Homeಅಂತರಾಷ್ಟ್ರೀಯರಷ್ಯಾದಿಂದ ತೈಲ ಖರೀದಿಸಿ ಉಕ್ರೇನ್ ಯುದ್ದಕ್ಕೆ ಭಾರತವು ಪರೋಕ್ಷ ಧನಸಹಾಯ: ಟ್ರಂಪ್ ಆಡಳಿತದಿಂದ ಆರೋಪ

ರಷ್ಯಾದಿಂದ ತೈಲ ಖರೀದಿಸಿ ಉಕ್ರೇನ್ ಯುದ್ದಕ್ಕೆ ಭಾರತವು ಪರೋಕ್ಷ ಧನಸಹಾಯ: ಟ್ರಂಪ್ ಆಡಳಿತದಿಂದ ಆರೋಪ

- Advertisement -
- Advertisement -

ವಾಷಿಂಗ್ಟನ್: ಭಾರತವು ರಷ್ಯಾದಿಂದ ತೈಲ ಖರೀದಿಸುವ ಮೂಲಕ ಉಕ್ರೇನ್ ಯುದ್ಧಕ್ಕೆ ಪರೋಕ್ಷವಾಗಿ ಆರ್ಥಿಕ ನೆರವು ನೀಡುತ್ತಿದೆ ಎಂದು ಅಮೆರಿಕದ ಡೊನಾಲ್ಡ್ ಟ್ರಂಪ್ ಆಡಳಿತ ಕಟುವಾಗಿ ಟೀಕಿಸಿದೆ. ಈ ನಿಟ್ಟಿನಲ್ಲಿ ಭಾರತದ ವಿರುದ್ಧ ಅಮೆರಿಕ ತನ್ನ ಒತ್ತಡವನ್ನು ಹೆಚ್ಚಿಸುತ್ತಿದ್ದು, ಟ್ರಂಪ್ ಅವರ ಉನ್ನತ ಅಧಿಕಾರಿಯೊಬ್ಬರು ಭಾರತದ ನೀತಿಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಮೆರಿಕದ ಅಧ್ಯಕ್ಷರ ಉಪ ಮುಖ್ಯ ಕಾರ್ಯದರ್ಶಿ ಸ್ಟೀಫನ್ ಮಿಲ್ಲರ್, ಫಾಕ್ಸ್ ನ್ಯೂಸ್‌ನ ಸಂದರ್ಶನವೊಂದರಲ್ಲಿ ಮಾತನಾಡಿ, ಭಾರತವು ಅಮೆರಿಕದ ವಸ್ತುಗಳ ಮೇಲೆ “ಬೃಹತ್ ಸುಂಕಗಳನ್ನು” ವಿಧಿಸುತ್ತಿದೆ ಮತ್ತು ಅಮೆರಿಕದ ವಲಸೆ ವ್ಯವಸ್ಥೆಯನ್ನು “ವಂಚಿಸುತ್ತಿದೆ” ಎಂದು ಆರೋಪಿಸಿದ್ದಾರೆ. ಇದರ ಜೊತೆಗೆ, ರಷ್ಯಾದಿಂದ ತೈಲ ಖರೀದಿಸುವ ಮೂಲಕ ರಷ್ಯಾಕ್ಕೆ ಆರ್ಥಿಕವಾಗಿ ಸಹಾಯ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

ಮಿಲ್ಲರ್ ಅವರ ಈ ಹೇಳಿಕೆ, ಇಂಡೋ-ಪೆಸಿಫಿಕ್ ವಲಯದಲ್ಲಿ ಅಮೆರಿಕದ ಪ್ರಮುಖ ಮಿತ್ರ ರಾಷ್ಟ್ರಗಳಲ್ಲಿ ಒಂದಾಗಿರುವ ಭಾರತದ ಬಗ್ಗೆ ಟ್ರಂಪ್ ಆಡಳಿತದ ಕಠಿಣ ನಿಲುವನ್ನು ಸ್ಪಷ್ಟಪಡಿಸುತ್ತದೆ.

