Homeಅಂತರಾಷ್ಟ್ರೀಯಲಡಾಖ್‌‌ನಲ್ಲಿನ ಇತ್ತೀಚಿನ ಉದ್ವಿಗ್ನತೆಗೆ ಭಾರತವೇ ಕಾರಣ; ಚೀನಾ ಸೇನೆ ಆರೋಪ

ಲಡಾಖ್‌‌ನಲ್ಲಿನ ಇತ್ತೀಚಿನ ಉದ್ವಿಗ್ನತೆಗೆ ಭಾರತವೇ ಕಾರಣ; ಚೀನಾ ಸೇನೆ ಆರೋಪ

ಇದಕ್ಕೆ ವ್ಯತಿರಿಕ್ತವಾಗಿ ಭಾರತ-ಚೀನಾ ಮಿಲಿಟರಿ ಮತ್ತು ವಿದೇಶಾಂಗ ಅಧಿಕಾರಿ ಮಟ್ಟದಲ್ಲಿ ನಡುವೆ ನಡೆದ ಮಾತುಕತೆಯ ನಿರ್ಧಾರವನ್ನು ಧಿಕ್ಕರಿಸಿ ಚೀನಾ ಸೈನ್ಯ ಮತ್ತೆ ಪೂರ್ವ ಲಡಾಕ್‌ನಲ್ಲಿ ಪ್ರಚೋದನಕಾರಿ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಭಾರತ ಸರ್ಕಾರ ನಿನ್ನೆ ಹೇಳಿದೆ.

- Advertisement -
- Advertisement -

ಪೂರ್ವ ಲಡಾಕ್‌ನ ವಾಸ್ತವಿಕ ನಿಯಂತ್ರಣ ಗಡಿ ರೇಖೆಯ (ಎಲ್‌ಎಸಿ) ಬಳಿಯಿರುವ ಪಾಂಗೊಂಗ್ ತ್ಸೋದಲ್ಲಿ ಇತ್ತೀಚೆಗೆ ಉಂಟಾಗಿರುವ ಉದ್ವಿಗ್ನತೆಗೆ ಭಾರತವೇ ಕಾರಣ ಎಂದು ಆರೋಪಿಸಿರುವ ಚೀನಾ ಪೀಪಲ್ಸ್ ಲಿಬರೇಷನ್ ಆರ್ಮಿ, ಕೂಡಲೇ ಭಾರತ ತನ್ನ ಸೈನ್ಯವನ್ನು ಹಿಂತೆಗೆದುಕೊಳ್ಳಲಿ ಎಂದು ಒತ್ತಾಯಿಸಿದೆ.

“ಭಾರತೀಯ ಸೈನಿಕರು ಲಡಾಕ್‌ನ ವಾಸ್ತವಿಕ ನಿಯಂತ್ರಣ ಗಡಿ ರೇಖೆಯನ್ನು ಉಲ್ಲಂಘಿಸಿದ್ದಾರೆ, ಮತ್ತು ದಕ್ಷಿಣದ ದಂಡೆಯ ಪಾಂಗೊಂಗ್ ತ್ಸೊ ಮತ್ತು ರೆಕಿನ್ ಪಾಸ್‌ ಅನ್ನು ದಾಟಿದ್ದಾರೆ” ಎಂದು ಪೀಪಲ್ಸ್ ಲಿಬರೇಷನ್ ಆರ್ಮಿಯ ವೆಸ್ಟರ್ನ್ ಥಿಯೇಟರ್ ಕಮಾಂಡ್ (ಡಬ್ಲ್ಯುಟಿಸಿ) ಆರೋಪಿಸಿದೆ. ಜೊತೆಗೆ ಅಗತ್ಯ ಪ್ರತಿರೋಧ ಕ್ರಮಗಳನ್ನು ತೆಗೆದುಕೊಳ್ಳುವುದಾಗಿಯೂ ಪಿಎಲ್‌ಎ ಎಚ್ಚರಿಸಿದೆ.

