Homeಅಂತರಾಷ್ಟ್ರೀಯಗಡಿ ವಿವಾದ; ಭಾರತ ಅತಿಕ್ರಮಿಸಿರುವ ಪ್ರದೇಶವನ್ನು ಹಿಂತಿರುಗಿಸಬೇಕು: ನೇಪಾಳ ಪ್ರಧಾನಿ

ಗಡಿ ವಿವಾದ; ಭಾರತ ಅತಿಕ್ರಮಿಸಿರುವ ಪ್ರದೇಶವನ್ನು ಹಿಂತಿರುಗಿಸಬೇಕು: ನೇಪಾಳ ಪ್ರಧಾನಿ

- Advertisement -
- Advertisement -

1962 ರಿಂದ ಭಾರತವು ನೇಪಾಳದ ಭೂಪ್ರದೇಶವನ್ನು ‘ಅತಿಕ್ರಮಿಸಿದೆ’ ಎಂದು ಹೇಳಿರುವ ನೇಪಾಳ ಪ್ರಧಾನಿ ಕೆ.ಪಿ.ಶರ್ಮ ಒಲಿ ’ಅದನ್ನು ನಮಗೆ ಹಿಂದಿರುಗಿಸಬೇಕು’ ಎಂದು ಭಾರತವನ್ನು ಒತ್ತಾಯಿಸಿದ್ದಾರೆ.

ಬುಧವಾರ ನೇಪಾಳದ ಸಂಸತ್ತನ್ನುದ್ದೇಶಿಸಿ ಮಾತನಾಡಿದ ನೇಪಾಳದ ಪ್ರಧಾನಿ ವಿವಾದಿತ ಕಾಲಾಪಾನಿ ಪ್ರದೇಶವನ್ನು ಉಲ್ಲೇಖಿಸಿ, “1962 ರಿಂದ ಭಾರತ ಅಲ್ಲಿ ಸೈನ್ಯವನ್ನು ನಿಯೋಜಿಸುವ ಮೂಲಕ ನೇಪಾಳಿ ಪ್ರದೇಶವನ್ನು ಅತಿಕ್ರಮಿಸಿದೆ, ನಮ್ಮ ಪ್ರದೇಶವನ್ನು ಹಿಂದಿರುಗಿಸಬೇಕು” ಎಂದು ಹೇಳಿದ್ದಾರೆ.

ನೇಪಾಳ ಐತಿಹಾಸಿಕ ಸಂಗತಿಗಳು ಹಾಗೂ ಸಾಕ್ಷ್ಯಾಧಾರಗಳ ಮೇಲೆ ರಾಜತಾಂತ್ರಿಕ ಮಾತುಕತೆಗಳ ಮೂಲಕ ಗಡಿ ವಿವಾದವನ್ನು ಇತ್ಯರ್ಥಗೊಳಿಸಲು ಇನ್ನೂ ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದ್ದಾರೆ.

“ನಮ್ಮ ಭೂಪ್ರದೇಶವನ್ನು ಹಿಂತಿರುಗಿಸಬೇಕು” ಎಂದಿರುವ ಒಲಿ ಸಂಸತ್ತಿನ ಕೆಳಮನೆಯ ಪ್ರತಿನಿಧಿಗಳ ಸದನದಲ್ಲಿ ತಮ್ಮ ಸರ್ಕಾರ ಮಸೂದೆಯನ್ನು ಮಂಡಿಸಿದ ಒಂದು ದಿನದ ನಂತರ ನೇಪಾಳದ ಸಂವಿಧಾನವನ್ನು ತಿದ್ದುಪಡಿ ಮಾಡಿ ವಿವಾದಿತ ಪ್ರದೇಶಗಳಾದ ಲಿಂಪಿಯಾಧುರಾ, ಲಿಪುಲೆಖ್ ಮತ್ತು ಕಲಾಪಾನಿಯನ್ನು ತನ್ನ ಅಧಿಕೃತ ನಕ್ಷೆಯಲ್ಲಿ ಸೇರಿಸಲು ನಿರ್ಣಯವಾಗಿತ್ತು ಎಂದಿದ್ದಾರೆ.

ವಿವಾದಿತ ಪ್ರದೇಶದ ಮೇಲೆ ತನ್ನ ಹಕ್ಕನ್ನು ಪ್ರತಿಪಾದಿಸಲು ಭಾರತ  ಕಾಳಿ ನದಿಯನ್ನು “ಕೃತಕವಾಗಿ ನಿರ್ಮಿಸಿದೆ” ಮತ್ತು ಅದು ಈಗ ಎರಡು ದೇಶಗಳ ಗಡಿಯಂತೆ ಇದೆ ಎಂದು ಒಲಿ ಹೇಳಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರ ಹೇಳಿಕೆಯನ್ನು ಪ್ರಶ್ನಿಸಿರುವ ಒಲಿ, “ಆದಿತ್ಯನಾಥ್ ನೇಪಾಳದ ಬಗ್ಗೆ ಕೆಲವು ವಿಷಯಗಳನ್ನು ಹೇಳಿದ್ದಾರೆ. ಅವರ ಅಭಿಪ್ರಾಯಗಳು ಸೂಕ್ತವಲ್ಲ ಮತ್ತು ನ್ಯಾಯಸಮ್ಮತವಲ್ಲ. ತನಗೆ ಅರ್ಥವಾಗದ ವಿಷಯಗಳ ಬಗ್ಗೆ ಪ್ರತಿಕ್ರಿಯಿಸದಂತೆ ಭಾರತದ ನಾಯಕರು ಯಾರಾದರೂ ಅವರಿಗೆ ತಿಳಿಸಿ ಹೇಳಬೇಕು” ಎಂದು ಹೇಳಿದ್ದಾರೆ.

ಟಿಬೆಟ್ ಮಾಡಿದ ತಪ್ಪನ್ನು ನೇಪಾಳ ಮಾಡಬಾರದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಹೇಳಿದ್ದರು ಎಂಬ ವರದಿಗೆ ನೇಪಾಳಿ ಪ್ರಧಾನಿ ಪ್ರತಿಕ್ರಿಯಿಸಿದ್ದಾರೆ.


ಓದಿ: ಚೀನಾ ಇಟಲಿಗಿಂತ ಭಾರತೀಯ ವೈರಸ್ ಹೆಚ್ಚು ಅಪಾಯಕಾರಿ: ನೇಪಾಳ ಪ್ರಧಾನಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...