Homeರಾಷ್ಟ್ರೀಯ‘ಸ್ವಚ್ಛ ಭಾರತ ಅಭಿಯಾನ’ದ ನಡುವೆಯೂ, ವಿಶ್ವದ ಅತ್ಯಂತ ಕೆಟ್ಟ ಪರಿಸರ ಆರೋಗ್ಯ ಹೊಂದಿರುವ ದೇಶವಾಗಿ ಭಾರತ!

‘ಸ್ವಚ್ಛ ಭಾರತ ಅಭಿಯಾನ’ದ ನಡುವೆಯೂ, ವಿಶ್ವದ ಅತ್ಯಂತ ಕೆಟ್ಟ ಪರಿಸರ ಆರೋಗ್ಯ ಹೊಂದಿರುವ ದೇಶವಾಗಿ ಭಾರತ!

ವಿಶ್ವದ 180 ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಕೊನೆಯ 180 ನೇ ಸ್ಥಾನದಲ್ಲಿದೆ ಎಂದು ವಿಶ್ವಬ್ಯಾಂಕ್ ವರದಿ ಸೂಚಿಸಿದೆ

- Advertisement -
- Advertisement -

ಬಿಜೆಪಿಯ ಮೋದಿ ಸರ್ಕಾರದ ಸ್ವಚ್ಛ ಭಾರತ ಅಭಿಯಾನದ ನಡುವೆಯೂ, ಭಾರತವು ವಿಶ್ವದ ಅತ್ಯಂತ ಕೆಟ್ಟ ಪರಿಸರ ಆರೋಗ್ಯವನ್ನು ಹೊಂದಿರುವ ದೇಶವಾಗಿದೆ ಹೊರಹೊಮ್ಮಿದೆ. ವಿಶ್ವಬ್ಯಾಂಕ್ ಬಿಡುಗಡೆ ಮಾಡಿರುವ ‘ಪರಿಸರ ಕಾರ್ಯಕ್ಷಮತೆ ಸೂಚ್ಯಂಕ-2022’ರ ವರದಿಯು, ವಿಶ್ವದ 180 ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಕೊನೆಯ 180 ನೇ ಸ್ಥಾನದಲ್ಲಿದೆ ಎಂದು ಸೂಚಿಸಿದೆ.

ಭಾರತದ ನೆರೆಯ ದೇಶಗಳಾದ ಬಾಂಗ್ಲಾದೇಶ, ಮ್ಯಾನ್ಮಾರ್, ಪಾಕಿಸ್ತಾನ ಮತ್ತು ವಿಯೆಟ್ನಾಂ ಕೂಡ ಭಾರತಕ್ಕಿಂತ ಉತ್ತಮ ಸ್ಥಾನದಲ್ಲಿದೆ. ಭ್ರಷ್ಟಾಚಾರ ನಿಯಂತ್ರಣ, ಕಾನೂನಿನ ನಿಯಮ ಮತ್ತು ಸರ್ಕಾರದ ಪರಿಣಾಮಕಾರಿತ್ವದಂತಹ ವಿವಿಧ ಕ್ರಮಗಳಲ್ಲಿ ಕೂಡಾ ಭಾರತವು ಕಳಪೆ ಅಂಕಗಳನ್ನು ಗಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡೆನ್ಮಾರ್ಕ್ ದೇಶವೂ ಸುಸ್ಥಿರತೆ ಮತ್ತು ಪರಿಸರ ಆರೋಗ್ಯ ವಿಭಾಗಗಳಲ್ಲಿ ಮೊದಲ ಸ್ಥಾನದಲ್ಲಿದ್ದು, ಯುಕೆ, ಫಿನ್‌ಲ್ಯಾಂಡ್‌, ಮಾಲ್ಟಾ, ಸ್ವೀಡನ್‌ ದೇಶಗಳು ನಂತರದ ಸ್ಥಾನಗಳನ್ನು ಕಾಯ್ದುಕೊಂಡಿದೆ.

ಇದನ್ನೂ ಓದಿ: ಪ್ರಧಾನಿಯೊಂದಿಗಿನ ಮಾತುಕತೆಗಳಲ್ಲಿ ಪ್ರವಾದಿ ನಿಂದನೆ ಬಗ್ಗೆ ಇರಾನ್‌ ಉಲ್ಲೇಖಿಸಿಲ್ಲ: ಭಾರತ

ಭಾರತದ ನೆರೆಯ ದೇಶಗಳಾದ ಚೀನಾ ಈ ಪಟ್ಟಿಯಲ್ಲಿ 160 ನೇ ಸ್ಥಾನದಲ್ಲಿದ್ದು, ನೇಪಾಳ 162ನೇ ಸ್ಥಾನದಲ್ಲಿದೆ. ಭೂತಾನ್ 85 ನೇ ಸ್ಥಾನದಲ್ಲಿದ್ದು, ಪಾಕಿಸ್ತಾನ 176, ಮಯನ್ಮಾರ್‌ 179, ಮಾಲ್ಡೀವ್ 113, ಶ್ರೀಲಂಕಾ 132, ಬಾಂಗ್ಲಾದೇಶ 177 ಮತ್ತು ಅಫ್ಘಾನಿಸ್ಥಾನ 81ನೇ ಸ್ಥಾನದಲ್ಲಿದೆ.

