Homeಅಂತರಾಷ್ಟ್ರೀಯಲಡಾಖ್‌‌ನಲ್ಲಿನ ಇತ್ತೀಚಿನ ಉದ್ವಿಗ್ನತೆಗೆ ಭಾರತವೇ ಕಾರಣ; ಚೀನಾ ಸೇನೆ ಆರೋಪ

ಲಡಾಖ್‌‌ನಲ್ಲಿನ ಇತ್ತೀಚಿನ ಉದ್ವಿಗ್ನತೆಗೆ ಭಾರತವೇ ಕಾರಣ; ಚೀನಾ ಸೇನೆ ಆರೋಪ

ಇದಕ್ಕೆ ವ್ಯತಿರಿಕ್ತವಾಗಿ ಭಾರತ-ಚೀನಾ ಮಿಲಿಟರಿ ಮತ್ತು ವಿದೇಶಾಂಗ ಅಧಿಕಾರಿ ಮಟ್ಟದಲ್ಲಿ ನಡುವೆ ನಡೆದ ಮಾತುಕತೆಯ ನಿರ್ಧಾರವನ್ನು ಧಿಕ್ಕರಿಸಿ ಚೀನಾ ಸೈನ್ಯ ಮತ್ತೆ ಪೂರ್ವ ಲಡಾಕ್‌ನಲ್ಲಿ ಪ್ರಚೋದನಕಾರಿ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಭಾರತ ಸರ್ಕಾರ ನಿನ್ನೆ ಹೇಳಿದೆ.

- Advertisement -
- Advertisement -

ಪೂರ್ವ ಲಡಾಕ್‌ನ ವಾಸ್ತವಿಕ ನಿಯಂತ್ರಣ ಗಡಿ ರೇಖೆಯ (ಎಲ್‌ಎಸಿ) ಬಳಿಯಿರುವ ಪಾಂಗೊಂಗ್ ತ್ಸೋದಲ್ಲಿ ಇತ್ತೀಚೆಗೆ ಉಂಟಾಗಿರುವ ಉದ್ವಿಗ್ನತೆಗೆ ಭಾರತವೇ ಕಾರಣ ಎಂದು ಆರೋಪಿಸಿರುವ ಚೀನಾ ಪೀಪಲ್ಸ್ ಲಿಬರೇಷನ್ ಆರ್ಮಿ, ಕೂಡಲೇ ಭಾರತ ತನ್ನ ಸೈನ್ಯವನ್ನು ಹಿಂತೆಗೆದುಕೊಳ್ಳಲಿ ಎಂದು ಒತ್ತಾಯಿಸಿದೆ.

“ಭಾರತೀಯ ಸೈನಿಕರು ಲಡಾಕ್‌ನ ವಾಸ್ತವಿಕ ನಿಯಂತ್ರಣ ಗಡಿ ರೇಖೆಯನ್ನು ಉಲ್ಲಂಘಿಸಿದ್ದಾರೆ, ಮತ್ತು ದಕ್ಷಿಣದ ದಂಡೆಯ ಪಾಂಗೊಂಗ್ ತ್ಸೊ ಮತ್ತು ರೆಕಿನ್ ಪಾಸ್‌ ಅನ್ನು ದಾಟಿದ್ದಾರೆ” ಎಂದು ಪೀಪಲ್ಸ್ ಲಿಬರೇಷನ್ ಆರ್ಮಿಯ ವೆಸ್ಟರ್ನ್ ಥಿಯೇಟರ್ ಕಮಾಂಡ್ (ಡಬ್ಲ್ಯುಟಿಸಿ) ಆರೋಪಿಸಿದೆ. ಜೊತೆಗೆ ಅಗತ್ಯ ಪ್ರತಿರೋಧ ಕ್ರಮಗಳನ್ನು ತೆಗೆದುಕೊಳ್ಳುವುದಾಗಿಯೂ ಪಿಎಲ್‌ಎ ಎಚ್ಚರಿಸಿದೆ.

