Homeರಾಷ್ಟ್ರೀಯ‘ಸ್ವಚ್ಛ ಭಾರತ ಅಭಿಯಾನ’ದ ನಡುವೆಯೂ, ವಿಶ್ವದ ಅತ್ಯಂತ ಕೆಟ್ಟ ಪರಿಸರ ಆರೋಗ್ಯ ಹೊಂದಿರುವ ದೇಶವಾಗಿ ಭಾರತ!

‘ಸ್ವಚ್ಛ ಭಾರತ ಅಭಿಯಾನ’ದ ನಡುವೆಯೂ, ವಿಶ್ವದ ಅತ್ಯಂತ ಕೆಟ್ಟ ಪರಿಸರ ಆರೋಗ್ಯ ಹೊಂದಿರುವ ದೇಶವಾಗಿ ಭಾರತ!

ವಿಶ್ವದ 180 ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಕೊನೆಯ 180 ನೇ ಸ್ಥಾನದಲ್ಲಿದೆ ಎಂದು ವಿಶ್ವಬ್ಯಾಂಕ್ ವರದಿ ಸೂಚಿಸಿದೆ

- Advertisement -
- Advertisement -

ಬಿಜೆಪಿಯ ಮೋದಿ ಸರ್ಕಾರದ ಸ್ವಚ್ಛ ಭಾರತ ಅಭಿಯಾನದ ನಡುವೆಯೂ, ಭಾರತವು ವಿಶ್ವದ ಅತ್ಯಂತ ಕೆಟ್ಟ ಪರಿಸರ ಆರೋಗ್ಯವನ್ನು ಹೊಂದಿರುವ ದೇಶವಾಗಿದೆ ಹೊರಹೊಮ್ಮಿದೆ. ವಿಶ್ವಬ್ಯಾಂಕ್ ಬಿಡುಗಡೆ ಮಾಡಿರುವ ‘ಪರಿಸರ ಕಾರ್ಯಕ್ಷಮತೆ ಸೂಚ್ಯಂಕ-2022’ರ ವರದಿಯು, ವಿಶ್ವದ 180 ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಕೊನೆಯ 180 ನೇ ಸ್ಥಾನದಲ್ಲಿದೆ ಎಂದು ಸೂಚಿಸಿದೆ.

ಭಾರತದ ನೆರೆಯ ದೇಶಗಳಾದ ಬಾಂಗ್ಲಾದೇಶ, ಮ್ಯಾನ್ಮಾರ್, ಪಾಕಿಸ್ತಾನ ಮತ್ತು ವಿಯೆಟ್ನಾಂ ಕೂಡ ಭಾರತಕ್ಕಿಂತ ಉತ್ತಮ ಸ್ಥಾನದಲ್ಲಿದೆ. ಭ್ರಷ್ಟಾಚಾರ ನಿಯಂತ್ರಣ, ಕಾನೂನಿನ ನಿಯಮ ಮತ್ತು ಸರ್ಕಾರದ ಪರಿಣಾಮಕಾರಿತ್ವದಂತಹ ವಿವಿಧ ಕ್ರಮಗಳಲ್ಲಿ ಕೂಡಾ ಭಾರತವು ಕಳಪೆ ಅಂಕಗಳನ್ನು ಗಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡೆನ್ಮಾರ್ಕ್ ದೇಶವೂ ಸುಸ್ಥಿರತೆ ಮತ್ತು ಪರಿಸರ ಆರೋಗ್ಯ ವಿಭಾಗಗಳಲ್ಲಿ ಮೊದಲ ಸ್ಥಾನದಲ್ಲಿದ್ದು, ಯುಕೆ, ಫಿನ್‌ಲ್ಯಾಂಡ್‌, ಮಾಲ್ಟಾ, ಸ್ವೀಡನ್‌ ದೇಶಗಳು ನಂತರದ ಸ್ಥಾನಗಳನ್ನು ಕಾಯ್ದುಕೊಂಡಿದೆ.

ಇದನ್ನೂ ಓದಿ: ಪ್ರಧಾನಿಯೊಂದಿಗಿನ ಮಾತುಕತೆಗಳಲ್ಲಿ ಪ್ರವಾದಿ ನಿಂದನೆ ಬಗ್ಗೆ ಇರಾನ್‌ ಉಲ್ಲೇಖಿಸಿಲ್ಲ: ಭಾರತ

ಭಾರತದ ನೆರೆಯ ದೇಶಗಳಾದ ಚೀನಾ ಈ ಪಟ್ಟಿಯಲ್ಲಿ 160 ನೇ ಸ್ಥಾನದಲ್ಲಿದ್ದು, ನೇಪಾಳ 162ನೇ ಸ್ಥಾನದಲ್ಲಿದೆ. ಭೂತಾನ್ 85 ನೇ ಸ್ಥಾನದಲ್ಲಿದ್ದು, ಪಾಕಿಸ್ತಾನ 176, ಮಯನ್ಮಾರ್‌ 179, ಮಾಲ್ಡೀವ್ 113, ಶ್ರೀಲಂಕಾ 132, ಬಾಂಗ್ಲಾದೇಶ 177 ಮತ್ತು ಅಫ್ಘಾನಿಸ್ಥಾನ 81ನೇ ಸ್ಥಾನದಲ್ಲಿದೆ.

