HomeUncategorizedಆರ್ಥಿಕ ಕುಸಿತ: ಮೋದಿಗೆ ಕಳಂಕ ತಪ್ಪಿಸಲು ಬಲಿಪಶು ಆಗುತ್ತಿದ್ದಾರಾ ನಿರ್ಮಲಾ ಸೀತಾರಾಮನ್!?

ಆರ್ಥಿಕ ಕುಸಿತ: ಮೋದಿಗೆ ಕಳಂಕ ತಪ್ಪಿಸಲು ಬಲಿಪಶು ಆಗುತ್ತಿದ್ದಾರಾ ನಿರ್ಮಲಾ ಸೀತಾರಾಮನ್!?

- Advertisement -
- Advertisement -

ಪ್ರಧಾನಿ ಮೋದಿ ನೇತೃತ್ವದ ಸರ್ಕಾರದಲ್ಲಿ ಎರಡನೇ ಬಾರಿಗೆ ಸಚಿವ ಸ್ಥಾನ ಅಲಂಕರಿಸಿ, ಪ್ರಮುಖ ಜವಾಬ್ದಾರಿ ಹೊತ್ತಿರುವ ನಿರ್ಮಲಾ ಸೀತಾರಾಮನ್ ವಿತ್ತ ಸಚಿವೆಯಾದ ನಾಲ್ಕೇ ತಿಂಗಳಿಗೆ ಆರ್ಥಿಕ ಕುಸಿತದ ಮೇನ್ ವಿಲನ್' ರೂಪದಲ್ಲಿ ಎಲ್ಲರೆದುರು ಕಾಣಿಸಿಕೊಳ್ಳುತ್ತಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಭಾರತದ ಆರ್ಥಿಕತೆ ಗಂಭೀರವಾಗಿ ಪತನವಾಗಲು, ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದ ಅರುಣ್ ಜೇಟ್ಲಿಗಿಂತಲೂ ಪ್ರಧಾನಿ ಮೋದಿಯವರ ಯಡವಟ್ಟು ಆರ್ಥಿಕ ನೀತಿಗಳು ಕಾರಣಗಳು ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಮೊನ್ನೆಯಷ್ಟೇ ಅರ್ಥಶಾಸ್ತ್ರಕ್ಕೆ ನೊಬೆಲ್ ಪ್ರಶಸ್ತಿ ಪಡೆದ ಅಭಿಜಿತ್ ಬ್ಯಾನರ್ಜಿ ಹಾಗೂ ಎಸ್ತರ್ ಡುಪ್ಲೋ ತುಂಬಾ ಹಿಂದೆಯೇ ಕರಾಳ ದಿನಗಳಿಗೆ ಕಾರಣವಾಗುತ್ತದೆಂದು ಅಂದಾಜಿಸಿದ್ದ `ನೋಟು ಅಮಾನ್ಯೀಕರಣ’ವನ್ನು ಹೇರುವುದರ ಹಿಂದೆ ಅರ್ಥ ಸಚಿವ ಜೇಟ್ಲಿ, ಆರ್.ಬಿ.ಐ. ಆಡಳಿತ ಮಂಡಳಿಗೆ ಯಾವ ಪಾತ್ರವೂ ಇರಲಿಲ್ಲ. ಅಷ್ಟರ ಮಟ್ಟಿಗೆ ಮೋದಿಯವರ ನೀತಿಗಳು ಇವತ್ತಿನ ಆರ್ಥಿಕ ದುಸ್ಥಿತಿಗೆ ಕಾರಣ. ಆದರೆ ಈಗ ಪರಿಸ್ಥಿತಿಯನ್ನು ಎತ್ತ ತಿರುಗಿಸಲಾಗುತ್ತಿದೆಯೆಂದರೆ, ಈ ಸಮಸ್ತ ಕುಸಿತಕ್ಕೆ ನಾಲ್ಕು ತಿಂಗಳ ಹಿಂದಷ್ಟೇ ಹಣಕಾಸು ಇಲಾಖೆಯ ಹೊಣೆ ಹೊತ್ತ ನಿರ್ಮಲಾ ಸೀತಾರಾಮನ್ ಖಳನಾಯಕಿಯಾಗಿ ಬಿಂಬಿತವಾಗುತ್ತಿದ್ದಾರೆ. ನಿರ್ಮಲಾ ಕೂಡಾ, ಆರ್ಥಿಕ ಕುಸಿತದ ಕುರಿತಾಗಿ ಕೇಳಿಬರುತ್ತಿರುವ ಟೀಕೆಗಳನ್ನು ವೈಯಕ್ತಿಕವಾಗಿ ಸ್ವೀಕರಿಸಿ `ಅಗ್ರೆಸಿವ್’ ಆಗಿ ಪ್ರತಿಕ್ರಿಯಿಸುತ್ತಿರೋದು, ಇಡೀ ರಂಗವೇದಿಕೆಯಿಂದ ಹಿಂದೆ ಸರಿಯಲು ಮೋದಿಗೆ ಅನುವು ಮಾಡಿಕೊಡುತ್ತಿದೆ. ಸ್ವತಃ ಮೋದಿ ಅಭಿಮಾನಿಗಳು, ಮೋದಿಯನ್ನು ಹಾಡಿ ಹೊಗಳಿದ್ದ ದೊಡ್ಡದೊಡ್ಡ ಉದ್ಯಮಿಗಳು ನಿರ್ಮಲಾರನ್ನೇ ಟಾರ್ಗೆಟ್ ಮಾಡಿ ಟೀಕೆಗಳನ್ನು ಸುರಿಸುತ್ತಿದ್ದಾರೆ.

