Homeರಾಷ್ಟ್ರೀಯ‘ಸ್ವಚ್ಛ ಭಾರತ ಅಭಿಯಾನ’ದ ನಡುವೆಯೂ, ವಿಶ್ವದ ಅತ್ಯಂತ ಕೆಟ್ಟ ಪರಿಸರ ಆರೋಗ್ಯ ಹೊಂದಿರುವ ದೇಶವಾಗಿ ಭಾರತ!

‘ಸ್ವಚ್ಛ ಭಾರತ ಅಭಿಯಾನ’ದ ನಡುವೆಯೂ, ವಿಶ್ವದ ಅತ್ಯಂತ ಕೆಟ್ಟ ಪರಿಸರ ಆರೋಗ್ಯ ಹೊಂದಿರುವ ದೇಶವಾಗಿ ಭಾರತ!

ವಿಶ್ವದ 180 ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಕೊನೆಯ 180 ನೇ ಸ್ಥಾನದಲ್ಲಿದೆ ಎಂದು ವಿಶ್ವಬ್ಯಾಂಕ್ ವರದಿ ಸೂಚಿಸಿದೆ

- Advertisement -
- Advertisement -

ಬಿಜೆಪಿಯ ಮೋದಿ ಸರ್ಕಾರದ ಸ್ವಚ್ಛ ಭಾರತ ಅಭಿಯಾನದ ನಡುವೆಯೂ, ಭಾರತವು ವಿಶ್ವದ ಅತ್ಯಂತ ಕೆಟ್ಟ ಪರಿಸರ ಆರೋಗ್ಯವನ್ನು ಹೊಂದಿರುವ ದೇಶವಾಗಿದೆ ಹೊರಹೊಮ್ಮಿದೆ. ವಿಶ್ವಬ್ಯಾಂಕ್ ಬಿಡುಗಡೆ ಮಾಡಿರುವ ‘ಪರಿಸರ ಕಾರ್ಯಕ್ಷಮತೆ ಸೂಚ್ಯಂಕ-2022’ರ ವರದಿಯು, ವಿಶ್ವದ 180 ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಕೊನೆಯ 180 ನೇ ಸ್ಥಾನದಲ್ಲಿದೆ ಎಂದು ಸೂಚಿಸಿದೆ.

ಭಾರತದ ನೆರೆಯ ದೇಶಗಳಾದ ಬಾಂಗ್ಲಾದೇಶ, ಮ್ಯಾನ್ಮಾರ್, ಪಾಕಿಸ್ತಾನ ಮತ್ತು ವಿಯೆಟ್ನಾಂ ಕೂಡ ಭಾರತಕ್ಕಿಂತ ಉತ್ತಮ ಸ್ಥಾನದಲ್ಲಿದೆ. ಭ್ರಷ್ಟಾಚಾರ ನಿಯಂತ್ರಣ, ಕಾನೂನಿನ ನಿಯಮ ಮತ್ತು ಸರ್ಕಾರದ ಪರಿಣಾಮಕಾರಿತ್ವದಂತಹ ವಿವಿಧ ಕ್ರಮಗಳಲ್ಲಿ ಕೂಡಾ ಭಾರತವು ಕಳಪೆ ಅಂಕಗಳನ್ನು ಗಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡೆನ್ಮಾರ್ಕ್ ದೇಶವೂ ಸುಸ್ಥಿರತೆ ಮತ್ತು ಪರಿಸರ ಆರೋಗ್ಯ ವಿಭಾಗಗಳಲ್ಲಿ ಮೊದಲ ಸ್ಥಾನದಲ್ಲಿದ್ದು, ಯುಕೆ, ಫಿನ್‌ಲ್ಯಾಂಡ್‌, ಮಾಲ್ಟಾ, ಸ್ವೀಡನ್‌ ದೇಶಗಳು ನಂತರದ ಸ್ಥಾನಗಳನ್ನು ಕಾಯ್ದುಕೊಂಡಿದೆ.

ಇದನ್ನೂ ಓದಿ: ಪ್ರಧಾನಿಯೊಂದಿಗಿನ ಮಾತುಕತೆಗಳಲ್ಲಿ ಪ್ರವಾದಿ ನಿಂದನೆ ಬಗ್ಗೆ ಇರಾನ್‌ ಉಲ್ಲೇಖಿಸಿಲ್ಲ: ಭಾರತ

ಭಾರತದ ನೆರೆಯ ದೇಶಗಳಾದ ಚೀನಾ ಈ ಪಟ್ಟಿಯಲ್ಲಿ 160 ನೇ ಸ್ಥಾನದಲ್ಲಿದ್ದು, ನೇಪಾಳ 162ನೇ ಸ್ಥಾನದಲ್ಲಿದೆ. ಭೂತಾನ್ 85 ನೇ ಸ್ಥಾನದಲ್ಲಿದ್ದು, ಪಾಕಿಸ್ತಾನ 176, ಮಯನ್ಮಾರ್‌ 179, ಮಾಲ್ಡೀವ್ 113, ಶ್ರೀಲಂಕಾ 132, ಬಾಂಗ್ಲಾದೇಶ 177 ಮತ್ತು ಅಫ್ಘಾನಿಸ್ಥಾನ 81ನೇ ಸ್ಥಾನದಲ್ಲಿದೆ.

