Homeರಾಷ್ಟ್ರೀಯ‘ಸ್ವಚ್ಛ ಭಾರತ ಅಭಿಯಾನ’ದ ನಡುವೆಯೂ, ವಿಶ್ವದ ಅತ್ಯಂತ ಕೆಟ್ಟ ಪರಿಸರ ಆರೋಗ್ಯ ಹೊಂದಿರುವ ದೇಶವಾಗಿ ಭಾರತ!

‘ಸ್ವಚ್ಛ ಭಾರತ ಅಭಿಯಾನ’ದ ನಡುವೆಯೂ, ವಿಶ್ವದ ಅತ್ಯಂತ ಕೆಟ್ಟ ಪರಿಸರ ಆರೋಗ್ಯ ಹೊಂದಿರುವ ದೇಶವಾಗಿ ಭಾರತ!

ವಿಶ್ವದ 180 ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಕೊನೆಯ 180 ನೇ ಸ್ಥಾನದಲ್ಲಿದೆ ಎಂದು ವಿಶ್ವಬ್ಯಾಂಕ್ ವರದಿ ಸೂಚಿಸಿದೆ

- Advertisement -
- Advertisement -

ಬಿಜೆಪಿಯ ಮೋದಿ ಸರ್ಕಾರದ ಸ್ವಚ್ಛ ಭಾರತ ಅಭಿಯಾನದ ನಡುವೆಯೂ, ಭಾರತವು ವಿಶ್ವದ ಅತ್ಯಂತ ಕೆಟ್ಟ ಪರಿಸರ ಆರೋಗ್ಯವನ್ನು ಹೊಂದಿರುವ ದೇಶವಾಗಿದೆ ಹೊರಹೊಮ್ಮಿದೆ. ವಿಶ್ವಬ್ಯಾಂಕ್ ಬಿಡುಗಡೆ ಮಾಡಿರುವ ‘ಪರಿಸರ ಕಾರ್ಯಕ್ಷಮತೆ ಸೂಚ್ಯಂಕ-2022’ರ ವರದಿಯು, ವಿಶ್ವದ 180 ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಕೊನೆಯ 180 ನೇ ಸ್ಥಾನದಲ್ಲಿದೆ ಎಂದು ಸೂಚಿಸಿದೆ.

ಭಾರತದ ನೆರೆಯ ದೇಶಗಳಾದ ಬಾಂಗ್ಲಾದೇಶ, ಮ್ಯಾನ್ಮಾರ್, ಪಾಕಿಸ್ತಾನ ಮತ್ತು ವಿಯೆಟ್ನಾಂ ಕೂಡ ಭಾರತಕ್ಕಿಂತ ಉತ್ತಮ ಸ್ಥಾನದಲ್ಲಿದೆ. ಭ್ರಷ್ಟಾಚಾರ ನಿಯಂತ್ರಣ, ಕಾನೂನಿನ ನಿಯಮ ಮತ್ತು ಸರ್ಕಾರದ ಪರಿಣಾಮಕಾರಿತ್ವದಂತಹ ವಿವಿಧ ಕ್ರಮಗಳಲ್ಲಿ ಕೂಡಾ ಭಾರತವು ಕಳಪೆ ಅಂಕಗಳನ್ನು ಗಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡೆನ್ಮಾರ್ಕ್ ದೇಶವೂ ಸುಸ್ಥಿರತೆ ಮತ್ತು ಪರಿಸರ ಆರೋಗ್ಯ ವಿಭಾಗಗಳಲ್ಲಿ ಮೊದಲ ಸ್ಥಾನದಲ್ಲಿದ್ದು, ಯುಕೆ, ಫಿನ್‌ಲ್ಯಾಂಡ್‌, ಮಾಲ್ಟಾ, ಸ್ವೀಡನ್‌ ದೇಶಗಳು ನಂತರದ ಸ್ಥಾನಗಳನ್ನು ಕಾಯ್ದುಕೊಂಡಿದೆ.

ಇದನ್ನೂ ಓದಿ: ಪ್ರಧಾನಿಯೊಂದಿಗಿನ ಮಾತುಕತೆಗಳಲ್ಲಿ ಪ್ರವಾದಿ ನಿಂದನೆ ಬಗ್ಗೆ ಇರಾನ್‌ ಉಲ್ಲೇಖಿಸಿಲ್ಲ: ಭಾರತ

ಭಾರತದ ನೆರೆಯ ದೇಶಗಳಾದ ಚೀನಾ ಈ ಪಟ್ಟಿಯಲ್ಲಿ 160 ನೇ ಸ್ಥಾನದಲ್ಲಿದ್ದು, ನೇಪಾಳ 162ನೇ ಸ್ಥಾನದಲ್ಲಿದೆ. ಭೂತಾನ್ 85 ನೇ ಸ್ಥಾನದಲ್ಲಿದ್ದು, ಪಾಕಿಸ್ತಾನ 176, ಮಯನ್ಮಾರ್‌ 179, ಮಾಲ್ಡೀವ್ 113, ಶ್ರೀಲಂಕಾ 132, ಬಾಂಗ್ಲಾದೇಶ 177 ಮತ್ತು ಅಫ್ಘಾನಿಸ್ಥಾನ 81ನೇ ಸ್ಥಾನದಲ್ಲಿದೆ.

