HomeUncategorizedಆರ್ಥಿಕ ಕುಸಿತ: ಮೋದಿಗೆ ಕಳಂಕ ತಪ್ಪಿಸಲು ಬಲಿಪಶು ಆಗುತ್ತಿದ್ದಾರಾ ನಿರ್ಮಲಾ ಸೀತಾರಾಮನ್!?

ಆರ್ಥಿಕ ಕುಸಿತ: ಮೋದಿಗೆ ಕಳಂಕ ತಪ್ಪಿಸಲು ಬಲಿಪಶು ಆಗುತ್ತಿದ್ದಾರಾ ನಿರ್ಮಲಾ ಸೀತಾರಾಮನ್!?

- Advertisement -
- Advertisement -

ಪ್ರಧಾನಿ ಮೋದಿ ನೇತೃತ್ವದ ಸರ್ಕಾರದಲ್ಲಿ ಎರಡನೇ ಬಾರಿಗೆ ಸಚಿವ ಸ್ಥಾನ ಅಲಂಕರಿಸಿ, ಪ್ರಮುಖ ಜವಾಬ್ದಾರಿ ಹೊತ್ತಿರುವ ನಿರ್ಮಲಾ ಸೀತಾರಾಮನ್ ವಿತ್ತ ಸಚಿವೆಯಾದ ನಾಲ್ಕೇ ತಿಂಗಳಿಗೆ ಆರ್ಥಿಕ ಕುಸಿತದ ಮೇನ್ ವಿಲನ್' ರೂಪದಲ್ಲಿ ಎಲ್ಲರೆದುರು ಕಾಣಿಸಿಕೊಳ್ಳುತ್ತಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಭಾರತದ ಆರ್ಥಿಕತೆ ಗಂಭೀರವಾಗಿ ಪತನವಾಗಲು, ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದ ಅರುಣ್ ಜೇಟ್ಲಿಗಿಂತಲೂ ಪ್ರಧಾನಿ ಮೋದಿಯವರ ಯಡವಟ್ಟು ಆರ್ಥಿಕ ನೀತಿಗಳು ಕಾರಣಗಳು ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಮೊನ್ನೆಯಷ್ಟೇ ಅರ್ಥಶಾಸ್ತ್ರಕ್ಕೆ ನೊಬೆಲ್ ಪ್ರಶಸ್ತಿ ಪಡೆದ ಅಭಿಜಿತ್ ಬ್ಯಾನರ್ಜಿ ಹಾಗೂ ಎಸ್ತರ್ ಡುಪ್ಲೋ ತುಂಬಾ ಹಿಂದೆಯೇ ಕರಾಳ ದಿನಗಳಿಗೆ ಕಾರಣವಾಗುತ್ತದೆಂದು ಅಂದಾಜಿಸಿದ್ದ `ನೋಟು ಅಮಾನ್ಯೀಕರಣ’ವನ್ನು ಹೇರುವುದರ ಹಿಂದೆ ಅರ್ಥ ಸಚಿವ ಜೇಟ್ಲಿ, ಆರ್.ಬಿ.ಐ. ಆಡಳಿತ ಮಂಡಳಿಗೆ ಯಾವ ಪಾತ್ರವೂ ಇರಲಿಲ್ಲ. ಅಷ್ಟರ ಮಟ್ಟಿಗೆ ಮೋದಿಯವರ ನೀತಿಗಳು ಇವತ್ತಿನ ಆರ್ಥಿಕ ದುಸ್ಥಿತಿಗೆ ಕಾರಣ. ಆದರೆ ಈಗ ಪರಿಸ್ಥಿತಿಯನ್ನು ಎತ್ತ ತಿರುಗಿಸಲಾಗುತ್ತಿದೆಯೆಂದರೆ, ಈ ಸಮಸ್ತ ಕುಸಿತಕ್ಕೆ ನಾಲ್ಕು ತಿಂಗಳ ಹಿಂದಷ್ಟೇ ಹಣಕಾಸು ಇಲಾಖೆಯ ಹೊಣೆ ಹೊತ್ತ ನಿರ್ಮಲಾ ಸೀತಾರಾಮನ್ ಖಳನಾಯಕಿಯಾಗಿ ಬಿಂಬಿತವಾಗುತ್ತಿದ್ದಾರೆ. ನಿರ್ಮಲಾ ಕೂಡಾ, ಆರ್ಥಿಕ ಕುಸಿತದ ಕುರಿತಾಗಿ ಕೇಳಿಬರುತ್ತಿರುವ ಟೀಕೆಗಳನ್ನು ವೈಯಕ್ತಿಕವಾಗಿ ಸ್ವೀಕರಿಸಿ `ಅಗ್ರೆಸಿವ್’ ಆಗಿ ಪ್ರತಿಕ್ರಿಯಿಸುತ್ತಿರೋದು, ಇಡೀ ರಂಗವೇದಿಕೆಯಿಂದ ಹಿಂದೆ ಸರಿಯಲು ಮೋದಿಗೆ ಅನುವು ಮಾಡಿಕೊಡುತ್ತಿದೆ. ಸ್ವತಃ ಮೋದಿ ಅಭಿಮಾನಿಗಳು, ಮೋದಿಯನ್ನು ಹಾಡಿ ಹೊಗಳಿದ್ದ ದೊಡ್ಡದೊಡ್ಡ ಉದ್ಯಮಿಗಳು ನಿರ್ಮಲಾರನ್ನೇ ಟಾರ್ಗೆಟ್ ಮಾಡಿ ಟೀಕೆಗಳನ್ನು ಸುರಿಸುತ್ತಿದ್ದಾರೆ.

