Homeಕರ್ನಾಟಕಕಾಂಗ್ರೆಸ್ ಕಮ್ಯೂನಿಸ್ಟರು ದೇಶದ್ರೋಹಿಗಳು : ಸೊಗಡು ಶಿವಣ್ಣ

ಕಾಂಗ್ರೆಸ್ ಕಮ್ಯೂನಿಸ್ಟರು ದೇಶದ್ರೋಹಿಗಳು : ಸೊಗಡು ಶಿವಣ್ಣ

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ನಿರಾಶ್ರಿತರಾಗಿರುವ ಜನರಿಗೆ ಅನುಕೂಲ ಮಾಡಿಕೊಡುತ್ತದೆ. ಆದರೆ ಕಾಂಗ್ರೆಸ್ ಮುಖಂಡರು, ಕಮ್ಯೂನಿಸ್ಟರು ಮತ್ತು ಎಸ್.ಡಿ.ಪಿ.ಐ ನವರ ಸಿಎಎ ಕಾಯ್ದೆಯನ್ನು ವಿರೋಧಿಸುತ್ತಾ ದೇಶದ್ರೋಹಿಗಳಾಗಿದ್ದಾರೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆರೋಪಿಸಿದರು.

ತುಮಕೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮದು ಅಖಂಡ ಭಾರತ. ಇಲ್ಲಿ ಮುಸ್ಲಿಮರು ಇರಲಿಲ್ಲ. ಘೋರಿ, ಘಜ್ನಿಯಂತಹ ರಾಜರು ಈ ದೇಶ ಆಳ್ವಿಕೆ ಮಾಡಿ ಹಿಂದೂಗಳನ್ನು ಮುಸ್ಲಿಮರನ್ನಾಗಿ ಮತಾಂತರ ಮಾಡಿದ್ದಾರೆ. ಮುಸ್ಲಮಾನ ಬಂಧುಗಳು ಕಾಂಗ್ರೆಸ್, ಕಮ್ಯೂನಿಸ್ಟ್ ಮತ್ತು ಎಸ್.ಡಿ.ಪಿ.ಐ ಹಿಂದೆ ಹೋಗಬಾರದು. ಅವರು ಅಪಾಯಕಾರಿಗಳು ಎಂಬುದನ್ನು ತಿಳಿಯಬೇಕು ಎಂದು ತಿಳಿಸಿದ್ದಾರೆ.

ಈ ದೇಶದಲ್ಲಿ ಇಟಲಿಯ ಸೋನಿಯಾ ಗಾಂಧಿ ಅವರಿಗೆ ಭಾರತದ ಪೌರತ್ವದ ನೀಡಲಾಗಿದೆ. ಬಾಂಗ್ಲಾದೇಶದ ಲೇಖಕಿ ತಸ್ಲಿಮಾ ನಸ್ರೀನ್ ಅವರಿಗೆ ಪಶ್ಚಿಮ ಬಂಗಾಳದಲ್ಲಿ ಆಶ್ರಯ ನೀಡಲಾಗಿದೆ. ಆದರೆ ಸೋನಿಯಾ ಗಾಂಧಿ, ಮಮತಾ ಬ್ಯಾನರ್ಜಿ ಮತ್ತು ಸಿದ್ದರಾಮಯ್ಯ ಅವರಿಗೆ ಮಾನಮರ್ಯಾದೆ ಇದ್ದರೆ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಬಾರದು. ಪ್ರತಿಭಟನೆಗೆ ಕುಮ್ಮಕ್ಕು ನೀಡಬಾರದು ಎಂದು ತಾಕೀತು ಮಾಡಿದರು.

ಸ್ವಾತಂತ್ರ್ಯ ಬಂದು 72 ವರ್ಷ ಸಂದಿದೆ. ಕಾಂಗ್ರೆಸ ಪಕ್ಷದವರೇ ಪೌರತ್ವ ಕಾಯ್ದೆಯನ್ನು ಮಾಡಿದ್ದು. ಆದರೆ ಅದನ್ನು ಜಾರಿಗೆ ತರಲು ಕಾಂಗ್ರೆಸ್‌ನವರಿಗೆ ಸಾಮರ್ಥ್ಯವಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಈ ಕಾಯ್ದೆಯನ್ನು ಜಾರಿಗೊಳಿಸಿದ್ದಾರೆ. ಅದು ಅವರ ತಾಕತ್ತು. ಕಾಂಗ್ರೆಸ್ ಮುಸ್ಲಿಮರನ್ನು ಮುಂದು ಮಾಡಿಕೊಂಡು ಪ್ರತಿಭಟನೆ ಮಾಡುತ್ತಿದೆ. ಕಮ್ಯುನಿಸ್ಟರು ದೇಶದ್ರೋಹಿಗಳು ಎಂದು ವಾಗ್ದಾಳಿ ನಡೆಸಿದರು.