ಅಧಿಕೃತ ಸುದ್ದಿ ಸಂಸ್ಥೆ, ಕ್ಸಿನ್ಹುವಾ ಡಬ್ಲ್ಯುಟಿಸಿ ವಕ್ತಾರ ಹಿರಿಯ ಕರ್ನಲ್ ಜಾಂಗ್ ಶೂಯಿಲಿಯ ಹೇಳಿಕೆಯನ್ನು ಉಲ್ಲೇಖಿಸಿ “ಆಗಸ್ಟ್ 31 ರಂದು, ಭಾರತೀಯ ಸೈನ್ಯವು ಎರಡೂ ದೇಶಗಳ ನಡುವೆ ಹಿಂದೆ ನಡೆದಿದ್ದ ಬಹು-ಹಂತದ ಮಾತುಕತೆಯಲ್ಲಿ ನಿರ್ಧರಿಸಿದ್ದ ಒಮ್ಮತವನ್ನು ಮುರಿದು ಕಾನೂನುಬಾಹಿರವಾಗಿ ಪಾಂಗೊಂಗ್‌ನ ದಕ್ಷಿಣ ದಂಡೆಯ ಬಳಿ ಮತ್ತೆ ಗಡಿ ದಾಟಿದೆ. ಇದು ಪ್ರಚೋದನಾಕಾರಿ ಮತ್ತು ಗಡಿಯಲ್ಲಿ ಉದ್ವಿಗ್ನತೆಯನ್ನು ಉಂಟುಮಾಡುತ್ತದೆ” ಎಂದು ಹೇಳಿದೆ.

“ಚೀನಾದ ಪ್ರಾದೇಶಿಕ ಸಾರ್ವಭೌಮತ್ವವನ್ನು ತೀವ್ರವಾಗಿ ಉಲ್ಲಂಘಿಸುವ ಭಾರತದ ಈ ನಡೆಯು, ಗಡಿಯಲ್ಲಿನ ಶಾಂತಿಯನ್ನು ಹಾಳುಮಾಡುತ್ತದೆ. ಇದನ್ನು ಚೀನಾ ಬಲವಾಗಿ ವಿರೋಧಿಸುತ್ತದೆ” ಎಂದು ಜಾಂಗ್ ಹೇಳಿರುವುದಾಗಿ ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

“ಭಾರತವು ತನ್ನ ಸೈನಿಕರನ್ನು ನಿಯಂತ್ರಿಸಬೇಕು ಮತ್ತು ಈ ಪ್ರದೇಶದಿಂದ ಹಿಂದೆ ಸರಿಯಬೇಕು. ಜೊತೆಗೆ ತನ್ನ ಬದ್ಧತೆಯನ್ನು ಪಾಲಿಸುವುದರೊಂದಿಗೆ, ಪರಿಸ್ಥಿತಿಯ ಬಿಗಡಾಯಿಸುವಿಕೆಯನ್ನು ತಪ್ಪಿಸಬೇಕು ಎಂದು ನಾವು ವಿನಂತಿಸುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ: ಚೀನಾ ಭಾರತದ ಭೂಪ್ರದೇಶ ಅತಿಕ್ರಮಿಸಿದೆಯೆಂದು ಒಪ್ಪಿಕೊಂಡ ರಕ್ಷಣಾ ಸಚಿವಾಲಯ: ದಾಖಲೆ ಡಿಲಿಟ್!

“ಚೀನಾದ ಗಡಿ ಪಡೆಗಳು ಯಾವಾಗಲೂ ಎಲ್‌ಎಸಿಗೆ ಕಟ್ಟುನಿಟ್ಟಾಗಿ ಬದ್ಧವಾಗಿರುತ್ತವೆ. ನಮ್ಮ ಪಡೆ ಎಂದಿಗೂ ಗಡಿ ದಾಟುವುದಿಲ್ಲ. ವಾಸ್ತವ ಸಮಸ್ಯೆಗಳ ಬಗ್ಗೆ ಎರಡು ಕಡೆ ಗಡಿ ಪಡೆಗಳು ನಿಕಟ ಸಂವಹನ ನಡೆಸುತ್ತಿವೆ ”ಎಂದು ಸಚಿವಾಲಯದ ವಕ್ತಾರ ಝಾವೋ ಲಿಜಿಯಾನ್ ಹೇಳಿದ್ದಾರೆ.