ಅಧಿಕೃತ ಸುದ್ದಿ ಸಂಸ್ಥೆ, ಕ್ಸಿನ್ಹುವಾ ಡಬ್ಲ್ಯುಟಿಸಿ ವಕ್ತಾರ ಹಿರಿಯ ಕರ್ನಲ್ ಜಾಂಗ್ ಶೂಯಿಲಿಯ ಹೇಳಿಕೆಯನ್ನು ಉಲ್ಲೇಖಿಸಿ “ಆಗಸ್ಟ್ 31 ರಂದು, ಭಾರತೀಯ ಸೈನ್ಯವು ಎರಡೂ ದೇಶಗಳ ನಡುವೆ ಹಿಂದೆ ನಡೆದಿದ್ದ ಬಹು-ಹಂತದ ಮಾತುಕತೆಯಲ್ಲಿ ನಿರ್ಧರಿಸಿದ್ದ ಒಮ್ಮತವನ್ನು ಮುರಿದು ಕಾನೂನುಬಾಹಿರವಾಗಿ ಪಾಂಗೊಂಗ್‌ನ ದಕ್ಷಿಣ ದಂಡೆಯ ಬಳಿ ಮತ್ತೆ ಗಡಿ ದಾಟಿದೆ. ಇದು ಪ್ರಚೋದನಾಕಾರಿ ಮತ್ತು ಗಡಿಯಲ್ಲಿ ಉದ್ವಿಗ್ನತೆಯನ್ನು ಉಂಟುಮಾಡುತ್ತದೆ” ಎಂದು ಹೇಳಿದೆ.

“ಚೀನಾದ ಪ್ರಾದೇಶಿಕ ಸಾರ್ವಭೌಮತ್ವವನ್ನು ತೀವ್ರವಾಗಿ ಉಲ್ಲಂಘಿಸುವ ಭಾರತದ ಈ ನಡೆಯು, ಗಡಿಯಲ್ಲಿನ ಶಾಂತಿಯನ್ನು ಹಾಳುಮಾಡುತ್ತದೆ. ಇದನ್ನು ಚೀನಾ ಬಲವಾಗಿ ವಿರೋಧಿಸುತ್ತದೆ” ಎಂದು ಜಾಂಗ್ ಹೇಳಿರುವುದಾಗಿ ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

“ಭಾರತವು ತನ್ನ ಸೈನಿಕರನ್ನು ನಿಯಂತ್ರಿಸಬೇಕು ಮತ್ತು ಈ ಪ್ರದೇಶದಿಂದ ಹಿಂದೆ ಸರಿಯಬೇಕು. ಜೊತೆಗೆ ತನ್ನ ಬದ್ಧತೆಯನ್ನು ಪಾಲಿಸುವುದರೊಂದಿಗೆ, ಪರಿಸ್ಥಿತಿಯ ಬಿಗಡಾಯಿಸುವಿಕೆಯನ್ನು ತಪ್ಪಿಸಬೇಕು ಎಂದು ನಾವು ವಿನಂತಿಸುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ: ಚೀನಾ ಭಾರತದ ಭೂಪ್ರದೇಶ ಅತಿಕ್ರಮಿಸಿದೆಯೆಂದು ಒಪ್ಪಿಕೊಂಡ ರಕ್ಷಣಾ ಸಚಿವಾಲಯ: ದಾಖಲೆ ಡಿಲಿಟ್!

“ಚೀನಾದ ಗಡಿ ಪಡೆಗಳು ಯಾವಾಗಲೂ ಎಲ್‌ಎಸಿಗೆ ಕಟ್ಟುನಿಟ್ಟಾಗಿ ಬದ್ಧವಾಗಿರುತ್ತವೆ. ನಮ್ಮ ಪಡೆ ಎಂದಿಗೂ ಗಡಿ ದಾಟುವುದಿಲ್ಲ. ವಾಸ್ತವ ಸಮಸ್ಯೆಗಳ ಬಗ್ಗೆ ಎರಡು ಕಡೆ ಗಡಿ ಪಡೆಗಳು ನಿಕಟ ಸಂವಹನ ನಡೆಸುತ್ತಿವೆ ”ಎಂದು ಸಚಿವಾಲಯದ ವಕ್ತಾರ ಝಾವೋ ಲಿಜಿಯಾನ್ ಹೇಳಿದ್ದಾರೆ.