ಅಖಂಡ ಭಾರತದ ಪರಿಕಲ್ಪನೆ ನಮ್ಮದು. ಇಲ್ಲಿ ಹಿಂದೂಗಳನ್ನು ಬಿಟ್ಟರೆ ಬೇರೆ ಯಾರೂ ಇರಲಿಲ್ಲ. ಅದೇ ಕಾರಣಕ್ಕೆ ಅಖಂಡ ಭಾರತದಲ್ಲಿ ನಿರಾಶ್ರಿತರಾಗಿರುವ ಭಾರತೀಯರನ್ನು ರಕ್ಷಿಸಲು ಈ ಕಾಯ್ದೆ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ. ಇದಕ್ಕೆ ಏಕೆ ವಿರೋಧ ಮಾಡುತ್ತಾರೆ. ವಿರೋಧಿಸುವವರೆಲ್ಲರೂ ದೇಶದ್ರೋಹಿಗಳು. ಈ ದೇಶದ ಮುಸ್ಲಿಮರಿಗೆ ಏನೂ ಆಗುವುದಿಲ್ಲ. ಯಾರು ಹೊರದೇಶಗಳಿಂದ ಬಂದಿರುತ್ತಾರೋ ಅವರಿಗೆ ಮಾತ್ರ ಪೌರತ್ವ ಕಾಯ್ದೆ ಅನ್ವಯವಾಗುತ್ತದೆ ಎಂದು ತಿಳಿಸಿದರು.

ತುಮಕೂರು ನಗರದಲ್ಲಿ ಟರ್ಕಿ ದೇಶದ ಕುಟುಂಬವೊಂದು ನೆಲೆಸಿದೆ. ಈ ಬಗ್ಗೆ ನನಗೆ ಮಾಹಿತಿ ಇದೆ. ಅದು ಎಲ್ಲಿ ವಾಸವಾಗಿದೆ ಎಂಬುದನ್ನು ಹುಡುಕಿಸುತ್ತಿದ್ದೇನೆ. ವಿದೇಶಿಗರು ತುಮಕೂರಿನಲ್ಲೂ ವಾಸವಾಗಿದ್ದಾರೆ. ಇದನ್ನು ತಪ್ಪಿಸುವ ಸಲುವಾಗಿ ಕಾಯ್ದೆ ತಂದಿದ್ದೇವೆ. ಇದೇ ವೇಳೆ ಮಾಜಿ ಶಾಸಕರು ಮುಸ್ಲಿಮರನ್ನು ಸೇರಿಸಿಕೊಂಡು ಸಭೆ ನಡೆಸಿದ್ದಾರೆ. ಹೀಗೆ ಸಭೆ ನಡೆಸುವುದು ಅಪಾಯಕಾರಿ. ಕಾಂಗ್ರೆಸ್ ನವರು ಸಭೆ ಮಾಡಬಾರದು ಎಂದು ತಮ್ಮದೇ ವಾದಸರಣಿಯನ್ನು ಮಾಧ್ಯಮದವರ ಮುಂದಿಟ್ಟರು.

ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಸೊಗಡು ಶಿವಣ್ಣ ಸಮರ್ಪಕ ಉತ್ತರ ನೀಡಲಿಲ್ಲ. ಶ್ರೀಲಂಕಾಕ್ಕೂ ನಮಗೂ ಏನು ಸಂಬಂಧ ಎಂದ ಅವರು? ಕಾಂಗ್ರೆಸ್ ನವರು, ಕಮ್ಯುನಿಸ್ಟರು, ಎಸ್ಎಫ್ಐ, ಎಸ್.ಡಿ.ಪಿಐನವರು ದೇಶದ್ರೋಹಿಗಳು ಎಂದು ಪುನರುಚ್ಛರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....