ಆದರೆ ಇದಕ್ಕೆ ವ್ಯತಿರಿಕ್ತವಾಗಿ ಭಾರತ-ಚೀನಾ ಮಿಲಿಟರಿ ಮತ್ತು ವಿದೇಶಾಂಗ ಅಧಿಕಾರಿ ಮಟ್ಟದಲ್ಲಿ ನಡುವೆ ನಡೆದ ಮಾತುಕತೆಯ ನಿರ್ಧಾರವನ್ನು ಧಿಕ್ಕರಿಸಿ ಚೀನಾ ಸೈನ್ಯ ಮತ್ತೆ ಪೂರ್ವ ಲಡಾಕ್‌ನಲ್ಲಿ ಪ್ರಚೋದನಕಾರಿ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಭಾರತ ಸರ್ಕಾರ ನಿನ್ನೆ ಹೇಳಿದೆ.

ಆಗಸ್ಟ್ 29 ಮತ್ತು 30 ರ ರಾತ್ರಿ ಚೀನಾ ಸೈನ್ಯವು ಯಥಾಸ್ಥಿತಿಯನ್ನು ಬದಲಾಯಿಸುವ ಪ್ರಯತ್ನಗಳಲ್ಲಿ ತೊಡಗಿದೆ ಎಂದು ವರದಿಯಾಗಿದೆ.

ಪ್ಯಾಗೋಂಗ್‌-ತ್ಶೋ ಸರೋವರದ ಉತ್ತರ ತೀರದಲ್ಲಿ ಚೀನಾ ಸೈನ್ಯ ನಡೆಸಿದ ಪ್ರಯತ್ನವನ್ನು ಭಾರತೀಯ ಸೈನ್ಯವು ವಿಫಲಗೊಳಿಸಿದೆ ಮತ್ತು ಚೀನಾ ಸೈನ್ಯದ ಪ್ರಯತ್ನವನ್ನು ತಡೆಯಲು ಭಾರತವು ತಮ್ಮ ಸ್ಥಾನವನ್ನು ಬಲಪಡಿಸಿದೆ ಎಂದು ಭಾರತ ಸರ್ಕಾರ ಹೇಳಿದೆ.

ಮಾತುಕತೆಗಳ ಮೂಲಕ ಶಾಂತಿಯನ್ನು ಕಾಪಾಡಿಕೊಳ್ಳಲು ಬದ್ಧವಾಗಿರುವ ಅದೇ ಸಂದರ್ಭದಲ್ಲಿ ಭಾರತೀಯ ಮಿಲಿಟರಿ ತನ್ನ ಭೂಪ್ರದೇಶವನ್ನು ರಕ್ಷಿಸಲು ಬದ್ಧವಾಗಿದೆ ಎಂದು ಸರ್ಕಾರ ತಿಳಿಸಿದೆ.

ಪ್ರಸ್ತುತ ಸಮಸ್ಯೆಯನ್ನು ಬಗೆರಿಸಲು ಗಡಿಯಲ್ಲಿರುವ ಸುಶುಲ್‌ನಲ್ಲಿ ಬ್ರಿಗೇಡ್ ಕಮಾಂಡರ್ ಮಟ್ಟದ ಧ್ವಜ ಸಭೆ ನಡೆಯುತ್ತಿದೆ ಎಂದು ವರದಿಯಾಗಿದೆ.

ಗಲ್ವಾನ್ ಕಣಿವೆಯಲ್ಲಿ ಜೂನ್ 15 ರಂದು ಗಡಿ ಪಡೆಗಳು ಘರ್ಷಣೆ ನಡೆಸಿದ ನಂತರ ಎರಡೂ ದೇಶಗಳ ನಡುವೆ ಹಲವಾರು ಸಭೆಗಳು ನಡೆದಿವೆ.


ಇದನ್ನೂ ಓದಿ: ಭಾರತ-ಚೀನಾ ಗಡಿ ಉದ್ವಿಗ್ನತೆ: ಮತ್ತೆ ಲಡಾಖ್ ಗಡಿ ಅತಿಕ್ರಮಿಸಿದ ಚೀನಾ ಪಡೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....