ಆದರೆ ಇದಕ್ಕೆ ವ್ಯತಿರಿಕ್ತವಾಗಿ ಭಾರತ-ಚೀನಾ ಮಿಲಿಟರಿ ಮತ್ತು ವಿದೇಶಾಂಗ ಅಧಿಕಾರಿ ಮಟ್ಟದಲ್ಲಿ ನಡುವೆ ನಡೆದ ಮಾತುಕತೆಯ ನಿರ್ಧಾರವನ್ನು ಧಿಕ್ಕರಿಸಿ ಚೀನಾ ಸೈನ್ಯ ಮತ್ತೆ ಪೂರ್ವ ಲಡಾಕ್‌ನಲ್ಲಿ ಪ್ರಚೋದನಕಾರಿ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಭಾರತ ಸರ್ಕಾರ ನಿನ್ನೆ ಹೇಳಿದೆ.

ಆಗಸ್ಟ್ 29 ಮತ್ತು 30 ರ ರಾತ್ರಿ ಚೀನಾ ಸೈನ್ಯವು ಯಥಾಸ್ಥಿತಿಯನ್ನು ಬದಲಾಯಿಸುವ ಪ್ರಯತ್ನಗಳಲ್ಲಿ ತೊಡಗಿದೆ ಎಂದು ವರದಿಯಾಗಿದೆ.

ಪ್ಯಾಗೋಂಗ್‌-ತ್ಶೋ ಸರೋವರದ ಉತ್ತರ ತೀರದಲ್ಲಿ ಚೀನಾ ಸೈನ್ಯ ನಡೆಸಿದ ಪ್ರಯತ್ನವನ್ನು ಭಾರತೀಯ ಸೈನ್ಯವು ವಿಫಲಗೊಳಿಸಿದೆ ಮತ್ತು ಚೀನಾ ಸೈನ್ಯದ ಪ್ರಯತ್ನವನ್ನು ತಡೆಯಲು ಭಾರತವು ತಮ್ಮ ಸ್ಥಾನವನ್ನು ಬಲಪಡಿಸಿದೆ ಎಂದು ಭಾರತ ಸರ್ಕಾರ ಹೇಳಿದೆ.

ಮಾತುಕತೆಗಳ ಮೂಲಕ ಶಾಂತಿಯನ್ನು ಕಾಪಾಡಿಕೊಳ್ಳಲು ಬದ್ಧವಾಗಿರುವ ಅದೇ ಸಂದರ್ಭದಲ್ಲಿ ಭಾರತೀಯ ಮಿಲಿಟರಿ ತನ್ನ ಭೂಪ್ರದೇಶವನ್ನು ರಕ್ಷಿಸಲು ಬದ್ಧವಾಗಿದೆ ಎಂದು ಸರ್ಕಾರ ತಿಳಿಸಿದೆ.

ಪ್ರಸ್ತುತ ಸಮಸ್ಯೆಯನ್ನು ಬಗೆರಿಸಲು ಗಡಿಯಲ್ಲಿರುವ ಸುಶುಲ್‌ನಲ್ಲಿ ಬ್ರಿಗೇಡ್ ಕಮಾಂಡರ್ ಮಟ್ಟದ ಧ್ವಜ ಸಭೆ ನಡೆಯುತ್ತಿದೆ ಎಂದು ವರದಿಯಾಗಿದೆ.

ಗಲ್ವಾನ್ ಕಣಿವೆಯಲ್ಲಿ ಜೂನ್ 15 ರಂದು ಗಡಿ ಪಡೆಗಳು ಘರ್ಷಣೆ ನಡೆಸಿದ ನಂತರ ಎರಡೂ ದೇಶಗಳ ನಡುವೆ ಹಲವಾರು ಸಭೆಗಳು ನಡೆದಿವೆ.


ಇದನ್ನೂ ಓದಿ: ಭಾರತ-ಚೀನಾ ಗಡಿ ಉದ್ವಿಗ್ನತೆ: ಮತ್ತೆ ಲಡಾಖ್ ಗಡಿ ಅತಿಕ್ರಮಿಸಿದ ಚೀನಾ ಪಡೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...