Homeಅಂತರಾಷ್ಟ್ರೀಯರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ: ಪುಟಿನ್‌ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವೇಳೆ...

ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ: ಪುಟಿನ್‌ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಮೋದಿ ಹೇಳಿಕೆ

- Advertisement -
- Advertisement -

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ. ಶಾಂತಿಯ ಪರವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎರಡು ದಿನಗಳ ಭೇಟಿಗೆಂದು ಭಾರತಕ್ಕೆ ಆಗಮಿಸಿದ್ದು, ಇಂದು ಹೈದರಾಬಾದ್ ಹೌಸ್​ನಲ್ಲಿ ಪ್ರಧಾನಿ ಮೋದಿಯವರ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಈ ಸಮಯದಲ್ಲಿ ಉಕ್ರೇನ್ ಸಂಘರ್ಷವನ್ನು ಉಲ್ಲೇಖಿಸಿ ಮಾತನಾಡಿರುವ ಪ್ರಧಾನಿ ಮೋದಿ, ಭಾರತ ಯಾವಾಗಲೂ ಶಾಂತಿಯನ್ನು ಬೆಂಬಲಿಸುತ್ತದೆ ಮತ್ತು ಶಾಂತಿಯ ಪರವಾಗಿ ದೃಢವಾಗಿ ನಿಲ್ಲುತ್ತದೆ ಎಂದು ಹೇಳಿದ್ದಾರೆ.

ಉಕ್ರೇನ್ ಬಿಕ್ಕಟ್ಟು ಆರಂಭವಾದಾಗಿನಿಂದ ನಾವು ನಿರಂತರ ಚರ್ಚೆ ನಡೆಸಿದ್ದೇವೆ. ಕಾಲಕಾಲಕ್ಕೆ, ನೀವು ಕೂಡ, ನಿಜವಾದ ಸ್ನೇಹಿತರಾಗಿ, ಎಲ್ಲದರ ಬಗ್ಗೆ ನಮಗೆ ಮಾಹಿತಿ ನೀಡುತ್ತಿದ್ದೀರಿ. ನಂಬಿಕೆ ಒಂದು ದೊಡ್ಡ ಶಕ್ತಿ ಎಂದು ನಾನು ನಂಬುತ್ತೇನೆ, ನಾನು ಈ ವಿಷಯವನ್ನು ನಿಮ್ಮೊಂದಿಗೆ ಹಲವು ಬಾರಿ ಚರ್ಚಿಸಿದ್ದೇನೆ. ಅದನ್ನು ಪ್ರಪಂಚದ ಮುಂದೆ ಇರಿಸಿದ್ದೇನೆ ಎಂದಿದ್ದಾರೆ.

ರಾಷ್ಟ್ರಗಳ ಕಲ್ಯಾಣವು ಶಾಂತಿಯ ಹಾದಿಯಲ್ಲಿದೆ. ಒಟ್ಟಾಗಿ, ನಾವು ಜಗತ್ತನ್ನು ಆ ಹಾದಿಯತ್ತ ಕೊಂಡೊಯ್ಯುತ್ತೇವೆ. ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಪ್ರಯತ್ನಗಳೊಂದಿಗೆ, ಜಗತ್ತು ಮತ್ತೊಮ್ಮೆ ಶಾಂತಿಯ ದಿಕ್ಕಿಗೆ ಮರಳುತ್ತದೆ ಎಂದು ನನಗೆ ಸಂಪೂರ್ಣ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಪುಟಿನ್‌ ಅವರ ಈ ಭೇಟಿಯು ಐತಿಹಾಸಿಕವಾಗಿದೆ. ಉಕ್ರೇನ್‌ ಬಿಕ್ಕಟ್ಟಿನ ಬಗ್ಗೆ ನಾವು ನಿರಂತರವಾಗಿ ಚರ್ಚಿಸುತ್ತಿದ್ದೇವೆ. ರಷ್ಯಾ ಶಾಂತಿ ಮಾರ್ಗ ಕಂಡುಕೊಳ್ಳಬೇಕಿದೆ. ಏಕೆಂದರೆ ಶಾಂತಿಯ ಮಾರ್ಗದಲ್ಲಿ ಪ್ರಯಾಣಿಸಿದರೆ ಮಾತ್ರ ವಿಶ್ವಕ್ಕೆ ಪ್ರಯೋಜನವಾಗುತ್ತದೆ. ಶಾಂತಿಗಾಗಿ ನಾವು ಎಲ್ಲಾ ಪ್ರಯತ್ನಗಳನ್ನ ಮಾಡುತ್ತೇವೆ. ಉಕ್ರೇನ್-ರಷ್ಯಾ ಸಂಘರ್ಷ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದ್ದೇವೆ ಎಂದು ಪುನರ್ ಉಚ್ಛರಿಸಿದರು.

