HomeUncategorizedಆರ್ಥಿಕ ಕುಸಿತ: ಮೋದಿಗೆ ಕಳಂಕ ತಪ್ಪಿಸಲು ಬಲಿಪಶು ಆಗುತ್ತಿದ್ದಾರಾ ನಿರ್ಮಲಾ ಸೀತಾರಾಮನ್!?

ಆರ್ಥಿಕ ಕುಸಿತ: ಮೋದಿಗೆ ಕಳಂಕ ತಪ್ಪಿಸಲು ಬಲಿಪಶು ಆಗುತ್ತಿದ್ದಾರಾ ನಿರ್ಮಲಾ ಸೀತಾರಾಮನ್!?

- Advertisement -
- Advertisement -

ಪ್ರಧಾನಿ ಮೋದಿ ನೇತೃತ್ವದ ಸರ್ಕಾರದಲ್ಲಿ ಎರಡನೇ ಬಾರಿಗೆ ಸಚಿವ ಸ್ಥಾನ ಅಲಂಕರಿಸಿ, ಪ್ರಮುಖ ಜವಾಬ್ದಾರಿ ಹೊತ್ತಿರುವ ನಿರ್ಮಲಾ ಸೀತಾರಾಮನ್ ವಿತ್ತ ಸಚಿವೆಯಾದ ನಾಲ್ಕೇ ತಿಂಗಳಿಗೆ ಆರ್ಥಿಕ ಕುಸಿತದ ಮೇನ್ ವಿಲನ್' ರೂಪದಲ್ಲಿ ಎಲ್ಲರೆದುರು ಕಾಣಿಸಿಕೊಳ್ಳುತ್ತಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಭಾರತದ ಆರ್ಥಿಕತೆ ಗಂಭೀರವಾಗಿ ಪತನವಾಗಲು, ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದ ಅರುಣ್ ಜೇಟ್ಲಿಗಿಂತಲೂ ಪ್ರಧಾನಿ ಮೋದಿಯವರ ಯಡವಟ್ಟು ಆರ್ಥಿಕ ನೀತಿಗಳು ಕಾರಣಗಳು ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಮೊನ್ನೆಯಷ್ಟೇ ಅರ್ಥಶಾಸ್ತ್ರಕ್ಕೆ ನೊಬೆಲ್ ಪ್ರಶಸ್ತಿ ಪಡೆದ ಅಭಿಜಿತ್ ಬ್ಯಾನರ್ಜಿ ಹಾಗೂ ಎಸ್ತರ್ ಡುಪ್ಲೋ ತುಂಬಾ ಹಿಂದೆಯೇ ಕರಾಳ ದಿನಗಳಿಗೆ ಕಾರಣವಾಗುತ್ತದೆಂದು ಅಂದಾಜಿಸಿದ್ದ `ನೋಟು ಅಮಾನ್ಯೀಕರಣ’ವನ್ನು ಹೇರುವುದರ ಹಿಂದೆ ಅರ್ಥ ಸಚಿವ ಜೇಟ್ಲಿ, ಆರ್.ಬಿ.ಐ. ಆಡಳಿತ ಮಂಡಳಿಗೆ ಯಾವ ಪಾತ್ರವೂ ಇರಲಿಲ್ಲ. ಅಷ್ಟರ ಮಟ್ಟಿಗೆ ಮೋದಿಯವರ ನೀತಿಗಳು ಇವತ್ತಿನ ಆರ್ಥಿಕ ದುಸ್ಥಿತಿಗೆ ಕಾರಣ. ಆದರೆ ಈಗ ಪರಿಸ್ಥಿತಿಯನ್ನು ಎತ್ತ ತಿರುಗಿಸಲಾಗುತ್ತಿದೆಯೆಂದರೆ, ಈ ಸಮಸ್ತ ಕುಸಿತಕ್ಕೆ ನಾಲ್ಕು ತಿಂಗಳ ಹಿಂದಷ್ಟೇ ಹಣಕಾಸು ಇಲಾಖೆಯ ಹೊಣೆ ಹೊತ್ತ ನಿರ್ಮಲಾ ಸೀತಾರಾಮನ್ ಖಳನಾಯಕಿಯಾಗಿ ಬಿಂಬಿತವಾಗುತ್ತಿದ್ದಾರೆ. ನಿರ್ಮಲಾ ಕೂಡಾ, ಆರ್ಥಿಕ ಕುಸಿತದ ಕುರಿತಾಗಿ ಕೇಳಿಬರುತ್ತಿರುವ ಟೀಕೆಗಳನ್ನು ವೈಯಕ್ತಿಕವಾಗಿ ಸ್ವೀಕರಿಸಿ `ಅಗ್ರೆಸಿವ್’ ಆಗಿ ಪ್ರತಿಕ್ರಿಯಿಸುತ್ತಿರೋದು, ಇಡೀ ರಂಗವೇದಿಕೆಯಿಂದ ಹಿಂದೆ ಸರಿಯಲು ಮೋದಿಗೆ ಅನುವು ಮಾಡಿಕೊಡುತ್ತಿದೆ. ಸ್ವತಃ ಮೋದಿ ಅಭಿಮಾನಿಗಳು, ಮೋದಿಯನ್ನು ಹಾಡಿ ಹೊಗಳಿದ್ದ ದೊಡ್ಡದೊಡ್ಡ ಉದ್ಯಮಿಗಳು ನಿರ್ಮಲಾರನ್ನೇ ಟಾರ್ಗೆಟ್ ಮಾಡಿ ಟೀಕೆಗಳನ್ನು ಸುರಿಸುತ್ತಿದ್ದಾರೆ.