“ಭಾರತವು ರಷ್ಯಾದಿಂದ ತೈಲ ಖರೀದಿಸಿ ಯುದ್ಧಕ್ಕೆ ಧನಸಹಾಯ ನೀಡುವುದು ಸ್ವೀಕಾರಾರ್ಹವಲ್ಲ. ರಷ್ಯಾದ ತೈಲ ಖರೀದಿಯಲ್ಲಿ ಭಾರತವು ಚೀನಾದೊಂದಿಗೆ ಸಮಾನ ಸ್ಥಾನದಲ್ಲಿದೆ ಎಂಬುದು ಹಲವರಿಗೆ ಆಘಾತಕಾರಿ ಸಂಗತಿಯಾಗಬಹುದು” ಎಂದು ಮಿಲ್ಲರ್ ಹೇಳಿದ್ದಾರೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಟ್ರಂಪ್ ಅವರಿಗೆ “ಅದ್ಭುತ ಸಂಬಂಧ” ಇದೆ. ಆದರೆ ಯುದ್ಧಕ್ಕೆ ಧನಸಹಾಯ ಮಾಡುವುದನ್ನು ತಡೆಯಲು “ನಾವು ವಾಸ್ತವವನ್ನು ಒಪ್ಪಿಕೊಳ್ಳಬೇಕು” ಎಂದು ಅವರು ಒತ್ತಿ ಹೇಳಿದ್ದಾರೆ. ಉಕ್ರೇನ್‌ನಲ್ಲಿ ಶಾಂತಿ ಸ್ಥಾಪಿಸಲು ರಾಜತಾಂತ್ರಿಕ, ಆರ್ಥಿಕ ಮತ್ತು ಇತರ ಎಲ್ಲಾ ಆಯ್ಕೆಗಳನ್ನು ಪರಿಗಣಿಸಲು ಟ್ರಂಪ್ ಸಿದ್ಧರಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಭಾರತದ ಸ್ಪಷ್ಟ ನಿಲುವು

ಅಮೆರಿಕದ ಬೆದರಿಕೆಗಳ ಹೊರತಾಗಿಯೂ, ರಷ್ಯಾದಿಂದ ತೈಲ ಖರೀದಿಯನ್ನು ಮುಂದುವರಿಸುವುದಾಗಿ ಭಾರತ ಸರ್ಕಾರ ಸ್ಪಷ್ಟಪಡಿಸಿದೆ. ತೈಲ ಸಂಸ್ಕರಣಾ ಕಂಪನಿಗಳಿಗೆ ಈ ಬಗ್ಗೆ ಯಾವುದೇ ನಿರ್ಬಂಧಗಳನ್ನು ವಿಧಿಸಿಲ್ಲ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಕಚ್ಚಾ ತೈಲ ಖರೀದಿಯು ವಾಣಿಜ್ಯ ನಿರ್ಧಾರವಾಗಿದ್ದು, ಕಂಪನಿಗಳು ತಮ್ಮ ಆದ್ಯತೆಯ ಮೂಲಗಳಿಂದ ಖರೀದಿ ಮಾಡಬಹುದು ಎಂದು ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಅಮೆರಿಕದ ಸುಂಕ ಬೆದರಿಕೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕೂಡ ಕಠಿಣ ನಿಲುವು ವ್ಯಕ್ತಪಡಿಸಿದ್ದಾರೆ. ಜಾಗತಿಕ ಅನಿಶ್ಚಿತತೆಯ ಸಂದರ್ಭದಲ್ಲಿ ಭಾರತದ ಆರ್ಥಿಕ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳುವುದು ಮುಖ್ಯ ಎಂದು ಅವರು ಪ್ರತಿಪಾದಿಸಿದ್ದಾರೆ.

“ವಿಶ್ವ ಆರ್ಥಿಕತೆಯು ಅನೇಕ ಆತಂಕಗಳನ್ನು ಎದುರಿಸುತ್ತಿದೆ – ಅಸ್ಥಿರತೆಯ ವಾತಾವರಣವಿದೆ. ನಾವು ಏನೇ ಖರೀದಿಸಿದರೂ, ಅದಕ್ಕೆ ಒಂದೇ ಮಾನದಂಡ ಇರಬೇಕು: ನಮ್ಮ ಭಾರತೀಯರ ಬೆವರಿನಿಂದ ತಯಾರಾದ ವಸ್ತುಗಳನ್ನು ಮಾತ್ರ ನಾವು ಖರೀದಿಸುತ್ತೇವೆ” ಎಂದು ಪ್ರಧಾನಿ ಮೋದಿ ಉತ್ತರ ಪ್ರದೇಶದ ರ್ಯಾಲಿಯೊಂದರಲ್ಲಿ ಹೇಳಿದ್ದಾರೆ.