ಇದೇ ವೇಳೆ ಮಾತನಾಡಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌, ಉಕ್ರೇನ್‌ನಲ್ಲಿ ಶಾಂತಿ ಸ್ಥಾಪಿಸಲು ಪ್ರಧಾನಿ ಮೋದಿ ಅವರ ಪ್ರಯತ್ನಗಳನ್ನ ಶ್ಲಾಘಿಸಿದರು.

ಇದಕ್ಕೂ ಮುನ್ನ ಭಾರತ ಪ್ರವಾಸದಲ್ಲಿರುವ ಪುಟಿನ್‌ ಅವರು ರಾಷ್ಟ್ರಪತಿ ಭವನಕ್ಕೆ ಆಗಮಿಸುತ್ತಿದ್ದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು.

ಅದ್ಧೂರಿ ಸಂಗೀತದ ಮೂಲಕ ರೆಡ್‌ ಕಾರ್ಪೆಟ್‌ ಹಾಸಿ ಪುಟಿನ್‌ಗೆ ಸ್ವಾಗತ ಕೋರಲಾಯಿತು. ಅಲ್ಲದೇ, ಸೇನಾಪಡೆ ಸಿಬ್ಬಂದಿ 21 ಗನ್‌ ಸೆಲ್ಯೂಟ್‌, ಮಿಲಿಟರಿ ಶಿಸ್ತು ಮತ್ತು ಸಕಲ ಗೌರವ ಸಲ್ಲಿಸಿದವು.

ಈ ನಡುವೆ ಮಾತನಾಡಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರು, ಉಕ್ರೇನ್‌ನಲ್ಲಿ ಶಾಂತಿ ಸ್ಥಾಪಿಸಲು ಪ್ರಧಾನಿ ಮೋದಿ ಅವರ ಪ್ರಯತ್ನಗಳನ್ನು ಶ್ಲಾಘಿಸಿದರು. ನನ್ನನ್ನು ಭಾರತಕ್ಕೆ ಆಹ್ವಾನಿಸಿದ್ದಕ್ಕೆ ತುಂಬಾ ಧನ್ಯವಾದಗಳು. ಉಕ್ರೇನ್‌ನಲ್ಲಿನ ಪರಿಸ್ಥಿತಿ ಕುರಿತು ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲು ಸಿದ್ಧರಿದ್ದೇವೆ, ಶಾಂತಿ ಸ್ಥಾಪನೆಗಾಗಿ ಅಮೆರಿಕಾ ಸೇರಿದಂತೆ ಕೆಲವು ಪಾಲುದಾರರೊಂದಿಗೆ ಒಟ್ಟಾಗಿ ಮಾತನಾಡುತ್ತಿದ್ದೇವೆ. ಶಾಂತಿ ಸ್ಥಾಪಿಸಲು ಹರಿಹಾರ ಕಂಡುಕೊಳ್ಳಲು ಪ್ರಯತ್ನ ನಡೆಸುತ್ತಿರುವುದಕ್ಕಾಗಿ ಧನ್ಯವಾದಗಳು ಎಂದು ಹೇಳಿದರು. 

ರಷ್ಯಾ ಮತ್ತು ಭಾರತದ ನಡುವಿನ ಸಂಬಂಧವು ನಂಬಿಕೆಯನ್ನ ಆಧರಿಸಿದೆ. ನಾವು ಶಾಂತಿಯ ಮಾರ್ಗದಲ್ಲಿ ಪ್ರಯಾಣಿಸಿದರೆ ಮಾತ್ರ ಅದು ವಿಶ್ವಕ್ಕೆ ಪ್ರಯೋಜನವಾಗುತ್ತದೆ, ನಿಮ್ಮ ಪ್ರಯತ್ನವನ್ನು ಪ್ರಶಂಸಿಸುತ್ತೇವೆಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಿಕ್ಷೆ ಮುಗಿದ 3 ವರ್ಷಗಳ ನಂತರ ಪಾಕಿಸ್ತಾನ ಜೈಲಿನಲ್ಲಿ ಗುಜರಾತ್ ಮೀನುಗಾರ ಸಾವು