ನೋ ಡೌಟ್, ವಿತ್ತ ಸಚಿವೆಯಾಗಿ ದೇಶದ ಸದ್ಯದ ಆರ್ಥಿಕ ಪರಿಸ್ಥಿತಿಗೆ ಅವರೇ ಉತ್ತರದಾಯಿ ಆಗುತ್ತಾರೆ. ಟೀಕೆಗಳೂ ಅವರಿಗೇ ಸಲ್ಲುತ್ತವೆ. ಆದರೆ ಕಳೆದ ಬಿಜೆಪಿ ಅವಧಿಯಲ್ಲಿ ಪರಿಸ್ಥಿತಿ ಹೀಗೇ ಇತ್ತಾ? ಕಡೇಪಕ್ಷ ಹಣಕಾಸು ಸಚಿವರ ಜೊತೆ ಚರ್ಚಿಸಿಯೇ ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿತ್ತೇ? ಈ ಪ್ರಶ್ನೆಗಳಿಗೆ ಉತ್ತರ ಎಲ್ಲರಿಗೂ ಗೊತ್ತಿರುವಂತದ್ದೇ. ಆದರೆ ಕುಸಿತ ಶುರುವಾಗಿ, ದೇಶ ಸಂಕಷ್ಟಕ್ಕೆ ಸಿಲುಕುತ್ತಿದ್ದಂತೆಯೇ ಅದಕ್ಕೆ ಕಾರಣರಾದವರು ಹಿನ್ನೆಲೆಗೆ ಸರಿದು, ಹುದ್ದೆಯ ಕಾರಣಕ್ಕೆ ನಿರ್ಮಲಾ ಸೀತಾರಾಮನ್ ಅವರನ್ನು ಮುಂದೆ ಬಿಡುತ್ತಿರೋದು ನೋಡಿದರೆ, ಬಲಿಪಶು ಮಾಡಲಾಗುತ್ತಿದೆಯಾ? ಎಂಬ ವಾದವೀಗ ಮುನ್ನೆಲೆಗೆ ಬರುತ್ತಿದೆ. ಅಂದಹಾಗೆ, ಕಳೆದ ಸರ್ಕಾರದ ಅವಧಿಯಲ್ಲೂ ಮನೋಹರ್ ಪಾರಿಕ್ಕರ್ ರಕ್ಷಣಾ ಮಂತ್ರಿಯಾಗಿದ್ದರೂ, ರಕ್ಷಣಾ ಇಲಾಖೆಯನ್ನೇ ಬೈಪಾಸ್ ಮಾಡಿದ್ದ ಪ್ರಧಾನಿ ಮಂತ್ರಿ ಕಾರ್ಯಾಲಯ ಏಕಪಕ್ಷೀಯವಾಗಿ ವ್ಯವಹಾರ ಕುದುರಿಸಿದ್ದ `ರಫೇಲ್ ಖರೀದಿ’ ಹಗರಣ ಮಾಧ್ಯಮಗಳ ಮೂಲಕ ದೊಡ್ಡ ಬಿರುಗಾಳಿ ಎಬ್ಬಿಸುವ ಹೊತ್ತಿಗೆ ಸರಿಯಾಗಿ ನಿರ್ಮಲಾ ಸೀತಾರಾಮನ್ ಅವರನ್ನು ಪಾರಿಕ್ಕರ್ ಜಾಗದಲ್ಲಿ ಪ್ರತಿಷ್ಠಾಪಿಸಿ, ಕಳಂಕ ಮೆತ್ತಿಸಿಕೊಳ್ಳುವಂತೆ ಮಾಡಿದ್ದು ಕಾಕತಾಳೀಯವೇ ಇರಬಹುದು!

