Homeಅಂತರಾಷ್ಟ್ರೀಯಲಡಾಖ್‌‌ನಲ್ಲಿನ ಇತ್ತೀಚಿನ ಉದ್ವಿಗ್ನತೆಗೆ ಭಾರತವೇ ಕಾರಣ; ಚೀನಾ ಸೇನೆ ಆರೋಪ

ಲಡಾಖ್‌‌ನಲ್ಲಿನ ಇತ್ತೀಚಿನ ಉದ್ವಿಗ್ನತೆಗೆ ಭಾರತವೇ ಕಾರಣ; ಚೀನಾ ಸೇನೆ ಆರೋಪ

ಇದಕ್ಕೆ ವ್ಯತಿರಿಕ್ತವಾಗಿ ಭಾರತ-ಚೀನಾ ಮಿಲಿಟರಿ ಮತ್ತು ವಿದೇಶಾಂಗ ಅಧಿಕಾರಿ ಮಟ್ಟದಲ್ಲಿ ನಡುವೆ ನಡೆದ ಮಾತುಕತೆಯ ನಿರ್ಧಾರವನ್ನು ಧಿಕ್ಕರಿಸಿ ಚೀನಾ ಸೈನ್ಯ ಮತ್ತೆ ಪೂರ್ವ ಲಡಾಕ್‌ನಲ್ಲಿ ಪ್ರಚೋದನಕಾರಿ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಭಾರತ ಸರ್ಕಾರ ನಿನ್ನೆ ಹೇಳಿದೆ.

- Advertisement -
- Advertisement -

ಪೂರ್ವ ಲಡಾಕ್‌ನ ವಾಸ್ತವಿಕ ನಿಯಂತ್ರಣ ಗಡಿ ರೇಖೆಯ (ಎಲ್‌ಎಸಿ) ಬಳಿಯಿರುವ ಪಾಂಗೊಂಗ್ ತ್ಸೋದಲ್ಲಿ ಇತ್ತೀಚೆಗೆ ಉಂಟಾಗಿರುವ ಉದ್ವಿಗ್ನತೆಗೆ ಭಾರತವೇ ಕಾರಣ ಎಂದು ಆರೋಪಿಸಿರುವ ಚೀನಾ ಪೀಪಲ್ಸ್ ಲಿಬರೇಷನ್ ಆರ್ಮಿ, ಕೂಡಲೇ ಭಾರತ ತನ್ನ ಸೈನ್ಯವನ್ನು ಹಿಂತೆಗೆದುಕೊಳ್ಳಲಿ ಎಂದು ಒತ್ತಾಯಿಸಿದೆ.

“ಭಾರತೀಯ ಸೈನಿಕರು ಲಡಾಕ್‌ನ ವಾಸ್ತವಿಕ ನಿಯಂತ್ರಣ ಗಡಿ ರೇಖೆಯನ್ನು ಉಲ್ಲಂಘಿಸಿದ್ದಾರೆ, ಮತ್ತು ದಕ್ಷಿಣದ ದಂಡೆಯ ಪಾಂಗೊಂಗ್ ತ್ಸೊ ಮತ್ತು ರೆಕಿನ್ ಪಾಸ್‌ ಅನ್ನು ದಾಟಿದ್ದಾರೆ” ಎಂದು ಪೀಪಲ್ಸ್ ಲಿಬರೇಷನ್ ಆರ್ಮಿಯ ವೆಸ್ಟರ್ನ್ ಥಿಯೇಟರ್ ಕಮಾಂಡ್ (ಡಬ್ಲ್ಯುಟಿಸಿ) ಆರೋಪಿಸಿದೆ. ಜೊತೆಗೆ ಅಗತ್ಯ ಪ್ರತಿರೋಧ ಕ್ರಮಗಳನ್ನು ತೆಗೆದುಕೊಳ್ಳುವುದಾಗಿಯೂ ಪಿಎಲ್‌ಎ ಎಚ್ಚರಿಸಿದೆ.

