Homeಕರ್ನಾಟಕಕಾಂಗ್ರೆಸ್ ಕಮ್ಯೂನಿಸ್ಟರು ದೇಶದ್ರೋಹಿಗಳು : ಸೊಗಡು ಶಿವಣ್ಣ

ಕಾಂಗ್ರೆಸ್ ಕಮ್ಯೂನಿಸ್ಟರು ದೇಶದ್ರೋಹಿಗಳು : ಸೊಗಡು ಶಿವಣ್ಣ

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ನಿರಾಶ್ರಿತರಾಗಿರುವ ಜನರಿಗೆ ಅನುಕೂಲ ಮಾಡಿಕೊಡುತ್ತದೆ. ಆದರೆ ಕಾಂಗ್ರೆಸ್ ಮುಖಂಡರು, ಕಮ್ಯೂನಿಸ್ಟರು ಮತ್ತು ಎಸ್.ಡಿ.ಪಿ.ಐ ನವರ ಸಿಎಎ ಕಾಯ್ದೆಯನ್ನು ವಿರೋಧಿಸುತ್ತಾ ದೇಶದ್ರೋಹಿಗಳಾಗಿದ್ದಾರೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆರೋಪಿಸಿದರು.

ತುಮಕೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮದು ಅಖಂಡ ಭಾರತ. ಇಲ್ಲಿ ಮುಸ್ಲಿಮರು ಇರಲಿಲ್ಲ. ಘೋರಿ, ಘಜ್ನಿಯಂತಹ ರಾಜರು ಈ ದೇಶ ಆಳ್ವಿಕೆ ಮಾಡಿ ಹಿಂದೂಗಳನ್ನು ಮುಸ್ಲಿಮರನ್ನಾಗಿ ಮತಾಂತರ ಮಾಡಿದ್ದಾರೆ. ಮುಸ್ಲಮಾನ ಬಂಧುಗಳು ಕಾಂಗ್ರೆಸ್, ಕಮ್ಯೂನಿಸ್ಟ್ ಮತ್ತು ಎಸ್.ಡಿ.ಪಿ.ಐ ಹಿಂದೆ ಹೋಗಬಾರದು. ಅವರು ಅಪಾಯಕಾರಿಗಳು ಎಂಬುದನ್ನು ತಿಳಿಯಬೇಕು ಎಂದು ತಿಳಿಸಿದ್ದಾರೆ.

ಈ ದೇಶದಲ್ಲಿ ಇಟಲಿಯ ಸೋನಿಯಾ ಗಾಂಧಿ ಅವರಿಗೆ ಭಾರತದ ಪೌರತ್ವದ ನೀಡಲಾಗಿದೆ. ಬಾಂಗ್ಲಾದೇಶದ ಲೇಖಕಿ ತಸ್ಲಿಮಾ ನಸ್ರೀನ್ ಅವರಿಗೆ ಪಶ್ಚಿಮ ಬಂಗಾಳದಲ್ಲಿ ಆಶ್ರಯ ನೀಡಲಾಗಿದೆ. ಆದರೆ ಸೋನಿಯಾ ಗಾಂಧಿ, ಮಮತಾ ಬ್ಯಾನರ್ಜಿ ಮತ್ತು ಸಿದ್ದರಾಮಯ್ಯ ಅವರಿಗೆ ಮಾನಮರ್ಯಾದೆ ಇದ್ದರೆ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಬಾರದು. ಪ್ರತಿಭಟನೆಗೆ ಕುಮ್ಮಕ್ಕು ನೀಡಬಾರದು ಎಂದು ತಾಕೀತು ಮಾಡಿದರು.

ಸ್ವಾತಂತ್ರ್ಯ ಬಂದು 72 ವರ್ಷ ಸಂದಿದೆ. ಕಾಂಗ್ರೆಸ ಪಕ್ಷದವರೇ ಪೌರತ್ವ ಕಾಯ್ದೆಯನ್ನು ಮಾಡಿದ್ದು. ಆದರೆ ಅದನ್ನು ಜಾರಿಗೆ ತರಲು ಕಾಂಗ್ರೆಸ್‌ನವರಿಗೆ ಸಾಮರ್ಥ್ಯವಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಈ ಕಾಯ್ದೆಯನ್ನು ಜಾರಿಗೊಳಿಸಿದ್ದಾರೆ. ಅದು ಅವರ ತಾಕತ್ತು. ಕಾಂಗ್ರೆಸ್ ಮುಸ್ಲಿಮರನ್ನು ಮುಂದು ಮಾಡಿಕೊಂಡು ಪ್ರತಿಭಟನೆ ಮಾಡುತ್ತಿದೆ. ಕಮ್ಯುನಿಸ್ಟರು ದೇಶದ್ರೋಹಿಗಳು ಎಂದು ವಾಗ್ದಾಳಿ ನಡೆಸಿದರು.