ಟ್ರಂಪ್‌ರ ಒತ್ತಡ ತಂತ್ರಗಳು

ಭಾರತದ ವಿರುದ್ಧ ಅಮೆರಿಕ ತನ್ನ ಒತ್ತಡವನ್ನು ಹೆಚ್ಚಿಸಲು ರಷ್ಯಾ-ಉಕ್ರೇನ್ ಯುದ್ಧವನ್ನು ಬಳಸಿಕೊಳ್ಳುತ್ತಿದೆ. ಇತ್ತೀಚೆಗೆ ಭಾರತದ ರಫ್ತುಗಳ ಮೇಲೆ ಶೇ. 25ರಷ್ಟು ಸುಂಕವನ್ನು ವಿಧಿಸಿರುವ ಟ್ರಂಪ್ ಆಡಳಿತ, ರಷ್ಯಾದ ತೈಲ ಖರೀದಿಯನ್ನು ಭಾರತ ಮುಂದುವರಿಸಿದರೆ ಮತ್ತಷ್ಟು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ.

ಪುತಿನ್ ಮೇಲೆ ಒತ್ತಡ ಹೇರಲು ಟ್ರಂಪ್ ಅವರು ಭಾರತವನ್ನು ತಮ್ಮ ಪ್ರಮುಖ ಗುರಿಯನ್ನಾಗಿ ಮಾಡಿಕೊಂಡಿದ್ದಾರೆ. ಕಳೆದ ವಾರ ಭಾರತವನ್ನು ಟೀಕಿಸಿದ್ದ ಟ್ರಂಪ್, ರಷ್ಯಾದೊಂದಿಗೆ ನಿಕಟ ಸಂಬಂಧ ಹೊಂದಿರುವ ಮತ್ತು ಬ್ರಿಕ್ಸ್ (BRICS) ಗುಂಪಿನಲ್ಲಿರುವ ಭಾರತದ ನಡೆಯನ್ನು ಖಂಡಿಸಿದ್ದರು. “ಅವರು ತಮ್ಮ ಸತ್ತ ಆರ್ಥಿಕತೆಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗಬಹುದು” ಎಂದು ಟ್ರಂಪ್ ಹೇಳಿದ್ದರು.

ಚೀನಾಕ್ಕೆ ಪ್ರತ್ಯುತ್ತರವಾಗಿ ಭಾರತದೊಂದಿಗೆ ಉತ್ತಮ ಸಂಬಂಧವನ್ನು ಕಾಪಾಡಿಕೊಳ್ಳಲು ವರ್ಷಗಳಿಂದ ಪ್ರಯತ್ನಿಸುತ್ತಿದ್ದ ಅಮೆರಿಕದ ನೀತಿಯಲ್ಲಿ ಇದು ದಿಗ್ಭ್ರಮೆಗೊಳಿಸುವ ಬದಲಾವಣೆಯಾಗಿದೆ. ಪುತಿನ್ ವಿರುದ್ಧ ಒತ್ತಡ ಹೇರಲು ಟ್ರಂಪ್, ಭಾರತದೊಂದಿಗೆ ಹಳೇ ಸಂಬಂಧಗಳನ್ನು ಲೆಕ್ಕಿಸದೆ ತಮ್ಮ ಕಾರ್ಯತಂತ್ರವನ್ನು ಬದಲಾಯಿಸುವತ್ತ ಮುಖ ಮಾಡಿದ್ದಾರೆ.

ತೇಜಸ್ವಿ ಯಾದವ್‌  ಹೆಸರು ಕರಡು ಮತದಾರರ ಪಟ್ಟಿಯಿಂದ ಮಾಯ ಆರೋಪ: ವೋಟರ್ ಐಡಿ ಸಲ್ಲಿಸಲು ಚುನಾವಣೆ ಆಯೋಗದ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...