Homeಅಂತರಾಷ್ಟ್ರೀಯರಷ್ಯಾದಿಂದ ತೈಲ ಖರೀದಿಸಿ ಉಕ್ರೇನ್ ಯುದ್ದಕ್ಕೆ ಭಾರತವು ಪರೋಕ್ಷ ಧನಸಹಾಯ: ಟ್ರಂಪ್ ಆಡಳಿತದಿಂದ ಆರೋಪ

ರಷ್ಯಾದಿಂದ ತೈಲ ಖರೀದಿಸಿ ಉಕ್ರೇನ್ ಯುದ್ದಕ್ಕೆ ಭಾರತವು ಪರೋಕ್ಷ ಧನಸಹಾಯ: ಟ್ರಂಪ್ ಆಡಳಿತದಿಂದ ಆರೋಪ

- Advertisement -
- Advertisement -

ವಾಷಿಂಗ್ಟನ್: ಭಾರತವು ರಷ್ಯಾದಿಂದ ತೈಲ ಖರೀದಿಸುವ ಮೂಲಕ ಉಕ್ರೇನ್ ಯುದ್ಧಕ್ಕೆ ಪರೋಕ್ಷವಾಗಿ ಆರ್ಥಿಕ ನೆರವು ನೀಡುತ್ತಿದೆ ಎಂದು ಅಮೆರಿಕದ ಡೊನಾಲ್ಡ್ ಟ್ರಂಪ್ ಆಡಳಿತ ಕಟುವಾಗಿ ಟೀಕಿಸಿದೆ. ಈ ನಿಟ್ಟಿನಲ್ಲಿ ಭಾರತದ ವಿರುದ್ಧ ಅಮೆರಿಕ ತನ್ನ ಒತ್ತಡವನ್ನು ಹೆಚ್ಚಿಸುತ್ತಿದ್ದು, ಟ್ರಂಪ್ ಅವರ ಉನ್ನತ ಅಧಿಕಾರಿಯೊಬ್ಬರು ಭಾರತದ ನೀತಿಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಮೆರಿಕದ ಅಧ್ಯಕ್ಷರ ಉಪ ಮುಖ್ಯ ಕಾರ್ಯದರ್ಶಿ ಸ್ಟೀಫನ್ ಮಿಲ್ಲರ್, ಫಾಕ್ಸ್ ನ್ಯೂಸ್‌ನ ಸಂದರ್ಶನವೊಂದರಲ್ಲಿ ಮಾತನಾಡಿ, ಭಾರತವು ಅಮೆರಿಕದ ವಸ್ತುಗಳ ಮೇಲೆ “ಬೃಹತ್ ಸುಂಕಗಳನ್ನು” ವಿಧಿಸುತ್ತಿದೆ ಮತ್ತು ಅಮೆರಿಕದ ವಲಸೆ ವ್ಯವಸ್ಥೆಯನ್ನು “ವಂಚಿಸುತ್ತಿದೆ” ಎಂದು ಆರೋಪಿಸಿದ್ದಾರೆ. ಇದರ ಜೊತೆಗೆ, ರಷ್ಯಾದಿಂದ ತೈಲ ಖರೀದಿಸುವ ಮೂಲಕ ರಷ್ಯಾಕ್ಕೆ ಆರ್ಥಿಕವಾಗಿ ಸಹಾಯ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

ಮಿಲ್ಲರ್ ಅವರ ಈ ಹೇಳಿಕೆ, ಇಂಡೋ-ಪೆಸಿಫಿಕ್ ವಲಯದಲ್ಲಿ ಅಮೆರಿಕದ ಪ್ರಮುಖ ಮಿತ್ರ ರಾಷ್ಟ್ರಗಳಲ್ಲಿ ಒಂದಾಗಿರುವ ಭಾರತದ ಬಗ್ಗೆ ಟ್ರಂಪ್ ಆಡಳಿತದ ಕಠಿಣ ನಿಲುವನ್ನು ಸ್ಪಷ್ಟಪಡಿಸುತ್ತದೆ.