2022 ರಲ್ಲಿ ಅಜಾಗರೂಕತೆಯಿಂದ ಅಂತರರಾಷ್ಟ್ರೀಯ ಗಡಿ ರೇಖೆಯನ್ನು ದಾಟಿದ ನಂತರ ಪಾಕಿಸ್ತಾನ ಏಜೆನ್ಸಿಗಳಿಂದ ಬಂಧಿಸಲ್ಪಟ್ಟ ಗುಜರಾತ್‌ನ ಮೀನುಗಾರನೊಬ್ಬ ಜನವರಿ 16 ರಂದು ಕರಾಚಿ ಜೈಲಿನಲ್ಲಿ ಸಾವನ್ನಪ್ಪಿದ್ದಾನೆ. ಮೂರು ವರ್ಷಗಳ ಹಿಂದೆ ಆತನ ಶಿಕ್ಷೆಯನ್ನು...

ಸ್ಥಳದಲ್ಲೇ ದಂಡ ಪಾವತಿಸುವಂತೆ ಸಂಚಾರ ಪೊಲೀಸರು ಒತ್ತಾಯಿಸುವಂತಿಲ್ಲ: ತೆಲಂಗಾಣ ಹೈಕೋರ್ಟ್

ಸಂಚಾರ ನಿಯಮ ಉಲ್ಲಂಘಿಸುವವರ ಬ್ಯಾಂಕ್ ಖಾತೆಗಳಿಂದ ಸ್ವಯಂಚಾಲಿತವಾಗಿ ದಂಡ ಕಡಿತಗೊಳಿಸಬೇಕೆಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೂಚಿಸಿದ ಕೆಲವು ದಿನಗಳ ನಂತರ ಮಹತ್ವದ ತೀರ್ಪು ನೀಡಿರುವ ತೆಲಂಗಾಣ ಹೈಕೋರ್ಟ್, ಪೊಲೀಸರು ನಾಗರಿಕರನ್ನು ರಸ್ತೆಯಲ್ಲಿ ನಿಲ್ಲಿಸಿ...

ಎಸ್‌ಸಿ/ಎಸ್‌ಟಿ ಶಾಲೆಗಳ ನವೀಕರಣಕ್ಕೆ ಹಣ ಮಂಜೂರು ಮಾಡದಂತೆ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್ 

ಮಧುರೈ: ತಮಿಳುನಾಡಿನ ಸುಮಾರು 170 ಎಸ್‌ಸಿ/ಎಸ್‌ಟಿ ಶಾಲೆ ಮತ್ತು ಹಾಸ್ಟೆಲ್ ಕಟ್ಟಡಗಳ ದುರಸ್ತಿ ಮತ್ತು ನಿರ್ಮಾಣ ಕಾರ್ಯಗಳಿಗೆ ತಮಿಳುನಾಡು ಆದಿ ದ್ರಾವಿಡರ್ ವಸತಿ ಅಭಿವೃದ್ಧಿ ನಿಗಮ (ಟಿಎಎಚ್‌ಡಿಸಿಒ) 50 ಕೋಟಿ ರೂ.ಗಳನ್ನು ಖರ್ಚು...

ಕೇಂದ್ರ ಸರ್ಕಾರಿ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳನ್ನು ರಾಜ್ಯ ಸಂಸ್ಥೆ ತನಿಖೆ ಮಾಡಬಹುದು : ಸುಪ್ರೀಂ ಕೋರ್ಟ್

ಕೇಂದ್ರ ಸರ್ಕಾರಿ ನೌಕರರು ಮಾಡುವ ಭ್ರಷ್ಟಾಚಾರ ತಡೆ ಕಾಯ್ದೆಯಡಿಯ ಶಿಕ್ಷಾರ್ಹ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ರಾಜ್ಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಲು ಮತ್ತು ಆರೋಪಪಟ್ಟಿ ಸಲ್ಲಿಸಲು ಸಮರ್ಥರು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಗ್ಯಾಂಗ್‌ಸ್ಟರ್‌ಗಳ ವಿರುದ್ಧ ರಾಜ್ಯಾದ್ಯಂತ ಕಾರ್ಯಚರಣೆ ಆರಂಭಿಸಿದ ಪಂಜಾಬ್ ಸರ್ಕಾರ