ಪರಿಸರ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ ಭಾರತ ಮತ್ತು ನೆರೆಯ ರಾಷ್ಟ್ರಗಳ ಸ್ಥಾನ (ಆಧಾರ 2022 EPI Results)

‘ಪರಿಸರ ಕಾರ್ಯಕ್ಷಮತೆ ಸೂಚ್ಯಂಕ-2020’ ರಲ್ಲಿ ಭಾರತವು 180 ದೇಶಗಳಲ್ಲಿ 168 ನೇ ಸ್ಥಾನದಲ್ಲಿತ್ತು. ಈ ವರ್ಷದ ಪಟ್ಟಿಯಲ್ಲಿ ದೇಶದ ಪರಿಸರ ಆರೋಗ್ಯ ಅವನತಿಯತ್ತ ಸಾಗಿದೆ ಎಂದು ಸೂಚಿಸಿದೆ.

ಪರಿಸರ ಕಾರ್ಯಕ್ಷಮತೆ ಸೂಚ್ಯಂಕವನ್ನು ಮೊದಲ ಬಾರಿಗೆ 2002 ರಲ್ಲಿ ವಿವಿಧ ದೇಶಗಳ ಪರಿಸರ ಸಮರ್ಥನೀಯತೆಯನ್ನು ಅಳೆಯುವ ಸೂಚ್ಯಂಕವಾಗಿ ಸ್ಥಾಪಿಸಲಾಯಿತು. ಇದನ್ನು ವಿಶ್ವ ಆರ್ಥಿಕ ವೇದಿಕೆ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಸ್ಥಾಪಿಸಲಾಯಿತು.

ಇದನ್ನೂ ಓದಿ: ಮಾತು ಮರೆತ ಭಾರತ; ದಲಿತ್ ಫೈಲ್ಸ್: ಸ್ವಾತಂತ್ರ್ಯದ ಹೊಸ್ತಿಲಲ್ಲಿ ಸಾಸನೂರು ಹತ್ಯಾಕಾಂಡ

“ಪರಿಸರ ಕಾರ್ಯಕ್ಷಮತೆ ಸೂಚ್ಯಂಕ ಹವಾಮಾನ ಬದಲಾವಣೆಯ ಕಾರ್ಯಕ್ಷಮತೆ, ಪರಿಸರ ಆರೋಗ್ಯ ಮತ್ತು ಪರಿಸರ ವ್ಯವಸ್ಥೆಯ ಚೈತನ್ಯದ ಮೇಲೆ 180 ದೇಶಗಳಿಗೆ ಶ್ರೇಯಾಂಕ ನೀಡಿದೆ. ಈ ಸೂಚಕಗಳು ಸ್ಥಾಪಿತ ಪರಿಸರ ನೀತಿ ಗುರಿಗಳಿಗೆ ದೇಶಗಳು ಎಷ್ಟು ನಿಕಟವಾಗಿವೆ ಎಂಬುದಕ್ಕೆ ರಾಷ್ಟ್ರೀಯ ಪ್ರಮಾಣದಲ್ಲಿ ಪ್ರಮಾಣವನ್ನು ಒದಗಿಸುತ್ತವೆ” ಎಂದು ವರದಿ ಹೇಳುತ್ತದೆ.

ಪರಿಸರ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ ಭಾರತ ಮತ್ತು ಇತರ ದೇಶಗಳ ಕಡಿಮೆ ಅಂಕಗಳು ಹವಾಮಾನ ಬದಲಾವಣೆ, ಗಾಳಿ ಮತ್ತು ನೀರಿನ ಗುಣಮಟ್ಟದಂತಹ ವಿವಿಧ ಸಮರ್ಥನೀಯ ಕ್ರಮಗಳ ಮೇಲೆ ತಮ್ಮ ಪ್ರಯತ್ನಗಳನ್ನು ಹೆಚ್ಚಿಸುವ ಅಗತ್ಯವಿದೆ ಎಂದು ವರದಿಯು ಸೂಚಿಸುತ್ತವೆ.

ಆದರೆ ಈ ವಿಶ್ವ ಬ್ಯಾಂಕಿನ ವರದಿಗೆ ಬಿಜೆಪಿಯ ಮೋದಿ ನೇತೃತ್ವದ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ್ದು, ಕೇಂದ್ರ ಪರಿಸರ ಸಚಿವಾಲಯವು, ‘ಪರಿಸರ ಕಾರ್ಯಕ್ಷಮತೆ ಸೂಚ್ಯಂಕ ವಿಶ್ಲೇಷಣೆಯನ್ನು ಸ್ವೀಕರಿಸುವುದಿಲ್ಲ’ ಎಂದು ಹೇಳಿದೆ.

ಇದನ್ನೂ ಓದಿ: ಪ್ರವಾದಿಯನ್ನು ಅವಹೇಳನ ಮಾಡಿದ ಬಿಜೆಪಿಯ ತಪ್ಪಿಗೆ ಭಾರತ ಯಾಕೆ ಕ್ಷಮೆ ಕೇಳಬೇಕು?: ಮೋದಿಗೆ ಕೆಟಿಆ‌‌ರ್‌ ಪ್ರಶ್ನೆ

“ವರದಿಯ ಲೇಖಕರು ತಪ್ಪಾಗಿ ವಿಶ್ಲೇಷಿಸಿದ್ದಾರೆ. ಪಕ್ಷಪಾತದ ಮಾಪನಗಳು ಮತ್ತು ಪಕ್ಷಪಾತದ ಲೆಕ್ಕಾಚಾಗಳ ಬಳಕೆಯಿಂದಾಗಿ ಭಾರತವು ಅತ್ಯಂತ ಕೆಳಗಿನ ಶ್ರೇಣಿಗೆ ಹೋಗುವಂತಾಯಿತು ಎಂದು ಸಚಿವಾಲಯ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...