HomeUncategorizedಆರ್ಥಿಕ ಕುಸಿತ: ಮೋದಿಗೆ ಕಳಂಕ ತಪ್ಪಿಸಲು ಬಲಿಪಶು ಆಗುತ್ತಿದ್ದಾರಾ ನಿರ್ಮಲಾ ಸೀತಾರಾಮನ್!?

ಆರ್ಥಿಕ ಕುಸಿತ: ಮೋದಿಗೆ ಕಳಂಕ ತಪ್ಪಿಸಲು ಬಲಿಪಶು ಆಗುತ್ತಿದ್ದಾರಾ ನಿರ್ಮಲಾ ಸೀತಾರಾಮನ್!?

- Advertisement -
- Advertisement -

ಪ್ರಧಾನಿ ಮೋದಿ ನೇತೃತ್ವದ ಸರ್ಕಾರದಲ್ಲಿ ಎರಡನೇ ಬಾರಿಗೆ ಸಚಿವ ಸ್ಥಾನ ಅಲಂಕರಿಸಿ, ಪ್ರಮುಖ ಜವಾಬ್ದಾರಿ ಹೊತ್ತಿರುವ ನಿರ್ಮಲಾ ಸೀತಾರಾಮನ್ ವಿತ್ತ ಸಚಿವೆಯಾದ ನಾಲ್ಕೇ ತಿಂಗಳಿಗೆ ಆರ್ಥಿಕ ಕುಸಿತದ ಮೇನ್ ವಿಲನ್' ರೂಪದಲ್ಲಿ ಎಲ್ಲರೆದುರು ಕಾಣಿಸಿಕೊಳ್ಳುತ್ತಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಭಾರತದ ಆರ್ಥಿಕತೆ ಗಂಭೀರವಾಗಿ ಪತನವಾಗಲು, ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದ ಅರುಣ್ ಜೇಟ್ಲಿಗಿಂತಲೂ ಪ್ರಧಾನಿ ಮೋದಿಯವರ ಯಡವಟ್ಟು ಆರ್ಥಿಕ ನೀತಿಗಳು ಕಾರಣಗಳು ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಮೊನ್ನೆಯಷ್ಟೇ ಅರ್ಥಶಾಸ್ತ್ರಕ್ಕೆ ನೊಬೆಲ್ ಪ್ರಶಸ್ತಿ ಪಡೆದ ಅಭಿಜಿತ್ ಬ್ಯಾನರ್ಜಿ ಹಾಗೂ ಎಸ್ತರ್ ಡುಪ್ಲೋ ತುಂಬಾ ಹಿಂದೆಯೇ ಕರಾಳ ದಿನಗಳಿಗೆ ಕಾರಣವಾಗುತ್ತದೆಂದು ಅಂದಾಜಿಸಿದ್ದ `ನೋಟು ಅಮಾನ್ಯೀಕರಣ’ವನ್ನು ಹೇರುವುದರ ಹಿಂದೆ ಅರ್ಥ ಸಚಿವ ಜೇಟ್ಲಿ, ಆರ್.ಬಿ.ಐ. ಆಡಳಿತ ಮಂಡಳಿಗೆ ಯಾವ ಪಾತ್ರವೂ ಇರಲಿಲ್ಲ. ಅಷ್ಟರ ಮಟ್ಟಿಗೆ ಮೋದಿಯವರ ನೀತಿಗಳು ಇವತ್ತಿನ ಆರ್ಥಿಕ ದುಸ್ಥಿತಿಗೆ ಕಾರಣ. ಆದರೆ ಈಗ ಪರಿಸ್ಥಿತಿಯನ್ನು ಎತ್ತ ತಿರುಗಿಸಲಾಗುತ್ತಿದೆಯೆಂದರೆ, ಈ ಸಮಸ್ತ ಕುಸಿತಕ್ಕೆ ನಾಲ್ಕು ತಿಂಗಳ ಹಿಂದಷ್ಟೇ ಹಣಕಾಸು ಇಲಾಖೆಯ ಹೊಣೆ ಹೊತ್ತ ನಿರ್ಮಲಾ ಸೀತಾರಾಮನ್ ಖಳನಾಯಕಿಯಾಗಿ ಬಿಂಬಿತವಾಗುತ್ತಿದ್ದಾರೆ. ನಿರ್ಮಲಾ ಕೂಡಾ, ಆರ್ಥಿಕ ಕುಸಿತದ ಕುರಿತಾಗಿ ಕೇಳಿಬರುತ್ತಿರುವ ಟೀಕೆಗಳನ್ನು ವೈಯಕ್ತಿಕವಾಗಿ ಸ್ವೀಕರಿಸಿ `ಅಗ್ರೆಸಿವ್’ ಆಗಿ ಪ್ರತಿಕ್ರಿಯಿಸುತ್ತಿರೋದು, ಇಡೀ ರಂಗವೇದಿಕೆಯಿಂದ ಹಿಂದೆ ಸರಿಯಲು ಮೋದಿಗೆ ಅನುವು ಮಾಡಿಕೊಡುತ್ತಿದೆ. ಸ್ವತಃ ಮೋದಿ ಅಭಿಮಾನಿಗಳು, ಮೋದಿಯನ್ನು ಹಾಡಿ ಹೊಗಳಿದ್ದ ದೊಡ್ಡದೊಡ್ಡ ಉದ್ಯಮಿಗಳು ನಿರ್ಮಲಾರನ್ನೇ ಟಾರ್ಗೆಟ್ ಮಾಡಿ ಟೀಕೆಗಳನ್ನು ಸುರಿಸುತ್ತಿದ್ದಾರೆ.