ಮಾದಕ ವಸ್ತುಗಳ ವಿರುದ್ಧದ ತನ್ನ ಕಾರ್ಯಾಚರಣೆಯಿಂದ ಸ್ಫೂರ್ತಿ ಪಡೆದು, ಪಂಜಾಬ್ ಸರ್ಕಾರ ಮಂಗಳವಾರ ಗ್ಯಾಂಗ್‌ಸ್ಟರ್‌ಗಳ ವಿರುದ್ಧ ರಾಜ್ಯಾದ್ಯಂತ ಅಭಿಯಾನ ಆರಂಭಿಸಿದ್ದು, ಶಸ್ತ್ರಾಸ್ತ್ರ ಪೂರೈಕೆ ಸರಪಳಿಗಳು, ಲಾಜಿಸ್ಟಿಕ್ಸ್, ಅಡಗುತಾಣಗಳು ಮತ್ತು ಸಂವಹನ ಜಾಲಗಳು ಸೇರಿದಂತೆ...

‘ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ‘ನನ್ನ ಹೆಸರೇ’ ಆಸರೆ’: ಪ್ರಿಯಾಂಕ್ ಖರ್ಗೆ ಆಕ್ರೋಶ 

ಬೆಂಗಳೂರು: ಮುಳುಗುವವನಿಗೆ ಹುಲ್ಲು ಕಡ್ಡಿಯ ಆಸರೆ ಎನ್ನುವಂತೆ, ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ "ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ರದ್ದುಗೊಳಿಸಲು ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯ : ತಮಿಳುನಾಡು ಸಿಎಂ ಸ್ಟಾಲಿನ್

ವಿಧಾನಸಭೆ ಅಧಿವೇಶನದಲ್ಲಿ ರಾಜ್ಯಪಾಲರು ವಾರ್ಷಿಕ ಭಾಷಣ ಮಾಡುವ ಸಂಪ್ರದಾಯವನ್ನು ರದ್ದುಗೊಳಿಸುವ ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯಿಸುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಘೋಷಿಸಿದ್ದಾರೆ. ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌ ರವಿ ನಡುವೆ ಜಟಾಪಟಿ ನಡೆದು,...

ಅಸ್ಸಾಂ| ದನ ಕಳ್ಳತನದ ಶಂಕೆಯಿಂದ ಗುಂಪು ದಾಳಿ; ಓರ್ವ ಸಾವು-ನಾಲ್ವರ ಸ್ಥಿತಿ ಗಂಭೀರ

ದನ ಕಳ್ಳತನದ ಶಂಕೆಯ ಮೇಲೆ ಗುಂಪೊಂದು ದಾಳಿ ಮಾಡಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ (ಜ.19) ಅಸ್ಸಾಂನ ಕೊಕ್ರಜಾರ್‌ನಲ್ಲಿ ನಡೆದಿದೆ. ಬಲಿಪಶುಗಳು, ರಸ್ತೆ ನಿರ್ಮಾಣ ಯೋಜನೆಯೊಮದರಲ್ಲಿ...

ಕರ್ನಾಟಕ: ಐದು ವರ್ಷಗಳಲ್ಲಿ ಎಸ್‌ಸಿ/ಎಸ್‌ಟಿಗಳ ಮೇಲಿನ ಅಪರಾಧಗಳು ಶೇ. 37.7 ರಷ್ಟು ಏರಿಕೆ; ಬೆಂಗಳೂರಿನದೇ ಅಗ್ರಸ್ಥಾನ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (SC/ST) ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಕಠಿಣ ಕಾನೂನುಗಳಿದ್ದರೂ, ಈ ಸಮುದಾಯಗಳ ಮೇಲಿನ ಅಪರಾಧಗಳು ಕಳೆದ ಐದು ವರ್ಷಗಳಲ್ಲಿ ಶೇ. 37.74 ರಷ್ಟು ಹೆಚ್ಚಾಗಿದ್ದು,...

‘ನಿತಿನ್ ನಬಿನ್ ನನ್ನ ಬಾಸ್, ನಾನು ಕೆಲಸಗಾರ..’; ಬಿಜೆಪಿ ನೂತನ ಮುಖ್ಯಸ್ಥರನ್ನು ಸ್ವಾಗತಿಸಿದ ಪ್ರಧಾನಿ ಮೋದಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಅತ್ಯಂತ ಕಿರಿಯ ವಯಸ್ಸಿನ ನಿತಿನ್ ನಬಿನ್ ಅವರನ್ನು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು. ಪಕ್ಷದ ಪರಂಪರೆಯನ್ನು ಮುಂದುವರಿಸುವ 'ಸಹಸ್ರಮಾನದ' ವ್ಯಕ್ತಿ ಎಂದು ಕರೆದರು. "ಪಕ್ಷದ...