ನೋ ಡೌಟ್, ವಿತ್ತ ಸಚಿವೆಯಾಗಿ ದೇಶದ ಸದ್ಯದ ಆರ್ಥಿಕ ಪರಿಸ್ಥಿತಿಗೆ ಅವರೇ ಉತ್ತರದಾಯಿ ಆಗುತ್ತಾರೆ. ಟೀಕೆಗಳೂ ಅವರಿಗೇ ಸಲ್ಲುತ್ತವೆ. ಆದರೆ ಕಳೆದ ಬಿಜೆಪಿ ಅವಧಿಯಲ್ಲಿ ಪರಿಸ್ಥಿತಿ ಹೀಗೇ ಇತ್ತಾ? ಕಡೇಪಕ್ಷ ಹಣಕಾಸು ಸಚಿವರ ಜೊತೆ ಚರ್ಚಿಸಿಯೇ ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿತ್ತೇ? ಈ ಪ್ರಶ್ನೆಗಳಿಗೆ ಉತ್ತರ ಎಲ್ಲರಿಗೂ ಗೊತ್ತಿರುವಂತದ್ದೇ. ಆದರೆ ಕುಸಿತ ಶುರುವಾಗಿ, ದೇಶ ಸಂಕಷ್ಟಕ್ಕೆ ಸಿಲುಕುತ್ತಿದ್ದಂತೆಯೇ ಅದಕ್ಕೆ ಕಾರಣರಾದವರು ಹಿನ್ನೆಲೆಗೆ ಸರಿದು, ಹುದ್ದೆಯ ಕಾರಣಕ್ಕೆ ನಿರ್ಮಲಾ ಸೀತಾರಾಮನ್ ಅವರನ್ನು ಮುಂದೆ ಬಿಡುತ್ತಿರೋದು ನೋಡಿದರೆ, ಬಲಿಪಶು ಮಾಡಲಾಗುತ್ತಿದೆಯಾ? ಎಂಬ ವಾದವೀಗ ಮುನ್ನೆಲೆಗೆ ಬರುತ್ತಿದೆ. ಅಂದಹಾಗೆ, ಕಳೆದ ಸರ್ಕಾರದ ಅವಧಿಯಲ್ಲೂ ಮನೋಹರ್ ಪಾರಿಕ್ಕರ್ ರಕ್ಷಣಾ ಮಂತ್ರಿಯಾಗಿದ್ದರೂ, ರಕ್ಷಣಾ ಇಲಾಖೆಯನ್ನೇ ಬೈಪಾಸ್ ಮಾಡಿದ್ದ ಪ್ರಧಾನಿ ಮಂತ್ರಿ ಕಾರ್ಯಾಲಯ ಏಕಪಕ್ಷೀಯವಾಗಿ ವ್ಯವಹಾರ ಕುದುರಿಸಿದ್ದ `ರಫೇಲ್ ಖರೀದಿ’ ಹಗರಣ ಮಾಧ್ಯಮಗಳ ಮೂಲಕ ದೊಡ್ಡ ಬಿರುಗಾಳಿ ಎಬ್ಬಿಸುವ ಹೊತ್ತಿಗೆ ಸರಿಯಾಗಿ ನಿರ್ಮಲಾ ಸೀತಾರಾಮನ್ ಅವರನ್ನು ಪಾರಿಕ್ಕರ್ ಜಾಗದಲ್ಲಿ ಪ್ರತಿಷ್ಠಾಪಿಸಿ, ಕಳಂಕ ಮೆತ್ತಿಸಿಕೊಳ್ಳುವಂತೆ ಮಾಡಿದ್ದು ಕಾಕತಾಳೀಯವೇ ಇರಬಹುದು!