ನೋ ಡೌಟ್, ವಿತ್ತ ಸಚಿವೆಯಾಗಿ ದೇಶದ ಸದ್ಯದ ಆರ್ಥಿಕ ಪರಿಸ್ಥಿತಿಗೆ ಅವರೇ ಉತ್ತರದಾಯಿ ಆಗುತ್ತಾರೆ. ಟೀಕೆಗಳೂ ಅವರಿಗೇ ಸಲ್ಲುತ್ತವೆ. ಆದರೆ ಕಳೆದ ಬಿಜೆಪಿ ಅವಧಿಯಲ್ಲಿ ಪರಿಸ್ಥಿತಿ ಹೀಗೇ ಇತ್ತಾ? ಕಡೇಪಕ್ಷ ಹಣಕಾಸು ಸಚಿವರ ಜೊತೆ ಚರ್ಚಿಸಿಯೇ ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿತ್ತೇ? ಈ ಪ್ರಶ್ನೆಗಳಿಗೆ ಉತ್ತರ ಎಲ್ಲರಿಗೂ ಗೊತ್ತಿರುವಂತದ್ದೇ. ಆದರೆ ಕುಸಿತ ಶುರುವಾಗಿ, ದೇಶ ಸಂಕಷ್ಟಕ್ಕೆ ಸಿಲುಕುತ್ತಿದ್ದಂತೆಯೇ ಅದಕ್ಕೆ ಕಾರಣರಾದವರು ಹಿನ್ನೆಲೆಗೆ ಸರಿದು, ಹುದ್ದೆಯ ಕಾರಣಕ್ಕೆ ನಿರ್ಮಲಾ ಸೀತಾರಾಮನ್ ಅವರನ್ನು ಮುಂದೆ ಬಿಡುತ್ತಿರೋದು ನೋಡಿದರೆ, ಬಲಿಪಶು ಮಾಡಲಾಗುತ್ತಿದೆಯಾ? ಎಂಬ ವಾದವೀಗ ಮುನ್ನೆಲೆಗೆ ಬರುತ್ತಿದೆ. ಅಂದಹಾಗೆ, ಕಳೆದ ಸರ್ಕಾರದ ಅವಧಿಯಲ್ಲೂ ಮನೋಹರ್ ಪಾರಿಕ್ಕರ್ ರಕ್ಷಣಾ ಮಂತ್ರಿಯಾಗಿದ್ದರೂ, ರಕ್ಷಣಾ ಇಲಾಖೆಯನ್ನೇ ಬೈಪಾಸ್ ಮಾಡಿದ್ದ ಪ್ರಧಾನಿ ಮಂತ್ರಿ ಕಾರ್ಯಾಲಯ ಏಕಪಕ್ಷೀಯವಾಗಿ ವ್ಯವಹಾರ ಕುದುರಿಸಿದ್ದ `ರಫೇಲ್ ಖರೀದಿ’ ಹಗರಣ ಮಾಧ್ಯಮಗಳ ಮೂಲಕ ದೊಡ್ಡ ಬಿರುಗಾಳಿ ಎಬ್ಬಿಸುವ ಹೊತ್ತಿಗೆ ಸರಿಯಾಗಿ ನಿರ್ಮಲಾ ಸೀತಾರಾಮನ್ ಅವರನ್ನು ಪಾರಿಕ್ಕರ್ ಜಾಗದಲ್ಲಿ ಪ್ರತಿಷ್ಠಾಪಿಸಿ, ಕಳಂಕ ಮೆತ್ತಿಸಿಕೊಳ್ಳುವಂತೆ ಮಾಡಿದ್ದು ಕಾಕತಾಳೀಯವೇ ಇರಬಹುದು!