ನೋ ಡೌಟ್, ವಿತ್ತ ಸಚಿವೆಯಾಗಿ ದೇಶದ ಸದ್ಯದ ಆರ್ಥಿಕ ಪರಿಸ್ಥಿತಿಗೆ ಅವರೇ ಉತ್ತರದಾಯಿ ಆಗುತ್ತಾರೆ. ಟೀಕೆಗಳೂ ಅವರಿಗೇ ಸಲ್ಲುತ್ತವೆ. ಆದರೆ ಕಳೆದ ಬಿಜೆಪಿ ಅವಧಿಯಲ್ಲಿ ಪರಿಸ್ಥಿತಿ ಹೀಗೇ ಇತ್ತಾ? ಕಡೇಪಕ್ಷ ಹಣಕಾಸು ಸಚಿವರ ಜೊತೆ ಚರ್ಚಿಸಿಯೇ ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿತ್ತೇ? ಈ ಪ್ರಶ್ನೆಗಳಿಗೆ ಉತ್ತರ ಎಲ್ಲರಿಗೂ ಗೊತ್ತಿರುವಂತದ್ದೇ. ಆದರೆ ಕುಸಿತ ಶುರುವಾಗಿ, ದೇಶ ಸಂಕಷ್ಟಕ್ಕೆ ಸಿಲುಕುತ್ತಿದ್ದಂತೆಯೇ ಅದಕ್ಕೆ ಕಾರಣರಾದವರು ಹಿನ್ನೆಲೆಗೆ ಸರಿದು, ಹುದ್ದೆಯ ಕಾರಣಕ್ಕೆ ನಿರ್ಮಲಾ ಸೀತಾರಾಮನ್ ಅವರನ್ನು ಮುಂದೆ ಬಿಡುತ್ತಿರೋದು ನೋಡಿದರೆ, ಬಲಿಪಶು ಮಾಡಲಾಗುತ್ತಿದೆಯಾ? ಎಂಬ ವಾದವೀಗ ಮುನ್ನೆಲೆಗೆ ಬರುತ್ತಿದೆ. ಅಂದಹಾಗೆ, ಕಳೆದ ಸರ್ಕಾರದ ಅವಧಿಯಲ್ಲೂ ಮನೋಹರ್ ಪಾರಿಕ್ಕರ್ ರಕ್ಷಣಾ ಮಂತ್ರಿಯಾಗಿದ್ದರೂ, ರಕ್ಷಣಾ ಇಲಾಖೆಯನ್ನೇ ಬೈಪಾಸ್ ಮಾಡಿದ್ದ ಪ್ರಧಾನಿ ಮಂತ್ರಿ ಕಾರ್ಯಾಲಯ ಏಕಪಕ್ಷೀಯವಾಗಿ ವ್ಯವಹಾರ ಕುದುರಿಸಿದ್ದ `ರಫೇಲ್ ಖರೀದಿ’ ಹಗರಣ ಮಾಧ್ಯಮಗಳ ಮೂಲಕ ದೊಡ್ಡ ಬಿರುಗಾಳಿ ಎಬ್ಬಿಸುವ ಹೊತ್ತಿಗೆ ಸರಿಯಾಗಿ ನಿರ್ಮಲಾ ಸೀತಾರಾಮನ್ ಅವರನ್ನು ಪಾರಿಕ್ಕರ್ ಜಾಗದಲ್ಲಿ ಪ್ರತಿಷ್ಠಾಪಿಸಿ, ಕಳಂಕ ಮೆತ್ತಿಸಿಕೊಳ್ಳುವಂತೆ ಮಾಡಿದ್ದು ಕಾಕತಾಳೀಯವೇ ಇರಬಹುದು!