ಪೂರ್ಣ ಪ್ರಮಾಣದ ಹಣಕಾಸು ಸಚಿವೆಯಾಗಿ ದೇಶದ ಮೊದಲ ಮಹಿಳೆ ಎಂಬ ಕೀರ್ತಿಗೆ ಪಾತ್ರರಾದ ನಿರ್ಮಲಾ ಸೀತಾರಾಮನ್ ಅಧಿಕಾರ ವಹಿಸಿಕೊಂಡ ಘಳಿಗೆಯಲ್ಲೇ ಆರ್ಥಿಕತೆ ಇಳಿಜಾರಿನತ್ತ ಮುಖ ಮಾಡಿತ್ತು. ಭಾರತದ ಆರ್ಥಿಕ ಬೆಳವಣಿಗೆ ಕಳೆದ ವರ್ಷದ ಕಡೆಯ ತ್ರೈಮಾಸಿಕದಲ್ಲಿ ಶೇ.6ಕ್ಕೆ ಕುಸಿದಿದ್ದರೆ, 2018-19ನೇ ಸಂಪೂರ್ಣ ವಿತ್ತ ವರ್ಷದಲ್ಲಿ ಅದರ ಸರಾಸರಿ ವೇಗ ಶೇ.6.8ಕ್ಕೆ ಕ್ಷೀಣಗೊಂಡಿತ್ತು. ಇನ್ನು 2019-20ರ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ಚಾರಿತ್ರಿಕ ಕನಿಷ್ಠ ಶೇ.5ರತ್ತ ದಾಪುಗಾಲಿಡಲು ಶುರು ಮಾಡಿತ್ತು. ಅಂತೆಯೇ ದೇಶದ ನಿರುದ್ಯೋಗ ದರ 2017ರಲ್ಲೇ ಶೇ.6ಕ್ಕೆ ದಾಖಲೆಯ ಕುಸಿತ ಕಂಡಿತ್ತು. ಅಂತಹ ಸಂದರ್ಭದಲ್ಲಿ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ್ದು!