ಪರಿಸರ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ ಭಾರತ ಮತ್ತು ನೆರೆಯ ರಾಷ್ಟ್ರಗಳ ಸ್ಥಾನ (ಆಧಾರ 2022 EPI Results)

‘ಪರಿಸರ ಕಾರ್ಯಕ್ಷಮತೆ ಸೂಚ್ಯಂಕ-2020’ ರಲ್ಲಿ ಭಾರತವು 180 ದೇಶಗಳಲ್ಲಿ 168 ನೇ ಸ್ಥಾನದಲ್ಲಿತ್ತು. ಈ ವರ್ಷದ ಪಟ್ಟಿಯಲ್ಲಿ ದೇಶದ ಪರಿಸರ ಆರೋಗ್ಯ ಅವನತಿಯತ್ತ ಸಾಗಿದೆ ಎಂದು ಸೂಚಿಸಿದೆ.

ಪರಿಸರ ಕಾರ್ಯಕ್ಷಮತೆ ಸೂಚ್ಯಂಕವನ್ನು ಮೊದಲ ಬಾರಿಗೆ 2002 ರಲ್ಲಿ ವಿವಿಧ ದೇಶಗಳ ಪರಿಸರ ಸಮರ್ಥನೀಯತೆಯನ್ನು ಅಳೆಯುವ ಸೂಚ್ಯಂಕವಾಗಿ ಸ್ಥಾಪಿಸಲಾಯಿತು. ಇದನ್ನು ವಿಶ್ವ ಆರ್ಥಿಕ ವೇದಿಕೆ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಸ್ಥಾಪಿಸಲಾಯಿತು.

ಇದನ್ನೂ ಓದಿ: ಮಾತು ಮರೆತ ಭಾರತ; ದಲಿತ್ ಫೈಲ್ಸ್: ಸ್ವಾತಂತ್ರ್ಯದ ಹೊಸ್ತಿಲಲ್ಲಿ ಸಾಸನೂರು ಹತ್ಯಾಕಾಂಡ

“ಪರಿಸರ ಕಾರ್ಯಕ್ಷಮತೆ ಸೂಚ್ಯಂಕ ಹವಾಮಾನ ಬದಲಾವಣೆಯ ಕಾರ್ಯಕ್ಷಮತೆ, ಪರಿಸರ ಆರೋಗ್ಯ ಮತ್ತು ಪರಿಸರ ವ್ಯವಸ್ಥೆಯ ಚೈತನ್ಯದ ಮೇಲೆ 180 ದೇಶಗಳಿಗೆ ಶ್ರೇಯಾಂಕ ನೀಡಿದೆ. ಈ ಸೂಚಕಗಳು ಸ್ಥಾಪಿತ ಪರಿಸರ ನೀತಿ ಗುರಿಗಳಿಗೆ ದೇಶಗಳು ಎಷ್ಟು ನಿಕಟವಾಗಿವೆ ಎಂಬುದಕ್ಕೆ ರಾಷ್ಟ್ರೀಯ ಪ್ರಮಾಣದಲ್ಲಿ ಪ್ರಮಾಣವನ್ನು ಒದಗಿಸುತ್ತವೆ” ಎಂದು ವರದಿ ಹೇಳುತ್ತದೆ.

ಪರಿಸರ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ ಭಾರತ ಮತ್ತು ಇತರ ದೇಶಗಳ ಕಡಿಮೆ ಅಂಕಗಳು ಹವಾಮಾನ ಬದಲಾವಣೆ, ಗಾಳಿ ಮತ್ತು ನೀರಿನ ಗುಣಮಟ್ಟದಂತಹ ವಿವಿಧ ಸಮರ್ಥನೀಯ ಕ್ರಮಗಳ ಮೇಲೆ ತಮ್ಮ ಪ್ರಯತ್ನಗಳನ್ನು ಹೆಚ್ಚಿಸುವ ಅಗತ್ಯವಿದೆ ಎಂದು ವರದಿಯು ಸೂಚಿಸುತ್ತವೆ.

ಆದರೆ ಈ ವಿಶ್ವ ಬ್ಯಾಂಕಿನ ವರದಿಗೆ ಬಿಜೆಪಿಯ ಮೋದಿ ನೇತೃತ್ವದ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ್ದು, ಕೇಂದ್ರ ಪರಿಸರ ಸಚಿವಾಲಯವು, ‘ಪರಿಸರ ಕಾರ್ಯಕ್ಷಮತೆ ಸೂಚ್ಯಂಕ ವಿಶ್ಲೇಷಣೆಯನ್ನು ಸ್ವೀಕರಿಸುವುದಿಲ್ಲ’ ಎಂದು ಹೇಳಿದೆ.

ಇದನ್ನೂ ಓದಿ: ಪ್ರವಾದಿಯನ್ನು ಅವಹೇಳನ ಮಾಡಿದ ಬಿಜೆಪಿಯ ತಪ್ಪಿಗೆ ಭಾರತ ಯಾಕೆ ಕ್ಷಮೆ ಕೇಳಬೇಕು?: ಮೋದಿಗೆ ಕೆಟಿಆ‌‌ರ್‌ ಪ್ರಶ್ನೆ

“ವರದಿಯ ಲೇಖಕರು ತಪ್ಪಾಗಿ ವಿಶ್ಲೇಷಿಸಿದ್ದಾರೆ. ಪಕ್ಷಪಾತದ ಮಾಪನಗಳು ಮತ್ತು ಪಕ್ಷಪಾತದ ಲೆಕ್ಕಾಚಾಗಳ ಬಳಕೆಯಿಂದಾಗಿ ಭಾರತವು ಅತ್ಯಂತ ಕೆಳಗಿನ ಶ್ರೇಣಿಗೆ ಹೋಗುವಂತಾಯಿತು ಎಂದು ಸಚಿವಾಲಯ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...