ಅಧಿಕೃತ ಸುದ್ದಿ ಸಂಸ್ಥೆ, ಕ್ಸಿನ್ಹುವಾ ಡಬ್ಲ್ಯುಟಿಸಿ ವಕ್ತಾರ ಹಿರಿಯ ಕರ್ನಲ್ ಜಾಂಗ್ ಶೂಯಿಲಿಯ ಹೇಳಿಕೆಯನ್ನು ಉಲ್ಲೇಖಿಸಿ “ಆಗಸ್ಟ್ 31 ರಂದು, ಭಾರತೀಯ ಸೈನ್ಯವು ಎರಡೂ ದೇಶಗಳ ನಡುವೆ ಹಿಂದೆ ನಡೆದಿದ್ದ ಬಹು-ಹಂತದ ಮಾತುಕತೆಯಲ್ಲಿ ನಿರ್ಧರಿಸಿದ್ದ ಒಮ್ಮತವನ್ನು ಮುರಿದು ಕಾನೂನುಬಾಹಿರವಾಗಿ ಪಾಂಗೊಂಗ್‌ನ ದಕ್ಷಿಣ ದಂಡೆಯ ಬಳಿ ಮತ್ತೆ ಗಡಿ ದಾಟಿದೆ. ಇದು ಪ್ರಚೋದನಾಕಾರಿ ಮತ್ತು ಗಡಿಯಲ್ಲಿ ಉದ್ವಿಗ್ನತೆಯನ್ನು ಉಂಟುಮಾಡುತ್ತದೆ” ಎಂದು ಹೇಳಿದೆ.

“ಚೀನಾದ ಪ್ರಾದೇಶಿಕ ಸಾರ್ವಭೌಮತ್ವವನ್ನು ತೀವ್ರವಾಗಿ ಉಲ್ಲಂಘಿಸುವ ಭಾರತದ ಈ ನಡೆಯು, ಗಡಿಯಲ್ಲಿನ ಶಾಂತಿಯನ್ನು ಹಾಳುಮಾಡುತ್ತದೆ. ಇದನ್ನು ಚೀನಾ ಬಲವಾಗಿ ವಿರೋಧಿಸುತ್ತದೆ” ಎಂದು ಜಾಂಗ್ ಹೇಳಿರುವುದಾಗಿ ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

“ಭಾರತವು ತನ್ನ ಸೈನಿಕರನ್ನು ನಿಯಂತ್ರಿಸಬೇಕು ಮತ್ತು ಈ ಪ್ರದೇಶದಿಂದ ಹಿಂದೆ ಸರಿಯಬೇಕು. ಜೊತೆಗೆ ತನ್ನ ಬದ್ಧತೆಯನ್ನು ಪಾಲಿಸುವುದರೊಂದಿಗೆ, ಪರಿಸ್ಥಿತಿಯ ಬಿಗಡಾಯಿಸುವಿಕೆಯನ್ನು ತಪ್ಪಿಸಬೇಕು ಎಂದು ನಾವು ವಿನಂತಿಸುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ: ಚೀನಾ ಭಾರತದ ಭೂಪ್ರದೇಶ ಅತಿಕ್ರಮಿಸಿದೆಯೆಂದು ಒಪ್ಪಿಕೊಂಡ ರಕ್ಷಣಾ ಸಚಿವಾಲಯ: ದಾಖಲೆ ಡಿಲಿಟ್!

“ಚೀನಾದ ಗಡಿ ಪಡೆಗಳು ಯಾವಾಗಲೂ ಎಲ್‌ಎಸಿಗೆ ಕಟ್ಟುನಿಟ್ಟಾಗಿ ಬದ್ಧವಾಗಿರುತ್ತವೆ. ನಮ್ಮ ಪಡೆ ಎಂದಿಗೂ ಗಡಿ ದಾಟುವುದಿಲ್ಲ. ವಾಸ್ತವ ಸಮಸ್ಯೆಗಳ ಬಗ್ಗೆ ಎರಡು ಕಡೆ ಗಡಿ ಪಡೆಗಳು ನಿಕಟ ಸಂವಹನ ನಡೆಸುತ್ತಿವೆ ”ಎಂದು ಸಚಿವಾಲಯದ ವಕ್ತಾರ ಝಾವೋ ಲಿಜಿಯಾನ್ ಹೇಳಿದ್ದಾರೆ.

