Homeಅಂತರಾಷ್ಟ್ರೀಯರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ: ಪುಟಿನ್‌ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವೇಳೆ...

ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ: ಪುಟಿನ್‌ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಮೋದಿ ಹೇಳಿಕೆ

- Advertisement -
- Advertisement -

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ. ಶಾಂತಿಯ ಪರವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎರಡು ದಿನಗಳ ಭೇಟಿಗೆಂದು ಭಾರತಕ್ಕೆ ಆಗಮಿಸಿದ್ದು, ಇಂದು ಹೈದರಾಬಾದ್ ಹೌಸ್​ನಲ್ಲಿ ಪ್ರಧಾನಿ ಮೋದಿಯವರ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಈ ಸಮಯದಲ್ಲಿ ಉಕ್ರೇನ್ ಸಂಘರ್ಷವನ್ನು ಉಲ್ಲೇಖಿಸಿ ಮಾತನಾಡಿರುವ ಪ್ರಧಾನಿ ಮೋದಿ, ಭಾರತ ಯಾವಾಗಲೂ ಶಾಂತಿಯನ್ನು ಬೆಂಬಲಿಸುತ್ತದೆ ಮತ್ತು ಶಾಂತಿಯ ಪರವಾಗಿ ದೃಢವಾಗಿ ನಿಲ್ಲುತ್ತದೆ ಎಂದು ಹೇಳಿದ್ದಾರೆ.

ಉಕ್ರೇನ್ ಬಿಕ್ಕಟ್ಟು ಆರಂಭವಾದಾಗಿನಿಂದ ನಾವು ನಿರಂತರ ಚರ್ಚೆ ನಡೆಸಿದ್ದೇವೆ. ಕಾಲಕಾಲಕ್ಕೆ, ನೀವು ಕೂಡ, ನಿಜವಾದ ಸ್ನೇಹಿತರಾಗಿ, ಎಲ್ಲದರ ಬಗ್ಗೆ ನಮಗೆ ಮಾಹಿತಿ ನೀಡುತ್ತಿದ್ದೀರಿ. ನಂಬಿಕೆ ಒಂದು ದೊಡ್ಡ ಶಕ್ತಿ ಎಂದು ನಾನು ನಂಬುತ್ತೇನೆ, ನಾನು ಈ ವಿಷಯವನ್ನು ನಿಮ್ಮೊಂದಿಗೆ ಹಲವು ಬಾರಿ ಚರ್ಚಿಸಿದ್ದೇನೆ. ಅದನ್ನು ಪ್ರಪಂಚದ ಮುಂದೆ ಇರಿಸಿದ್ದೇನೆ ಎಂದಿದ್ದಾರೆ.

ರಾಷ್ಟ್ರಗಳ ಕಲ್ಯಾಣವು ಶಾಂತಿಯ ಹಾದಿಯಲ್ಲಿದೆ. ಒಟ್ಟಾಗಿ, ನಾವು ಜಗತ್ತನ್ನು ಆ ಹಾದಿಯತ್ತ ಕೊಂಡೊಯ್ಯುತ್ತೇವೆ. ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಪ್ರಯತ್ನಗಳೊಂದಿಗೆ, ಜಗತ್ತು ಮತ್ತೊಮ್ಮೆ ಶಾಂತಿಯ ದಿಕ್ಕಿಗೆ ಮರಳುತ್ತದೆ ಎಂದು ನನಗೆ ಸಂಪೂರ್ಣ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಪುಟಿನ್‌ ಅವರ ಈ ಭೇಟಿಯು ಐತಿಹಾಸಿಕವಾಗಿದೆ. ಉಕ್ರೇನ್‌ ಬಿಕ್ಕಟ್ಟಿನ ಬಗ್ಗೆ ನಾವು ನಿರಂತರವಾಗಿ ಚರ್ಚಿಸುತ್ತಿದ್ದೇವೆ. ರಷ್ಯಾ ಶಾಂತಿ ಮಾರ್ಗ ಕಂಡುಕೊಳ್ಳಬೇಕಿದೆ. ಏಕೆಂದರೆ ಶಾಂತಿಯ ಮಾರ್ಗದಲ್ಲಿ ಪ್ರಯಾಣಿಸಿದರೆ ಮಾತ್ರ ವಿಶ್ವಕ್ಕೆ ಪ್ರಯೋಜನವಾಗುತ್ತದೆ. ಶಾಂತಿಗಾಗಿ ನಾವು ಎಲ್ಲಾ ಪ್ರಯತ್ನಗಳನ್ನ ಮಾಡುತ್ತೇವೆ. ಉಕ್ರೇನ್-ರಷ್ಯಾ ಸಂಘರ್ಷ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದ್ದೇವೆ ಎಂದು ಪುನರ್ ಉಚ್ಛರಿಸಿದರು.