“ಭಾರತವು ರಷ್ಯಾದಿಂದ ತೈಲ ಖರೀದಿಸಿ ಯುದ್ಧಕ್ಕೆ ಧನಸಹಾಯ ನೀಡುವುದು ಸ್ವೀಕಾರಾರ್ಹವಲ್ಲ. ರಷ್ಯಾದ ತೈಲ ಖರೀದಿಯಲ್ಲಿ ಭಾರತವು ಚೀನಾದೊಂದಿಗೆ ಸಮಾನ ಸ್ಥಾನದಲ್ಲಿದೆ ಎಂಬುದು ಹಲವರಿಗೆ ಆಘಾತಕಾರಿ ಸಂಗತಿಯಾಗಬಹುದು” ಎಂದು ಮಿಲ್ಲರ್ ಹೇಳಿದ್ದಾರೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಟ್ರಂಪ್ ಅವರಿಗೆ “ಅದ್ಭುತ ಸಂಬಂಧ” ಇದೆ. ಆದರೆ ಯುದ್ಧಕ್ಕೆ ಧನಸಹಾಯ ಮಾಡುವುದನ್ನು ತಡೆಯಲು “ನಾವು ವಾಸ್ತವವನ್ನು ಒಪ್ಪಿಕೊಳ್ಳಬೇಕು” ಎಂದು ಅವರು ಒತ್ತಿ ಹೇಳಿದ್ದಾರೆ. ಉಕ್ರೇನ್‌ನಲ್ಲಿ ಶಾಂತಿ ಸ್ಥಾಪಿಸಲು ರಾಜತಾಂತ್ರಿಕ, ಆರ್ಥಿಕ ಮತ್ತು ಇತರ ಎಲ್ಲಾ ಆಯ್ಕೆಗಳನ್ನು ಪರಿಗಣಿಸಲು ಟ್ರಂಪ್ ಸಿದ್ಧರಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಭಾರತದ ಸ್ಪಷ್ಟ ನಿಲುವು

ಅಮೆರಿಕದ ಬೆದರಿಕೆಗಳ ಹೊರತಾಗಿಯೂ, ರಷ್ಯಾದಿಂದ ತೈಲ ಖರೀದಿಯನ್ನು ಮುಂದುವರಿಸುವುದಾಗಿ ಭಾರತ ಸರ್ಕಾರ ಸ್ಪಷ್ಟಪಡಿಸಿದೆ. ತೈಲ ಸಂಸ್ಕರಣಾ ಕಂಪನಿಗಳಿಗೆ ಈ ಬಗ್ಗೆ ಯಾವುದೇ ನಿರ್ಬಂಧಗಳನ್ನು ವಿಧಿಸಿಲ್ಲ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಕಚ್ಚಾ ತೈಲ ಖರೀದಿಯು ವಾಣಿಜ್ಯ ನಿರ್ಧಾರವಾಗಿದ್ದು, ಕಂಪನಿಗಳು ತಮ್ಮ ಆದ್ಯತೆಯ ಮೂಲಗಳಿಂದ ಖರೀದಿ ಮಾಡಬಹುದು ಎಂದು ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಅಮೆರಿಕದ ಸುಂಕ ಬೆದರಿಕೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕೂಡ ಕಠಿಣ ನಿಲುವು ವ್ಯಕ್ತಪಡಿಸಿದ್ದಾರೆ. ಜಾಗತಿಕ ಅನಿಶ್ಚಿತತೆಯ ಸಂದರ್ಭದಲ್ಲಿ ಭಾರತದ ಆರ್ಥಿಕ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳುವುದು ಮುಖ್ಯ ಎಂದು ಅವರು ಪ್ರತಿಪಾದಿಸಿದ್ದಾರೆ.

“ವಿಶ್ವ ಆರ್ಥಿಕತೆಯು ಅನೇಕ ಆತಂಕಗಳನ್ನು ಎದುರಿಸುತ್ತಿದೆ – ಅಸ್ಥಿರತೆಯ ವಾತಾವರಣವಿದೆ. ನಾವು ಏನೇ ಖರೀದಿಸಿದರೂ, ಅದಕ್ಕೆ ಒಂದೇ ಮಾನದಂಡ ಇರಬೇಕು: ನಮ್ಮ ಭಾರತೀಯರ ಬೆವರಿನಿಂದ ತಯಾರಾದ ವಸ್ತುಗಳನ್ನು ಮಾತ್ರ ನಾವು ಖರೀದಿಸುತ್ತೇವೆ” ಎಂದು ಪ್ರಧಾನಿ ಮೋದಿ ಉತ್ತರ ಪ್ರದೇಶದ ರ್ಯಾಲಿಯೊಂದರಲ್ಲಿ ಹೇಳಿದ್ದಾರೆ.