ಆದರೆ ಇದಕ್ಕೆ ವ್ಯತಿರಿಕ್ತವಾಗಿ ಭಾರತ-ಚೀನಾ ಮಿಲಿಟರಿ ಮತ್ತು ವಿದೇಶಾಂಗ ಅಧಿಕಾರಿ ಮಟ್ಟದಲ್ಲಿ ನಡುವೆ ನಡೆದ ಮಾತುಕತೆಯ ನಿರ್ಧಾರವನ್ನು ಧಿಕ್ಕರಿಸಿ ಚೀನಾ ಸೈನ್ಯ ಮತ್ತೆ ಪೂರ್ವ ಲಡಾಕ್‌ನಲ್ಲಿ ಪ್ರಚೋದನಕಾರಿ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಭಾರತ ಸರ್ಕಾರ ನಿನ್ನೆ ಹೇಳಿದೆ.

ಆಗಸ್ಟ್ 29 ಮತ್ತು 30 ರ ರಾತ್ರಿ ಚೀನಾ ಸೈನ್ಯವು ಯಥಾಸ್ಥಿತಿಯನ್ನು ಬದಲಾಯಿಸುವ ಪ್ರಯತ್ನಗಳಲ್ಲಿ ತೊಡಗಿದೆ ಎಂದು ವರದಿಯಾಗಿದೆ.

ಪ್ಯಾಗೋಂಗ್‌-ತ್ಶೋ ಸರೋವರದ ಉತ್ತರ ತೀರದಲ್ಲಿ ಚೀನಾ ಸೈನ್ಯ ನಡೆಸಿದ ಪ್ರಯತ್ನವನ್ನು ಭಾರತೀಯ ಸೈನ್ಯವು ವಿಫಲಗೊಳಿಸಿದೆ ಮತ್ತು ಚೀನಾ ಸೈನ್ಯದ ಪ್ರಯತ್ನವನ್ನು ತಡೆಯಲು ಭಾರತವು ತಮ್ಮ ಸ್ಥಾನವನ್ನು ಬಲಪಡಿಸಿದೆ ಎಂದು ಭಾರತ ಸರ್ಕಾರ ಹೇಳಿದೆ.

ಮಾತುಕತೆಗಳ ಮೂಲಕ ಶಾಂತಿಯನ್ನು ಕಾಪಾಡಿಕೊಳ್ಳಲು ಬದ್ಧವಾಗಿರುವ ಅದೇ ಸಂದರ್ಭದಲ್ಲಿ ಭಾರತೀಯ ಮಿಲಿಟರಿ ತನ್ನ ಭೂಪ್ರದೇಶವನ್ನು ರಕ್ಷಿಸಲು ಬದ್ಧವಾಗಿದೆ ಎಂದು ಸರ್ಕಾರ ತಿಳಿಸಿದೆ.

ಪ್ರಸ್ತುತ ಸಮಸ್ಯೆಯನ್ನು ಬಗೆರಿಸಲು ಗಡಿಯಲ್ಲಿರುವ ಸುಶುಲ್‌ನಲ್ಲಿ ಬ್ರಿಗೇಡ್ ಕಮಾಂಡರ್ ಮಟ್ಟದ ಧ್ವಜ ಸಭೆ ನಡೆಯುತ್ತಿದೆ ಎಂದು ವರದಿಯಾಗಿದೆ.

ಗಲ್ವಾನ್ ಕಣಿವೆಯಲ್ಲಿ ಜೂನ್ 15 ರಂದು ಗಡಿ ಪಡೆಗಳು ಘರ್ಷಣೆ ನಡೆಸಿದ ನಂತರ ಎರಡೂ ದೇಶಗಳ ನಡುವೆ ಹಲವಾರು ಸಭೆಗಳು ನಡೆದಿವೆ.


ಇದನ್ನೂ ಓದಿ: ಭಾರತ-ಚೀನಾ ಗಡಿ ಉದ್ವಿಗ್ನತೆ: ಮತ್ತೆ ಲಡಾಖ್ ಗಡಿ ಅತಿಕ್ರಮಿಸಿದ ಚೀನಾ ಪಡೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...