ಪರಿಸರ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ ಭಾರತ ಮತ್ತು ನೆರೆಯ ರಾಷ್ಟ್ರಗಳ ಸ್ಥಾನ (ಆಧಾರ 2022 EPI Results)

‘ಪರಿಸರ ಕಾರ್ಯಕ್ಷಮತೆ ಸೂಚ್ಯಂಕ-2020’ ರಲ್ಲಿ ಭಾರತವು 180 ದೇಶಗಳಲ್ಲಿ 168 ನೇ ಸ್ಥಾನದಲ್ಲಿತ್ತು. ಈ ವರ್ಷದ ಪಟ್ಟಿಯಲ್ಲಿ ದೇಶದ ಪರಿಸರ ಆರೋಗ್ಯ ಅವನತಿಯತ್ತ ಸಾಗಿದೆ ಎಂದು ಸೂಚಿಸಿದೆ.

ಪರಿಸರ ಕಾರ್ಯಕ್ಷಮತೆ ಸೂಚ್ಯಂಕವನ್ನು ಮೊದಲ ಬಾರಿಗೆ 2002 ರಲ್ಲಿ ವಿವಿಧ ದೇಶಗಳ ಪರಿಸರ ಸಮರ್ಥನೀಯತೆಯನ್ನು ಅಳೆಯುವ ಸೂಚ್ಯಂಕವಾಗಿ ಸ್ಥಾಪಿಸಲಾಯಿತು. ಇದನ್ನು ವಿಶ್ವ ಆರ್ಥಿಕ ವೇದಿಕೆ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಸ್ಥಾಪಿಸಲಾಯಿತು.

ಇದನ್ನೂ ಓದಿ: ಮಾತು ಮರೆತ ಭಾರತ; ದಲಿತ್ ಫೈಲ್ಸ್: ಸ್ವಾತಂತ್ರ್ಯದ ಹೊಸ್ತಿಲಲ್ಲಿ ಸಾಸನೂರು ಹತ್ಯಾಕಾಂಡ

“ಪರಿಸರ ಕಾರ್ಯಕ್ಷಮತೆ ಸೂಚ್ಯಂಕ ಹವಾಮಾನ ಬದಲಾವಣೆಯ ಕಾರ್ಯಕ್ಷಮತೆ, ಪರಿಸರ ಆರೋಗ್ಯ ಮತ್ತು ಪರಿಸರ ವ್ಯವಸ್ಥೆಯ ಚೈತನ್ಯದ ಮೇಲೆ 180 ದೇಶಗಳಿಗೆ ಶ್ರೇಯಾಂಕ ನೀಡಿದೆ. ಈ ಸೂಚಕಗಳು ಸ್ಥಾಪಿತ ಪರಿಸರ ನೀತಿ ಗುರಿಗಳಿಗೆ ದೇಶಗಳು ಎಷ್ಟು ನಿಕಟವಾಗಿವೆ ಎಂಬುದಕ್ಕೆ ರಾಷ್ಟ್ರೀಯ ಪ್ರಮಾಣದಲ್ಲಿ ಪ್ರಮಾಣವನ್ನು ಒದಗಿಸುತ್ತವೆ” ಎಂದು ವರದಿ ಹೇಳುತ್ತದೆ.

ಪರಿಸರ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ ಭಾರತ ಮತ್ತು ಇತರ ದೇಶಗಳ ಕಡಿಮೆ ಅಂಕಗಳು ಹವಾಮಾನ ಬದಲಾವಣೆ, ಗಾಳಿ ಮತ್ತು ನೀರಿನ ಗುಣಮಟ್ಟದಂತಹ ವಿವಿಧ ಸಮರ್ಥನೀಯ ಕ್ರಮಗಳ ಮೇಲೆ ತಮ್ಮ ಪ್ರಯತ್ನಗಳನ್ನು ಹೆಚ್ಚಿಸುವ ಅಗತ್ಯವಿದೆ ಎಂದು ವರದಿಯು ಸೂಚಿಸುತ್ತವೆ.

ಆದರೆ ಈ ವಿಶ್ವ ಬ್ಯಾಂಕಿನ ವರದಿಗೆ ಬಿಜೆಪಿಯ ಮೋದಿ ನೇತೃತ್ವದ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ್ದು, ಕೇಂದ್ರ ಪರಿಸರ ಸಚಿವಾಲಯವು, ‘ಪರಿಸರ ಕಾರ್ಯಕ್ಷಮತೆ ಸೂಚ್ಯಂಕ ವಿಶ್ಲೇಷಣೆಯನ್ನು ಸ್ವೀಕರಿಸುವುದಿಲ್ಲ’ ಎಂದು ಹೇಳಿದೆ.

ಇದನ್ನೂ ಓದಿ: ಪ್ರವಾದಿಯನ್ನು ಅವಹೇಳನ ಮಾಡಿದ ಬಿಜೆಪಿಯ ತಪ್ಪಿಗೆ ಭಾರತ ಯಾಕೆ ಕ್ಷಮೆ ಕೇಳಬೇಕು?: ಮೋದಿಗೆ ಕೆಟಿಆ‌‌ರ್‌ ಪ್ರಶ್ನೆ

“ವರದಿಯ ಲೇಖಕರು ತಪ್ಪಾಗಿ ವಿಶ್ಲೇಷಿಸಿದ್ದಾರೆ. ಪಕ್ಷಪಾತದ ಮಾಪನಗಳು ಮತ್ತು ಪಕ್ಷಪಾತದ ಲೆಕ್ಕಾಚಾಗಳ ಬಳಕೆಯಿಂದಾಗಿ ಭಾರತವು ಅತ್ಯಂತ ಕೆಳಗಿನ ಶ್ರೇಣಿಗೆ ಹೋಗುವಂತಾಯಿತು ಎಂದು ಸಚಿವಾಲಯ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....