Homeಅಂತರಾಷ್ಟ್ರೀಯರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ: ಪುಟಿನ್‌ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವೇಳೆ...

ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ: ಪುಟಿನ್‌ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಮೋದಿ ಹೇಳಿಕೆ

- Advertisement -
- Advertisement -

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ. ಶಾಂತಿಯ ಪರವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎರಡು ದಿನಗಳ ಭೇಟಿಗೆಂದು ಭಾರತಕ್ಕೆ ಆಗಮಿಸಿದ್ದು, ಇಂದು ಹೈದರಾಬಾದ್ ಹೌಸ್​ನಲ್ಲಿ ಪ್ರಧಾನಿ ಮೋದಿಯವರ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಈ ಸಮಯದಲ್ಲಿ ಉಕ್ರೇನ್ ಸಂಘರ್ಷವನ್ನು ಉಲ್ಲೇಖಿಸಿ ಮಾತನಾಡಿರುವ ಪ್ರಧಾನಿ ಮೋದಿ, ಭಾರತ ಯಾವಾಗಲೂ ಶಾಂತಿಯನ್ನು ಬೆಂಬಲಿಸುತ್ತದೆ ಮತ್ತು ಶಾಂತಿಯ ಪರವಾಗಿ ದೃಢವಾಗಿ ನಿಲ್ಲುತ್ತದೆ ಎಂದು ಹೇಳಿದ್ದಾರೆ.

ಉಕ್ರೇನ್ ಬಿಕ್ಕಟ್ಟು ಆರಂಭವಾದಾಗಿನಿಂದ ನಾವು ನಿರಂತರ ಚರ್ಚೆ ನಡೆಸಿದ್ದೇವೆ. ಕಾಲಕಾಲಕ್ಕೆ, ನೀವು ಕೂಡ, ನಿಜವಾದ ಸ್ನೇಹಿತರಾಗಿ, ಎಲ್ಲದರ ಬಗ್ಗೆ ನಮಗೆ ಮಾಹಿತಿ ನೀಡುತ್ತಿದ್ದೀರಿ. ನಂಬಿಕೆ ಒಂದು ದೊಡ್ಡ ಶಕ್ತಿ ಎಂದು ನಾನು ನಂಬುತ್ತೇನೆ, ನಾನು ಈ ವಿಷಯವನ್ನು ನಿಮ್ಮೊಂದಿಗೆ ಹಲವು ಬಾರಿ ಚರ್ಚಿಸಿದ್ದೇನೆ. ಅದನ್ನು ಪ್ರಪಂಚದ ಮುಂದೆ ಇರಿಸಿದ್ದೇನೆ ಎಂದಿದ್ದಾರೆ.

ರಾಷ್ಟ್ರಗಳ ಕಲ್ಯಾಣವು ಶಾಂತಿಯ ಹಾದಿಯಲ್ಲಿದೆ. ಒಟ್ಟಾಗಿ, ನಾವು ಜಗತ್ತನ್ನು ಆ ಹಾದಿಯತ್ತ ಕೊಂಡೊಯ್ಯುತ್ತೇವೆ. ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಪ್ರಯತ್ನಗಳೊಂದಿಗೆ, ಜಗತ್ತು ಮತ್ತೊಮ್ಮೆ ಶಾಂತಿಯ ದಿಕ್ಕಿಗೆ ಮರಳುತ್ತದೆ ಎಂದು ನನಗೆ ಸಂಪೂರ್ಣ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಪುಟಿನ್‌ ಅವರ ಈ ಭೇಟಿಯು ಐತಿಹಾಸಿಕವಾಗಿದೆ. ಉಕ್ರೇನ್‌ ಬಿಕ್ಕಟ್ಟಿನ ಬಗ್ಗೆ ನಾವು ನಿರಂತರವಾಗಿ ಚರ್ಚಿಸುತ್ತಿದ್ದೇವೆ. ರಷ್ಯಾ ಶಾಂತಿ ಮಾರ್ಗ ಕಂಡುಕೊಳ್ಳಬೇಕಿದೆ. ಏಕೆಂದರೆ ಶಾಂತಿಯ ಮಾರ್ಗದಲ್ಲಿ ಪ್ರಯಾಣಿಸಿದರೆ ಮಾತ್ರ ವಿಶ್ವಕ್ಕೆ ಪ್ರಯೋಜನವಾಗುತ್ತದೆ. ಶಾಂತಿಗಾಗಿ ನಾವು ಎಲ್ಲಾ ಪ್ರಯತ್ನಗಳನ್ನ ಮಾಡುತ್ತೇವೆ. ಉಕ್ರೇನ್-ರಷ್ಯಾ ಸಂಘರ್ಷ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದ್ದೇವೆ ಎಂದು ಪುನರ್ ಉಚ್ಛರಿಸಿದರು.