ಇನ್ನು ನಿರ್ಮಲಾ ಸೀತಾರಾಮನ್ ಜುಲೈನಲ್ಲಿ ತಮ್ಮ ಮೊದಲ ಬಜೆಟ್ ಮಂಡಿಸಿದರು. ಆಗ ಹಿಂದಿದ್ದ ಹಲವು ಸಂಪ್ರದಾಯಗಳನ್ನು ಮುರಿದರು. ದಿನಬೆಳಗಾದರೆ ದೇವರು, ಹಬ್ಬ ಹರಿದಿನಗಳ ಬಗ್ಗೆ ಟ್ವೀಟ್ ಮಾಡುವ ನಿರ್ಮಲಾ ಸೀತಾರಾಮನ್ ಕುಸಿಯುತ್ತಿರುವ ಆರ್ಥಿಕತೆ ಬಗ್ಗೆ ಮಾತ್ರ ಮಾತನಾಡುವುದಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗಿತ್ತು. ಆರ್ಥಿಕತಜ್ಞರಾದ ಶಮಿಕಾ ರವಿ ಮಾತನಾಡಿ, ಭಾರತ ಆರ್ಥಿಕತೆಯ ಕುಸಿತ ಗಂಭೀರ ಪರಿಣಾಮ ಬೀರಲಿದೆ. ಕುಸಿಯುತ್ತಿರುವ ಆರ್ಥಿಕತೆಯನ್ನು ಸುಧಾರಿಸಲು ಪ್ರಮುಖ ತಂತ್ರಗಳನ್ನು ಕಂಡುಕೊಳ್ಳುವ ಅವಶ್ಯಕತೆಯಿದೆ. ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಆಲೋಚಿಸಬೇಕಿದೆ ಎಂದು ಹೇಳಿದ್ದರು. ಬಿಜೆಪಿ ಎಂ.ಪಿ ಸುಬ್ರಮಣಿಯನ್ ಸ್ವಾಮಿ ಕೂಡ ನಿರ್ಮಲಾ ಸೀತಾರಾಮನ್ ಅವರ ಕಾರ್ಯ ವೈಖರಿಯನ್ನು ಖಂಡಿಸಿದ್ದರು. ನೆಲಕಚ್ಚುತ್ತಿರುವ ಆರ್ಥಿಕತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ, ಮೋದಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು. ಸೂಕ್ಷ್ಮ ಚಿಂತನೆಯ ಅವಶ್ಯಕತೆಯ ಬಗ್ಗೆ ತಿಳಿಸಿದ್ದರು.

ಪ್ರತಿಷ್ಠಿತ ಜೆಎನ್.ಯು ವಿವಿಯಲ್ಲಿ ಎಂಎ, ಎಂ.ಫಿಲ್  (ಎಕನಾಮಿಕ್ಸ್) ಪಡೆದಿದ್ದ ನಿರ್ಮಲಾ, ಓದು-ವಿದ್ಯಾರ್ಹತೆ-ಅನುಭವದ ನಿಟ್ಟಿನಲ್ಲಿ ಹಣಕಾಸು ಸಚಿವೆಯ ಹುದ್ದೆಗೆ ಲಾಯಕ್ಕಾದವರೇ ಇರಬಹುದು. ಆದರೆ, ದೇಶದ ಆರ್ಥಿಕ ಸ್ಥಿತಿ ಅದೆಷ್ಟು ಹದಗೆಟ್ಟು ಹೋಗಿತ್ತೆಂದರೆ, (ಹದಗೆಡಿಸಲಾಗಿತ್ತೆಂದರೆ) ತುಂಬಾ ದೃಢ ಮತ್ತು ದೂರಾಲೋಚನೆಯ ನಿರ್ಧಾರಗಳಿಂದ ಮಾತ್ರ ಅದನ್ನು ನಿಭಾಯಿಸಲು ಸಾಧ್ಯ ಎನ್ನುವ ಸ್ಥಿತಿಯಲ್ಲಿತ್ತು. ಆದರೆ ನಿರ್ಮಲಾಗೆ ಅಂತಹ ಸ್ವಾತಂತ್ರ್ಯವೂ ಇರಲಿಲ್ಲ, ಆ ಬಗೆಯ ಇಚ್ಛೆ ನಿರ್ಮಲಾ ಅವರಿಗೂ ಇದ್ದಂತಿರಲಿಲ್ಲ. ಅವರು ಮಂಡಿಸಿದ ಮೊದಲ ಬಜೆಟ್ಟಿನ ಕ್ರಮಗಳು ಹಾಗೂ ಆ ನಂತರದಲ್ಲಿ ಅವರೇ ಆ ಕ್ರಮಗಳಿಂದ ತೆಗೆದುಕೊಂಡ ಯೂ-ಟರ್ನ್ ಗಳು ಇದಕ್ಕೆ ಸಾಕ್ಷಿ. ಈಗ ಅವರ ಪತಿಯೇ ಅವರನ್ನು ಟೀಕಿಸುವಂತಹ ಸಂದರ್ಭ ಬಂದೊದಗಿದೆ. ದುರಂತವೆಂದರೆ, ಈಗಲೂ ಕೇಂದ್ರದ ಬಿಜೆಪಿ ಸರ್ಕಾರದ ಬಳಿ ಸಮರ್ಪಕ ಪರಿಹಾರದ ನೀಲನಕ್ಷೆಗಳು ಗೋಚರಿಸುತ್ತಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...