ಪೂರ್ಣ ಪ್ರಮಾಣದ ಹಣಕಾಸು ಸಚಿವೆಯಾಗಿ ದೇಶದ ಮೊದಲ ಮಹಿಳೆ ಎಂಬ ಕೀರ್ತಿಗೆ ಪಾತ್ರರಾದ ನಿರ್ಮಲಾ ಸೀತಾರಾಮನ್ ಅಧಿಕಾರ ವಹಿಸಿಕೊಂಡ ಘಳಿಗೆಯಲ್ಲೇ ಆರ್ಥಿಕತೆ ಇಳಿಜಾರಿನತ್ತ ಮುಖ ಮಾಡಿತ್ತು. ಭಾರತದ ಆರ್ಥಿಕ ಬೆಳವಣಿಗೆ ಕಳೆದ ವರ್ಷದ ಕಡೆಯ ತ್ರೈಮಾಸಿಕದಲ್ಲಿ ಶೇ.6ಕ್ಕೆ ಕುಸಿದಿದ್ದರೆ, 2018-19ನೇ ಸಂಪೂರ್ಣ ವಿತ್ತ ವರ್ಷದಲ್ಲಿ ಅದರ ಸರಾಸರಿ ವೇಗ ಶೇ.6.8ಕ್ಕೆ ಕ್ಷೀಣಗೊಂಡಿತ್ತು. ಇನ್ನು 2019-20ರ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ಚಾರಿತ್ರಿಕ ಕನಿಷ್ಠ ಶೇ.5ರತ್ತ ದಾಪುಗಾಲಿಡಲು ಶುರು ಮಾಡಿತ್ತು. ಅಂತೆಯೇ ದೇಶದ ನಿರುದ್ಯೋಗ ದರ 2017ರಲ್ಲೇ ಶೇ.6ಕ್ಕೆ ದಾಖಲೆಯ ಕುಸಿತ ಕಂಡಿತ್ತು. ಅಂತಹ ಸಂದರ್ಭದಲ್ಲಿ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ್ದು!

