Homeರಾಷ್ಟ್ರೀಯ‘ಸ್ವಚ್ಛ ಭಾರತ ಅಭಿಯಾನ’ದ ನಡುವೆಯೂ, ವಿಶ್ವದ ಅತ್ಯಂತ ಕೆಟ್ಟ ಪರಿಸರ ಆರೋಗ್ಯ ಹೊಂದಿರುವ ದೇಶವಾಗಿ ಭಾರತ!

‘ಸ್ವಚ್ಛ ಭಾರತ ಅಭಿಯಾನ’ದ ನಡುವೆಯೂ, ವಿಶ್ವದ ಅತ್ಯಂತ ಕೆಟ್ಟ ಪರಿಸರ ಆರೋಗ್ಯ ಹೊಂದಿರುವ ದೇಶವಾಗಿ ಭಾರತ!

ವಿಶ್ವದ 180 ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಕೊನೆಯ 180 ನೇ ಸ್ಥಾನದಲ್ಲಿದೆ ಎಂದು ವಿಶ್ವಬ್ಯಾಂಕ್ ವರದಿ ಸೂಚಿಸಿದೆ

- Advertisement -
- Advertisement -

ಬಿಜೆಪಿಯ ಮೋದಿ ಸರ್ಕಾರದ ಸ್ವಚ್ಛ ಭಾರತ ಅಭಿಯಾನದ ನಡುವೆಯೂ, ಭಾರತವು ವಿಶ್ವದ ಅತ್ಯಂತ ಕೆಟ್ಟ ಪರಿಸರ ಆರೋಗ್ಯವನ್ನು ಹೊಂದಿರುವ ದೇಶವಾಗಿದೆ ಹೊರಹೊಮ್ಮಿದೆ. ವಿಶ್ವಬ್ಯಾಂಕ್ ಬಿಡುಗಡೆ ಮಾಡಿರುವ ‘ಪರಿಸರ ಕಾರ್ಯಕ್ಷಮತೆ ಸೂಚ್ಯಂಕ-2022’ರ ವರದಿಯು, ವಿಶ್ವದ 180 ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಕೊನೆಯ 180 ನೇ ಸ್ಥಾನದಲ್ಲಿದೆ ಎಂದು ಸೂಚಿಸಿದೆ.

ಭಾರತದ ನೆರೆಯ ದೇಶಗಳಾದ ಬಾಂಗ್ಲಾದೇಶ, ಮ್ಯಾನ್ಮಾರ್, ಪಾಕಿಸ್ತಾನ ಮತ್ತು ವಿಯೆಟ್ನಾಂ ಕೂಡ ಭಾರತಕ್ಕಿಂತ ಉತ್ತಮ ಸ್ಥಾನದಲ್ಲಿದೆ. ಭ್ರಷ್ಟಾಚಾರ ನಿಯಂತ್ರಣ, ಕಾನೂನಿನ ನಿಯಮ ಮತ್ತು ಸರ್ಕಾರದ ಪರಿಣಾಮಕಾರಿತ್ವದಂತಹ ವಿವಿಧ ಕ್ರಮಗಳಲ್ಲಿ ಕೂಡಾ ಭಾರತವು ಕಳಪೆ ಅಂಕಗಳನ್ನು ಗಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡೆನ್ಮಾರ್ಕ್ ದೇಶವೂ ಸುಸ್ಥಿರತೆ ಮತ್ತು ಪರಿಸರ ಆರೋಗ್ಯ ವಿಭಾಗಗಳಲ್ಲಿ ಮೊದಲ ಸ್ಥಾನದಲ್ಲಿದ್ದು, ಯುಕೆ, ಫಿನ್‌ಲ್ಯಾಂಡ್‌, ಮಾಲ್ಟಾ, ಸ್ವೀಡನ್‌ ದೇಶಗಳು ನಂತರದ ಸ್ಥಾನಗಳನ್ನು ಕಾಯ್ದುಕೊಂಡಿದೆ.

ಇದನ್ನೂ ಓದಿ: ಪ್ರಧಾನಿಯೊಂದಿಗಿನ ಮಾತುಕತೆಗಳಲ್ಲಿ ಪ್ರವಾದಿ ನಿಂದನೆ ಬಗ್ಗೆ ಇರಾನ್‌ ಉಲ್ಲೇಖಿಸಿಲ್ಲ: ಭಾರತ

ಭಾರತದ ನೆರೆಯ ದೇಶಗಳಾದ ಚೀನಾ ಈ ಪಟ್ಟಿಯಲ್ಲಿ 160 ನೇ ಸ್ಥಾನದಲ್ಲಿದ್ದು, ನೇಪಾಳ 162ನೇ ಸ್ಥಾನದಲ್ಲಿದೆ. ಭೂತಾನ್ 85 ನೇ ಸ್ಥಾನದಲ್ಲಿದ್ದು, ಪಾಕಿಸ್ತಾನ 176, ಮಯನ್ಮಾರ್‌ 179, ಮಾಲ್ಡೀವ್ 113, ಶ್ರೀಲಂಕಾ 132, ಬಾಂಗ್ಲಾದೇಶ 177 ಮತ್ತು ಅಫ್ಘಾನಿಸ್ಥಾನ 81ನೇ ಸ್ಥಾನದಲ್ಲಿದೆ.