ಪೂರ್ಣ ಪ್ರಮಾಣದ ಹಣಕಾಸು ಸಚಿವೆಯಾಗಿ ದೇಶದ ಮೊದಲ ಮಹಿಳೆ ಎಂಬ ಕೀರ್ತಿಗೆ ಪಾತ್ರರಾದ ನಿರ್ಮಲಾ ಸೀತಾರಾಮನ್ ಅಧಿಕಾರ ವಹಿಸಿಕೊಂಡ ಘಳಿಗೆಯಲ್ಲೇ ಆರ್ಥಿಕತೆ ಇಳಿಜಾರಿನತ್ತ ಮುಖ ಮಾಡಿತ್ತು. ಭಾರತದ ಆರ್ಥಿಕ ಬೆಳವಣಿಗೆ ಕಳೆದ ವರ್ಷದ ಕಡೆಯ ತ್ರೈಮಾಸಿಕದಲ್ಲಿ ಶೇ.6ಕ್ಕೆ ಕುಸಿದಿದ್ದರೆ, 2018-19ನೇ ಸಂಪೂರ್ಣ ವಿತ್ತ ವರ್ಷದಲ್ಲಿ ಅದರ ಸರಾಸರಿ ವೇಗ ಶೇ.6.8ಕ್ಕೆ ಕ್ಷೀಣಗೊಂಡಿತ್ತು. ಇನ್ನು 2019-20ರ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ಚಾರಿತ್ರಿಕ ಕನಿಷ್ಠ ಶೇ.5ರತ್ತ ದಾಪುಗಾಲಿಡಲು ಶುರು ಮಾಡಿತ್ತು. ಅಂತೆಯೇ ದೇಶದ ನಿರುದ್ಯೋಗ ದರ 2017ರಲ್ಲೇ ಶೇ.6ಕ್ಕೆ ದಾಖಲೆಯ ಕುಸಿತ ಕಂಡಿತ್ತು. ಅಂತಹ ಸಂದರ್ಭದಲ್ಲಿ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ್ದು!