ಪೂರ್ಣ ಪ್ರಮಾಣದ ಹಣಕಾಸು ಸಚಿವೆಯಾಗಿ ದೇಶದ ಮೊದಲ ಮಹಿಳೆ ಎಂಬ ಕೀರ್ತಿಗೆ ಪಾತ್ರರಾದ ನಿರ್ಮಲಾ ಸೀತಾರಾಮನ್ ಅಧಿಕಾರ ವಹಿಸಿಕೊಂಡ ಘಳಿಗೆಯಲ್ಲೇ ಆರ್ಥಿಕತೆ ಇಳಿಜಾರಿನತ್ತ ಮುಖ ಮಾಡಿತ್ತು. ಭಾರತದ ಆರ್ಥಿಕ ಬೆಳವಣಿಗೆ ಕಳೆದ ವರ್ಷದ ಕಡೆಯ ತ್ರೈಮಾಸಿಕದಲ್ಲಿ ಶೇ.6ಕ್ಕೆ ಕುಸಿದಿದ್ದರೆ, 2018-19ನೇ ಸಂಪೂರ್ಣ ವಿತ್ತ ವರ್ಷದಲ್ಲಿ ಅದರ ಸರಾಸರಿ ವೇಗ ಶೇ.6.8ಕ್ಕೆ ಕ್ಷೀಣಗೊಂಡಿತ್ತು. ಇನ್ನು 2019-20ರ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ಚಾರಿತ್ರಿಕ ಕನಿಷ್ಠ ಶೇ.5ರತ್ತ ದಾಪುಗಾಲಿಡಲು ಶುರು ಮಾಡಿತ್ತು. ಅಂತೆಯೇ ದೇಶದ ನಿರುದ್ಯೋಗ ದರ 2017ರಲ್ಲೇ ಶೇ.6ಕ್ಕೆ ದಾಖಲೆಯ ಕುಸಿತ ಕಂಡಿತ್ತು. ಅಂತಹ ಸಂದರ್ಭದಲ್ಲಿ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ್ದು!