ಪರಿಸರ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ ಭಾರತ ಮತ್ತು ನೆರೆಯ ರಾಷ್ಟ್ರಗಳ ಸ್ಥಾನ (ಆಧಾರ 2022 EPI Results)

‘ಪರಿಸರ ಕಾರ್ಯಕ್ಷಮತೆ ಸೂಚ್ಯಂಕ-2020’ ರಲ್ಲಿ ಭಾರತವು 180 ದೇಶಗಳಲ್ಲಿ 168 ನೇ ಸ್ಥಾನದಲ್ಲಿತ್ತು. ಈ ವರ್ಷದ ಪಟ್ಟಿಯಲ್ಲಿ ದೇಶದ ಪರಿಸರ ಆರೋಗ್ಯ ಅವನತಿಯತ್ತ ಸಾಗಿದೆ ಎಂದು ಸೂಚಿಸಿದೆ.

ಪರಿಸರ ಕಾರ್ಯಕ್ಷಮತೆ ಸೂಚ್ಯಂಕವನ್ನು ಮೊದಲ ಬಾರಿಗೆ 2002 ರಲ್ಲಿ ವಿವಿಧ ದೇಶಗಳ ಪರಿಸರ ಸಮರ್ಥನೀಯತೆಯನ್ನು ಅಳೆಯುವ ಸೂಚ್ಯಂಕವಾಗಿ ಸ್ಥಾಪಿಸಲಾಯಿತು. ಇದನ್ನು ವಿಶ್ವ ಆರ್ಥಿಕ ವೇದಿಕೆ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಸ್ಥಾಪಿಸಲಾಯಿತು.

ಇದನ್ನೂ ಓದಿ: ಮಾತು ಮರೆತ ಭಾರತ; ದಲಿತ್ ಫೈಲ್ಸ್: ಸ್ವಾತಂತ್ರ್ಯದ ಹೊಸ್ತಿಲಲ್ಲಿ ಸಾಸನೂರು ಹತ್ಯಾಕಾಂಡ

“ಪರಿಸರ ಕಾರ್ಯಕ್ಷಮತೆ ಸೂಚ್ಯಂಕ ಹವಾಮಾನ ಬದಲಾವಣೆಯ ಕಾರ್ಯಕ್ಷಮತೆ, ಪರಿಸರ ಆರೋಗ್ಯ ಮತ್ತು ಪರಿಸರ ವ್ಯವಸ್ಥೆಯ ಚೈತನ್ಯದ ಮೇಲೆ 180 ದೇಶಗಳಿಗೆ ಶ್ರೇಯಾಂಕ ನೀಡಿದೆ. ಈ ಸೂಚಕಗಳು ಸ್ಥಾಪಿತ ಪರಿಸರ ನೀತಿ ಗುರಿಗಳಿಗೆ ದೇಶಗಳು ಎಷ್ಟು ನಿಕಟವಾಗಿವೆ ಎಂಬುದಕ್ಕೆ ರಾಷ್ಟ್ರೀಯ ಪ್ರಮಾಣದಲ್ಲಿ ಪ್ರಮಾಣವನ್ನು ಒದಗಿಸುತ್ತವೆ” ಎಂದು ವರದಿ ಹೇಳುತ್ತದೆ.

ಪರಿಸರ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ ಭಾರತ ಮತ್ತು ಇತರ ದೇಶಗಳ ಕಡಿಮೆ ಅಂಕಗಳು ಹವಾಮಾನ ಬದಲಾವಣೆ, ಗಾಳಿ ಮತ್ತು ನೀರಿನ ಗುಣಮಟ್ಟದಂತಹ ವಿವಿಧ ಸಮರ್ಥನೀಯ ಕ್ರಮಗಳ ಮೇಲೆ ತಮ್ಮ ಪ್ರಯತ್ನಗಳನ್ನು ಹೆಚ್ಚಿಸುವ ಅಗತ್ಯವಿದೆ ಎಂದು ವರದಿಯು ಸೂಚಿಸುತ್ತವೆ.

ಆದರೆ ಈ ವಿಶ್ವ ಬ್ಯಾಂಕಿನ ವರದಿಗೆ ಬಿಜೆಪಿಯ ಮೋದಿ ನೇತೃತ್ವದ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ್ದು, ಕೇಂದ್ರ ಪರಿಸರ ಸಚಿವಾಲಯವು, ‘ಪರಿಸರ ಕಾರ್ಯಕ್ಷಮತೆ ಸೂಚ್ಯಂಕ ವಿಶ್ಲೇಷಣೆಯನ್ನು ಸ್ವೀಕರಿಸುವುದಿಲ್ಲ’ ಎಂದು ಹೇಳಿದೆ.

ಇದನ್ನೂ ಓದಿ: ಪ್ರವಾದಿಯನ್ನು ಅವಹೇಳನ ಮಾಡಿದ ಬಿಜೆಪಿಯ ತಪ್ಪಿಗೆ ಭಾರತ ಯಾಕೆ ಕ್ಷಮೆ ಕೇಳಬೇಕು?: ಮೋದಿಗೆ ಕೆಟಿಆ‌‌ರ್‌ ಪ್ರಶ್ನೆ

“ವರದಿಯ ಲೇಖಕರು ತಪ್ಪಾಗಿ ವಿಶ್ಲೇಷಿಸಿದ್ದಾರೆ. ಪಕ್ಷಪಾತದ ಮಾಪನಗಳು ಮತ್ತು ಪಕ್ಷಪಾತದ ಲೆಕ್ಕಾಚಾಗಳ ಬಳಕೆಯಿಂದಾಗಿ ಭಾರತವು ಅತ್ಯಂತ ಕೆಳಗಿನ ಶ್ರೇಣಿಗೆ ಹೋಗುವಂತಾಯಿತು ಎಂದು ಸಚಿವಾಲಯ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...