓದಿರಿ: ಭಾರತದ 15 ಸ್ಥಳಗಳಿಗೆ ಚೀನಾ ಮರುನಾಮಕರಣ; ಮೋದಿ ಮೌನ: ಖರ್ಗೆ

ಸಂಸತ್ತಿನಲ್ಲಿ ವಾಗ್ದಾಳಿ ನಡೆಸಿದ್ದ ರಾಹುಲ್ ಗಾಂಧಿ

ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಮಾತನಾಡಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಒಕ್ಕೂಟ ಸರ್ಕಾರದ ವಿದೇಶಾಂಗ ನೀತಿಯನ್ನು ಕಟುವಾಗಿ ಟೀಕಿಸಿದ್ದರು. “ಚೀನಾ ಮತ್ತು ಪಾಕಿಸ್ತಾನದ ನಡುವೆ ಆಪ್ತ ಸ್ನೇಹ ಬೆಳೆಯಲು ಕೇಂದ್ರ ಸರ್ಕಾರದ ನೀತಿಗಳು ಕಾರಣ” ಎಂದು ಆರೋಪಿಸಿದ್ದರು.

“ದೇಶವು ಎಲ್ಲಾ ಕಡೆಗಳಲ್ಲಿ ಶತ್ರುಗಳಿಂದ ಸುತ್ತುವರಿದಿದೆ. ರಾಷ್ಟ್ರವು ಹೊರಗಿನಿಂದ ಮತ್ತು ಒಳಗಿನಿಂದ ಅಪಾಯದಲ್ಲಿದೆ. ಇಂತಹ ಪರಿಸ್ಥಿತಿ ಕಂಡು ಚಿಂತೆಯಾಗುತ್ತಿದೆ. ಚೀನಾ ಮತ್ತು ಪಾಕಿಸ್ತಾನವನ್ನು ಪ್ರತ್ಯೇಕವಾಗಿ ಇಡುವುದು ಭಾರತದ ಕಾರ್ಯತಂತ್ರದ ಗುರಿಯಾಗಬೇಕಿತ್ತು. ಆದರೆ ನೀವು ಆ ಎರಡೂ ರಾಷ್ಟ್ರಗಳನ್ನು ಜೊತೆಗೂಡಿಸಿದ್ದೀರಿ. ನಾವು ಎದುರಿಸುತ್ತಿರುವ ಈ ಸಮಸ್ಯೆಯನ್ನು ಕೀಳಂದಾಜು ಮಾಡಬೇಡಿ. ಇದು ಭಾರತಕ್ಕೆ ಗಂಭೀರ ಬೆದರಿಕೆ” ಎಂದು ಅವರು ಹೇಳಿದ್ದರು.

ಪಾಕಿಸ್ತಾನ ಮತ್ತು ಚೀನಾ ನಡುವಿನ ದ್ವಿಪಕ್ಷೀಯ ಸಂಬಂಧಗಳು, ವಿಶೇಷವಾಗಿ 2015ರಲ್ಲಿ ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ಪ್ರಾರಂಭಿಸಿದ ನಂತರ ಬಲಗೊಂಡಿವೆ. ಈ ಸಂಬಂಧವು ಆರ್ಥಿಕ ಪಾಲುದಾರಿಕೆಯನ್ನು ಮೀರಿ, ಶಸ್ತ್ರಾಸ್ತ್ರ ಒಪ್ಪಂದಗಳು, ಜಂಟಿ ಕಾರ್ಯನಿರ್ವಹಣೆ ಮತ್ತು ರಕ್ಷಣಾ ಒಪ್ಪಂದಗಳನ್ನು ಒಳಗೊಂಡಿರುವ ಮಿಲಿಟರಿ ಸಹಕಾರವನ್ನು ಹೆಚ್ಚಿಸುತ್ತದೆ. ಕಳೆದ ವರ್ಷ ಚೀನಾದ ನೆರವಿನೊಂದಿಗೆ ಪಾಕಿಸ್ತಾನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರವನ್ನು ಕರಾಚಿಯಲ್ಲಿ ನಿರ್ಮಿಸಿದೆ. ಉಭಯ ದೇಶಗಳು ಮುಕ್ತ ವ್ಯಾಪಾರ ಒಪ್ಪಂದವನ್ನು ಹೊಂದಿವೆ. ಇವು ಭಾರತಕ್ಕೆ ದೊಡ್ಡ ಸವಾಲನ್ನು ಒಡ್ಡಿವೆ ಎಂದು ರಾಹುಲ್ ಗಾಂಧಿ ಆತಂಕ ವ್ಯಕ್ತಪಡಿಸಿದ್ದರು.


ಇದನ್ನೂ ಓದಿರಿ: ಚೀನಾ ಅತಿಕ್ರಮಣ ಪ್ರಶ್ನಿಸಲು ಬೀಜಿಂಗ್‌ ಜನತಾ ಪಾರ್ಟಿಗೆ ಹಿಂಜರಿಕೆ: ಬಿಜೆಪಿ ವಿರುದ್ಧ ಖರ್ಗೆ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...