ಇದೇ ವೇಳೆ ಮಾತನಾಡಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌, ಉಕ್ರೇನ್‌ನಲ್ಲಿ ಶಾಂತಿ ಸ್ಥಾಪಿಸಲು ಪ್ರಧಾನಿ ಮೋದಿ ಅವರ ಪ್ರಯತ್ನಗಳನ್ನ ಶ್ಲಾಘಿಸಿದರು.

ಇದಕ್ಕೂ ಮುನ್ನ ಭಾರತ ಪ್ರವಾಸದಲ್ಲಿರುವ ಪುಟಿನ್‌ ಅವರು ರಾಷ್ಟ್ರಪತಿ ಭವನಕ್ಕೆ ಆಗಮಿಸುತ್ತಿದ್ದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು.

ಅದ್ಧೂರಿ ಸಂಗೀತದ ಮೂಲಕ ರೆಡ್‌ ಕಾರ್ಪೆಟ್‌ ಹಾಸಿ ಪುಟಿನ್‌ಗೆ ಸ್ವಾಗತ ಕೋರಲಾಯಿತು. ಅಲ್ಲದೇ, ಸೇನಾಪಡೆ ಸಿಬ್ಬಂದಿ 21 ಗನ್‌ ಸೆಲ್ಯೂಟ್‌, ಮಿಲಿಟರಿ ಶಿಸ್ತು ಮತ್ತು ಸಕಲ ಗೌರವ ಸಲ್ಲಿಸಿದವು.

ಈ ನಡುವೆ ಮಾತನಾಡಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರು, ಉಕ್ರೇನ್‌ನಲ್ಲಿ ಶಾಂತಿ ಸ್ಥಾಪಿಸಲು ಪ್ರಧಾನಿ ಮೋದಿ ಅವರ ಪ್ರಯತ್ನಗಳನ್ನು ಶ್ಲಾಘಿಸಿದರು. ನನ್ನನ್ನು ಭಾರತಕ್ಕೆ ಆಹ್ವಾನಿಸಿದ್ದಕ್ಕೆ ತುಂಬಾ ಧನ್ಯವಾದಗಳು. ಉಕ್ರೇನ್‌ನಲ್ಲಿನ ಪರಿಸ್ಥಿತಿ ಕುರಿತು ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲು ಸಿದ್ಧರಿದ್ದೇವೆ, ಶಾಂತಿ ಸ್ಥಾಪನೆಗಾಗಿ ಅಮೆರಿಕಾ ಸೇರಿದಂತೆ ಕೆಲವು ಪಾಲುದಾರರೊಂದಿಗೆ ಒಟ್ಟಾಗಿ ಮಾತನಾಡುತ್ತಿದ್ದೇವೆ. ಶಾಂತಿ ಸ್ಥಾಪಿಸಲು ಹರಿಹಾರ ಕಂಡುಕೊಳ್ಳಲು ಪ್ರಯತ್ನ ನಡೆಸುತ್ತಿರುವುದಕ್ಕಾಗಿ ಧನ್ಯವಾದಗಳು ಎಂದು ಹೇಳಿದರು. 

ರಷ್ಯಾ ಮತ್ತು ಭಾರತದ ನಡುವಿನ ಸಂಬಂಧವು ನಂಬಿಕೆಯನ್ನ ಆಧರಿಸಿದೆ. ನಾವು ಶಾಂತಿಯ ಮಾರ್ಗದಲ್ಲಿ ಪ್ರಯಾಣಿಸಿದರೆ ಮಾತ್ರ ಅದು ವಿಶ್ವಕ್ಕೆ ಪ್ರಯೋಜನವಾಗುತ್ತದೆ, ನಿಮ್ಮ ಪ್ರಯತ್ನವನ್ನು ಪ್ರಶಂಸಿಸುತ್ತೇವೆಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...