ಟ್ರಂಪ್‌ರ ಒತ್ತಡ ತಂತ್ರಗಳು

ಭಾರತದ ವಿರುದ್ಧ ಅಮೆರಿಕ ತನ್ನ ಒತ್ತಡವನ್ನು ಹೆಚ್ಚಿಸಲು ರಷ್ಯಾ-ಉಕ್ರೇನ್ ಯುದ್ಧವನ್ನು ಬಳಸಿಕೊಳ್ಳುತ್ತಿದೆ. ಇತ್ತೀಚೆಗೆ ಭಾರತದ ರಫ್ತುಗಳ ಮೇಲೆ ಶೇ. 25ರಷ್ಟು ಸುಂಕವನ್ನು ವಿಧಿಸಿರುವ ಟ್ರಂಪ್ ಆಡಳಿತ, ರಷ್ಯಾದ ತೈಲ ಖರೀದಿಯನ್ನು ಭಾರತ ಮುಂದುವರಿಸಿದರೆ ಮತ್ತಷ್ಟು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ.

ಪುತಿನ್ ಮೇಲೆ ಒತ್ತಡ ಹೇರಲು ಟ್ರಂಪ್ ಅವರು ಭಾರತವನ್ನು ತಮ್ಮ ಪ್ರಮುಖ ಗುರಿಯನ್ನಾಗಿ ಮಾಡಿಕೊಂಡಿದ್ದಾರೆ. ಕಳೆದ ವಾರ ಭಾರತವನ್ನು ಟೀಕಿಸಿದ್ದ ಟ್ರಂಪ್, ರಷ್ಯಾದೊಂದಿಗೆ ನಿಕಟ ಸಂಬಂಧ ಹೊಂದಿರುವ ಮತ್ತು ಬ್ರಿಕ್ಸ್ (BRICS) ಗುಂಪಿನಲ್ಲಿರುವ ಭಾರತದ ನಡೆಯನ್ನು ಖಂಡಿಸಿದ್ದರು. “ಅವರು ತಮ್ಮ ಸತ್ತ ಆರ್ಥಿಕತೆಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗಬಹುದು” ಎಂದು ಟ್ರಂಪ್ ಹೇಳಿದ್ದರು.

ಚೀನಾಕ್ಕೆ ಪ್ರತ್ಯುತ್ತರವಾಗಿ ಭಾರತದೊಂದಿಗೆ ಉತ್ತಮ ಸಂಬಂಧವನ್ನು ಕಾಪಾಡಿಕೊಳ್ಳಲು ವರ್ಷಗಳಿಂದ ಪ್ರಯತ್ನಿಸುತ್ತಿದ್ದ ಅಮೆರಿಕದ ನೀತಿಯಲ್ಲಿ ಇದು ದಿಗ್ಭ್ರಮೆಗೊಳಿಸುವ ಬದಲಾವಣೆಯಾಗಿದೆ. ಪುತಿನ್ ವಿರುದ್ಧ ಒತ್ತಡ ಹೇರಲು ಟ್ರಂಪ್, ಭಾರತದೊಂದಿಗೆ ಹಳೇ ಸಂಬಂಧಗಳನ್ನು ಲೆಕ್ಕಿಸದೆ ತಮ್ಮ ಕಾರ್ಯತಂತ್ರವನ್ನು ಬದಲಾಯಿಸುವತ್ತ ಮುಖ ಮಾಡಿದ್ದಾರೆ.

ತೇಜಸ್ವಿ ಯಾದವ್‌  ಹೆಸರು ಕರಡು ಮತದಾರರ ಪಟ್ಟಿಯಿಂದ ಮಾಯ ಆರೋಪ: ವೋಟರ್ ಐಡಿ ಸಲ್ಲಿಸಲು ಚುನಾವಣೆ ಆಯೋಗದ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...