ಪರಿಸರ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ ಭಾರತ ಮತ್ತು ನೆರೆಯ ರಾಷ್ಟ್ರಗಳ ಸ್ಥಾನ (ಆಧಾರ 2022 EPI Results)

‘ಪರಿಸರ ಕಾರ್ಯಕ್ಷಮತೆ ಸೂಚ್ಯಂಕ-2020’ ರಲ್ಲಿ ಭಾರತವು 180 ದೇಶಗಳಲ್ಲಿ 168 ನೇ ಸ್ಥಾನದಲ್ಲಿತ್ತು. ಈ ವರ್ಷದ ಪಟ್ಟಿಯಲ್ಲಿ ದೇಶದ ಪರಿಸರ ಆರೋಗ್ಯ ಅವನತಿಯತ್ತ ಸಾಗಿದೆ ಎಂದು ಸೂಚಿಸಿದೆ.

ಪರಿಸರ ಕಾರ್ಯಕ್ಷಮತೆ ಸೂಚ್ಯಂಕವನ್ನು ಮೊದಲ ಬಾರಿಗೆ 2002 ರಲ್ಲಿ ವಿವಿಧ ದೇಶಗಳ ಪರಿಸರ ಸಮರ್ಥನೀಯತೆಯನ್ನು ಅಳೆಯುವ ಸೂಚ್ಯಂಕವಾಗಿ ಸ್ಥಾಪಿಸಲಾಯಿತು. ಇದನ್ನು ವಿಶ್ವ ಆರ್ಥಿಕ ವೇದಿಕೆ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಸ್ಥಾಪಿಸಲಾಯಿತು.

ಇದನ್ನೂ ಓದಿ: ಮಾತು ಮರೆತ ಭಾರತ; ದಲಿತ್ ಫೈಲ್ಸ್: ಸ್ವಾತಂತ್ರ್ಯದ ಹೊಸ್ತಿಲಲ್ಲಿ ಸಾಸನೂರು ಹತ್ಯಾಕಾಂಡ

“ಪರಿಸರ ಕಾರ್ಯಕ್ಷಮತೆ ಸೂಚ್ಯಂಕ ಹವಾಮಾನ ಬದಲಾವಣೆಯ ಕಾರ್ಯಕ್ಷಮತೆ, ಪರಿಸರ ಆರೋಗ್ಯ ಮತ್ತು ಪರಿಸರ ವ್ಯವಸ್ಥೆಯ ಚೈತನ್ಯದ ಮೇಲೆ 180 ದೇಶಗಳಿಗೆ ಶ್ರೇಯಾಂಕ ನೀಡಿದೆ. ಈ ಸೂಚಕಗಳು ಸ್ಥಾಪಿತ ಪರಿಸರ ನೀತಿ ಗುರಿಗಳಿಗೆ ದೇಶಗಳು ಎಷ್ಟು ನಿಕಟವಾಗಿವೆ ಎಂಬುದಕ್ಕೆ ರಾಷ್ಟ್ರೀಯ ಪ್ರಮಾಣದಲ್ಲಿ ಪ್ರಮಾಣವನ್ನು ಒದಗಿಸುತ್ತವೆ” ಎಂದು ವರದಿ ಹೇಳುತ್ತದೆ.

ಪರಿಸರ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ ಭಾರತ ಮತ್ತು ಇತರ ದೇಶಗಳ ಕಡಿಮೆ ಅಂಕಗಳು ಹವಾಮಾನ ಬದಲಾವಣೆ, ಗಾಳಿ ಮತ್ತು ನೀರಿನ ಗುಣಮಟ್ಟದಂತಹ ವಿವಿಧ ಸಮರ್ಥನೀಯ ಕ್ರಮಗಳ ಮೇಲೆ ತಮ್ಮ ಪ್ರಯತ್ನಗಳನ್ನು ಹೆಚ್ಚಿಸುವ ಅಗತ್ಯವಿದೆ ಎಂದು ವರದಿಯು ಸೂಚಿಸುತ್ತವೆ.

ಆದರೆ ಈ ವಿಶ್ವ ಬ್ಯಾಂಕಿನ ವರದಿಗೆ ಬಿಜೆಪಿಯ ಮೋದಿ ನೇತೃತ್ವದ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ್ದು, ಕೇಂದ್ರ ಪರಿಸರ ಸಚಿವಾಲಯವು, ‘ಪರಿಸರ ಕಾರ್ಯಕ್ಷಮತೆ ಸೂಚ್ಯಂಕ ವಿಶ್ಲೇಷಣೆಯನ್ನು ಸ್ವೀಕರಿಸುವುದಿಲ್ಲ’ ಎಂದು ಹೇಳಿದೆ.

ಇದನ್ನೂ ಓದಿ: ಪ್ರವಾದಿಯನ್ನು ಅವಹೇಳನ ಮಾಡಿದ ಬಿಜೆಪಿಯ ತಪ್ಪಿಗೆ ಭಾರತ ಯಾಕೆ ಕ್ಷಮೆ ಕೇಳಬೇಕು?: ಮೋದಿಗೆ ಕೆಟಿಆ‌‌ರ್‌ ಪ್ರಶ್ನೆ

“ವರದಿಯ ಲೇಖಕರು ತಪ್ಪಾಗಿ ವಿಶ್ಲೇಷಿಸಿದ್ದಾರೆ. ಪಕ್ಷಪಾತದ ಮಾಪನಗಳು ಮತ್ತು ಪಕ್ಷಪಾತದ ಲೆಕ್ಕಾಚಾಗಳ ಬಳಕೆಯಿಂದಾಗಿ ಭಾರತವು ಅತ್ಯಂತ ಕೆಳಗಿನ ಶ್ರೇಣಿಗೆ ಹೋಗುವಂತಾಯಿತು ಎಂದು ಸಚಿವಾಲಯ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...