ಇನ್ನು ನಿರ್ಮಲಾ ಸೀತಾರಾಮನ್ ಜುಲೈನಲ್ಲಿ ತಮ್ಮ ಮೊದಲ ಬಜೆಟ್ ಮಂಡಿಸಿದರು. ಆಗ ಹಿಂದಿದ್ದ ಹಲವು ಸಂಪ್ರದಾಯಗಳನ್ನು ಮುರಿದರು. ದಿನಬೆಳಗಾದರೆ ದೇವರು, ಹಬ್ಬ ಹರಿದಿನಗಳ ಬಗ್ಗೆ ಟ್ವೀಟ್ ಮಾಡುವ ನಿರ್ಮಲಾ ಸೀತಾರಾಮನ್ ಕುಸಿಯುತ್ತಿರುವ ಆರ್ಥಿಕತೆ ಬಗ್ಗೆ ಮಾತ್ರ ಮಾತನಾಡುವುದಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗಿತ್ತು. ಆರ್ಥಿಕತಜ್ಞರಾದ ಶಮಿಕಾ ರವಿ ಮಾತನಾಡಿ, ಭಾರತ ಆರ್ಥಿಕತೆಯ ಕುಸಿತ ಗಂಭೀರ ಪರಿಣಾಮ ಬೀರಲಿದೆ. ಕುಸಿಯುತ್ತಿರುವ ಆರ್ಥಿಕತೆಯನ್ನು ಸುಧಾರಿಸಲು ಪ್ರಮುಖ ತಂತ್ರಗಳನ್ನು ಕಂಡುಕೊಳ್ಳುವ ಅವಶ್ಯಕತೆಯಿದೆ. ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಆಲೋಚಿಸಬೇಕಿದೆ ಎಂದು ಹೇಳಿದ್ದರು. ಬಿಜೆಪಿ ಎಂ.ಪಿ ಸುಬ್ರಮಣಿಯನ್ ಸ್ವಾಮಿ ಕೂಡ ನಿರ್ಮಲಾ ಸೀತಾರಾಮನ್ ಅವರ ಕಾರ್ಯ ವೈಖರಿಯನ್ನು ಖಂಡಿಸಿದ್ದರು. ನೆಲಕಚ್ಚುತ್ತಿರುವ ಆರ್ಥಿಕತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ, ಮೋದಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು. ಸೂಕ್ಷ್ಮ ಚಿಂತನೆಯ ಅವಶ್ಯಕತೆಯ ಬಗ್ಗೆ ತಿಳಿಸಿದ್ದರು.

ಪ್ರತಿಷ್ಠಿತ ಜೆಎನ್.ಯು ವಿವಿಯಲ್ಲಿ ಎಂಎ, ಎಂ.ಫಿಲ್  (ಎಕನಾಮಿಕ್ಸ್) ಪಡೆದಿದ್ದ ನಿರ್ಮಲಾ, ಓದು-ವಿದ್ಯಾರ್ಹತೆ-ಅನುಭವದ ನಿಟ್ಟಿನಲ್ಲಿ ಹಣಕಾಸು ಸಚಿವೆಯ ಹುದ್ದೆಗೆ ಲಾಯಕ್ಕಾದವರೇ ಇರಬಹುದು. ಆದರೆ, ದೇಶದ ಆರ್ಥಿಕ ಸ್ಥಿತಿ ಅದೆಷ್ಟು ಹದಗೆಟ್ಟು ಹೋಗಿತ್ತೆಂದರೆ, (ಹದಗೆಡಿಸಲಾಗಿತ್ತೆಂದರೆ) ತುಂಬಾ ದೃಢ ಮತ್ತು ದೂರಾಲೋಚನೆಯ ನಿರ್ಧಾರಗಳಿಂದ ಮಾತ್ರ ಅದನ್ನು ನಿಭಾಯಿಸಲು ಸಾಧ್ಯ ಎನ್ನುವ ಸ್ಥಿತಿಯಲ್ಲಿತ್ತು. ಆದರೆ ನಿರ್ಮಲಾಗೆ ಅಂತಹ ಸ್ವಾತಂತ್ರ್ಯವೂ ಇರಲಿಲ್ಲ, ಆ ಬಗೆಯ ಇಚ್ಛೆ ನಿರ್ಮಲಾ ಅವರಿಗೂ ಇದ್ದಂತಿರಲಿಲ್ಲ. ಅವರು ಮಂಡಿಸಿದ ಮೊದಲ ಬಜೆಟ್ಟಿನ ಕ್ರಮಗಳು ಹಾಗೂ ಆ ನಂತರದಲ್ಲಿ ಅವರೇ ಆ ಕ್ರಮಗಳಿಂದ ತೆಗೆದುಕೊಂಡ ಯೂ-ಟರ್ನ್ ಗಳು ಇದಕ್ಕೆ ಸಾಕ್ಷಿ. ಈಗ ಅವರ ಪತಿಯೇ ಅವರನ್ನು ಟೀಕಿಸುವಂತಹ ಸಂದರ್ಭ ಬಂದೊದಗಿದೆ. ದುರಂತವೆಂದರೆ, ಈಗಲೂ ಕೇಂದ್ರದ ಬಿಜೆಪಿ ಸರ್ಕಾರದ ಬಳಿ ಸಮರ್ಪಕ ಪರಿಹಾರದ ನೀಲನಕ್ಷೆಗಳು ಗೋಚರಿಸುತ್ತಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...