Homeಕರ್ನಾಟಕಕಾಂಗ್ರೆಸ್ ಕಮ್ಯೂನಿಸ್ಟರು ದೇಶದ್ರೋಹಿಗಳು : ಸೊಗಡು ಶಿವಣ್ಣ

ಕಾಂಗ್ರೆಸ್ ಕಮ್ಯೂನಿಸ್ಟರು ದೇಶದ್ರೋಹಿಗಳು : ಸೊಗಡು ಶಿವಣ್ಣ

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ನಿರಾಶ್ರಿತರಾಗಿರುವ ಜನರಿಗೆ ಅನುಕೂಲ ಮಾಡಿಕೊಡುತ್ತದೆ. ಆದರೆ ಕಾಂಗ್ರೆಸ್ ಮುಖಂಡರು, ಕಮ್ಯೂನಿಸ್ಟರು ಮತ್ತು ಎಸ್.ಡಿ.ಪಿ.ಐ ನವರ ಸಿಎಎ ಕಾಯ್ದೆಯನ್ನು ವಿರೋಧಿಸುತ್ತಾ ದೇಶದ್ರೋಹಿಗಳಾಗಿದ್ದಾರೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆರೋಪಿಸಿದರು.

ತುಮಕೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮದು ಅಖಂಡ ಭಾರತ. ಇಲ್ಲಿ ಮುಸ್ಲಿಮರು ಇರಲಿಲ್ಲ. ಘೋರಿ, ಘಜ್ನಿಯಂತಹ ರಾಜರು ಈ ದೇಶ ಆಳ್ವಿಕೆ ಮಾಡಿ ಹಿಂದೂಗಳನ್ನು ಮುಸ್ಲಿಮರನ್ನಾಗಿ ಮತಾಂತರ ಮಾಡಿದ್ದಾರೆ. ಮುಸ್ಲಮಾನ ಬಂಧುಗಳು ಕಾಂಗ್ರೆಸ್, ಕಮ್ಯೂನಿಸ್ಟ್ ಮತ್ತು ಎಸ್.ಡಿ.ಪಿ.ಐ ಹಿಂದೆ ಹೋಗಬಾರದು. ಅವರು ಅಪಾಯಕಾರಿಗಳು ಎಂಬುದನ್ನು ತಿಳಿಯಬೇಕು ಎಂದು ತಿಳಿಸಿದ್ದಾರೆ.

ಈ ದೇಶದಲ್ಲಿ ಇಟಲಿಯ ಸೋನಿಯಾ ಗಾಂಧಿ ಅವರಿಗೆ ಭಾರತದ ಪೌರತ್ವದ ನೀಡಲಾಗಿದೆ. ಬಾಂಗ್ಲಾದೇಶದ ಲೇಖಕಿ ತಸ್ಲಿಮಾ ನಸ್ರೀನ್ ಅವರಿಗೆ ಪಶ್ಚಿಮ ಬಂಗಾಳದಲ್ಲಿ ಆಶ್ರಯ ನೀಡಲಾಗಿದೆ. ಆದರೆ ಸೋನಿಯಾ ಗಾಂಧಿ, ಮಮತಾ ಬ್ಯಾನರ್ಜಿ ಮತ್ತು ಸಿದ್ದರಾಮಯ್ಯ ಅವರಿಗೆ ಮಾನಮರ್ಯಾದೆ ಇದ್ದರೆ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಬಾರದು. ಪ್ರತಿಭಟನೆಗೆ ಕುಮ್ಮಕ್ಕು ನೀಡಬಾರದು ಎಂದು ತಾಕೀತು ಮಾಡಿದರು.

ಸ್ವಾತಂತ್ರ್ಯ ಬಂದು 72 ವರ್ಷ ಸಂದಿದೆ. ಕಾಂಗ್ರೆಸ ಪಕ್ಷದವರೇ ಪೌರತ್ವ ಕಾಯ್ದೆಯನ್ನು ಮಾಡಿದ್ದು. ಆದರೆ ಅದನ್ನು ಜಾರಿಗೆ ತರಲು ಕಾಂಗ್ರೆಸ್‌ನವರಿಗೆ ಸಾಮರ್ಥ್ಯವಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಈ ಕಾಯ್ದೆಯನ್ನು ಜಾರಿಗೊಳಿಸಿದ್ದಾರೆ. ಅದು ಅವರ ತಾಕತ್ತು. ಕಾಂಗ್ರೆಸ್ ಮುಸ್ಲಿಮರನ್ನು ಮುಂದು ಮಾಡಿಕೊಂಡು ಪ್ರತಿಭಟನೆ ಮಾಡುತ್ತಿದೆ. ಕಮ್ಯುನಿಸ್ಟರು ದೇಶದ್ರೋಹಿಗಳು ಎಂದು ವಾಗ್ದಾಳಿ ನಡೆಸಿದರು.