ಇನ್ನು ನಿರ್ಮಲಾ ಸೀತಾರಾಮನ್ ಜುಲೈನಲ್ಲಿ ತಮ್ಮ ಮೊದಲ ಬಜೆಟ್ ಮಂಡಿಸಿದರು. ಆಗ ಹಿಂದಿದ್ದ ಹಲವು ಸಂಪ್ರದಾಯಗಳನ್ನು ಮುರಿದರು. ದಿನಬೆಳಗಾದರೆ ದೇವರು, ಹಬ್ಬ ಹರಿದಿನಗಳ ಬಗ್ಗೆ ಟ್ವೀಟ್ ಮಾಡುವ ನಿರ್ಮಲಾ ಸೀತಾರಾಮನ್ ಕುಸಿಯುತ್ತಿರುವ ಆರ್ಥಿಕತೆ ಬಗ್ಗೆ ಮಾತ್ರ ಮಾತನಾಡುವುದಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗಿತ್ತು. ಆರ್ಥಿಕತಜ್ಞರಾದ ಶಮಿಕಾ ರವಿ ಮಾತನಾಡಿ, ಭಾರತ ಆರ್ಥಿಕತೆಯ ಕುಸಿತ ಗಂಭೀರ ಪರಿಣಾಮ ಬೀರಲಿದೆ. ಕುಸಿಯುತ್ತಿರುವ ಆರ್ಥಿಕತೆಯನ್ನು ಸುಧಾರಿಸಲು ಪ್ರಮುಖ ತಂತ್ರಗಳನ್ನು ಕಂಡುಕೊಳ್ಳುವ ಅವಶ್ಯಕತೆಯಿದೆ. ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಆಲೋಚಿಸಬೇಕಿದೆ ಎಂದು ಹೇಳಿದ್ದರು. ಬಿಜೆಪಿ ಎಂ.ಪಿ ಸುಬ್ರಮಣಿಯನ್ ಸ್ವಾಮಿ ಕೂಡ ನಿರ್ಮಲಾ ಸೀತಾರಾಮನ್ ಅವರ ಕಾರ್ಯ ವೈಖರಿಯನ್ನು ಖಂಡಿಸಿದ್ದರು. ನೆಲಕಚ್ಚುತ್ತಿರುವ ಆರ್ಥಿಕತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ, ಮೋದಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು. ಸೂಕ್ಷ್ಮ ಚಿಂತನೆಯ ಅವಶ್ಯಕತೆಯ ಬಗ್ಗೆ ತಿಳಿಸಿದ್ದರು.

ಪ್ರತಿಷ್ಠಿತ ಜೆಎನ್.ಯು ವಿವಿಯಲ್ಲಿ ಎಂಎ, ಎಂ.ಫಿಲ್  (ಎಕನಾಮಿಕ್ಸ್) ಪಡೆದಿದ್ದ ನಿರ್ಮಲಾ, ಓದು-ವಿದ್ಯಾರ್ಹತೆ-ಅನುಭವದ ನಿಟ್ಟಿನಲ್ಲಿ ಹಣಕಾಸು ಸಚಿವೆಯ ಹುದ್ದೆಗೆ ಲಾಯಕ್ಕಾದವರೇ ಇರಬಹುದು. ಆದರೆ, ದೇಶದ ಆರ್ಥಿಕ ಸ್ಥಿತಿ ಅದೆಷ್ಟು ಹದಗೆಟ್ಟು ಹೋಗಿತ್ತೆಂದರೆ, (ಹದಗೆಡಿಸಲಾಗಿತ್ತೆಂದರೆ) ತುಂಬಾ ದೃಢ ಮತ್ತು ದೂರಾಲೋಚನೆಯ ನಿರ್ಧಾರಗಳಿಂದ ಮಾತ್ರ ಅದನ್ನು ನಿಭಾಯಿಸಲು ಸಾಧ್ಯ ಎನ್ನುವ ಸ್ಥಿತಿಯಲ್ಲಿತ್ತು. ಆದರೆ ನಿರ್ಮಲಾಗೆ ಅಂತಹ ಸ್ವಾತಂತ್ರ್ಯವೂ ಇರಲಿಲ್ಲ, ಆ ಬಗೆಯ ಇಚ್ಛೆ ನಿರ್ಮಲಾ ಅವರಿಗೂ ಇದ್ದಂತಿರಲಿಲ್ಲ. ಅವರು ಮಂಡಿಸಿದ ಮೊದಲ ಬಜೆಟ್ಟಿನ ಕ್ರಮಗಳು ಹಾಗೂ ಆ ನಂತರದಲ್ಲಿ ಅವರೇ ಆ ಕ್ರಮಗಳಿಂದ ತೆಗೆದುಕೊಂಡ ಯೂ-ಟರ್ನ್ ಗಳು ಇದಕ್ಕೆ ಸಾಕ್ಷಿ. ಈಗ ಅವರ ಪತಿಯೇ ಅವರನ್ನು ಟೀಕಿಸುವಂತಹ ಸಂದರ್ಭ ಬಂದೊದಗಿದೆ. ದುರಂತವೆಂದರೆ, ಈಗಲೂ ಕೇಂದ್ರದ ಬಿಜೆಪಿ ಸರ್ಕಾರದ ಬಳಿ ಸಮರ್ಪಕ ಪರಿಹಾರದ ನೀಲನಕ್ಷೆಗಳು ಗೋಚರಿಸುತ್ತಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...