ಅಖಂಡ ಭಾರತದ ಪರಿಕಲ್ಪನೆ ನಮ್ಮದು. ಇಲ್ಲಿ ಹಿಂದೂಗಳನ್ನು ಬಿಟ್ಟರೆ ಬೇರೆ ಯಾರೂ ಇರಲಿಲ್ಲ. ಅದೇ ಕಾರಣಕ್ಕೆ ಅಖಂಡ ಭಾರತದಲ್ಲಿ ನಿರಾಶ್ರಿತರಾಗಿರುವ ಭಾರತೀಯರನ್ನು ರಕ್ಷಿಸಲು ಈ ಕಾಯ್ದೆ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ. ಇದಕ್ಕೆ ಏಕೆ ವಿರೋಧ ಮಾಡುತ್ತಾರೆ. ವಿರೋಧಿಸುವವರೆಲ್ಲರೂ ದೇಶದ್ರೋಹಿಗಳು. ಈ ದೇಶದ ಮುಸ್ಲಿಮರಿಗೆ ಏನೂ ಆಗುವುದಿಲ್ಲ. ಯಾರು ಹೊರದೇಶಗಳಿಂದ ಬಂದಿರುತ್ತಾರೋ ಅವರಿಗೆ ಮಾತ್ರ ಪೌರತ್ವ ಕಾಯ್ದೆ ಅನ್ವಯವಾಗುತ್ತದೆ ಎಂದು ತಿಳಿಸಿದರು.

ತುಮಕೂರು ನಗರದಲ್ಲಿ ಟರ್ಕಿ ದೇಶದ ಕುಟುಂಬವೊಂದು ನೆಲೆಸಿದೆ. ಈ ಬಗ್ಗೆ ನನಗೆ ಮಾಹಿತಿ ಇದೆ. ಅದು ಎಲ್ಲಿ ವಾಸವಾಗಿದೆ ಎಂಬುದನ್ನು ಹುಡುಕಿಸುತ್ತಿದ್ದೇನೆ. ವಿದೇಶಿಗರು ತುಮಕೂರಿನಲ್ಲೂ ವಾಸವಾಗಿದ್ದಾರೆ. ಇದನ್ನು ತಪ್ಪಿಸುವ ಸಲುವಾಗಿ ಕಾಯ್ದೆ ತಂದಿದ್ದೇವೆ. ಇದೇ ವೇಳೆ ಮಾಜಿ ಶಾಸಕರು ಮುಸ್ಲಿಮರನ್ನು ಸೇರಿಸಿಕೊಂಡು ಸಭೆ ನಡೆಸಿದ್ದಾರೆ. ಹೀಗೆ ಸಭೆ ನಡೆಸುವುದು ಅಪಾಯಕಾರಿ. ಕಾಂಗ್ರೆಸ್ ನವರು ಸಭೆ ಮಾಡಬಾರದು ಎಂದು ತಮ್ಮದೇ ವಾದಸರಣಿಯನ್ನು ಮಾಧ್ಯಮದವರ ಮುಂದಿಟ್ಟರು.

ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಸೊಗಡು ಶಿವಣ್ಣ ಸಮರ್ಪಕ ಉತ್ತರ ನೀಡಲಿಲ್ಲ. ಶ್ರೀಲಂಕಾಕ್ಕೂ ನಮಗೂ ಏನು ಸಂಬಂಧ ಎಂದ ಅವರು? ಕಾಂಗ್ರೆಸ್ ನವರು, ಕಮ್ಯುನಿಸ್ಟರು, ಎಸ್ಎಫ್ಐ, ಎಸ್.ಡಿ.ಪಿಐನವರು ದೇಶದ್ರೋಹಿಗಳು ಎಂದು ಪುನರುಚ್ಛರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....