ಅಖಂಡ ಭಾರತದ ಪರಿಕಲ್ಪನೆ ನಮ್ಮದು. ಇಲ್ಲಿ ಹಿಂದೂಗಳನ್ನು ಬಿಟ್ಟರೆ ಬೇರೆ ಯಾರೂ ಇರಲಿಲ್ಲ. ಅದೇ ಕಾರಣಕ್ಕೆ ಅಖಂಡ ಭಾರತದಲ್ಲಿ ನಿರಾಶ್ರಿತರಾಗಿರುವ ಭಾರತೀಯರನ್ನು ರಕ್ಷಿಸಲು ಈ ಕಾಯ್ದೆ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ. ಇದಕ್ಕೆ ಏಕೆ ವಿರೋಧ ಮಾಡುತ್ತಾರೆ. ವಿರೋಧಿಸುವವರೆಲ್ಲರೂ ದೇಶದ್ರೋಹಿಗಳು. ಈ ದೇಶದ ಮುಸ್ಲಿಮರಿಗೆ ಏನೂ ಆಗುವುದಿಲ್ಲ. ಯಾರು ಹೊರದೇಶಗಳಿಂದ ಬಂದಿರುತ್ತಾರೋ ಅವರಿಗೆ ಮಾತ್ರ ಪೌರತ್ವ ಕಾಯ್ದೆ ಅನ್ವಯವಾಗುತ್ತದೆ ಎಂದು ತಿಳಿಸಿದರು.

ತುಮಕೂರು ನಗರದಲ್ಲಿ ಟರ್ಕಿ ದೇಶದ ಕುಟುಂಬವೊಂದು ನೆಲೆಸಿದೆ. ಈ ಬಗ್ಗೆ ನನಗೆ ಮಾಹಿತಿ ಇದೆ. ಅದು ಎಲ್ಲಿ ವಾಸವಾಗಿದೆ ಎಂಬುದನ್ನು ಹುಡುಕಿಸುತ್ತಿದ್ದೇನೆ. ವಿದೇಶಿಗರು ತುಮಕೂರಿನಲ್ಲೂ ವಾಸವಾಗಿದ್ದಾರೆ. ಇದನ್ನು ತಪ್ಪಿಸುವ ಸಲುವಾಗಿ ಕಾಯ್ದೆ ತಂದಿದ್ದೇವೆ. ಇದೇ ವೇಳೆ ಮಾಜಿ ಶಾಸಕರು ಮುಸ್ಲಿಮರನ್ನು ಸೇರಿಸಿಕೊಂಡು ಸಭೆ ನಡೆಸಿದ್ದಾರೆ. ಹೀಗೆ ಸಭೆ ನಡೆಸುವುದು ಅಪಾಯಕಾರಿ. ಕಾಂಗ್ರೆಸ್ ನವರು ಸಭೆ ಮಾಡಬಾರದು ಎಂದು ತಮ್ಮದೇ ವಾದಸರಣಿಯನ್ನು ಮಾಧ್ಯಮದವರ ಮುಂದಿಟ್ಟರು.

ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಸೊಗಡು ಶಿವಣ್ಣ ಸಮರ್ಪಕ ಉತ್ತರ ನೀಡಲಿಲ್ಲ. ಶ್ರೀಲಂಕಾಕ್ಕೂ ನಮಗೂ ಏನು ಸಂಬಂಧ ಎಂದ ಅವರು? ಕಾಂಗ್ರೆಸ್ ನವರು, ಕಮ್ಯುನಿಸ್ಟರು, ಎಸ್ಎಫ್ಐ, ಎಸ್.ಡಿ.ಪಿಐನವರು ದೇಶದ್ರೋಹಿಗಳು ಎಂದು ಪುನರುಚ್ಛರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...