Homeರಾಷ್ಟ್ರೀಯ‘ಸ್ವಚ್ಛ ಭಾರತ ಅಭಿಯಾನ’ದ ನಡುವೆಯೂ, ವಿಶ್ವದ ಅತ್ಯಂತ ಕೆಟ್ಟ ಪರಿಸರ ಆರೋಗ್ಯ ಹೊಂದಿರುವ ದೇಶವಾಗಿ ಭಾರತ!

‘ಸ್ವಚ್ಛ ಭಾರತ ಅಭಿಯಾನ’ದ ನಡುವೆಯೂ, ವಿಶ್ವದ ಅತ್ಯಂತ ಕೆಟ್ಟ ಪರಿಸರ ಆರೋಗ್ಯ ಹೊಂದಿರುವ ದೇಶವಾಗಿ ಭಾರತ!

ವಿಶ್ವದ 180 ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಕೊನೆಯ 180 ನೇ ಸ್ಥಾನದಲ್ಲಿದೆ ಎಂದು ವಿಶ್ವಬ್ಯಾಂಕ್ ವರದಿ ಸೂಚಿಸಿದೆ

- Advertisement -
- Advertisement -

ಬಿಜೆಪಿಯ ಮೋದಿ ಸರ್ಕಾರದ ಸ್ವಚ್ಛ ಭಾರತ ಅಭಿಯಾನದ ನಡುವೆಯೂ, ಭಾರತವು ವಿಶ್ವದ ಅತ್ಯಂತ ಕೆಟ್ಟ ಪರಿಸರ ಆರೋಗ್ಯವನ್ನು ಹೊಂದಿರುವ ದೇಶವಾಗಿದೆ ಹೊರಹೊಮ್ಮಿದೆ. ವಿಶ್ವಬ್ಯಾಂಕ್ ಬಿಡುಗಡೆ ಮಾಡಿರುವ ‘ಪರಿಸರ ಕಾರ್ಯಕ್ಷಮತೆ ಸೂಚ್ಯಂಕ-2022’ರ ವರದಿಯು, ವಿಶ್ವದ 180 ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಕೊನೆಯ 180 ನೇ ಸ್ಥಾನದಲ್ಲಿದೆ ಎಂದು ಸೂಚಿಸಿದೆ.

ಭಾರತದ ನೆರೆಯ ದೇಶಗಳಾದ ಬಾಂಗ್ಲಾದೇಶ, ಮ್ಯಾನ್ಮಾರ್, ಪಾಕಿಸ್ತಾನ ಮತ್ತು ವಿಯೆಟ್ನಾಂ ಕೂಡ ಭಾರತಕ್ಕಿಂತ ಉತ್ತಮ ಸ್ಥಾನದಲ್ಲಿದೆ. ಭ್ರಷ್ಟಾಚಾರ ನಿಯಂತ್ರಣ, ಕಾನೂನಿನ ನಿಯಮ ಮತ್ತು ಸರ್ಕಾರದ ಪರಿಣಾಮಕಾರಿತ್ವದಂತಹ ವಿವಿಧ ಕ್ರಮಗಳಲ್ಲಿ ಕೂಡಾ ಭಾರತವು ಕಳಪೆ ಅಂಕಗಳನ್ನು ಗಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡೆನ್ಮಾರ್ಕ್ ದೇಶವೂ ಸುಸ್ಥಿರತೆ ಮತ್ತು ಪರಿಸರ ಆರೋಗ್ಯ ವಿಭಾಗಗಳಲ್ಲಿ ಮೊದಲ ಸ್ಥಾನದಲ್ಲಿದ್ದು, ಯುಕೆ, ಫಿನ್‌ಲ್ಯಾಂಡ್‌, ಮಾಲ್ಟಾ, ಸ್ವೀಡನ್‌ ದೇಶಗಳು ನಂತರದ ಸ್ಥಾನಗಳನ್ನು ಕಾಯ್ದುಕೊಂಡಿದೆ.

ಇದನ್ನೂ ಓದಿ: ಪ್ರಧಾನಿಯೊಂದಿಗಿನ ಮಾತುಕತೆಗಳಲ್ಲಿ ಪ್ರವಾದಿ ನಿಂದನೆ ಬಗ್ಗೆ ಇರಾನ್‌ ಉಲ್ಲೇಖಿಸಿಲ್ಲ: ಭಾರತ

ಭಾರತದ ನೆರೆಯ ದೇಶಗಳಾದ ಚೀನಾ ಈ ಪಟ್ಟಿಯಲ್ಲಿ 160 ನೇ ಸ್ಥಾನದಲ್ಲಿದ್ದು, ನೇಪಾಳ 162ನೇ ಸ್ಥಾನದಲ್ಲಿದೆ. ಭೂತಾನ್ 85 ನೇ ಸ್ಥಾನದಲ್ಲಿದ್ದು, ಪಾಕಿಸ್ತಾನ 176, ಮಯನ್ಮಾರ್‌ 179, ಮಾಲ್ಡೀವ್ 113, ಶ್ರೀಲಂಕಾ 132, ಬಾಂಗ್ಲಾದೇಶ 177 ಮತ್ತು ಅಫ್ಘಾನಿಸ್ಥಾನ 81ನೇ ಸ್ಥಾನದಲ್ಲಿದೆ.