ಇನ್ನು ನಿರ್ಮಲಾ ಸೀತಾರಾಮನ್ ಜುಲೈನಲ್ಲಿ ತಮ್ಮ ಮೊದಲ ಬಜೆಟ್ ಮಂಡಿಸಿದರು. ಆಗ ಹಿಂದಿದ್ದ ಹಲವು ಸಂಪ್ರದಾಯಗಳನ್ನು ಮುರಿದರು. ದಿನಬೆಳಗಾದರೆ ದೇವರು, ಹಬ್ಬ ಹರಿದಿನಗಳ ಬಗ್ಗೆ ಟ್ವೀಟ್ ಮಾಡುವ ನಿರ್ಮಲಾ ಸೀತಾರಾಮನ್ ಕುಸಿಯುತ್ತಿರುವ ಆರ್ಥಿಕತೆ ಬಗ್ಗೆ ಮಾತ್ರ ಮಾತನಾಡುವುದಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗಿತ್ತು. ಆರ್ಥಿಕತಜ್ಞರಾದ ಶಮಿಕಾ ರವಿ ಮಾತನಾಡಿ, ಭಾರತ ಆರ್ಥಿಕತೆಯ ಕುಸಿತ ಗಂಭೀರ ಪರಿಣಾಮ ಬೀರಲಿದೆ. ಕುಸಿಯುತ್ತಿರುವ ಆರ್ಥಿಕತೆಯನ್ನು ಸುಧಾರಿಸಲು ಪ್ರಮುಖ ತಂತ್ರಗಳನ್ನು ಕಂಡುಕೊಳ್ಳುವ ಅವಶ್ಯಕತೆಯಿದೆ. ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಆಲೋಚಿಸಬೇಕಿದೆ ಎಂದು ಹೇಳಿದ್ದರು. ಬಿಜೆಪಿ ಎಂ.ಪಿ ಸುಬ್ರಮಣಿಯನ್ ಸ್ವಾಮಿ ಕೂಡ ನಿರ್ಮಲಾ ಸೀತಾರಾಮನ್ ಅವರ ಕಾರ್ಯ ವೈಖರಿಯನ್ನು ಖಂಡಿಸಿದ್ದರು. ನೆಲಕಚ್ಚುತ್ತಿರುವ ಆರ್ಥಿಕತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ, ಮೋದಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು. ಸೂಕ್ಷ್ಮ ಚಿಂತನೆಯ ಅವಶ್ಯಕತೆಯ ಬಗ್ಗೆ ತಿಳಿಸಿದ್ದರು.

ಪ್ರತಿಷ್ಠಿತ ಜೆಎನ್.ಯು ವಿವಿಯಲ್ಲಿ ಎಂಎ, ಎಂ.ಫಿಲ್  (ಎಕನಾಮಿಕ್ಸ್) ಪಡೆದಿದ್ದ ನಿರ್ಮಲಾ, ಓದು-ವಿದ್ಯಾರ್ಹತೆ-ಅನುಭವದ ನಿಟ್ಟಿನಲ್ಲಿ ಹಣಕಾಸು ಸಚಿವೆಯ ಹುದ್ದೆಗೆ ಲಾಯಕ್ಕಾದವರೇ ಇರಬಹುದು. ಆದರೆ, ದೇಶದ ಆರ್ಥಿಕ ಸ್ಥಿತಿ ಅದೆಷ್ಟು ಹದಗೆಟ್ಟು ಹೋಗಿತ್ತೆಂದರೆ, (ಹದಗೆಡಿಸಲಾಗಿತ್ತೆಂದರೆ) ತುಂಬಾ ದೃಢ ಮತ್ತು ದೂರಾಲೋಚನೆಯ ನಿರ್ಧಾರಗಳಿಂದ ಮಾತ್ರ ಅದನ್ನು ನಿಭಾಯಿಸಲು ಸಾಧ್ಯ ಎನ್ನುವ ಸ್ಥಿತಿಯಲ್ಲಿತ್ತು. ಆದರೆ ನಿರ್ಮಲಾಗೆ ಅಂತಹ ಸ್ವಾತಂತ್ರ್ಯವೂ ಇರಲಿಲ್ಲ, ಆ ಬಗೆಯ ಇಚ್ಛೆ ನಿರ್ಮಲಾ ಅವರಿಗೂ ಇದ್ದಂತಿರಲಿಲ್ಲ. ಅವರು ಮಂಡಿಸಿದ ಮೊದಲ ಬಜೆಟ್ಟಿನ ಕ್ರಮಗಳು ಹಾಗೂ ಆ ನಂತರದಲ್ಲಿ ಅವರೇ ಆ ಕ್ರಮಗಳಿಂದ ತೆಗೆದುಕೊಂಡ ಯೂ-ಟರ್ನ್ ಗಳು ಇದಕ್ಕೆ ಸಾಕ್ಷಿ. ಈಗ ಅವರ ಪತಿಯೇ ಅವರನ್ನು ಟೀಕಿಸುವಂತಹ ಸಂದರ್ಭ ಬಂದೊದಗಿದೆ. ದುರಂತವೆಂದರೆ, ಈಗಲೂ ಕೇಂದ್ರದ ಬಿಜೆಪಿ ಸರ್ಕಾರದ ಬಳಿ ಸಮರ್ಪಕ ಪರಿಹಾರದ ನೀಲನಕ್ಷೆಗಳು ಗೋಚರಿಸುತ್ತಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...