ಇದೇ ವೇಳೆ ಮಾತನಾಡಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌, ಉಕ್ರೇನ್‌ನಲ್ಲಿ ಶಾಂತಿ ಸ್ಥಾಪಿಸಲು ಪ್ರಧಾನಿ ಮೋದಿ ಅವರ ಪ್ರಯತ್ನಗಳನ್ನ ಶ್ಲಾಘಿಸಿದರು.

ಇದಕ್ಕೂ ಮುನ್ನ ಭಾರತ ಪ್ರವಾಸದಲ್ಲಿರುವ ಪುಟಿನ್‌ ಅವರು ರಾಷ್ಟ್ರಪತಿ ಭವನಕ್ಕೆ ಆಗಮಿಸುತ್ತಿದ್ದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು.

ಅದ್ಧೂರಿ ಸಂಗೀತದ ಮೂಲಕ ರೆಡ್‌ ಕಾರ್ಪೆಟ್‌ ಹಾಸಿ ಪುಟಿನ್‌ಗೆ ಸ್ವಾಗತ ಕೋರಲಾಯಿತು. ಅಲ್ಲದೇ, ಸೇನಾಪಡೆ ಸಿಬ್ಬಂದಿ 21 ಗನ್‌ ಸೆಲ್ಯೂಟ್‌, ಮಿಲಿಟರಿ ಶಿಸ್ತು ಮತ್ತು ಸಕಲ ಗೌರವ ಸಲ್ಲಿಸಿದವು.

ಈ ನಡುವೆ ಮಾತನಾಡಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರು, ಉಕ್ರೇನ್‌ನಲ್ಲಿ ಶಾಂತಿ ಸ್ಥಾಪಿಸಲು ಪ್ರಧಾನಿ ಮೋದಿ ಅವರ ಪ್ರಯತ್ನಗಳನ್ನು ಶ್ಲಾಘಿಸಿದರು. ನನ್ನನ್ನು ಭಾರತಕ್ಕೆ ಆಹ್ವಾನಿಸಿದ್ದಕ್ಕೆ ತುಂಬಾ ಧನ್ಯವಾದಗಳು. ಉಕ್ರೇನ್‌ನಲ್ಲಿನ ಪರಿಸ್ಥಿತಿ ಕುರಿತು ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲು ಸಿದ್ಧರಿದ್ದೇವೆ, ಶಾಂತಿ ಸ್ಥಾಪನೆಗಾಗಿ ಅಮೆರಿಕಾ ಸೇರಿದಂತೆ ಕೆಲವು ಪಾಲುದಾರರೊಂದಿಗೆ ಒಟ್ಟಾಗಿ ಮಾತನಾಡುತ್ತಿದ್ದೇವೆ. ಶಾಂತಿ ಸ್ಥಾಪಿಸಲು ಹರಿಹಾರ ಕಂಡುಕೊಳ್ಳಲು ಪ್ರಯತ್ನ ನಡೆಸುತ್ತಿರುವುದಕ್ಕಾಗಿ ಧನ್ಯವಾದಗಳು ಎಂದು ಹೇಳಿದರು. 

ರಷ್ಯಾ ಮತ್ತು ಭಾರತದ ನಡುವಿನ ಸಂಬಂಧವು ನಂಬಿಕೆಯನ್ನ ಆಧರಿಸಿದೆ. ನಾವು ಶಾಂತಿಯ ಮಾರ್ಗದಲ್ಲಿ ಪ್ರಯಾಣಿಸಿದರೆ ಮಾತ್ರ ಅದು ವಿಶ್ವಕ್ಕೆ ಪ್ರಯೋಜನವಾಗುತ್ತದೆ, ನಿಮ್ಮ ಪ್ರಯತ್ನವನ್ನು ಪ್ರಶಂಸಿಸುತ್ತೇವೆಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...