ಪರಿಸರ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ ಭಾರತ ಮತ್ತು ನೆರೆಯ ರಾಷ್ಟ್ರಗಳ ಸ್ಥಾನ (ಆಧಾರ 2022 EPI Results)

‘ಪರಿಸರ ಕಾರ್ಯಕ್ಷಮತೆ ಸೂಚ್ಯಂಕ-2020’ ರಲ್ಲಿ ಭಾರತವು 180 ದೇಶಗಳಲ್ಲಿ 168 ನೇ ಸ್ಥಾನದಲ್ಲಿತ್ತು. ಈ ವರ್ಷದ ಪಟ್ಟಿಯಲ್ಲಿ ದೇಶದ ಪರಿಸರ ಆರೋಗ್ಯ ಅವನತಿಯತ್ತ ಸಾಗಿದೆ ಎಂದು ಸೂಚಿಸಿದೆ.

ಪರಿಸರ ಕಾರ್ಯಕ್ಷಮತೆ ಸೂಚ್ಯಂಕವನ್ನು ಮೊದಲ ಬಾರಿಗೆ 2002 ರಲ್ಲಿ ವಿವಿಧ ದೇಶಗಳ ಪರಿಸರ ಸಮರ್ಥನೀಯತೆಯನ್ನು ಅಳೆಯುವ ಸೂಚ್ಯಂಕವಾಗಿ ಸ್ಥಾಪಿಸಲಾಯಿತು. ಇದನ್ನು ವಿಶ್ವ ಆರ್ಥಿಕ ವೇದಿಕೆ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಸ್ಥಾಪಿಸಲಾಯಿತು.

ಇದನ್ನೂ ಓದಿ: ಮಾತು ಮರೆತ ಭಾರತ; ದಲಿತ್ ಫೈಲ್ಸ್: ಸ್ವಾತಂತ್ರ್ಯದ ಹೊಸ್ತಿಲಲ್ಲಿ ಸಾಸನೂರು ಹತ್ಯಾಕಾಂಡ

“ಪರಿಸರ ಕಾರ್ಯಕ್ಷಮತೆ ಸೂಚ್ಯಂಕ ಹವಾಮಾನ ಬದಲಾವಣೆಯ ಕಾರ್ಯಕ್ಷಮತೆ, ಪರಿಸರ ಆರೋಗ್ಯ ಮತ್ತು ಪರಿಸರ ವ್ಯವಸ್ಥೆಯ ಚೈತನ್ಯದ ಮೇಲೆ 180 ದೇಶಗಳಿಗೆ ಶ್ರೇಯಾಂಕ ನೀಡಿದೆ. ಈ ಸೂಚಕಗಳು ಸ್ಥಾಪಿತ ಪರಿಸರ ನೀತಿ ಗುರಿಗಳಿಗೆ ದೇಶಗಳು ಎಷ್ಟು ನಿಕಟವಾಗಿವೆ ಎಂಬುದಕ್ಕೆ ರಾಷ್ಟ್ರೀಯ ಪ್ರಮಾಣದಲ್ಲಿ ಪ್ರಮಾಣವನ್ನು ಒದಗಿಸುತ್ತವೆ” ಎಂದು ವರದಿ ಹೇಳುತ್ತದೆ.

ಪರಿಸರ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ ಭಾರತ ಮತ್ತು ಇತರ ದೇಶಗಳ ಕಡಿಮೆ ಅಂಕಗಳು ಹವಾಮಾನ ಬದಲಾವಣೆ, ಗಾಳಿ ಮತ್ತು ನೀರಿನ ಗುಣಮಟ್ಟದಂತಹ ವಿವಿಧ ಸಮರ್ಥನೀಯ ಕ್ರಮಗಳ ಮೇಲೆ ತಮ್ಮ ಪ್ರಯತ್ನಗಳನ್ನು ಹೆಚ್ಚಿಸುವ ಅಗತ್ಯವಿದೆ ಎಂದು ವರದಿಯು ಸೂಚಿಸುತ್ತವೆ.

ಆದರೆ ಈ ವಿಶ್ವ ಬ್ಯಾಂಕಿನ ವರದಿಗೆ ಬಿಜೆಪಿಯ ಮೋದಿ ನೇತೃತ್ವದ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ್ದು, ಕೇಂದ್ರ ಪರಿಸರ ಸಚಿವಾಲಯವು, ‘ಪರಿಸರ ಕಾರ್ಯಕ್ಷಮತೆ ಸೂಚ್ಯಂಕ ವಿಶ್ಲೇಷಣೆಯನ್ನು ಸ್ವೀಕರಿಸುವುದಿಲ್ಲ’ ಎಂದು ಹೇಳಿದೆ.

ಇದನ್ನೂ ಓದಿ: ಪ್ರವಾದಿಯನ್ನು ಅವಹೇಳನ ಮಾಡಿದ ಬಿಜೆಪಿಯ ತಪ್ಪಿಗೆ ಭಾರತ ಯಾಕೆ ಕ್ಷಮೆ ಕೇಳಬೇಕು?: ಮೋದಿಗೆ ಕೆಟಿಆ‌‌ರ್‌ ಪ್ರಶ್ನೆ

“ವರದಿಯ ಲೇಖಕರು ತಪ್ಪಾಗಿ ವಿಶ್ಲೇಷಿಸಿದ್ದಾರೆ. ಪಕ್ಷಪಾತದ ಮಾಪನಗಳು ಮತ್ತು ಪಕ್ಷಪಾತದ ಲೆಕ್ಕಾಚಾಗಳ ಬಳಕೆಯಿಂದಾಗಿ ಭಾರತವು ಅತ್ಯಂತ ಕೆಳಗಿನ ಶ್ರೇಣಿಗೆ ಹೋಗುವಂತಾಯಿತು ಎಂದು ಸಚಿವಾಲಯ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...